Homeಕರ್ನಾಟಕಸಾವರ್ಕರ್ ಸಂಸ್ಮರಣಾ ಕಾರ್ಯಕ್ರಮದ ಗಾಯನ ತರಬೇತಿಗೆ ವಿದ್ಯಾರ್ಥಿನಿಯರು: ಪಿಯು ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಮುಂದಾದ ಸರ್ಕಾರ!

ಸಾವರ್ಕರ್ ಸಂಸ್ಮರಣಾ ಕಾರ್ಯಕ್ರಮದ ಗಾಯನ ತರಬೇತಿಗೆ ವಿದ್ಯಾರ್ಥಿನಿಯರು: ಪಿಯು ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಮುಂದಾದ ಸರ್ಕಾರ!

- Advertisement -
- Advertisement -

ಹಾವೇರಿಯಲ್ಲಿ ನಡೆದ ‘ವಿಡಿ ಸಾವರ್ಕರ್ ಸಂಸ್ಮರಣಾ ಕಾರ್ಯಕ್ರಮ’ದ ಸಮೂಹ ಗಾಯನದ ಪೂರ್ವಭಾವಿ ತರಬೇತಿಗೆ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿಯರನ್ನು ಕರೆದೊಯ್ದಿದ್ದ ಪ್ರಾಂಶುಪಾಲರ ವಿರುದ್ಧ ಸರ್ಕಾರ ಶಿಸ್ತುಕ್ರಮ ಜರುಗಿಸಲು ಮುಂದಾಗಿದೆ ಎಂದು ‘ದಿ ಫೈಲ್’ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಡಿಸೆಂಬರ್ 17ರಂದು ಹಾವೇರಿಯಲ್ಲಿ ಸಾವರ್ಕರ್ ಸಂಸ್ಮರಣೆ ಕಾರ್ಯಕ್ರಮ ನಡೆದಿತ್ತು. ಮಾಜಿ ಸಚಿವ ಕೆಎಸ್ ಈಶ್ವರಪ್ಪ, ಹಾವೇರಿ ಲೋಕಸಭಾ ಬಿಜೆಪಿ ಟಿಕೆಟ್ ಆಕಾಂಕ್ಷಿ ಕೆಈ ಕಾಂತೇಶ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾವರ್ಕರ್ ಮೊಮ್ಮಗ ಸತ್ಯಕಿ ಸಾವರ್ಕರ್ ಭಾಗವಹಿಸಿದ್ದರು. ಇದೇ ಕಾರ್ಯಕ್ರಮದಲ್ಲಿ ನಡೆದ ಗೀತ ಗಾಯನ ಕಾರ್ಯಕ್ರಮದ ಪೂರ್ವ ಸಿದ್ಧತೆಗೆ ವಿದ್ಯಾರ್ಥಿನಿಯರನ್ನು ಕರೆದೊಯ್ದಿದ್ದರು ಎನ್ನಲಾಗಿದೆ.

ಪ್ರಾಂಶುಪಾಲರ ವಿರುದ್ಧ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಲು ಮುಂದಾಗಿರುವ ದಾಖಲಾತಿಗಳು ‘ದಿ ಫೈಲ್’ಗೆ ಲಭ್ಯವಾಗಿವೆ ಎನ್ನಲಾಗಿದ್ದು, ‘ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಹಾವೇರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು (ಸಿಇಒ) ಡಿಸೆಂಬರ್ 12ರಂದು ಹಾವೇರಿ ತಾಲೂಕಿನ ಇಜಾರಿ ಲಕ್ಕಾಪುರದ ಸರ್ಕಾರಿ ಪಿಯು ಕಾಲೇಜಿಗೆ ಪರಿಶೀಲನೆಗೆಂದು ತೆರಳಿದ್ದಾಗ ಈ ಪ್ರಕರಣ ಪತ್ತೆಯಾಗಿದೆ ಎನ್ನಲಾಗಿದೆ.

