Homeಮುಖಪುಟ'ರಾತ್ರಿ ಹೊತ್ತು ಹೆಣ್ಣು ಮಕ್ಕಳನ್ನು ಹೊರಗೆ ಬಿಡಬಾರದು': ಸಾಮೂಹಿಕ ಅತ್ಯಾಚಾರ ಘಟನೆ ಬಳಿಕ ಮಮತಾ ಬ್ಯಾನರ್ಜಿ...

‘ರಾತ್ರಿ ಹೊತ್ತು ಹೆಣ್ಣು ಮಕ್ಕಳನ್ನು ಹೊರಗೆ ಬಿಡಬಾರದು’: ಸಾಮೂಹಿಕ ಅತ್ಯಾಚಾರ ಘಟನೆ ಬಳಿಕ ಮಮತಾ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಬಗ್ಗೆ ಭಾನುವಾರ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಹುಡುಗಿಯರು ರಾತ್ರಿ ಹೊತ್ತು ಕಾಲೇಜಿನಿಂದ ಹೊರಗೆ ಹೋಗಲು ‘ಅವಕಾಶ ನೀಡಬಾರದು’ ಎಂದು ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.

ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ದುರ್ಗಾಪುರದ ಘಟನೆಯನ್ನು ‘ಆಘಾತಕಾರಿ’ ಎಂದು ಕರೆದಿದ್ದು, ಅಪರಾಧಿಗಳನ್ನು ಸುಮ್ಮನೆ ಬಿಡುವುದಿಲ್ಲ ಎಂದು ಶಪಥ ಮಾಡಿದ್ದಾರೆ.

“ಇದು ಆಘಾತಕಾರಿ ಘಟನೆ. ಇಂತಹ ಅಪರಾಧಗಳನ್ನು ನಾವು ಸಹಿಸುವುದಿಲ್ಲ. ಮೂವರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಪೊಲೀಸರು ಇತರರಿಗಾಗಿ ಶೋಧ ನಡೆಸುತ್ತಿದ್ದಾರೆ. ಯಾರನ್ನೂ ಸುಮ್ಮನೆ ಬಿಡುವುದಿಲ್ಲ” ಎಂದು ಮಮತಾ ಬ್ಯಾರ್ಜಿ ಹೇಳಿದ್ದಾರೆ.

ಒಡಿಶಾದ ಬಾಲಸೋರ್ ಜಿಲ್ಲೆಯ ಜಲೇಶ್ವರದ ವಿದ್ಯಾರ್ಥಿನಿ ಮೇಲೆ ದುರ್ಗಾಪುರದ ಕಾಲೇಜು ಕ್ಯಾಂಪಸ್‌ನ ಹೊರಗಡೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಖಾಸಗಿ ವೈದ್ಯಕೀಯ ಕಾಲೇಜಿನ ಎರಡನೇ ವರ್ಷದ ವಿದ್ಯಾರ್ಥಿನಿ ಸ್ನೇಹಿತೆಯೊಂದಿಗೆ ಶುಕ್ರವಾರ ರಾತ್ರಿ ಊಟಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ.

ಘಟನೆ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ ಮಮತಾ ಬ್ಯಾನರ್ಜಿ, ರಾತ್ರಿ ಹೊತ್ತು ಹುಡುಗಿಯರನ್ನು ಹೊರಗೆ ಹೋಗಲು ಬಿಟ್ಟ ಕಾಲೇಜಿನ ಸಿಬ್ಬಂದಿಯನ್ನು ಟೀಕಿಸಿದ್ದಾರೆ. “ಸಂತ್ರಸ್ತೆ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಓದುತ್ತಿದ್ದಳು. ಹೀಗಿರುವಾಗ ಆಕೆಯ ಜವಾಬ್ದಾರಿ ಯಾರದ್ದು? ಆಕೆ ತಡ ರಾತ್ರಿ 12.30ಕ್ಕೆ ಕ್ಯಾಂಪಸ್‌ನಿಂದ ಹೊರಗೆ ಹೋಗಿದ್ದು ಹೇಗೆ? ಹುಡುಗಿಯರು ರಾತ್ರಿ ಹೊತ್ತು ಕಾಲೇಜು ಕ್ಯಾಂಪಸ್‌ನಿಂದ ಹೊರಗೆ ಹೋಗಲು ಬಿಡಬಾರದು. ಅಲ್ಲದೆ, ಅವರು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು” ಎಂದು ಹೇಳಿದ್ದಾರೆ.

