Homeಮುಖಪುಟಹೆಣ್ಣುಮಕ್ಕಳು 15ನೇ ವಯಸ್ಸಿನಲ್ಲಿ ಮಕ್ಕಳನ್ನು ಪಡೆಯಬಹುದು - ಕಾಂಗ್ರೆಸ್ ಮುಖಂಡನ ವಿವಾದಾತ್ಮಕ ಹೇಳಿಕೆ

ಹೆಣ್ಣುಮಕ್ಕಳು 15ನೇ ವಯಸ್ಸಿನಲ್ಲಿ ಮಕ್ಕಳನ್ನು ಪಡೆಯಬಹುದು – ಕಾಂಗ್ರೆಸ್ ಮುಖಂಡನ ವಿವಾದಾತ್ಮಕ ಹೇಳಿಕೆ

ಹೆಣ್ಣುಮಕ್ಕಳು 15 ವರ್ಷದಲ್ಲಿ ಮಕ್ಕಳನ್ನು ಪಡೆಯುವ ಸಾಮರ್ಥ್ಯ ಹೊಂದಿರುವಾಗ, ಅವರ ಮದುವೆಯ ವಯಸ್ಸನ್ನು 18-21 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಯಾಕೆ ಯೋಚಿಸಬೇಕು- ಹಿರಿಯ ಕಾಂಗ್ರೆಸ್ ಶಾಸಕ ಸಜ್ಜನ್ ಸಿಂಗ್ ವರ್ಮಾ

- Advertisement -
- Advertisement -

ಮಧ್ಯಪ್ರದೇಶದ ಮಾಜಿ ಕಂದಾಯ ಸಚಿವ ಮತ್ತು ಹಿರಿಯ ಕಾಂಗ್ರೆಸ್ ಶಾಸಕ ಸಜ್ಜನ್ ಸಿಂಗ್ ವರ್ಮಾ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, ರಾಜ್ಯ ರಾಜಕೀಯದಲ್ಲಿ ಆಕ್ರೋಶ ಭುಗಿಲೆದ್ದಿದೆ. “ಹೆಣ್ಣುಮಕ್ಕಳು 15 ವರ್ಷದಲ್ಲಿ ಮಕ್ಕಳನ್ನು ಪಡೆಯುವ ಸಾಮರ್ಥ್ಯ ಹೊಂದಿರುವಾಗ, ಅವರ ಮದುವೆಯ ವಯಸ್ಸನ್ನು 18-21 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಯಾಕೆ ಯೋಚಿಸಬೇಕು” ಎಂದು ಶಾಸಕ ಹೇಳಿದ್ದಾರೆ.

ಹೆಣ್ಣುಮಕ್ಕಳ ಕನಿಷ್ಠ ಮದುವೆಯ ವಯಸ್ಸನ್ನು 18 ವರ್ಷದಿಂದ 21 ವರ್ಷಕ್ಕೆ ಹೆಚ್ಚಿಸುವ ಕುರಿತು ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ನಡೆಸಬೇಕೆಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಇತ್ತೀಚಿಗೆ ಕರೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ರಾಜ್ಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರ ನಿಷ್ಠಾವಂತ ಬೆಂಬಲಿಗರಲ್ಲಿ ಒಬ್ಬರಾದ ಸಜ್ಜನ್ ಸಿಂಗ್ ವರ್ಮಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

“ಯಾವುದೇ ಹೆಣ್ಣು 15 ನೇ ವಯಸ್ಸಿನಲ್ಲಿ ಸಂತಾನೋತ್ಪತ್ತಿ ಮಾಡುವ ಸಾಮರ್ಥ್ಯ ಹೊಂದಿರುತ್ತಾಳೆ. ಇದು ನನ್ನ ಶೋಧನೆಯಲ್ಲ, ವೈದ್ಯರ ವರದಿಯ ಪ್ರಕಾರ 15 ವರ್ಷ ವಯಸ್ಸಿನಲ್ಲಿ ಹೆಣ್ಣು ಮಕ್ಕಳು ಸಂತಾನೋತ್ಪತ್ತಿ/ಮಕ್ಕಳನ್ನು ಹೊಂದುವುದು ಸೂಕ್ತವಾಗಿದೆ. ಆದರೂ ಹೆಣ್ಣುಮಕ್ಕಳಿಗೆ ಕನಿಷ್ಠ 18 ವರ್ಷ ವಯಸ್ಸಾದಾಗ ಮಾತ್ರ ಮದುವೆಯಾಗುವಷ್ಟು ಪ್ರಬುದ್ಧರೆಂದು ಪರಿಗಣಿಸಲಾಗುತ್ತದೆ” ಎಂದು ಸಜ್ಜನ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ರೈತರಿಗೆ ಮಣಿಯುತ್ತಿರುವ ಕೇಂದ್ರ: ಕೃಷಿ ಕಾಯ್ದೆಗಳ ಪರ ಕಾರ್ಯಕ್ರಮ ಮಾಡದಂತೆ ಆದೇಶ ಹೊರಡಿಸಿದ ಅಮಿತ್…

