Homeಕರ್ನಾಟಕಸಾವರ್ಕರ್ ಸಂಸ್ಮರಣಾ ಕಾರ್ಯಕ್ರಮದ ಗಾಯನ ತರಬೇತಿಗೆ ವಿದ್ಯಾರ್ಥಿನಿಯರು: ಪಿಯು ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಮುಂದಾದ ಸರ್ಕಾರ!

ಸಾವರ್ಕರ್ ಸಂಸ್ಮರಣಾ ಕಾರ್ಯಕ್ರಮದ ಗಾಯನ ತರಬೇತಿಗೆ ವಿದ್ಯಾರ್ಥಿನಿಯರು: ಪಿಯು ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಮುಂದಾದ ಸರ್ಕಾರ!

- Advertisement -
- Advertisement -

ಹಾವೇರಿಯಲ್ಲಿ ನಡೆದ ‘ವಿಡಿ ಸಾವರ್ಕರ್ ಸಂಸ್ಮರಣಾ ಕಾರ್ಯಕ್ರಮ’ದ ಸಮೂಹ ಗಾಯನದ ಪೂರ್ವಭಾವಿ ತರಬೇತಿಗೆ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿಯರನ್ನು ಕರೆದೊಯ್ದಿದ್ದ ಪ್ರಾಂಶುಪಾಲರ ವಿರುದ್ಧ ಸರ್ಕಾರ ಶಿಸ್ತುಕ್ರಮ ಜರುಗಿಸಲು ಮುಂದಾಗಿದೆ ಎಂದು ‘ದಿ ಫೈಲ್’ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಡಿಸೆಂಬರ್ 17ರಂದು ಹಾವೇರಿಯಲ್ಲಿ ಸಾವರ್ಕರ್ ಸಂಸ್ಮರಣೆ ಕಾರ್ಯಕ್ರಮ ನಡೆದಿತ್ತು. ಮಾಜಿ ಸಚಿವ ಕೆಎಸ್ ಈಶ್ವರಪ್ಪ, ಹಾವೇರಿ ಲೋಕಸಭಾ ಬಿಜೆಪಿ ಟಿಕೆಟ್ ಆಕಾಂಕ್ಷಿ ಕೆಈ ಕಾಂತೇಶ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾವರ್ಕರ್ ಮೊಮ್ಮಗ ಸತ್ಯಕಿ ಸಾವರ್ಕರ್ ಭಾಗವಹಿಸಿದ್ದರು. ಇದೇ ಕಾರ್ಯಕ್ರಮದಲ್ಲಿ ನಡೆದ ಗೀತ ಗಾಯನ ಕಾರ್ಯಕ್ರಮದ ಪೂರ್ವ ಸಿದ್ಧತೆಗೆ ವಿದ್ಯಾರ್ಥಿನಿಯರನ್ನು ಕರೆದೊಯ್ದಿದ್ದರು ಎನ್ನಲಾಗಿದೆ.

ಪ್ರಾಂಶುಪಾಲರ ವಿರುದ್ಧ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಲು ಮುಂದಾಗಿರುವ ದಾಖಲಾತಿಗಳು ‘ದಿ ಫೈಲ್’ಗೆ ಲಭ್ಯವಾಗಿವೆ ಎನ್ನಲಾಗಿದ್ದು, ‘ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಹಾವೇರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು (ಸಿಇಒ) ಡಿಸೆಂಬರ್ 12ರಂದು ಹಾವೇರಿ ತಾಲೂಕಿನ ಇಜಾರಿ ಲಕ್ಕಾಪುರದ ಸರ್ಕಾರಿ ಪಿಯು ಕಾಲೇಜಿಗೆ ಪರಿಶೀಲನೆಗೆಂದು ತೆರಳಿದ್ದಾಗ ಈ ಪ್ರಕರಣ ಪತ್ತೆಯಾಗಿದೆ ಎನ್ನಲಾಗಿದೆ.

