Homeಮುಖಪುಟಬಾಲಕಿಗೆ ಲೈಂಗಿಕ ಕಿರುಕುಳ ಆರೋಪ; ರೈಲ್ವೇ ನೌಕರನನ್ನು ಹೊಡೆದು ಕೊಂದ ಪ್ರಯಾಣಿಕರು

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ; ರೈಲ್ವೇ ನೌಕರನನ್ನು ಹೊಡೆದು ಕೊಂದ ಪ್ರಯಾಣಿಕರು

- Advertisement -
- Advertisement -

11 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ನಂತರ ರೈಲ್ವೇ ಉದ್ಯೋಗಿಯನ್ನು ಗುರುವಾರ ಮುಂಜಾನೆ ರೈಲಿನಲ್ಲಿದ್ದ ಬಾಲಕಿಯ ಕುಟುಂಬ ಸದಸ್ಯರು ಮತ್ತು ಇತರ ಪ್ರಯಾಣಿಕರು ನವದೆಹಲಿಯಲ್ಲಿ ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಸಿವಾನ್‌ನ ಕುಟುಂಬವೊಂದು ಬುಧವಾರ ಬಿಹಾರದ ಬರೌನಿನಿಂದ ನವದೆಹಲಿಗೆ ಹಮ್‌ಸಫರ್ ಎಕ್ಸ್‌ಪ್ರೆಸ್ ಹತ್ತಿದೆ. ರಾತ್ರಿ 11.30 ರ ಸುಮಾರಿಗೆ, ಗ್ರೂಪ್ ಡಿ ರೈಲ್ವೆ ಉದ್ಯೋಗಿ ಪ್ರಶಾಂತ್ ಕುಮಾರ್ ಕುಟುಂಬದ 11 ವರ್ಷದ ಬಾಲಕಿಯನ್ನು ತನ್ನ ಸೀಟಿನಲ್ಲಿ ಕೂರಿಸಿಕೊಂಡರು. ಬಳಿಕ, ಬಾಲಕಿಯ ತಾಯಿ ವಾಶ್ ರೂಂಗೆ ಹೋದಾಗ ಕುಮಾರ್ ಬಾಲಕಿಗೆ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.

ಮಹಿಳೆ ವಾಶ್ ರೂಂನಿಂದ ಹೊರಬಂದ ತಕ್ಷಣ, ಹುಡುಗಿ ತಾಯಿಯ ಬಳಿಗೆ ಓಡಿ, ಆಕೆಯನ್ನು ತಬ್ಬಿಕೊಂಡು ಅಳಲು ಪ್ರಾರಂಭಿಸಿದಳು. ಅವಳು ತನ್ನ ತಾಯಿಯನ್ನು ವಾಶ್‌ರೂಮ್‌ಗೆ ಕರೆದೊಯ್ದು ನಡೆದದ್ದನ್ನು ಹೇಳಿದಳು. ನಂತರ ತಾಯಿ ರೈಲಿನಲ್ಲಿ ಎಂ1ಕೋಚ್‌ನಲ್ಲಿದ್ದ ತನ್ನ ಪತಿ, ಮಾವ ಮತ್ತು ಇತರ ಪ್ರಯಾಣಿಕರಿಗೆ ಮಾಹಿತಿ ನೀಡಿದರು.

