Homeಮುಖಪುಟಬಾಲಕಿಗೆ ಲೈಂಗಿಕ ಕಿರುಕುಳ ಆರೋಪ; ರೈಲ್ವೇ ನೌಕರನನ್ನು ಹೊಡೆದು ಕೊಂದ ಪ್ರಯಾಣಿಕರು

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ; ರೈಲ್ವೇ ನೌಕರನನ್ನು ಹೊಡೆದು ಕೊಂದ ಪ್ರಯಾಣಿಕರು

- Advertisement -
- Advertisement -

11 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ನಂತರ ರೈಲ್ವೇ ಉದ್ಯೋಗಿಯನ್ನು ಗುರುವಾರ ಮುಂಜಾನೆ ರೈಲಿನಲ್ಲಿದ್ದ ಬಾಲಕಿಯ ಕುಟುಂಬ ಸದಸ್ಯರು ಮತ್ತು ಇತರ ಪ್ರಯಾಣಿಕರು ನವದೆಹಲಿಯಲ್ಲಿ ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಸಿವಾನ್‌ನ ಕುಟುಂಬವೊಂದು ಬುಧವಾರ ಬಿಹಾರದ ಬರೌನಿನಿಂದ ನವದೆಹಲಿಗೆ ಹಮ್‌ಸಫರ್ ಎಕ್ಸ್‌ಪ್ರೆಸ್ ಹತ್ತಿದೆ. ರಾತ್ರಿ 11.30 ರ ಸುಮಾರಿಗೆ, ಗ್ರೂಪ್ ಡಿ ರೈಲ್ವೆ ಉದ್ಯೋಗಿ ಪ್ರಶಾಂತ್ ಕುಮಾರ್ ಕುಟುಂಬದ 11 ವರ್ಷದ ಬಾಲಕಿಯನ್ನು ತನ್ನ ಸೀಟಿನಲ್ಲಿ ಕೂರಿಸಿಕೊಂಡರು. ಬಳಿಕ, ಬಾಲಕಿಯ ತಾಯಿ ವಾಶ್ ರೂಂಗೆ ಹೋದಾಗ ಕುಮಾರ್ ಬಾಲಕಿಗೆ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.

ಮಹಿಳೆ ವಾಶ್ ರೂಂನಿಂದ ಹೊರಬಂದ ತಕ್ಷಣ, ಹುಡುಗಿ ತಾಯಿಯ ಬಳಿಗೆ ಓಡಿ, ಆಕೆಯನ್ನು ತಬ್ಬಿಕೊಂಡು ಅಳಲು ಪ್ರಾರಂಭಿಸಿದಳು. ಅವಳು ತನ್ನ ತಾಯಿಯನ್ನು ವಾಶ್‌ರೂಮ್‌ಗೆ ಕರೆದೊಯ್ದು ನಡೆದದ್ದನ್ನು ಹೇಳಿದಳು. ನಂತರ ತಾಯಿ ರೈಲಿನಲ್ಲಿ ಎಂ1ಕೋಚ್‌ನಲ್ಲಿದ್ದ ತನ್ನ ಪತಿ, ಮಾವ ಮತ್ತು ಇತರ ಪ್ರಯಾಣಿಕರಿಗೆ ಮಾಹಿತಿ ನೀಡಿದರು.

