Homeಚಳವಳಿಸಂಜೆ ವೇಳೆ ಹೆಣ್ಣು ಮಕ್ಕಳು ಹೊರಬರಬಾರದು: ಮೈಸೂರು ವಿ.ವಿ ಸುತ್ತೋಲೆಗೆ ತೀವ್ರ ಆಕ್ರೋಶ

ಸಂಜೆ ವೇಳೆ ಹೆಣ್ಣು ಮಕ್ಕಳು ಹೊರಬರಬಾರದು: ಮೈಸೂರು ವಿ.ವಿ ಸುತ್ತೋಲೆಗೆ ತೀವ್ರ ಆಕ್ರೋಶ

ಮೈಸೂರು ವಿಶ್ವವಿದ್ಯಾನಿಲಯ ಭಾರತದ ಸಂವಿಧಾನವನ್ನು ಪಾಲಿಸುತ್ತಿದೆಯೋ ಅಥವಾ ಮನುಸ್ಮೃತಿಯನ್ನು ಪಾಲಿಸುತ್ತಿದೆಯೋ ಎಂದು ಕಿಡಿಕಾರಲಾಗಿದೆ.

- Advertisement -
- Advertisement -

ಇತ್ತೀಚೆಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಘಟಿಸಿದ ಅಮಾನವೀಯ ಅತ್ಯಾಚಾರದ ಹಿನ್ನೆಲೆಯಲ್ಲಿ ‘ಇನ್ನು ಮುಂದೆ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಸಂಜೆ 6:30ರ ನಂತರ ಹೆಣ್ಣು ಮಕ್ಕಳು ಏಕಾಂಗಿಯಾಗಿ ತಿರುಗಾಡುವುದನ್ನು, ಕೂರುವುದನ್ನು ನಿಷೇಧಿಸಲಾಗಿದೆ’ ಎಂಬ ವಿವಿಯ ವಿವಾದಾತ್ಮಕ ಸುತ್ತೋಲೆ ವಿರುದ್ಧ ವ್ಯಾಪಕ ಆಕ್ರೋಶ ಕೇಳಿಬಂದಿದೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕಾದ ಗುರುತರ ಜವಾಬ್ದಾರಿ ನಿರ್ವಹಿಸುವಲ್ಲಿ ಸರ್ಕಾರ, ಗೃಹ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ. ತಮ್ಮ ಅದಕ್ಷತನವನ್ನು ಮುಚ್ಚಿಕೊಳ್ಳಲು ಹೆಣ್ಣು ಮಕ್ಕಳನ್ನು ಹೊಣೆ ಮಾಡಲಾಗುತ್ತಿದೆ. ಅವರ ಹೊರಬರಬಾರದು, ಇಂಥದ್ದೆ ಬಟ್ಟೆ ಧರಿಸಬೇಕು ಎಂಬ ನಿಯಮಗಳನ್ನು ಹೇರುವ ಮೂಲಕ ಸಂತ್ರಸ್ತರನ್ನೆ ಬಲಿಪಶು ಮಾಡಲು ಹುನ್ನಾರ ನಡೆಸಲಾಗುತ್ತಿದೆ ಎಂದು ಕಿಡಿಕಾರಲಾಗಿದೆ.

ಸರ್ಕಾರ ಮತ್ತು ವಿವಿಗಳು ಮಹಿಳೆಯರ ಓಡಾಡವನ್ನು ನಿರ್ಬಂಧಿಸುತ್ತಿವೆ. ಮುಂದೆ ಅವರು ಮನೆಯಿಂದಲೇ ಹೊರಬರಬಾರದು ಎಂದು ದಿಗ್ಬಂಧನ ವಿಧಿಸುತ್ತವೆ. ಈ ಮೂಲಕ ಪುರುಷಾಧಿಪತ್ಯ ಆಡಳಿತ ಎಗ್ಗಿಲ್ಲದೆ ನಡೆಯುತ್ತದೆ ಎಂದು ಪ್ರಗತಿಪರ ಚಿಂತಕರು ಆತಂಕ ವ್ಯಕ್ತಪಡಿಸಿದ್ದಾರೆ. ಇಲ್ಲಿ ಅತ್ಯಾಚಾರವೆಸಗಿದ ಗಂಡಸು ಜಾತಿಯ ಮೇಲೆ ಯಾವುದೇ ನಿರ್ಬಂಧ ವಿಧಿಸದೇ ಅತ್ಯಾಚಾರಕ್ಕೆ ಒಳಗಾದ ಮಹಿಳಾ ಸಮುದಾಯದ ಮೇಲೆ ನಿರ್ಬಂಧ ವಿಧಿಸುವುದು ಯಾವ ನ್ಯಾಯ ಎಂಬ ಪ್ರಶ್ನೆ ಎದ್ದಿದೆ.

