Homeಕರ್ನಾಟಕಸಾವಿನಲ್ಲೂ ಘನತೆ ಮತ್ತು ವೈಶಿಷ್ಟ್ಯ ಮೆರೆದ ಗಿರೀಶ್ ಕಾರ್ನಾಡ್

ಸಾವಿನಲ್ಲೂ ಘನತೆ ಮತ್ತು ವೈಶಿಷ್ಟ್ಯ ಮೆರೆದ ಗಿರೀಶ್ ಕಾರ್ನಾಡ್

ಕಲಾಗ್ರಾಮದಲ್ಲಿ ಅಂತ್ಯಸಂಸ್ಕಾರ ಮತ್ತು ಅಂತ್ಯಸಂಸ್ಕಾರದ ವಿಧಿವಿಧಾನಗಳ ಕುರಿತು ಆಗ ಪ್ರಶ್ನೆಗಳು ಎದ್ದಿದ್ದವು. ಅಂತಹ ಯಾವುದಕ್ಕೂ ಕಾರ್ನಾಡರು ಅವಕಾಶ ಕೊಟ್ಟಿಲ್ಲ.

- Advertisement -
- Advertisement -

|ನಾನು ಗೌರಿ ಡೆಸ್ಕ್|

ತನ್ನ ಸಾವಿಗೆ ಮುಂಚೆಯೇ ಕುಟುಂಬದವರೊಂದಿಗೆ ಖ್ಯಾತ ನಾಟಕಕಾರ ಗಿರೀಶ್ ಕಾರ್ನಾಡ್ ಹೇಳಿದ್ದ ಸಂಗತಿಗಳು ಇಂದು ಗಮನಕ್ಕೆ ಬಂದಿವೆ. ಕನ್ನಡಕ್ಕೆ, ಕರ್ನಾಟಕಕ್ಕೆ ಗೌರವ ತಂದುಕೊಟ್ಟಿರುವ ಸಾಹಿತಿ ಕಾರ್ನಾಡ್ ರವರಿಗೆ ಸರ್ಕಾರೀ ಗೌರವದೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲು ಸರ್ಕಾರ ಸಿದ್ಧವಾಗಿತ್ತು. ಮುಖ್ಯಮಂತ್ರಿಯವರ ಸೂಚನೆಯ ಮೇರೆಗೆ, ಅವರ ಕಚೇರಿಯ ಅಧಿಕಾರಿಗಳು ಕಾರ್ನಾಡ್ ಅವರ ಮನೆಗೆ ಹೋದಾಗ ಅವರಿಗೆ ಅಚ್ಚರಿ ಕಾದಿತ್ತು.

ಯಾವುದೇ ಸರ್ಕಾರೀ ಗೌರವ ಬೇಡ ಮತ್ತು ಸರ್ಕಾರೀ ಜಾಗದಲ್ಲೂ ಅಂತ್ಯ ಸಂಸ್ಕಾರ ಬೇಡವೆಂದು ಗಿರೀಶ್ ಕಾರ್ನಾಡ್ ಅವರು ಹೇಳಿದ್ದಾರೆ ಎಂದು ಕುಟುಂಬದವರು ಅಧಿಕಾರಿಗಳಿಗೆ ತಿಳಿಸಿದರು. ಅಷ್ಟೇ ಅಲ್ಲದೇ ಯಾವುದೇ ಧಾರ್ಮಿಕ ವಿಧಿ ವಿಧಾನಗಳಿಲ್ಲದೇ ಅವರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದೂ ತಿಳಿದು ಬಂದಿದೆ. ಕಾರ್ನಾಡ್ ಅವರ ಕುರಿತು ಸಾಕ್ಷ್ಯ ಚಿತ್ರ ನಿರ್ಮಿಸಿದ್ದ ಚಿತ್ರ ನಿರ್ದೇಶಕ ಕೆ.ಎಂ.ಚೈತನ್ಯ ಇದನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇಂದು ಮಧ್ಯಾಹ್ನದ ನಂತರ ಬೈಯ್ಯಪ್ಪನಹಳ್ಳಿಯ ಚಿತಾಗಾರದಲ್ಲಿ ಕಾರ್ನಾಡ್ ರ ಅಂತ್ಯ ಸಂಸ್ಕಾರ ನಡೆಯಲಿದೆ.ಜೀವನದುದ್ದಕ್ಕೂ ಕೆಲವು ಮೌಲ್ಯಗಳಿಗೆ ಬದ್ಧರಾಗಿದ್ದು ಬದುಕಿದ ಗಣ್ಯ ವ್ಯಕ್ತಿಗಳು, ಸಾವಿನ ನಂತರ  ಏನು ಮಾಡಬೇಕೆಂದು ಕುಟುಂಬದವರಿಗೆ ತಿಳಿಸದೇ ಇದ್ದಾಗ ಕೆಲವು ಎಡವಟ್ಟುಗಳು ಸಂಭವಿಸುತ್ತವೆ. ಅವರ ಮೌಲ್ಯಗಳಿಗೆ ವಿರುದ್ಧವಾಗಿ ಕುಟುಂಬವು ಧಾರ್ಮಿಕ ವಿಧಿ ವಿಧಾನಗಳಿಗೆ ಶರಣಾಗಬಹುದು. ಅಂತಹ ಸಂದರ್ಭದಲ್ಲಿ ಸದರಿ ಗಣ್ಯರ ಸಾರ್ವಜನಿಕ ಬದುಕಿನ ಒಡನಾಡಿಗಳಾಗಿದ್ದವರೂ ಮುಜುಗರಕ್ಕೆ ಸಿಲುಕುತ್ತಾರೆ. ಏಕೆಂದರೆ ಬದುಕಿದ್ದಾಗ, ತನ್ನ ಬದುಕಿನ ಆದ್ಯತೆಗಳ ಕುರಿತು ಹೇಳಿಕೊಳ್ಳಲು ಆ ವ್ಯಕ್ತಿಯೇ ಇರುತ್ತಾರೆ. ಸತ್ತ ನಂತರ  ಕುಟುಂಬ ಏನು ತೀರ್ಮಾನ ಮಾಡುತ್ತದೋ ಅದೇ ಅಂತಿಮವಾಗುತ್ತದೆ.

