Homeಮುಖಪುಟ'ರಾತ್ರಿ ಹೊತ್ತು ಹೆಣ್ಣು ಮಕ್ಕಳನ್ನು ಹೊರಗೆ ಬಿಡಬಾರದು': ಸಾಮೂಹಿಕ ಅತ್ಯಾಚಾರ ಘಟನೆ ಬಳಿಕ ಮಮತಾ ಬ್ಯಾನರ್ಜಿ...

‘ರಾತ್ರಿ ಹೊತ್ತು ಹೆಣ್ಣು ಮಕ್ಕಳನ್ನು ಹೊರಗೆ ಬಿಡಬಾರದು’: ಸಾಮೂಹಿಕ ಅತ್ಯಾಚಾರ ಘಟನೆ ಬಳಿಕ ಮಮತಾ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಬಗ್ಗೆ ಭಾನುವಾರ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಹುಡುಗಿಯರು ರಾತ್ರಿ ಹೊತ್ತು ಕಾಲೇಜಿನಿಂದ ಹೊರಗೆ ಹೋಗಲು ‘ಅವಕಾಶ ನೀಡಬಾರದು’ ಎಂದು ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.

ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ದುರ್ಗಾಪುರದ ಘಟನೆಯನ್ನು ‘ಆಘಾತಕಾರಿ’ ಎಂದು ಕರೆದಿದ್ದು, ಅಪರಾಧಿಗಳನ್ನು ಸುಮ್ಮನೆ ಬಿಡುವುದಿಲ್ಲ ಎಂದು ಶಪಥ ಮಾಡಿದ್ದಾರೆ.

“ಇದು ಆಘಾತಕಾರಿ ಘಟನೆ. ಇಂತಹ ಅಪರಾಧಗಳನ್ನು ನಾವು ಸಹಿಸುವುದಿಲ್ಲ. ಮೂವರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಪೊಲೀಸರು ಇತರರಿಗಾಗಿ ಶೋಧ ನಡೆಸುತ್ತಿದ್ದಾರೆ. ಯಾರನ್ನೂ ಸುಮ್ಮನೆ ಬಿಡುವುದಿಲ್ಲ” ಎಂದು ಮಮತಾ ಬ್ಯಾರ್ಜಿ ಹೇಳಿದ್ದಾರೆ.

ಒಡಿಶಾದ ಬಾಲಸೋರ್ ಜಿಲ್ಲೆಯ ಜಲೇಶ್ವರದ ವಿದ್ಯಾರ್ಥಿನಿ ಮೇಲೆ ದುರ್ಗಾಪುರದ ಕಾಲೇಜು ಕ್ಯಾಂಪಸ್‌ನ ಹೊರಗಡೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಖಾಸಗಿ ವೈದ್ಯಕೀಯ ಕಾಲೇಜಿನ ಎರಡನೇ ವರ್ಷದ ವಿದ್ಯಾರ್ಥಿನಿ ಸ್ನೇಹಿತೆಯೊಂದಿಗೆ ಶುಕ್ರವಾರ ರಾತ್ರಿ ಊಟಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ.

ಘಟನೆ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ ಮಮತಾ ಬ್ಯಾನರ್ಜಿ, ರಾತ್ರಿ ಹೊತ್ತು ಹುಡುಗಿಯರನ್ನು ಹೊರಗೆ ಹೋಗಲು ಬಿಟ್ಟ ಕಾಲೇಜಿನ ಸಿಬ್ಬಂದಿಯನ್ನು ಟೀಕಿಸಿದ್ದಾರೆ. “ಸಂತ್ರಸ್ತೆ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಓದುತ್ತಿದ್ದಳು. ಹೀಗಿರುವಾಗ ಆಕೆಯ ಜವಾಬ್ದಾರಿ ಯಾರದ್ದು? ಆಕೆ ತಡ ರಾತ್ರಿ 12.30ಕ್ಕೆ ಕ್ಯಾಂಪಸ್‌ನಿಂದ ಹೊರಗೆ ಹೋಗಿದ್ದು ಹೇಗೆ? ಹುಡುಗಿಯರು ರಾತ್ರಿ ಹೊತ್ತು ಕಾಲೇಜು ಕ್ಯಾಂಪಸ್‌ನಿಂದ ಹೊರಗೆ ಹೋಗಲು ಬಿಡಬಾರದು. ಅಲ್ಲದೆ, ಅವರು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು” ಎಂದು ಹೇಳಿದ್ದಾರೆ.