ರೈಲು ಲಕ್ನೋದ ಐಶ್‌ಬಾಗ್ ಜಂಕ್ಷನ್‌ಗೆ ತಲುಪಿದಾಗ ಕೋಪಗೊಂಡ ಪ್ರಯಾಣಿಕರು ಮತ್ತು ಕುಟುಂಬ ಸದಸ್ಯರು ಕುಮಾರ್‌ನನ್ನು ಹಿಡಿದು ಕೋಚ್‌ನ ಬಾಗಿಲಿನ ಸಮೀಪವಿರುವ ಪ್ರದೇಶಕ್ಕೆ ಕರೆದೊಯ್ದು ರೈಲು ಕಾನ್ಪುರ ಸೆಂಟ್ರಲ್ ತಲುಪುವವರೆಗೆ, ಸುಮಾರು ಒಂದೂವರೆ ಗಂಟೆ ಥಳಿಸಿದ್ದಾರೆ ಎನ್ನಲಾಗಿದೆ. ಗುರುವಾರ ಮುಂಜಾನೆ 4.35 ಕ್ಕೆ ರೈಲು ಕಾನ್ಪುರ ಸೆಂಟ್ರಲ್‌ಗೆ ತಲುಪಿದಾಗ, ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಗಳು ಕುಮಾರ್ ಅವರನ್ನು ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಆತ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಲಕಿಯ ಕುಟುಂಬದವರು ಲೈಂಗಿಕ ದೌರ್ಜನ್ಯದ ದೂರು ದಾಖಲಿಸಿದರೆ, ಕುಮಾರ್ ಕುಟುಂಬವು ಕೊಲೆ ಎಂದು ದೂರು ದಾಖಲಿಸಿದೆ.

ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಸಮಸ್ತ್‌ಪುರ ಗ್ರಾಮದಲ್ಲಿ ವಾಸಿಸುವ ಕುಟುಂಬಕ್ಕೆ ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ ನಂತರ ಅವರನ್ನು ಹೊಡೆದು ಸಾಯಿಸಲಾಗಿದೆ ಎಂದು ಕುಮಾರ್ ಅವರ ಚಿಕ್ಕಪ್ಪ ಪವನ್ ಹೇಳಿದ್ದಾರೆ.

“ಪ್ರಶಾಂತ್ ಅಂತಹ ವ್ಯಕ್ತಿಯಲ್ಲ, ಪಿತೂರಿಯ ಭಾಗವಾಗಿ ಅವನನ್ನು ಕೊಲ್ಲಲಾಗಿದೆ ಎಂದು ತೋರುತ್ತದೆ. ಅವನನ್ನು ಇಷ್ಟು ಜನ ಥಳಿಸಿದ್ದಾರೆ, ಸುತ್ತಲೂ ರೈಲ್ವೆ ಪೊಲೀಸ್ ಪಡೆಯ ಸಿಬ್ಬಂದಿ ಇರಲಿಲ್ಲವೇ” ಎಂದು ಅವರು ಪ್ರಶ್ನಿಸಿದ್ದಾರೆ.

ಪೊಲೀಸ್ ಅಧೀಕ್ಷಕ, ಜಿಆರ್‌ಪಿ (ಪ್ರಯಾಗ್‌ರಾಜ್) ಅಭಿಷೇಕ್ ಯಾದವ್ ಪ್ರತಿಕ್ರಿಯಿಸಿ, “ರೈಲು ಐಶ್‌ಬಾಗ್ ದಾಟಿದಾಗ, ಬಾಲಕಿ ತನಗೆ ಕಿರುಕುಳ ನೀಡಲಾಯಿತು ಎಂದು ಹೇಳಿದರು. ಆಕೆಯ ಕುಟುಂಬ ಸದಸ್ಯರು ಮತ್ತು ಇತರ ಪ್ರಯಾಣಿಕರು ಆರೋಪಿಯನ್ನು ಥಳಿಸಿದ್ದಾರೆ. ಕಾನ್ಪುರ ಸೆಂಟ್ರಲ್‌ನಲ್ಲಿ ಆರೋಪಿಯನ್ನು ಹಸ್ತಾಂತರಿಸಲಾಗಿದೆ. ಜಿಆರ್‌ಪಿ ಮತ್ತು ದೂರು ದಾಖಲಿಸಿದ್ದು, ಆತನನ್ನು ಆಸ್ಪತ್ರೆಗೆ ಸಾಗಿಸಿದಾಗ ಆತ ಮೃತಪಟ್ಟಿದ್ದಾನೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ; ದೆಹಲಿ ಗಲಭೆ ಪ್ರಕರಣ: ವಿಚಾರಣೆಯಿಲ್ಲದೆ ನಾಲ್ಕು ವರ್ಷಗಳಿಂದ ಜೈಲಿನಲ್ಲಿರುವ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...