Homeಕರ್ನಾಟಕಸಾವರ್ಕರ್ ಸಂಸ್ಮರಣಾ ಕಾರ್ಯಕ್ರಮದ ಗಾಯನ ತರಬೇತಿಗೆ ವಿದ್ಯಾರ್ಥಿನಿಯರು: ಪಿಯು ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಮುಂದಾದ ಸರ್ಕಾರ!

ಸಾವರ್ಕರ್ ಸಂಸ್ಮರಣಾ ಕಾರ್ಯಕ್ರಮದ ಗಾಯನ ತರಬೇತಿಗೆ ವಿದ್ಯಾರ್ಥಿನಿಯರು: ಪಿಯು ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಮುಂದಾದ ಸರ್ಕಾರ!

- Advertisement -
- Advertisement -

ಹಾವೇರಿಯಲ್ಲಿ ನಡೆದ ‘ವಿಡಿ ಸಾವರ್ಕರ್ ಸಂಸ್ಮರಣಾ ಕಾರ್ಯಕ್ರಮ’ದ ಸಮೂಹ ಗಾಯನದ ಪೂರ್ವಭಾವಿ ತರಬೇತಿಗೆ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿಯರನ್ನು ಕರೆದೊಯ್ದಿದ್ದ ಪ್ರಾಂಶುಪಾಲರ ವಿರುದ್ಧ ಸರ್ಕಾರ ಶಿಸ್ತುಕ್ರಮ ಜರುಗಿಸಲು ಮುಂದಾಗಿದೆ ಎಂದು ‘ದಿ ಫೈಲ್’ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಡಿಸೆಂಬರ್ 17ರಂದು ಹಾವೇರಿಯಲ್ಲಿ ಸಾವರ್ಕರ್ ಸಂಸ್ಮರಣೆ ಕಾರ್ಯಕ್ರಮ ನಡೆದಿತ್ತು. ಮಾಜಿ ಸಚಿವ ಕೆಎಸ್ ಈಶ್ವರಪ್ಪ, ಹಾವೇರಿ ಲೋಕಸಭಾ ಬಿಜೆಪಿ ಟಿಕೆಟ್ ಆಕಾಂಕ್ಷಿ ಕೆಈ ಕಾಂತೇಶ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾವರ್ಕರ್ ಮೊಮ್ಮಗ ಸತ್ಯಕಿ ಸಾವರ್ಕರ್ ಭಾಗವಹಿಸಿದ್ದರು. ಇದೇ ಕಾರ್ಯಕ್ರಮದಲ್ಲಿ ನಡೆದ ಗೀತ ಗಾಯನ ಕಾರ್ಯಕ್ರಮದ ಪೂರ್ವ ಸಿದ್ಧತೆಗೆ ವಿದ್ಯಾರ್ಥಿನಿಯರನ್ನು ಕರೆದೊಯ್ದಿದ್ದರು ಎನ್ನಲಾಗಿದೆ.

ಪ್ರಾಂಶುಪಾಲರ ವಿರುದ್ಧ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಲು ಮುಂದಾಗಿರುವ ದಾಖಲಾತಿಗಳು ‘ದಿ ಫೈಲ್’ಗೆ ಲಭ್ಯವಾಗಿವೆ ಎನ್ನಲಾಗಿದ್ದು, ‘ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಹಾವೇರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು (ಸಿಇಒ) ಡಿಸೆಂಬರ್ 12ರಂದು ಹಾವೇರಿ ತಾಲೂಕಿನ ಇಜಾರಿ ಲಕ್ಕಾಪುರದ ಸರ್ಕಾರಿ ಪಿಯು ಕಾಲೇಜಿಗೆ ಪರಿಶೀಲನೆಗೆಂದು ತೆರಳಿದ್ದಾಗ ಈ ಪ್ರಕರಣ ಪತ್ತೆಯಾಗಿದೆ ಎನ್ನಲಾಗಿದೆ.