ಸಿಇಒ ಪರಿಶೀಲನೆಗೆ ತೆರಳಿದ್ದಾಗ, ಕಾಲೇಜಿನ ವಾಣಿಜ್ಯ ವಿಭಾಗದ ಪ್ರಥಮ ಹಿಯುಸಿ ವಿಭಾಗದ ವಿದ್ಯಾರ್ಥಿನಿಯರ ಹಾಜರಾತಿ ಕಡಿಮೆ ಇರುವುದನ್ನು ಗಮನಿಸಿದ್ದರು. ಈ ಬಗ್ಗೆ ಅತಿಥಿ ಉಪನ್ಯಾಸಕರಾದ ನಾಗರಾಜ ಬಣಕಾರ ಎಂಬುವವರನ್ನು ವಿಚಾರಿಸಿದಾಗ, ಸುಮಾರು 95 ವಿದ್ಯಾರ್ಥಿಗಳು ರಾಷ್ಟ್ರಭಕ್ತ ಬಳಗ ಹಾವೇರಿ ಘಟಕವು 2023ರ ಡಿಸೆಂಬರ್ 17ರಂದು ಹಮ್ಮಿಕೊಂಡಿರುವ ಸಾವರ್ಕರ್ ಸಂಸ್ಮರಣೆ ಕಾರ್ಯಕ್ರಮದ ಸಮೂಹ ಗಾಯನದ ಪೂರ್ವಭಾವಿ ತರಬೇತಿಗೆ ಹೋಗಿರುವುದಾಗಿ ತಿಳಿಸಿದ್ದಾರೆ ಎಂಬ ಅಂಶವನ್ನು ಸಿಇಒ ತಮ್ಮ ಟಿಪ್ಪಣಿಯಲ್ಲಿ ತಿಳಸಿದ್ದಾರೆ ಎಂದು ವರದಿಯಾಗಿದೆ.

‘ಸಾಲದ್ದಕ್ಕೆ, ಇದೇ ವಿದ್ಯಾರ್ಥಿನಿಯರು ತರಗತಿ ಅವಧಿಯಲ್ಲಿ ಹಾವೇರಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದಿದ್ದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎನ್ನಲಾಗಿದ್ದು, ಈ ಎರಡೂ ಕಾರ್ಯಕ್ರಮಗಳಿಗೆ ಪ್ರಾಂಶುಪಾಲ ಕೆ. ಕೃಷ್ಣಪ್ಪ ಅನುಮತಿ ನೀಡಿದ್ದರು’ ಎಂದು ತಮ್ಮ ಟಿಪ್ಪಣಿಯಲ್ಲಿ ಉಲ್ಲೇಖಿಸಿದ್ದಾರೆ.

ಪ್ರಾಂಶುಪಾಲ ಕೃಷ್ಣಪ್ಪ ಅವರು ಇಲಾಖೆಯಿಂದ ಆಯೋಜಿಸುವ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹೊರತುಪಡಿಸಿ ಖಾಸಗಿ ಕಾರ್ಯಕ್ರಮಕ್ಕೆ ಭಾಗವಹಿಸಲು ಅನುಮತಿ ನೀಡುವ ಮೂಲಕ ಕರ್ತವ್ಯಲೋಪ ಎಸಗಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು ಜಿಲ್ಲಾ ಪಂಚಾಯತ್ ಸಿಇಒಗೆ ವರದಿ ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ.

ಶೈಕ್ಷಣಿಕ ಚಟುವಟಿಕೆಗಳನ್ನು ಹೊರತುಪಡಿಸಿ ಇತರೆ ಚಟುವಟಿಕೆಗಳಿಗೆ ಇಲಾಖೆಯ ಅನುಮತಿ ಇಲ್ಲದೆ ವಿದ್ಯಾರ್ಥಿಗಳನ್ನು ಬಳಸಿಕೊಳ್ಳುವಂತಿಲ್ಲ. ಶೈಕ್ಷಣಿಕ ಚಟುವಟಿಕೆಗಳ ಹೊರತುಪಡಿಸಿದ ಇತರೆ ರಾಜಕೀಯ ಮತ್ತು ಖಾಸಗಿ ಕಾರ್ಯಕ್ರಮಗಳಿಗೆ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ಅನುಮತಿಸಲು ಅವಕಾಶವನ್ನೂ ನೀಡಬಾರದು ಎಂದು ಎಂದು ಸರ್ಕಾರದ ಸೂಚನೆ ಮತ್ತು ನಿರ್ದೇಶನಗಳಿವೆ. ಆದರೂ ಇವುಗಳನ್ನು ಪ್ರಾಂಶಪಾಲ ಕೃಷ್ಣಪ್ಪ ಅವರು ಉಲ್ಲಂಪಿಸಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.