ಸಿಇಒ ಪರಿಶೀಲನೆಗೆ ತೆರಳಿದ್ದಾಗ, ಕಾಲೇಜಿನ ವಾಣಿಜ್ಯ ವಿಭಾಗದ ಪ್ರಥಮ ಹಿಯುಸಿ ವಿಭಾಗದ ವಿದ್ಯಾರ್ಥಿನಿಯರ ಹಾಜರಾತಿ ಕಡಿಮೆ ಇರುವುದನ್ನು ಗಮನಿಸಿದ್ದರು. ಈ ಬಗ್ಗೆ ಅತಿಥಿ ಉಪನ್ಯಾಸಕರಾದ ನಾಗರಾಜ ಬಣಕಾರ ಎಂಬುವವರನ್ನು ವಿಚಾರಿಸಿದಾಗ, ಸುಮಾರು 95 ವಿದ್ಯಾರ್ಥಿಗಳು ರಾಷ್ಟ್ರಭಕ್ತ ಬಳಗ ಹಾವೇರಿ ಘಟಕವು 2023ರ ಡಿಸೆಂಬರ್ 17ರಂದು ಹಮ್ಮಿಕೊಂಡಿರುವ ಸಾವರ್ಕರ್ ಸಂಸ್ಮರಣೆ ಕಾರ್ಯಕ್ರಮದ ಸಮೂಹ ಗಾಯನದ ಪೂರ್ವಭಾವಿ ತರಬೇತಿಗೆ ಹೋಗಿರುವುದಾಗಿ ತಿಳಿಸಿದ್ದಾರೆ ಎಂಬ ಅಂಶವನ್ನು ಸಿಇಒ ತಮ್ಮ ಟಿಪ್ಪಣಿಯಲ್ಲಿ ತಿಳಸಿದ್ದಾರೆ ಎಂದು ವರದಿಯಾಗಿದೆ.

‘ಸಾಲದ್ದಕ್ಕೆ, ಇದೇ ವಿದ್ಯಾರ್ಥಿನಿಯರು ತರಗತಿ ಅವಧಿಯಲ್ಲಿ ಹಾವೇರಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದಿದ್ದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎನ್ನಲಾಗಿದ್ದು, ಈ ಎರಡೂ ಕಾರ್ಯಕ್ರಮಗಳಿಗೆ ಪ್ರಾಂಶುಪಾಲ ಕೆ. ಕೃಷ್ಣಪ್ಪ ಅನುಮತಿ ನೀಡಿದ್ದರು’ ಎಂದು ತಮ್ಮ ಟಿಪ್ಪಣಿಯಲ್ಲಿ ಉಲ್ಲೇಖಿಸಿದ್ದಾರೆ.

ಪ್ರಾಂಶುಪಾಲ ಕೃಷ್ಣಪ್ಪ ಅವರು ಇಲಾಖೆಯಿಂದ ಆಯೋಜಿಸುವ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹೊರತುಪಡಿಸಿ ಖಾಸಗಿ ಕಾರ್ಯಕ್ರಮಕ್ಕೆ ಭಾಗವಹಿಸಲು ಅನುಮತಿ ನೀಡುವ ಮೂಲಕ ಕರ್ತವ್ಯಲೋಪ ಎಸಗಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು ಜಿಲ್ಲಾ ಪಂಚಾಯತ್ ಸಿಇಒಗೆ ವರದಿ ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ.

ಶೈಕ್ಷಣಿಕ ಚಟುವಟಿಕೆಗಳನ್ನು ಹೊರತುಪಡಿಸಿ ಇತರೆ ಚಟುವಟಿಕೆಗಳಿಗೆ ಇಲಾಖೆಯ ಅನುಮತಿ ಇಲ್ಲದೆ ವಿದ್ಯಾರ್ಥಿಗಳನ್ನು ಬಳಸಿಕೊಳ್ಳುವಂತಿಲ್ಲ. ಶೈಕ್ಷಣಿಕ ಚಟುವಟಿಕೆಗಳ ಹೊರತುಪಡಿಸಿದ ಇತರೆ ರಾಜಕೀಯ ಮತ್ತು ಖಾಸಗಿ ಕಾರ್ಯಕ್ರಮಗಳಿಗೆ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ಅನುಮತಿಸಲು ಅವಕಾಶವನ್ನೂ ನೀಡಬಾರದು ಎಂದು ಎಂದು ಸರ್ಕಾರದ ಸೂಚನೆ ಮತ್ತು ನಿರ್ದೇಶನಗಳಿವೆ. ಆದರೂ ಇವುಗಳನ್ನು ಪ್ರಾಂಶಪಾಲ ಕೃಷ್ಣಪ್ಪ ಅವರು ಉಲ್ಲಂಪಿಸಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.

