Homeಮುಖಪುಟಅಪ್ರಾಪ್ತ ಬಾಲಕರಿಂದ ಸಾಮೂಹಿಕ ಅತ್ಯಾಚಾರ; ಬಾಲಕಿ ಆತ್ಮಹತ್ಯೆ

ಅಪ್ರಾಪ್ತ ಬಾಲಕರಿಂದ ಸಾಮೂಹಿಕ ಅತ್ಯಾಚಾರ; ಬಾಲಕಿ ಆತ್ಮಹತ್ಯೆ

- Advertisement -
- Advertisement -

ಮೂವರು ಅಪ್ರಾಪ್ತ ವಯಸ್ಕರಿಂದ ಸಾಮೂಹಿಕ ಅತ್ಯಾಚಾರಕ್ಕೊಳಗಾದ 14 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯ ಖುರ್ಜಾ ಪ್ರದೇಶದಲ್ಲಿ ನಡೆದಿದೆ.

ಪೊಲೀಸರ ಪ್ರಕಾರ, 13 ರಿಂದ 17 ವರ್ಷ ವಯಸ್ಸಿನ ಹುಡುಗರು ಜೂನ್ 28 ರಂದು ಬಾಲಕಿ ಮತ್ತು ಆಕೆಯ ಮೂರು ವರ್ಷದ ಸಹೋದರನನ್ನು ಬೈಕ್ ಸವಾರಿಗೆ ಕರೆದುಕೊಂಡು ಹೋಗಿದ್ದರು. ಬಳಿಕ ಅವರು ಆಕೆಯನ್ನು ಮಾತ್ರ ಏಕಾಂತ ಸ್ಥಳಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದರು.

ಮನೆಗೆ ಹಿಂದಿರುಗಿದ ನಂತರ, ಬಾಲಕಿ ತನ್ನ ತಾಯಿಗೆ ನಡೆದ ವಿಷಯವನ್ನು ತಿಳಿಸಿದ್ದರು. ಅವರು ಪೊಲೀಸರಿಗೆ ದೂರು ನೀಡಿದ್ದರು. ಬಿಎನ್ಎಸ್ ಸೆಕ್ಷನ್ 70 (2) (ಸಾಮೂಹಿಕ ಅತ್ಯಾಚಾರ) ಮತ್ತು ಪೋಕ್ಸೊ ಕಾಯ್ದೆಯ 5/6 ರ ಅಡಿಯಲ್ಲಿ ಎಫ್ಐಆರ್ ದಾಖಲಾಗಿತ್ತು.

ತನಿಖೆ ಕೈಗೊಂಡ ಪೊಲೀಸರು ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಿದ್ದರು. ಆತನನ್ನು ಬಾಲಾಪರಾಧಿ ಗೃಹಕ್ಕೆ ಕಳುಹಿಸಲಾಗಿದೆ. ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ವರದಿಗಳು ಹೇಳಿವೆ.

ಕಳೆದ ಮಂಗಳವಾರ ಬೆಳಿಗ್ಗೆ ನಾನು ಕೆಲಸಕ್ಕೆಂದು ಹೋಗಿದ್ದೆ. ಮಗಳು ಮನೆಯಲ್ಲಿ ಇದ್ದಳು. ಸಂಜೆ ಮನೆಗೆ ಬಂದಾಗ ಮನೆಯ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಎಷ್ಟೇ ಬಾಗಿಲು ತಟ್ಟಿದರೂ ಮಗಳಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನಂತರ ನಾನು ಪಕ್ಕದ ಮನೆಯ ಮೂಲಕ ಛಾವಣಿಯಿಂದ ಮನೆಯೊಳಗೆ ಹೋದಾಗ ಮಗಳು ನೇಣು ಬಿಗಿದುಕೊಂಡಿದ್ದಳು. ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದೆವು. ಅಲ್ಲಿ ಆಕೆ ಮೃತಪಟ್ಟಿದ್ದಾಳೆಂದು ವೈದ್ಯರು ಘೋಷಿಸಿದರು” ಎಂದು ಮೃತಳ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

“ಅತ್ಯಾಚಾರಕ್ಕೊಳಗಾದ ಬಳಿಕ ಬಾಲಕಿ ಮೌನವಾಗಿರುತ್ತಿದ್ದಳು ಮತ್ತು ಯಾವಾಗಲೂ ಮನೆಯಲ್ಲಿಯೇ ಇರುತ್ತಿದ್ದಳು. ಆಕೆ ತೀವ್ರ ಮಾನಸಿಕ ಒತ್ತಡದಲ್ಲಿದ್ದಳು” ಎಂದು ಸಂಬಂಧಿಯೊಬ್ಬರು ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ಮಹಿಳೆ ತನ್ನ ಮಗನನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟು ಹೋಗಿದ್ದರು. ಅವರ ಮಗಳು ಮನೆಯಲ್ಲಿ ಒಬ್ಬಂಟಿಯಾಗಿ ಇದ್ದರು. ಆಕೆಯ ಸಾವಿನ ಬಗ್ಗೆ ತನಿಖೆ ನಡೆಯುತ್ತಿದೆ. ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ. ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ” ಎಂದು ಖುರ್ಜಾ ಸರ್ಕಲ್ ಇನ್‌ಸ್ಪೆಕ್ಟರ್ ಪೂರ್ಣಿಮಾ ಸಿಂಗ್ ತಿಳಿಸಿದ್ದಾರೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ಹಿಂದೂ ಯುವತಿ ಭೇಟಿಗಾಗಿ ಮುಸ್ಲಿಂ ಯುವಕನಿಗೆ ಗುಂಪಿನಿಂದ ಕ್ರೂರ ಹಲ್ಲೆ: ‘ಲವ್ ಜಿಹಾದ್’ ಹೆಸರಿನಲ್ಲಿ ಅನ್ಯಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...