ಯು.ಆರ್.ಅನಂತಮೂರ್ತಿಯವರು ತೀರಿಕೊಂಡಾಗ ಹಲವು ಪ್ರಶ್ನೆಗಳು ಎದ್ದಿದ್ದವು. ಅವರ ಅಂತ್ಯ ಸಂಸ್ಕಾರವು ಕಲಾಗ್ರಾಮದ ಆವರಣದಲ್ಲಿ ನಡೆಯಿತು ಮತ್ತು ಅದು ಮಾಧ್ವ ಬ್ರಾಹ್ಮಣ ಸಂಪ್ರದಾಯದ ಪ್ರಕಾರ ನಡೆದಿತ್ತು. ಕ್ರಿಶ್ಚಿಯನ್ ಪತ್ನಿಯಿದ್ದ ಅನಂತಮೂರ್ತಿಯವರು, ಬ್ರಾಹ್ಮಣ್ಯದ ದ್ವಂದ್ವಗಳನ್ನು ಎತ್ತಿ ತೋರಿಸುವ ಸೃಜನಶೀಲ ಕೃತಿಗಳನ್ನು ಬರೆದಿದ್ದರು. ಅದೇ ರೀತಿ, ಬ್ರಾಹ್ಮಣ ಆಚರಣೆ, ವಿಧಿ ವಿಧಾನ ಮತ್ತು ಸಾಂಸ್ಕೃತಿಕ ಸಂಗತಿಗಳ ಕುರಿತು ಇತರ ವಿಚಾರವಾದಿಗಳಿಗಿಂತ ಭಿನ್ನವಾದ ನಿಲುವನ್ನು ಹೊಂದಿದ್ದರು. ಅವರ ಅಂತ್ಯಸಂಸ್ಕಾರದ ವಿಧಿ ವಿಧಾನದ ಬಗ್ಗೆಯೂ ಅವರೇ ಸೂಚಿಸಿದ್ದರು ಎನ್ನಲಾಗಿದೆ.

ಕಲಾಗ್ರಾಮದಲ್ಲಿ ಅಂತ್ಯಸಂಸ್ಕಾರ ಮತ್ತು ಅಂತ್ಯಸಂಸ್ಕಾರದ ವಿಧಿವಿಧಾನಗಳ ಕುರಿತು ಆಗ ಪ್ರಶ್ನೆಗಳು ಎದ್ದಿದ್ದವು. ಅಂತಹ ಯಾವುದಕ್ಕೂ ಕಾರ್ನಾಡರು ಅವಕಾಶ ಕೊಟ್ಟಿಲ್ಲ.

ಇಷ್ಟೇ ಅಲ್ಲದೇ, ಇನ್ನೂ ಕಾರ್ನಾಡರು ಮತ್ತೊಂದು ವಿಚಾರದಲ್ಲೂ ‘ಭಿನ್ನ’ ನಿಲುವನ್ನು ಹೊಂದಿದ್ದರು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಫೋಟೋಗಳನ್ನು ಎಲ್ಲೆಡೆ ಕನ್ನಡ ಅಸ್ಮಿತೆಯ ಹೆಗ್ಗುರುತುಗಳಾಗಿ ಬಳಸುವುದನ್ನು ಅವರು ಒಪ್ಪಿರಲಿಲ್ಲ. ಜ್ಞಾನಪೀಠ ಪ್ರಶಸ್ತಿಯೊಂದೇ ಸಾಹಿತ್ಯ ಶ್ರೇಷ್ಠತೆಯ ಮಾನದಂಡವೂ ಅಲ್ಲ  ಎಂಬುದು ಅವರ ಅಭಿಪ್ರಾಯವಾಗಿತ್ತು. ಸ್ವತಃ ತಾವೇ ಜ್ಞಾನಪೀಠ ಪಡೆದುಕೊಂಡಿದ್ದರೂ, ಇಂತಹ ಅಭಿಪ್ರಾಯ ಅವರಲ್ಲಿತ್ತು ಮತ್ತು ಇದನ್ನು ಅವರು ಬಹಿರಂಗವಾಗಿಯೂ ಹೇಳಿದ್ದರು.

ಗಿರೀಶ್ ಕಾರ್ನಾಡರು ಈ ರೀತಿಯಾಗಿ ಸಾವಿನ ನಂತರದ ಸಂಗತಿಗಳ ಕುರಿತು ಮೊದಲೇ ಕುಟುಂಬದವರಿಗೆ ತಿಳಿಸಿ ಮಾದರಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....