Homeಮುಖಪುಟ'ರಾತ್ರಿ ಹೊತ್ತು ಹೆಣ್ಣು ಮಕ್ಕಳನ್ನು ಹೊರಗೆ ಬಿಡಬಾರದು': ಸಾಮೂಹಿಕ ಅತ್ಯಾಚಾರ ಘಟನೆ ಬಳಿಕ ಮಮತಾ ಬ್ಯಾನರ್ಜಿ...

‘ರಾತ್ರಿ ಹೊತ್ತು ಹೆಣ್ಣು ಮಕ್ಕಳನ್ನು ಹೊರಗೆ ಬಿಡಬಾರದು’: ಸಾಮೂಹಿಕ ಅತ್ಯಾಚಾರ ಘಟನೆ ಬಳಿಕ ಮಮತಾ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಬಗ್ಗೆ ಭಾನುವಾರ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಹುಡುಗಿಯರು ರಾತ್ರಿ ಹೊತ್ತು ಕಾಲೇಜಿನಿಂದ ಹೊರಗೆ ಹೋಗಲು ‘ಅವಕಾಶ ನೀಡಬಾರದು’ ಎಂದು ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.

ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ದುರ್ಗಾಪುರದ ಘಟನೆಯನ್ನು ‘ಆಘಾತಕಾರಿ’ ಎಂದು ಕರೆದಿದ್ದು, ಅಪರಾಧಿಗಳನ್ನು ಸುಮ್ಮನೆ ಬಿಡುವುದಿಲ್ಲ ಎಂದು ಶಪಥ ಮಾಡಿದ್ದಾರೆ.

“ಇದು ಆಘಾತಕಾರಿ ಘಟನೆ. ಇಂತಹ ಅಪರಾಧಗಳನ್ನು ನಾವು ಸಹಿಸುವುದಿಲ್ಲ. ಮೂವರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಪೊಲೀಸರು ಇತರರಿಗಾಗಿ ಶೋಧ ನಡೆಸುತ್ತಿದ್ದಾರೆ. ಯಾರನ್ನೂ ಸುಮ್ಮನೆ ಬಿಡುವುದಿಲ್ಲ” ಎಂದು ಮಮತಾ ಬ್ಯಾರ್ಜಿ ಹೇಳಿದ್ದಾರೆ.

ಒಡಿಶಾದ ಬಾಲಸೋರ್ ಜಿಲ್ಲೆಯ ಜಲೇಶ್ವರದ ವಿದ್ಯಾರ್ಥಿನಿ ಮೇಲೆ ದುರ್ಗಾಪುರದ ಕಾಲೇಜು ಕ್ಯಾಂಪಸ್‌ನ ಹೊರಗಡೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಖಾಸಗಿ ವೈದ್ಯಕೀಯ ಕಾಲೇಜಿನ ಎರಡನೇ ವರ್ಷದ ವಿದ್ಯಾರ್ಥಿನಿ ಸ್ನೇಹಿತೆಯೊಂದಿಗೆ ಶುಕ್ರವಾರ ರಾತ್ರಿ ಊಟಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ.

ಘಟನೆ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ ಮಮತಾ ಬ್ಯಾನರ್ಜಿ, ರಾತ್ರಿ ಹೊತ್ತು ಹುಡುಗಿಯರನ್ನು ಹೊರಗೆ ಹೋಗಲು ಬಿಟ್ಟ ಕಾಲೇಜಿನ ಸಿಬ್ಬಂದಿಯನ್ನು ಟೀಕಿಸಿದ್ದಾರೆ. “ಸಂತ್ರಸ್ತೆ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಓದುತ್ತಿದ್ದಳು. ಹೀಗಿರುವಾಗ ಆಕೆಯ ಜವಾಬ್ದಾರಿ ಯಾರದ್ದು? ಆಕೆ ತಡ ರಾತ್ರಿ 12.30ಕ್ಕೆ ಕ್ಯಾಂಪಸ್‌ನಿಂದ ಹೊರಗೆ ಹೋಗಿದ್ದು ಹೇಗೆ? ಹುಡುಗಿಯರು ರಾತ್ರಿ ಹೊತ್ತು ಕಾಲೇಜು ಕ್ಯಾಂಪಸ್‌ನಿಂದ ಹೊರಗೆ ಹೋಗಲು ಬಿಡಬಾರದು. ಅಲ್ಲದೆ, ಅವರು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು” ಎಂದು ಹೇಳಿದ್ದಾರೆ.