7.30ಗೆ ಆಕೆ ಹೊರಗೆ ಹೋಗಿದ್ದಕ್ಕೆ ರೇಪ್ ಆಯ್ತು, ಹಾಗಾಗಿ 6.30 ರ ಮೇಲೆ ಯಾವ ಹೆಣ್ಮಕ್ಳೂ ಹೊರಗೇ ಬರಕೂಡದು!
ವಾವ್! ಎಷ್ಟು ಸುಲಭವಾಗಿ ಅದ್ಭುತ ಪರಿಹಾರ ಕಂಡುಕೊಳ್ಳಲಾಯ್ತು! ಆಮೇಲೆ 5.30ಕ್ಕೆ 2.30ಕ್ಕೆ, 10.30ಕ್ಕೆ ರೇಪ್ ಆದಾಗ ಹಾಗೇ ಸಮಯ ಕುಗ್ಗಿಸುತ್ತಾ ಬನ್ನಿ.
ಯಾಕೆ ಅವರು ಕಾಲೇಜಿಗೆ, ಯೂನಿವರ್ಸಿಟಿಗೆ ಬರಬೇಕು? ಬೇಡ ಅಂದು ಬಿಡಿ. ಆಮೇಲೆ ಬೀದಿಗೆ ಬರೋದೂ ಬೇಡ ಅನ್ನಿ.
ಆಮೇಲೆ ಮನೆಗಳಲ್ಲೇ ರೇಪ್ ಆಗುತ್ತಲ್ಲ, ಆಗ ಭೂಮಿ ಮೇಲೆ ಎಲ್ಲ ಹೆಣ್ಣುಗಳೂ ಸತ್ತುಬಿಡಿ ಅಂತನ್ನಿ!
ಒಟ್ಟಲ್ಲಿ ರೇಪ್ ಮಾಡೋರು ಆರಾಮಾಗಿ ಸುತ್ತಾಡ್ತಾ ಇರ್ಲಿ, ಅವರಿಗೆ ತೊಂದರೆ ಆಗಬಾರದಷ್ಟೇ.
ಅಂದಹಾಗೆ #ತಾಲಿಬಾನ್ ಅಂದ್ರೆ ಏನು? ಎಲ್ಲಿದೆ ಅದು? ಎಂದು ಚಿಂತಕಿ ವಿ.ಕೆ ಸಂಜ್ಯೋತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂವಿಧಾನವು ಭಾರತದ ಪ್ರಜೆಗಳಿಗೆಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿರುವಾಗ ಮಹಿಳೆಯರಿಗೆ ಮಾತ್ರವೇ ಮಿತಿಗಳನ್ನು ಹೇರುತ್ತಿರುವವರು ಯಾರು ಮತ್ತು ಯಾಕೆ? ಮಹಿಳೆಯರು ಇಲ್ಲಿ ಎರಡನೆಯ ದರ್ಜೆಯ ಪ್ರಜೆಗಳೇ? ಎಂದೂ ಅವರು ಪ್ರಶ್ನಿಸಿದ್ದಾರೆ.