“ವಿಶೇಷವಾಗಿ ಪಶ್ಚಿಮ ಬಂಗಾಳದ ಹೊರಗಿನ ವಿದ್ಯಾರ್ಥಿಗಳು ಹಾಸ್ಟೆಲ್ ನಿಯಮಗಳನ್ನು ಪಾಲಿಸಬೇಕು. ತಡರಾತ್ರಿಯಲ್ಲಿ ಹೊರಗೆ ಹೋಗುವುದನ್ನು ತಪ್ಪಿಸಬೇಕು. ಆದರೂ, ಅವರು ಎಲ್ಲಿ ಬೇಕಾದರೂ ಹೋಗುವ ಮೂಲಭೂತ ಹಕ್ಕನ್ನು ಹೊಂದಿದ್ದಾರೆ” ಎಂದು ಸಿಎಂ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದಾರೆ.

“ಪ್ರತಿಯೊಬ್ಬ ವ್ಯಕ್ತಿಯ ಚಲನವಲನಗಳನ್ನು ಮೇಲ್ವಿಚಾರಣೆ ಮಾಡುವಲ್ಲಿ ಪೊಲೀಸರಿಗೆ ಕೆಲವು ಮಿತಿಗಳಿವೆ. ರಾತ್ರಿಯಲ್ಲಿ ಯಾರು ಮನೆಯಿಂದ ಹೊರಹೋಗುತ್ತಿದ್ದಾರೆಂದು ಅಧಿಕಾರಿಗಳಿಗೆ ತಿಳಿದಿರುವುದಿಲ್ಲ. ಅಲ್ಲದೆ, ಪ್ರತಿ ಮನೆಯ ಹೊರಗೆ ಕಾವಲು ಕಾಯಲು ಸಾಧ್ಯವಿಲ್ಲ” ಎಂದಿದ್ದಾರೆ.

ವಿದ್ಯಾರ್ಥಿನಿ ಮೇಲಿನ ಅತ್ಯಾಚಾರಕ್ಕೆ ಕಾಲೇಜನ್ನು ಭಾಗಶಃ ಹೊಣೆ ಮಾಡಿದ ಸಿಎಂ, “ಖಾಸಗಿ ಕಾಲೇಜುಗಳು ತಮ್ಮ ಕ್ಯಾಂಪಸ್‌ಗಳ ಒಳಗೆ ಮತ್ತು ಸುತ್ತಮುತ್ತ ಭದ್ರತೆಯನ್ನು ಖಚಿತಪಡಿಸಿಕೊಳ್ಳಬೇಕು” ಎಂದು ಹೇಳಿದ್ದಾರೆ.

ಈ ನಡುವೆ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇನ್ನೊಬ್ಬನನ್ನು ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರ ಗುರುತುಗಳನ್ನು ಬಹಿರಂಗಪಡಿಸಿಲ್ಲ.

ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ನಡೆದ ದುರ್ಗಾಪುರದ ಪರನಾಗಂಜ್ ಕಾಲಿ ಬಾರಿ ಸ್ಮಶಾನದ ಪಕ್ಕದಲ್ಲಿರುವ ಕಾಡಿನಲ್ಲಿ ಭಾನುವಾರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಕಾಲೇಜಿನ ಸುತ್ತಮುತ್ತಲಿನ ಹಳ್ಳಿಗಳಲ್ಲಿ ದೊಡ್ಡ ಮಟ್ಟದ ಶೋಧ ಕಾರ್ಯಾಚರಣೆ ಕೈಗೊಂಡಿದ್ದಾರೆ. ಹತ್ತಿರದ ಕಾಡುಗಳಲ್ಲಿ ಶೋಧ ನಡೆಸಲು ಡ್ರೋನ್‌ಗಳನ್ನು ಬಳಸಲಾಗಿದೆ ಎಂದು ವರದಿಗಳು ಹೇಳಿವೆ.

‘ತಾಂತ್ರಿಕ ಸಮಸ್ಯೆ’: ಮಹಿಳೆಯರನ್ನು ಪತ್ರಿಕಾಗೋಷ್ಠಿಯಿಂದ ಹೊರಗಿಟ್ಟ ಬಗ್ಗೆ ತಾಲಿಬಾನ್ ಸಚಿವ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...