ಅದೇ ರೀತಿ ‘ಸರ್ಕಾರದ ನಿರ್ದೇಶನಗಳನ್ನು ಉಲ್ಲಂಘಿಸಿ ಕಾಲೇಜಿನ ವಿದ್ಯಾರ್ಥಿನಿಯರನ್ನು ಇಲಾಖೆಯಿಂದ ಆಯೋಜಿಸುವ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹೊರತುಪಡಿಸಿ ರಾಜಕೀಯ, ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಮತಿ ನೀಡುವ ಮೂಲಕ ತಮ್ಮ ಕರ್ತವ್ಯ ನಿರ್ವಹಣೆಯಲ್ಲಿನ ಜವಾಬ್ದಾರಿಯನ್ನು ಅರಿತು ಕರ್ತವ್ಯ ನಿರ್ವಹಿಸದೇ ತೀವ್ರ ಸ್ವರೂಪದ ಕರ್ತವ್ಯಲೋಪ ಎಸಗಿದ್ದಾರೆ. ಈ ಹಿನ್ನೆಲೆಯಲ್ಲಿ ಇವರ ವಿರುದ್ಧ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ಅನ್ವಯ ಶಿಸ್ತು ಕ್ರಮ ಕೈಗೊಳ್ಳಬೇಕು. ಹಾಗೆಯೇ, ಕೃಷ್ಣಪ್ಪ ಅವರ ವಿರುದ್ಧ ತಾವರೆಕೆರೆಯ ಸೀಗೇಹಳ್ಳಿಯ ಹಿಯು ಕಾಲೇಜಿನಲ್ಲಿಯೂ ಇಲಾಖೆ ವಿಚಾರಣೆ ಬಾಕಿ ಇತ್ತು. ಆದರೂ ತಮ್ಮ ವಿರುದ್ಧ ಯಾವುದೇ ವಿಚಾರಣೆ ಬಾಕಿ ಇಲ್ಲವೆಂದು ತಪ್ಪು ಮಾಹಿತಿ ನೀಡಿ ಪ್ರಾಂಶುಪಾಲರ ಹುದ್ದೆಗೆ ಬಡ್ತಿ ಹೊಂದಿದ್ದರು. ಹೀಗಾಗಿ ಇವರ ಬಡ್ತಿಯನ್ನು ಹಿಂಪಡೆಯಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಾವರ್ಕರ್ ಪಠ್ಯ-ಫೋಟೋ ವಿವಾದ: 

ಹಿಂದುತ್ವ ಸಂಘಟನೆಗಳು ಹಾಗೂ ಅದರ ಕಾರ್ಯಕರ್ತರ ನೆಚ್ಚಿನ ನಾಯಕ ವಿ.ಡಿ. ಸಾವರ್ಕರ್ ಅವರನ್ನು ಹಿಂದಿನ ಬಿಜೆಪಿ ಸರ್ಕಾರ ವಿಜೃಂಭಿಸಿತ್ತು. ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯ ಪರಿಷ್ಕರಣೆಯಲ್ಲಿ ಸಾವರ್ಕರ್ ಪಠ್ಯವನ್ನು ಸೇರಿಸಲಾಗಿತ್ತು. ಹಿಂದೆ ವಿಧಾನಸಭೆ ಸ್ಪೀಕರ್ ಆಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಬೆಳಗಾವಿ ಸುವರ್ಣಸೌಧದಲ್ಲಿ ಸಾವರ್ಕರ್ ಫೋಟೋ ಅಳವಡಿಸಿದ್ದರು. ಆಗ ವಿರೋಧಿಸಿದ್ದ ಕಾಂಗ್ರೆಸ್ ಮುಖಂಡರು ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಸಾವರ್ಕರ್ ಪಠ್ಯ ಕೈಬಿಟ್ಟು, ಸದನದಲ್ಲಿರುವ ಫೋಟೋ ತೆಗೆಸುವುದಾಗಿ ಹೇಳಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಸಾವರ್ಕರ್ ಹಾಗೂ ಸಂಘಪರಿವಾರದ ಪಠ್ಯಗಳನ್ನು ಕೈಬಿಡಲಾಗಿದೆ. ಸದನದಲ್ಲಿರುವ ಫೋಟೋ ತೆರವುಗೊಳಿಸುವ ಕುರಿತು ಚರ್ಚೆ ಜೋರಾಗಿರುವಾಗಲೇ ಈ ಪ್ರಕರಣ ಬೆಳಕಿಗೆ ಬಂದಿದೆ.

ಸಾವರ್ಕರ್ ಫೋಟೋ ತೆಗೆಸುವ ವಿಚಾರದ ಕುರಿತು ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲೇ ಸಾವರ್ಕರ್ ಸಂಸ್ಮರಣಾ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳನ್ನು ಕರೆದೊಯ್ದಿದ್ದ ಪಿಯು ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ರಮವು ಕಾಂಗ್ರೆಸ್-ಬಿಜೆಪಿ ನಡುವೆ ವಾಕ್ಸಮರಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ದೂರವಾಣಿ ಮೂಲಕ ಸಂಪರ್ಕ ಮಾಡಲಾಯಿತಾದರೂ ಅವರು ಕರೆ ಸ್ವೀಕರಿಸಲಿಲ್ಲ.

ಇದನ್ನೂ ಓದಿ; ಜ್ಞಾನವಾಪಿ ಮಸೀದಿ ಪ್ರಕರಣ: ಮುಸ್ಲಿಮರ ಐದು ಅರ್ಜಿಗಳು ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...