ಸಿಇಒ ಪರಿಶೀಲನೆಗೆ ತೆರಳಿದ್ದಾಗ, ಕಾಲೇಜಿನ ವಾಣಿಜ್ಯ ವಿಭಾಗದ ಪ್ರಥಮ ಹಿಯುಸಿ ವಿಭಾಗದ ವಿದ್ಯಾರ್ಥಿನಿಯರ ಹಾಜರಾತಿ ಕಡಿಮೆ ಇರುವುದನ್ನು ಗಮನಿಸಿದ್ದರು. ಈ ಬಗ್ಗೆ ಅತಿಥಿ ಉಪನ್ಯಾಸಕರಾದ ನಾಗರಾಜ ಬಣಕಾರ ಎಂಬುವವರನ್ನು ವಿಚಾರಿಸಿದಾಗ, ಸುಮಾರು 95 ವಿದ್ಯಾರ್ಥಿಗಳು ರಾಷ್ಟ್ರಭಕ್ತ ಬಳಗ ಹಾವೇರಿ ಘಟಕವು 2023ರ ಡಿಸೆಂಬರ್ 17ರಂದು ಹಮ್ಮಿಕೊಂಡಿರುವ ಸಾವರ್ಕರ್ ಸಂಸ್ಮರಣೆ ಕಾರ್ಯಕ್ರಮದ ಸಮೂಹ ಗಾಯನದ ಪೂರ್ವಭಾವಿ ತರಬೇತಿಗೆ ಹೋಗಿರುವುದಾಗಿ ತಿಳಿಸಿದ್ದಾರೆ ಎಂಬ ಅಂಶವನ್ನು ಸಿಇಒ ತಮ್ಮ ಟಿಪ್ಪಣಿಯಲ್ಲಿ ತಿಳಸಿದ್ದಾರೆ ಎಂದು ವರದಿಯಾಗಿದೆ.

‘ಸಾಲದ್ದಕ್ಕೆ, ಇದೇ ವಿದ್ಯಾರ್ಥಿನಿಯರು ತರಗತಿ ಅವಧಿಯಲ್ಲಿ ಹಾವೇರಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದಿದ್ದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎನ್ನಲಾಗಿದ್ದು, ಈ ಎರಡೂ ಕಾರ್ಯಕ್ರಮಗಳಿಗೆ ಪ್ರಾಂಶುಪಾಲ ಕೆ. ಕೃಷ್ಣಪ್ಪ ಅನುಮತಿ ನೀಡಿದ್ದರು’ ಎಂದು ತಮ್ಮ ಟಿಪ್ಪಣಿಯಲ್ಲಿ ಉಲ್ಲೇಖಿಸಿದ್ದಾರೆ.

ಪ್ರಾಂಶುಪಾಲ ಕೃಷ್ಣಪ್ಪ ಅವರು ಇಲಾಖೆಯಿಂದ ಆಯೋಜಿಸುವ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹೊರತುಪಡಿಸಿ ಖಾಸಗಿ ಕಾರ್ಯಕ್ರಮಕ್ಕೆ ಭಾಗವಹಿಸಲು ಅನುಮತಿ ನೀಡುವ ಮೂಲಕ ಕರ್ತವ್ಯಲೋಪ ಎಸಗಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು ಜಿಲ್ಲಾ ಪಂಚಾಯತ್ ಸಿಇಒಗೆ ವರದಿ ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ.

ಶೈಕ್ಷಣಿಕ ಚಟುವಟಿಕೆಗಳನ್ನು ಹೊರತುಪಡಿಸಿ ಇತರೆ ಚಟುವಟಿಕೆಗಳಿಗೆ ಇಲಾಖೆಯ ಅನುಮತಿ ಇಲ್ಲದೆ ವಿದ್ಯಾರ್ಥಿಗಳನ್ನು ಬಳಸಿಕೊಳ್ಳುವಂತಿಲ್ಲ. ಶೈಕ್ಷಣಿಕ ಚಟುವಟಿಕೆಗಳ ಹೊರತುಪಡಿಸಿದ ಇತರೆ ರಾಜಕೀಯ ಮತ್ತು ಖಾಸಗಿ ಕಾರ್ಯಕ್ರಮಗಳಿಗೆ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ಅನುಮತಿಸಲು ಅವಕಾಶವನ್ನೂ ನೀಡಬಾರದು ಎಂದು ಎಂದು ಸರ್ಕಾರದ ಸೂಚನೆ ಮತ್ತು ನಿರ್ದೇಶನಗಳಿವೆ. ಆದರೂ ಇವುಗಳನ್ನು ಪ್ರಾಂಶಪಾಲ ಕೃಷ್ಣಪ್ಪ ಅವರು ಉಲ್ಲಂಪಿಸಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.

