Homeಮುಖಪುಟಹೆಣ್ಣುಮಕ್ಕಳು 15ನೇ ವಯಸ್ಸಿನಲ್ಲಿ ಮಕ್ಕಳನ್ನು ಪಡೆಯಬಹುದು - ಕಾಂಗ್ರೆಸ್ ಮುಖಂಡನ ವಿವಾದಾತ್ಮಕ ಹೇಳಿಕೆ

ಹೆಣ್ಣುಮಕ್ಕಳು 15ನೇ ವಯಸ್ಸಿನಲ್ಲಿ ಮಕ್ಕಳನ್ನು ಪಡೆಯಬಹುದು – ಕಾಂಗ್ರೆಸ್ ಮುಖಂಡನ ವಿವಾದಾತ್ಮಕ ಹೇಳಿಕೆ

ಹೆಣ್ಣುಮಕ್ಕಳು 15 ವರ್ಷದಲ್ಲಿ ಮಕ್ಕಳನ್ನು ಪಡೆಯುವ ಸಾಮರ್ಥ್ಯ ಹೊಂದಿರುವಾಗ, ಅವರ ಮದುವೆಯ ವಯಸ್ಸನ್ನು 18-21 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಯಾಕೆ ಯೋಚಿಸಬೇಕು- ಹಿರಿಯ ಕಾಂಗ್ರೆಸ್ ಶಾಸಕ ಸಜ್ಜನ್ ಸಿಂಗ್ ವರ್ಮಾ

- Advertisement -
- Advertisement -

ಮಧ್ಯಪ್ರದೇಶದ ಮಾಜಿ ಕಂದಾಯ ಸಚಿವ ಮತ್ತು ಹಿರಿಯ ಕಾಂಗ್ರೆಸ್ ಶಾಸಕ ಸಜ್ಜನ್ ಸಿಂಗ್ ವರ್ಮಾ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, ರಾಜ್ಯ ರಾಜಕೀಯದಲ್ಲಿ ಆಕ್ರೋಶ ಭುಗಿಲೆದ್ದಿದೆ. “ಹೆಣ್ಣುಮಕ್ಕಳು 15 ವರ್ಷದಲ್ಲಿ ಮಕ್ಕಳನ್ನು ಪಡೆಯುವ ಸಾಮರ್ಥ್ಯ ಹೊಂದಿರುವಾಗ, ಅವರ ಮದುವೆಯ ವಯಸ್ಸನ್ನು 18-21 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಯಾಕೆ ಯೋಚಿಸಬೇಕು” ಎಂದು ಶಾಸಕ ಹೇಳಿದ್ದಾರೆ.

ಹೆಣ್ಣುಮಕ್ಕಳ ಕನಿಷ್ಠ ಮದುವೆಯ ವಯಸ್ಸನ್ನು 18 ವರ್ಷದಿಂದ 21 ವರ್ಷಕ್ಕೆ ಹೆಚ್ಚಿಸುವ ಕುರಿತು ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ನಡೆಸಬೇಕೆಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಇತ್ತೀಚಿಗೆ ಕರೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ರಾಜ್ಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರ ನಿಷ್ಠಾವಂತ ಬೆಂಬಲಿಗರಲ್ಲಿ ಒಬ್ಬರಾದ ಸಜ್ಜನ್ ಸಿಂಗ್ ವರ್ಮಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

“ಯಾವುದೇ ಹೆಣ್ಣು 15 ನೇ ವಯಸ್ಸಿನಲ್ಲಿ ಸಂತಾನೋತ್ಪತ್ತಿ ಮಾಡುವ ಸಾಮರ್ಥ್ಯ ಹೊಂದಿರುತ್ತಾಳೆ. ಇದು ನನ್ನ ಶೋಧನೆಯಲ್ಲ, ವೈದ್ಯರ ವರದಿಯ ಪ್ರಕಾರ 15 ವರ್ಷ ವಯಸ್ಸಿನಲ್ಲಿ ಹೆಣ್ಣು ಮಕ್ಕಳು ಸಂತಾನೋತ್ಪತ್ತಿ/ಮಕ್ಕಳನ್ನು ಹೊಂದುವುದು ಸೂಕ್ತವಾಗಿದೆ. ಆದರೂ ಹೆಣ್ಣುಮಕ್ಕಳಿಗೆ ಕನಿಷ್ಠ 18 ವರ್ಷ ವಯಸ್ಸಾದಾಗ ಮಾತ್ರ ಮದುವೆಯಾಗುವಷ್ಟು ಪ್ರಬುದ್ಧರೆಂದು ಪರಿಗಣಿಸಲಾಗುತ್ತದೆ” ಎಂದು ಸಜ್ಜನ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ರೈತರಿಗೆ ಮಣಿಯುತ್ತಿರುವ ಕೇಂದ್ರ: ಕೃಷಿ ಕಾಯ್ದೆಗಳ ಪರ ಕಾರ್ಯಕ್ರಮ ಮಾಡದಂತೆ ಆದೇಶ ಹೊರಡಿಸಿದ ಅಮಿತ್…