“ವಿಶೇಷವಾಗಿ ಪಶ್ಚಿಮ ಬಂಗಾಳದ ಹೊರಗಿನ ವಿದ್ಯಾರ್ಥಿಗಳು ಹಾಸ್ಟೆಲ್ ನಿಯಮಗಳನ್ನು ಪಾಲಿಸಬೇಕು. ತಡರಾತ್ರಿಯಲ್ಲಿ ಹೊರಗೆ ಹೋಗುವುದನ್ನು ತಪ್ಪಿಸಬೇಕು. ಆದರೂ, ಅವರು ಎಲ್ಲಿ ಬೇಕಾದರೂ ಹೋಗುವ ಮೂಲಭೂತ ಹಕ್ಕನ್ನು ಹೊಂದಿದ್ದಾರೆ” ಎಂದು ಸಿಎಂ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದಾರೆ.

“ಪ್ರತಿಯೊಬ್ಬ ವ್ಯಕ್ತಿಯ ಚಲನವಲನಗಳನ್ನು ಮೇಲ್ವಿಚಾರಣೆ ಮಾಡುವಲ್ಲಿ ಪೊಲೀಸರಿಗೆ ಕೆಲವು ಮಿತಿಗಳಿವೆ. ರಾತ್ರಿಯಲ್ಲಿ ಯಾರು ಮನೆಯಿಂದ ಹೊರಹೋಗುತ್ತಿದ್ದಾರೆಂದು ಅಧಿಕಾರಿಗಳಿಗೆ ತಿಳಿದಿರುವುದಿಲ್ಲ. ಅಲ್ಲದೆ, ಪ್ರತಿ ಮನೆಯ ಹೊರಗೆ ಕಾವಲು ಕಾಯಲು ಸಾಧ್ಯವಿಲ್ಲ” ಎಂದಿದ್ದಾರೆ.

ವಿದ್ಯಾರ್ಥಿನಿ ಮೇಲಿನ ಅತ್ಯಾಚಾರಕ್ಕೆ ಕಾಲೇಜನ್ನು ಭಾಗಶಃ ಹೊಣೆ ಮಾಡಿದ ಸಿಎಂ, “ಖಾಸಗಿ ಕಾಲೇಜುಗಳು ತಮ್ಮ ಕ್ಯಾಂಪಸ್‌ಗಳ ಒಳಗೆ ಮತ್ತು ಸುತ್ತಮುತ್ತ ಭದ್ರತೆಯನ್ನು ಖಚಿತಪಡಿಸಿಕೊಳ್ಳಬೇಕು” ಎಂದು ಹೇಳಿದ್ದಾರೆ.

ಈ ನಡುವೆ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇನ್ನೊಬ್ಬನನ್ನು ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರ ಗುರುತುಗಳನ್ನು ಬಹಿರಂಗಪಡಿಸಿಲ್ಲ.

ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ನಡೆದ ದುರ್ಗಾಪುರದ ಪರನಾಗಂಜ್ ಕಾಲಿ ಬಾರಿ ಸ್ಮಶಾನದ ಪಕ್ಕದಲ್ಲಿರುವ ಕಾಡಿನಲ್ಲಿ ಭಾನುವಾರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಕಾಲೇಜಿನ ಸುತ್ತಮುತ್ತಲಿನ ಹಳ್ಳಿಗಳಲ್ಲಿ ದೊಡ್ಡ ಮಟ್ಟದ ಶೋಧ ಕಾರ್ಯಾಚರಣೆ ಕೈಗೊಂಡಿದ್ದಾರೆ. ಹತ್ತಿರದ ಕಾಡುಗಳಲ್ಲಿ ಶೋಧ ನಡೆಸಲು ಡ್ರೋನ್‌ಗಳನ್ನು ಬಳಸಲಾಗಿದೆ ಎಂದು ವರದಿಗಳು ಹೇಳಿವೆ.

‘ತಾಂತ್ರಿಕ ಸಮಸ್ಯೆ’: ಮಹಿಳೆಯರನ್ನು ಪತ್ರಿಕಾಗೋಷ್ಠಿಯಿಂದ ಹೊರಗಿಟ್ಟ ಬಗ್ಗೆ ತಾಲಿಬಾನ್ ಸಚಿವ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...