ಹೆಣ್ಣುಮಕ್ಕಳನ್ನ ಗರ್ಭದಲ್ಲೇ ಕೊಂದುಬಿಡೋಣ; ಆಗ ಅತ್ಯಾಚಾರ ಮಾಡೋಕೆ ಆಗಲ್ಲ. ಏನಂತೀರಿ ಮಾನ್ಯ ಕುಲಪತಿಗಳೇ ಹಾಗು ಖಾಕಿ ಪುಂಡರೇ?
ಇದೂ ವಿಶ್ವವಿದ್ಯಾನಿಲಯ, ಇವರು ಮಕ್ಕಳಿಗೆ ಪಾಠ ಮಾಡ್ತಾರಂತೆ. ಥೂ!
ಒಂದು ವೇಳೆ ಅತ್ಯಾಚಾರ ಮಧ್ಯಾಹ್ನ 1 ಘಂಟೆಗೆ ಆಯ್ತು ಅಂತ ಇಟ್ಕೊಳಿ ಆಗ ಹೆಣ್ಣುಮಕ್ಕಳು 1 ಘಂಟೆ ಮೇಲೆ ಒಬ್ಬರೇ ಓಡಾಡುವ ಹಾಗಿಲ್ವಾ? ಎಂದು ವಿವೇಕ್‌ರವರು ಪ್ರಶ್ನಿಸಿದ್ದಾರೆ.

ಅತ್ಯಾಚಾರ ಮಾಡುವ ಅತ್ಯಾಚಾರಿಗಳಿಗೆ ನಿಭಂದನೆಯನ್ನು ಹಾಕುವುದನ್ನು ಬಿಟ್ಟು ಇನ್ನೂ ಹೆಣ್ಣು ಮಕ್ಕಳನ್ನೆ ಬಂಧಿಸುವ ಈ ವ್ಯವಸ್ಥೆಯ ಬಗ್ಗೆ ಎನು ಹೇಳ ಬೇಕೊ? ನಾಚಿಕೆಗೇಡು… ಹೆಣ್ಣು ಮಕ್ಕಳ ಮೇಲೆ ನಿರ್ಬಂಧ ಹಾಕುವುದನ್ನು ಬಿಟ್ಟು ಹೆಣ್ಣು ಮಕ್ಕಳು ನಿರ್ಭಿತಿಯಿಂದ ಓಡಾಡುವ ವಾತವರಣ ನಿರ್ಮಾಣ ಮಾಡಿ ತೋರಿಸಿ ನಿಮ್ಮ ಯೋಗ್ಯತೆಗೆ… ಎಂದು ಪೂರ್ಣಿಮಾರವರು ಸವಾಲು ಹಾಕಿದ್ದಾರೆ.

ಸಂಜೆ ಆರೂವರೆ ನಂತರ ಹೆಣ್ಣುಮಕ್ಕಳು ಯೂನಿವರ್ಸಿಟಿ ಕ್ಯಾಂಪಸ್ ನಲ್ಲಿ ಓಡಾಡುವುದನ್ನು ನಿಷೇಧಿಸುವ ಬದಲು ಪೂರ್ತಿಯಾಗಿ ಶಿಕ್ಷಣದಿಂದಲೇ ಹೆಣ್ಣುಮಕ್ಕಳನ್ನೇ ನಿಷೇಧಿಸಿಬಿಡಿ. ನಮ್ಮಲ್ಲೂ ತಾಲಿಬಾನ್ ಮಾದರಿ ಆಡಳಿತವಿದೆ ಎಂದು ಎದೆ ತಟ್ಟಿಕೊಂಡು ಹೇಳುತ್ತೇವೆ. ಥೂ, ನಿಮ್ಮ ಯೋಗ್ಯತೆಗಿಷ್ಟು ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಲಕಿಯಾಗಿದ್ದಾಗಲೂ, ಯುವತಿಯಾಗಿದ್ದಾಗಲೂ, ವೃದ್ದೆಯಾಗಿದ್ದಾಗಲೂ ಮನೆಗಳಲ್ಲಿದ್ದಾಗಲೂ ತಾನೇ ಸ್ವತಂತ್ರವಾಗಿ ಸ್ತ್ರೀಯು ಯಾವ ಕಾರ್ಯವನ್ನೂ ಮಾಡಬಾರದು. ಮಹಿಳೆ ಸ್ವಾತಂತ್ರ್ಯಕ್ಕೆ ಅರ್ಹಳಲ್ಲ ಎಂದು ಮನುಸ್ಮೃತಿ ಹೇಳುತ್ತದೆ.