ರೈಲು ಲಕ್ನೋದ ಐಶ್‌ಬಾಗ್ ಜಂಕ್ಷನ್‌ಗೆ ತಲುಪಿದಾಗ ಕೋಪಗೊಂಡ ಪ್ರಯಾಣಿಕರು ಮತ್ತು ಕುಟುಂಬ ಸದಸ್ಯರು ಕುಮಾರ್‌ನನ್ನು ಹಿಡಿದು ಕೋಚ್‌ನ ಬಾಗಿಲಿನ ಸಮೀಪವಿರುವ ಪ್ರದೇಶಕ್ಕೆ ಕರೆದೊಯ್ದು ರೈಲು ಕಾನ್ಪುರ ಸೆಂಟ್ರಲ್ ತಲುಪುವವರೆಗೆ, ಸುಮಾರು ಒಂದೂವರೆ ಗಂಟೆ ಥಳಿಸಿದ್ದಾರೆ ಎನ್ನಲಾಗಿದೆ. ಗುರುವಾರ ಮುಂಜಾನೆ 4.35 ಕ್ಕೆ ರೈಲು ಕಾನ್ಪುರ ಸೆಂಟ್ರಲ್‌ಗೆ ತಲುಪಿದಾಗ, ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಗಳು ಕುಮಾರ್ ಅವರನ್ನು ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಆತ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಲಕಿಯ ಕುಟುಂಬದವರು ಲೈಂಗಿಕ ದೌರ್ಜನ್ಯದ ದೂರು ದಾಖಲಿಸಿದರೆ, ಕುಮಾರ್ ಕುಟುಂಬವು ಕೊಲೆ ಎಂದು ದೂರು ದಾಖಲಿಸಿದೆ.

ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಸಮಸ್ತ್‌ಪುರ ಗ್ರಾಮದಲ್ಲಿ ವಾಸಿಸುವ ಕುಟುಂಬಕ್ಕೆ ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ ನಂತರ ಅವರನ್ನು ಹೊಡೆದು ಸಾಯಿಸಲಾಗಿದೆ ಎಂದು ಕುಮಾರ್ ಅವರ ಚಿಕ್ಕಪ್ಪ ಪವನ್ ಹೇಳಿದ್ದಾರೆ.

“ಪ್ರಶಾಂತ್ ಅಂತಹ ವ್ಯಕ್ತಿಯಲ್ಲ, ಪಿತೂರಿಯ ಭಾಗವಾಗಿ ಅವನನ್ನು ಕೊಲ್ಲಲಾಗಿದೆ ಎಂದು ತೋರುತ್ತದೆ. ಅವನನ್ನು ಇಷ್ಟು ಜನ ಥಳಿಸಿದ್ದಾರೆ, ಸುತ್ತಲೂ ರೈಲ್ವೆ ಪೊಲೀಸ್ ಪಡೆಯ ಸಿಬ್ಬಂದಿ ಇರಲಿಲ್ಲವೇ” ಎಂದು ಅವರು ಪ್ರಶ್ನಿಸಿದ್ದಾರೆ.

ಪೊಲೀಸ್ ಅಧೀಕ್ಷಕ, ಜಿಆರ್‌ಪಿ (ಪ್ರಯಾಗ್‌ರಾಜ್) ಅಭಿಷೇಕ್ ಯಾದವ್ ಪ್ರತಿಕ್ರಿಯಿಸಿ, “ರೈಲು ಐಶ್‌ಬಾಗ್ ದಾಟಿದಾಗ, ಬಾಲಕಿ ತನಗೆ ಕಿರುಕುಳ ನೀಡಲಾಯಿತು ಎಂದು ಹೇಳಿದರು. ಆಕೆಯ ಕುಟುಂಬ ಸದಸ್ಯರು ಮತ್ತು ಇತರ ಪ್ರಯಾಣಿಕರು ಆರೋಪಿಯನ್ನು ಥಳಿಸಿದ್ದಾರೆ. ಕಾನ್ಪುರ ಸೆಂಟ್ರಲ್‌ನಲ್ಲಿ ಆರೋಪಿಯನ್ನು ಹಸ್ತಾಂತರಿಸಲಾಗಿದೆ. ಜಿಆರ್‌ಪಿ ಮತ್ತು ದೂರು ದಾಖಲಿಸಿದ್ದು, ಆತನನ್ನು ಆಸ್ಪತ್ರೆಗೆ ಸಾಗಿಸಿದಾಗ ಆತ ಮೃತಪಟ್ಟಿದ್ದಾನೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ; ದೆಹಲಿ ಗಲಭೆ ಪ್ರಕರಣ: ವಿಚಾರಣೆಯಿಲ್ಲದೆ ನಾಲ್ಕು ವರ್ಷಗಳಿಂದ ಜೈಲಿನಲ್ಲಿರುವ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...