ಅದೇ ರೀತಿ ‘ಸರ್ಕಾರದ ನಿರ್ದೇಶನಗಳನ್ನು ಉಲ್ಲಂಘಿಸಿ ಕಾಲೇಜಿನ ವಿದ್ಯಾರ್ಥಿನಿಯರನ್ನು ಇಲಾಖೆಯಿಂದ ಆಯೋಜಿಸುವ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹೊರತುಪಡಿಸಿ ರಾಜಕೀಯ, ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಮತಿ ನೀಡುವ ಮೂಲಕ ತಮ್ಮ ಕರ್ತವ್ಯ ನಿರ್ವಹಣೆಯಲ್ಲಿನ ಜವಾಬ್ದಾರಿಯನ್ನು ಅರಿತು ಕರ್ತವ್ಯ ನಿರ್ವಹಿಸದೇ ತೀವ್ರ ಸ್ವರೂಪದ ಕರ್ತವ್ಯಲೋಪ ಎಸಗಿದ್ದಾರೆ. ಈ ಹಿನ್ನೆಲೆಯಲ್ಲಿ ಇವರ ವಿರುದ್ಧ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ಅನ್ವಯ ಶಿಸ್ತು ಕ್ರಮ ಕೈಗೊಳ್ಳಬೇಕು. ಹಾಗೆಯೇ, ಕೃಷ್ಣಪ್ಪ ಅವರ ವಿರುದ್ಧ ತಾವರೆಕೆರೆಯ ಸೀಗೇಹಳ್ಳಿಯ ಹಿಯು ಕಾಲೇಜಿನಲ್ಲಿಯೂ ಇಲಾಖೆ ವಿಚಾರಣೆ ಬಾಕಿ ಇತ್ತು. ಆದರೂ ತಮ್ಮ ವಿರುದ್ಧ ಯಾವುದೇ ವಿಚಾರಣೆ ಬಾಕಿ ಇಲ್ಲವೆಂದು ತಪ್ಪು ಮಾಹಿತಿ ನೀಡಿ ಪ್ರಾಂಶುಪಾಲರ ಹುದ್ದೆಗೆ ಬಡ್ತಿ ಹೊಂದಿದ್ದರು. ಹೀಗಾಗಿ ಇವರ ಬಡ್ತಿಯನ್ನು ಹಿಂಪಡೆಯಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಾವರ್ಕರ್ ಪಠ್ಯ-ಫೋಟೋ ವಿವಾದ: 

ಹಿಂದುತ್ವ ಸಂಘಟನೆಗಳು ಹಾಗೂ ಅದರ ಕಾರ್ಯಕರ್ತರ ನೆಚ್ಚಿನ ನಾಯಕ ವಿ.ಡಿ. ಸಾವರ್ಕರ್ ಅವರನ್ನು ಹಿಂದಿನ ಬಿಜೆಪಿ ಸರ್ಕಾರ ವಿಜೃಂಭಿಸಿತ್ತು. ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯ ಪರಿಷ್ಕರಣೆಯಲ್ಲಿ ಸಾವರ್ಕರ್ ಪಠ್ಯವನ್ನು ಸೇರಿಸಲಾಗಿತ್ತು. ಹಿಂದೆ ವಿಧಾನಸಭೆ ಸ್ಪೀಕರ್ ಆಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಬೆಳಗಾವಿ ಸುವರ್ಣಸೌಧದಲ್ಲಿ ಸಾವರ್ಕರ್ ಫೋಟೋ ಅಳವಡಿಸಿದ್ದರು. ಆಗ ವಿರೋಧಿಸಿದ್ದ ಕಾಂಗ್ರೆಸ್ ಮುಖಂಡರು ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಸಾವರ್ಕರ್ ಪಠ್ಯ ಕೈಬಿಟ್ಟು, ಸದನದಲ್ಲಿರುವ ಫೋಟೋ ತೆಗೆಸುವುದಾಗಿ ಹೇಳಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಸಾವರ್ಕರ್ ಹಾಗೂ ಸಂಘಪರಿವಾರದ ಪಠ್ಯಗಳನ್ನು ಕೈಬಿಡಲಾಗಿದೆ. ಸದನದಲ್ಲಿರುವ ಫೋಟೋ ತೆರವುಗೊಳಿಸುವ ಕುರಿತು ಚರ್ಚೆ ಜೋರಾಗಿರುವಾಗಲೇ ಈ ಪ್ರಕರಣ ಬೆಳಕಿಗೆ ಬಂದಿದೆ.

ಸಾವರ್ಕರ್ ಫೋಟೋ ತೆಗೆಸುವ ವಿಚಾರದ ಕುರಿತು ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲೇ ಸಾವರ್ಕರ್ ಸಂಸ್ಮರಣಾ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳನ್ನು ಕರೆದೊಯ್ದಿದ್ದ ಪಿಯು ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ರಮವು ಕಾಂಗ್ರೆಸ್-ಬಿಜೆಪಿ ನಡುವೆ ವಾಕ್ಸಮರಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ದೂರವಾಣಿ ಮೂಲಕ ಸಂಪರ್ಕ ಮಾಡಲಾಯಿತಾದರೂ ಅವರು ಕರೆ ಸ್ವೀಕರಿಸಲಿಲ್ಲ.

ಇದನ್ನೂ ಓದಿ; ಜ್ಞಾನವಾಪಿ ಮಸೀದಿ ಪ್ರಕರಣ: ಮುಸ್ಲಿಮರ ಐದು ಅರ್ಜಿಗಳು ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...