ಭಾರತದ ಯಾವುದೇ ನಾಗರೀಕರಿಗೆ ಜಾತಿ, ವರ್ಗ, ಧರ್ಮ, ಲಿಂಗ, ಜನಾಂಗದ ಆಧಾರದಲ್ಲಿ ತಾರತಮ್ಯ ಮಾಡಬಾರದು ಎಂದು ಭಾರತದ ಸಂವಿಧಾನದ ವಿಧಿ 15 ಹೇಳುತ್ತದೆ.

ಯುವತಿಯರು ಸಂಜೆ 6:30 ರ ನಂತರ ವಿಶ್ವವಿದ್ಯಾಲಯದ ಅವರಣದಲ್ಲಿ ಏಕಾಂಗಿಯಾಗಿ ಸಂಚರಿಸಬಾರದು ಎಂದು ಮೈಸೂರು ವಿಶ್ವವಿದ್ಯಾಲಯ ಸುತ್ತೋಲೆ ಹೊರಡಿಸಿದೆ.

ಈಗ ಹೇಳಿ.. ಮೈಸೂರು ವಿವಿ ಯಾವುದನ್ನು ಪಾಲಿಸುತ್ತಿದೆ ಎಂದು ಎಂದು ಕರ್ನಾಟಕ ಜನಶಕ್ತಿ ಸಂಘಟನೆ ಪ್ರಶ್ನಿಸಿದೆ.

ಈ ಕುರಿತು ಮೈಸೂರು ವಿಶ್ವವಿದ್ಯಾನಿಲಯ ಕುಲಸಚಿವ ಶಿವಪ್ಪ ರಾಮಕೃಷ್ಣರವರನ್ನು ನಾನುಗೌರಿ.ಕಾಂ ಸಂಪರ್ಕಿಸಿತು. ಅವರು, “ನಾವು ಸುರಕ್ಷತಾ ದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ಬರೆದಿದ್ದೇವೆ. ಆ ರೀತಿಯ ಯಾವ ನಿಬಂಧನೆಗಳು ಹಾಕುವ ಉದ್ದೇಶ ನಮಗಿಲ್ಲ” ಎಂದರು. ಆದರೆ ನಿಮ್ಮ ಸುತ್ತೋಲೆ ನೇರವಾಗಿ ಹೆಣ್ಣು ಮಕ್ಕಳ ವಿರುದ್ಧವಿದೆ ಮತ್ತು ಸಮಾಜಕ್ಕೆ ತಪ್ಪು ಸಂದೇಶ ಕೊಡುತ್ತಿದೆಯಲ್ಲ ಎಂದು ಪ್ರಶ್ನಿಸಿದಾದ ಅದನ್ನು ತಿದ್ದುಕೊಳ್ಳುತ್ತೇವೆ. ಅದನ್ನು ವಾಪಸ್ ಪಡೆದು ಮತ್ತೊಂದು ಸುತ್ತೋಲೆ ಹೊರಡಿಸುತ್ತೇವೆ ಎಂದರು.

ಒಟ್ಟಿನಲ್ಲಿ ಅತ್ಯಾಚಾರದಂತಹ ಅಪರಾಧಗಳ ಹಿಂದಿನ ಕಾರಣಗಳನ್ನು ಅರಿಯುವಲ್ಲಿ ಸರ್ಕಾರಗಳು ಮತ್ತು ನಮ್ಮ ವಿಶ್ವವಿದ್ಯಾನಿಲಯಗಳು ಸಂಪೂರ್ಣ ವಿಫಲವಾಗಿವೆ ಎಂಬುದು ಈ ಘಟನೆಯಿಂದ ಮತ್ತೆ ಸಾಬೀತಾಗಿದೆ. ಪ್ರಜ್ಞಾಂವಂತ ವಲಯದಿಂದ ಬಂದ ತೀವ್ರ ಆಕ್ರೋಶಕ್ಕೆ ಸರ್ಕಾರ ಮತ್ತು ವಿವಿಗಳು ಪಾಠ ಕಲಿಯಬೇಕಿದೆ.


ಇದನ್ನೂ ಓದಿ: ತುಮಕೂರು: ದನ ಮೇಯಿಸಲು ಹೋಗಿದ್ದ ಮಹಿಳೆ ಮೇಲೆ ಅತ್ಯಾಚಾರ, ಕೊಲೆ- ತನಿಖೆಗೆ ತಂಡ ರಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...