ಶಿವರಾಜ್ ಸಿಂಗ್ ಅವರ ಹೇಳಿಕೆಯನ್ನು ಉಲ್ಲೇಖಿಸುತ್ತಾ, “ಹೆಣ್ಣುಮಕ್ಕಳ ಮದುವೆಯ ಕನಿಷ್ಟ ವಯಸ್ಸನ್ನು ಹೆಚ್ಚಿಸಲು ಅವರು ವಿಜ್ಞಾನಿಯೋ ಅಥವಾ ಶ್ರೇಷ್ಟ ವೈದ್ಯರೋ?” ಎಂದು ಪ್ರಶ್ನಿಸಿದ್ದಾರೆ.

ಸಜ್ಜನ್ ಸಿಂಗ್ ಅವರ ಈ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ರಾಜ್ಯ ಬಿಜೆಪಿ ವಕ್ತಾರರಾದ ನೇಹಾ ಬಗ್ಗಾ ಪ್ರತಿಕ್ರಿಯಿಸಿ, “ಹೆಣ್ಣುಮಕ್ಕಳ ಮಗ್ಗೆ ಇಂತಹ ಭಾಷೆಯನ್ನು ಬಳಸುವುದರ ಮೂಲಕ ಸಜ್ಜನ್ ಸಿಂಗ್ ವರ್ಮಾ, ಸಜ್ಜನ್ ಎಂಬ ತಮ್ಮ ಹೆಸರಿಗೆ ವಿರುದ್ಧವಾಗಿದ್ದಾರೆ. ಈ ಹೇಳಿಕೆಯಿಂದ ಮಧ್ಯಪ್ರದೇಶದ ಹೆಣ್ಣುಮಕ್ಕಳನ್ನು ಮಾತ್ರವಲ್ಲದೇ, ಇಡೀ ದೇಶದ ಹೆಣ್ಣುಮಕ್ಕಳನ್ನು ಅವಮಾನಿಸಿದ್ದಾರೆ. ತಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಪಕ್ಷದ ಯುವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇಬ್ಬರೂ ಮಹಿಳೆಯರು ಎಂಬುದನ್ನು ವರ್ಮಾ ಮರೆತಿದ್ದಾರೆ. ಎಲ್ಲಾ ಹೆಣ್ಣುಮಕ್ಕಳ ಬಳಿ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಮಾಡಿ, ವರ್ಮಾ ಅವರನ್ನು ಪಕ್ಷದಿಂದ ವಜಾಗೊಳಿಸಬೇಕು ಎಂದು ಸೋನಿಯಾ ಗಾಂಧಿಯವರಲ್ಲಿ ವಿನಂತಿಸುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಂಸದನನ್ನು ಟ್ರೋಲ್ ಮಾಡಿದ ಹನುಮ ವಿಹಾರಿ ಮತ್ತು ಅಶ್ವಿನ್!

ಇತ್ತೀಚೆಗೆ ಶಿವರಾಜ್ ಸಿಂಗ್ ಚೌಹಾಣ್, ಮಹಿಳೆಯರ ಮೇಲಿನ ಅಪರಾಧಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಹಮ್ಮಿಕೊಳ್ಳಲಾಗಿದ್ದ 15 ದಿನಗಳ ‘ಸಮ್ಮಾನ್’ ಕಾರ್ಯಕ್ರಮವನ್ನು ಉದ್ಘಾಟಿಸುವ ಸಂದರ್ಭದಲ್ಲಿ, ಹೆಣ್ಣುಮಕ್ಕಳ ಮದುವೆಯ ವಯಸ್ಸನ್ನು ಹೆಚ್ಚಿಸುವ ಕುರಿತು ಪ್ರಸ್ತಾಪಿಸಿದ್ದರು.

ಸಜ್ಜನ್ ಸಿಂಗ್ ಹೇಳಿಕೆಯಿಂದ ರಾಜ್ಯ ಕಾಂಗ್ರೆಸ್ ದೂರ ಉಳಿದಿದ್ದು, “ವೈಯಕ್ತಿಕ ಅಭಿಪ್ರಾಯಗಳು ಪಕ್ಷದ ಅಧಿಕೃತ ನಿಲುವಲ್ಲ” ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ನರೇಂದ್ರ ಸಲೂಜಾ ಹೇಳಿದ್ದಾರೆ.


ಇದನ್ನೂ ಓದಿ: ರೈತರಿಗೆ ತಮಗೇನು ಬೇಕೆಂದು ಗೊತ್ತಿಲ್ಲ; ಅವರನ್ನು ಯಾರೋ ಪ್ರಚೋದಿಸುತ್ತಿದ್ದಾರೆ: ಹೇಮಾ ಮಾಲಿನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...