ಅದೇ ರೀತಿ ‘ಸರ್ಕಾರದ ನಿರ್ದೇಶನಗಳನ್ನು ಉಲ್ಲಂಘಿಸಿ ಕಾಲೇಜಿನ ವಿದ್ಯಾರ್ಥಿನಿಯರನ್ನು ಇಲಾಖೆಯಿಂದ ಆಯೋಜಿಸುವ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹೊರತುಪಡಿಸಿ ರಾಜಕೀಯ, ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಮತಿ ನೀಡುವ ಮೂಲಕ ತಮ್ಮ ಕರ್ತವ್ಯ ನಿರ್ವಹಣೆಯಲ್ಲಿನ ಜವಾಬ್ದಾರಿಯನ್ನು ಅರಿತು ಕರ್ತವ್ಯ ನಿರ್ವಹಿಸದೇ ತೀವ್ರ ಸ್ವರೂಪದ ಕರ್ತವ್ಯಲೋಪ ಎಸಗಿದ್ದಾರೆ. ಈ ಹಿನ್ನೆಲೆಯಲ್ಲಿ ಇವರ ವಿರುದ್ಧ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ಅನ್ವಯ ಶಿಸ್ತು ಕ್ರಮ ಕೈಗೊಳ್ಳಬೇಕು. ಹಾಗೆಯೇ, ಕೃಷ್ಣಪ್ಪ ಅವರ ವಿರುದ್ಧ ತಾವರೆಕೆರೆಯ ಸೀಗೇಹಳ್ಳಿಯ ಹಿಯು ಕಾಲೇಜಿನಲ್ಲಿಯೂ ಇಲಾಖೆ ವಿಚಾರಣೆ ಬಾಕಿ ಇತ್ತು. ಆದರೂ ತಮ್ಮ ವಿರುದ್ಧ ಯಾವುದೇ ವಿಚಾರಣೆ ಬಾಕಿ ಇಲ್ಲವೆಂದು ತಪ್ಪು ಮಾಹಿತಿ ನೀಡಿ ಪ್ರಾಂಶುಪಾಲರ ಹುದ್ದೆಗೆ ಬಡ್ತಿ ಹೊಂದಿದ್ದರು. ಹೀಗಾಗಿ ಇವರ ಬಡ್ತಿಯನ್ನು ಹಿಂಪಡೆಯಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಾವರ್ಕರ್ ಪಠ್ಯ-ಫೋಟೋ ವಿವಾದ: 

ಹಿಂದುತ್ವ ಸಂಘಟನೆಗಳು ಹಾಗೂ ಅದರ ಕಾರ್ಯಕರ್ತರ ನೆಚ್ಚಿನ ನಾಯಕ ವಿ.ಡಿ. ಸಾವರ್ಕರ್ ಅವರನ್ನು ಹಿಂದಿನ ಬಿಜೆಪಿ ಸರ್ಕಾರ ವಿಜೃಂಭಿಸಿತ್ತು. ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯ ಪರಿಷ್ಕರಣೆಯಲ್ಲಿ ಸಾವರ್ಕರ್ ಪಠ್ಯವನ್ನು ಸೇರಿಸಲಾಗಿತ್ತು. ಹಿಂದೆ ವಿಧಾನಸಭೆ ಸ್ಪೀಕರ್ ಆಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಬೆಳಗಾವಿ ಸುವರ್ಣಸೌಧದಲ್ಲಿ ಸಾವರ್ಕರ್ ಫೋಟೋ ಅಳವಡಿಸಿದ್ದರು. ಆಗ ವಿರೋಧಿಸಿದ್ದ ಕಾಂಗ್ರೆಸ್ ಮುಖಂಡರು ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಸಾವರ್ಕರ್ ಪಠ್ಯ ಕೈಬಿಟ್ಟು, ಸದನದಲ್ಲಿರುವ ಫೋಟೋ ತೆಗೆಸುವುದಾಗಿ ಹೇಳಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಸಾವರ್ಕರ್ ಹಾಗೂ ಸಂಘಪರಿವಾರದ ಪಠ್ಯಗಳನ್ನು ಕೈಬಿಡಲಾಗಿದೆ. ಸದನದಲ್ಲಿರುವ ಫೋಟೋ ತೆರವುಗೊಳಿಸುವ ಕುರಿತು ಚರ್ಚೆ ಜೋರಾಗಿರುವಾಗಲೇ ಈ ಪ್ರಕರಣ ಬೆಳಕಿಗೆ ಬಂದಿದೆ.

ಸಾವರ್ಕರ್ ಫೋಟೋ ತೆಗೆಸುವ ವಿಚಾರದ ಕುರಿತು ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲೇ ಸಾವರ್ಕರ್ ಸಂಸ್ಮರಣಾ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳನ್ನು ಕರೆದೊಯ್ದಿದ್ದ ಪಿಯು ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ರಮವು ಕಾಂಗ್ರೆಸ್-ಬಿಜೆಪಿ ನಡುವೆ ವಾಕ್ಸಮರಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ದೂರವಾಣಿ ಮೂಲಕ ಸಂಪರ್ಕ ಮಾಡಲಾಯಿತಾದರೂ ಅವರು ಕರೆ ಸ್ವೀಕರಿಸಲಿಲ್ಲ.

ಇದನ್ನೂ ಓದಿ; ಜ್ಞಾನವಾಪಿ ಮಸೀದಿ ಪ್ರಕರಣ: ಮುಸ್ಲಿಮರ ಐದು ಅರ್ಜಿಗಳು ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...