“ವಿಶೇಷವಾಗಿ ಪಶ್ಚಿಮ ಬಂಗಾಳದ ಹೊರಗಿನ ವಿದ್ಯಾರ್ಥಿಗಳು ಹಾಸ್ಟೆಲ್ ನಿಯಮಗಳನ್ನು ಪಾಲಿಸಬೇಕು. ತಡರಾತ್ರಿಯಲ್ಲಿ ಹೊರಗೆ ಹೋಗುವುದನ್ನು ತಪ್ಪಿಸಬೇಕು. ಆದರೂ, ಅವರು ಎಲ್ಲಿ ಬೇಕಾದರೂ ಹೋಗುವ ಮೂಲಭೂತ ಹಕ್ಕನ್ನು ಹೊಂದಿದ್ದಾರೆ” ಎಂದು ಸಿಎಂ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದಾರೆ.

“ಪ್ರತಿಯೊಬ್ಬ ವ್ಯಕ್ತಿಯ ಚಲನವಲನಗಳನ್ನು ಮೇಲ್ವಿಚಾರಣೆ ಮಾಡುವಲ್ಲಿ ಪೊಲೀಸರಿಗೆ ಕೆಲವು ಮಿತಿಗಳಿವೆ. ರಾತ್ರಿಯಲ್ಲಿ ಯಾರು ಮನೆಯಿಂದ ಹೊರಹೋಗುತ್ತಿದ್ದಾರೆಂದು ಅಧಿಕಾರಿಗಳಿಗೆ ತಿಳಿದಿರುವುದಿಲ್ಲ. ಅಲ್ಲದೆ, ಪ್ರತಿ ಮನೆಯ ಹೊರಗೆ ಕಾವಲು ಕಾಯಲು ಸಾಧ್ಯವಿಲ್ಲ” ಎಂದಿದ್ದಾರೆ.

ವಿದ್ಯಾರ್ಥಿನಿ ಮೇಲಿನ ಅತ್ಯಾಚಾರಕ್ಕೆ ಕಾಲೇಜನ್ನು ಭಾಗಶಃ ಹೊಣೆ ಮಾಡಿದ ಸಿಎಂ, “ಖಾಸಗಿ ಕಾಲೇಜುಗಳು ತಮ್ಮ ಕ್ಯಾಂಪಸ್‌ಗಳ ಒಳಗೆ ಮತ್ತು ಸುತ್ತಮುತ್ತ ಭದ್ರತೆಯನ್ನು ಖಚಿತಪಡಿಸಿಕೊಳ್ಳಬೇಕು” ಎಂದು ಹೇಳಿದ್ದಾರೆ.

ಈ ನಡುವೆ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇನ್ನೊಬ್ಬನನ್ನು ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರ ಗುರುತುಗಳನ್ನು ಬಹಿರಂಗಪಡಿಸಿಲ್ಲ.

ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ನಡೆದ ದುರ್ಗಾಪುರದ ಪರನಾಗಂಜ್ ಕಾಲಿ ಬಾರಿ ಸ್ಮಶಾನದ ಪಕ್ಕದಲ್ಲಿರುವ ಕಾಡಿನಲ್ಲಿ ಭಾನುವಾರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಕಾಲೇಜಿನ ಸುತ್ತಮುತ್ತಲಿನ ಹಳ್ಳಿಗಳಲ್ಲಿ ದೊಡ್ಡ ಮಟ್ಟದ ಶೋಧ ಕಾರ್ಯಾಚರಣೆ ಕೈಗೊಂಡಿದ್ದಾರೆ. ಹತ್ತಿರದ ಕಾಡುಗಳಲ್ಲಿ ಶೋಧ ನಡೆಸಲು ಡ್ರೋನ್‌ಗಳನ್ನು ಬಳಸಲಾಗಿದೆ ಎಂದು ವರದಿಗಳು ಹೇಳಿವೆ.

‘ತಾಂತ್ರಿಕ ಸಮಸ್ಯೆ’: ಮಹಿಳೆಯರನ್ನು ಪತ್ರಿಕಾಗೋಷ್ಠಿಯಿಂದ ಹೊರಗಿಟ್ಟ ಬಗ್ಗೆ ತಾಲಿಬಾನ್ ಸಚಿವ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...