ಶಿವರಾಜ್ ಸಿಂಗ್ ಅವರ ಹೇಳಿಕೆಯನ್ನು ಉಲ್ಲೇಖಿಸುತ್ತಾ, “ಹೆಣ್ಣುಮಕ್ಕಳ ಮದುವೆಯ ಕನಿಷ್ಟ ವಯಸ್ಸನ್ನು ಹೆಚ್ಚಿಸಲು ಅವರು ವಿಜ್ಞಾನಿಯೋ ಅಥವಾ ಶ್ರೇಷ್ಟ ವೈದ್ಯರೋ?” ಎಂದು ಪ್ರಶ್ನಿಸಿದ್ದಾರೆ.

ಸಜ್ಜನ್ ಸಿಂಗ್ ಅವರ ಈ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ರಾಜ್ಯ ಬಿಜೆಪಿ ವಕ್ತಾರರಾದ ನೇಹಾ ಬಗ್ಗಾ ಪ್ರತಿಕ್ರಿಯಿಸಿ, “ಹೆಣ್ಣುಮಕ್ಕಳ ಮಗ್ಗೆ ಇಂತಹ ಭಾಷೆಯನ್ನು ಬಳಸುವುದರ ಮೂಲಕ ಸಜ್ಜನ್ ಸಿಂಗ್ ವರ್ಮಾ, ಸಜ್ಜನ್ ಎಂಬ ತಮ್ಮ ಹೆಸರಿಗೆ ವಿರುದ್ಧವಾಗಿದ್ದಾರೆ. ಈ ಹೇಳಿಕೆಯಿಂದ ಮಧ್ಯಪ್ರದೇಶದ ಹೆಣ್ಣುಮಕ್ಕಳನ್ನು ಮಾತ್ರವಲ್ಲದೇ, ಇಡೀ ದೇಶದ ಹೆಣ್ಣುಮಕ್ಕಳನ್ನು ಅವಮಾನಿಸಿದ್ದಾರೆ. ತಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಪಕ್ಷದ ಯುವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇಬ್ಬರೂ ಮಹಿಳೆಯರು ಎಂಬುದನ್ನು ವರ್ಮಾ ಮರೆತಿದ್ದಾರೆ. ಎಲ್ಲಾ ಹೆಣ್ಣುಮಕ್ಕಳ ಬಳಿ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಮಾಡಿ, ವರ್ಮಾ ಅವರನ್ನು ಪಕ್ಷದಿಂದ ವಜಾಗೊಳಿಸಬೇಕು ಎಂದು ಸೋನಿಯಾ ಗಾಂಧಿಯವರಲ್ಲಿ ವಿನಂತಿಸುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಂಸದನನ್ನು ಟ್ರೋಲ್ ಮಾಡಿದ ಹನುಮ ವಿಹಾರಿ ಮತ್ತು ಅಶ್ವಿನ್!

ಇತ್ತೀಚೆಗೆ ಶಿವರಾಜ್ ಸಿಂಗ್ ಚೌಹಾಣ್, ಮಹಿಳೆಯರ ಮೇಲಿನ ಅಪರಾಧಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಹಮ್ಮಿಕೊಳ್ಳಲಾಗಿದ್ದ 15 ದಿನಗಳ ‘ಸಮ್ಮಾನ್’ ಕಾರ್ಯಕ್ರಮವನ್ನು ಉದ್ಘಾಟಿಸುವ ಸಂದರ್ಭದಲ್ಲಿ, ಹೆಣ್ಣುಮಕ್ಕಳ ಮದುವೆಯ ವಯಸ್ಸನ್ನು ಹೆಚ್ಚಿಸುವ ಕುರಿತು ಪ್ರಸ್ತಾಪಿಸಿದ್ದರು.

ಸಜ್ಜನ್ ಸಿಂಗ್ ಹೇಳಿಕೆಯಿಂದ ರಾಜ್ಯ ಕಾಂಗ್ರೆಸ್ ದೂರ ಉಳಿದಿದ್ದು, “ವೈಯಕ್ತಿಕ ಅಭಿಪ್ರಾಯಗಳು ಪಕ್ಷದ ಅಧಿಕೃತ ನಿಲುವಲ್ಲ” ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ನರೇಂದ್ರ ಸಲೂಜಾ ಹೇಳಿದ್ದಾರೆ.


ಇದನ್ನೂ ಓದಿ: ರೈತರಿಗೆ ತಮಗೇನು ಬೇಕೆಂದು ಗೊತ್ತಿಲ್ಲ; ಅವರನ್ನು ಯಾರೋ ಪ್ರಚೋದಿಸುತ್ತಿದ್ದಾರೆ: ಹೇಮಾ ಮಾಲಿನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...