Homeಚಳವಳಿಸಂಜೆ ವೇಳೆ ಹೆಣ್ಣು ಮಕ್ಕಳು ಹೊರಬರಬಾರದು: ಮೈಸೂರು ವಿ.ವಿ ಸುತ್ತೋಲೆಗೆ ತೀವ್ರ ಆಕ್ರೋಶ

ಸಂಜೆ ವೇಳೆ ಹೆಣ್ಣು ಮಕ್ಕಳು ಹೊರಬರಬಾರದು: ಮೈಸೂರು ವಿ.ವಿ ಸುತ್ತೋಲೆಗೆ ತೀವ್ರ ಆಕ್ರೋಶ

ಮೈಸೂರು ವಿಶ್ವವಿದ್ಯಾನಿಲಯ ಭಾರತದ ಸಂವಿಧಾನವನ್ನು ಪಾಲಿಸುತ್ತಿದೆಯೋ ಅಥವಾ ಮನುಸ್ಮೃತಿಯನ್ನು ಪಾಲಿಸುತ್ತಿದೆಯೋ ಎಂದು ಕಿಡಿಕಾರಲಾಗಿದೆ.

- Advertisement -
- Advertisement -

ಇತ್ತೀಚೆಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಘಟಿಸಿದ ಅಮಾನವೀಯ ಅತ್ಯಾಚಾರದ ಹಿನ್ನೆಲೆಯಲ್ಲಿ ‘ಇನ್ನು ಮುಂದೆ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಸಂಜೆ 6:30ರ ನಂತರ ಹೆಣ್ಣು ಮಕ್ಕಳು ಏಕಾಂಗಿಯಾಗಿ ತಿರುಗಾಡುವುದನ್ನು, ಕೂರುವುದನ್ನು ನಿಷೇಧಿಸಲಾಗಿದೆ’ ಎಂಬ ವಿವಿಯ ವಿವಾದಾತ್ಮಕ ಸುತ್ತೋಲೆ ವಿರುದ್ಧ ವ್ಯಾಪಕ ಆಕ್ರೋಶ ಕೇಳಿಬಂದಿದೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕಾದ ಗುರುತರ ಜವಾಬ್ದಾರಿ ನಿರ್ವಹಿಸುವಲ್ಲಿ ಸರ್ಕಾರ, ಗೃಹ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ. ತಮ್ಮ ಅದಕ್ಷತನವನ್ನು ಮುಚ್ಚಿಕೊಳ್ಳಲು ಹೆಣ್ಣು ಮಕ್ಕಳನ್ನು ಹೊಣೆ ಮಾಡಲಾಗುತ್ತಿದೆ. ಅವರ ಹೊರಬರಬಾರದು, ಇಂಥದ್ದೆ ಬಟ್ಟೆ ಧರಿಸಬೇಕು ಎಂಬ ನಿಯಮಗಳನ್ನು ಹೇರುವ ಮೂಲಕ ಸಂತ್ರಸ್ತರನ್ನೆ ಬಲಿಪಶು ಮಾಡಲು ಹುನ್ನಾರ ನಡೆಸಲಾಗುತ್ತಿದೆ ಎಂದು ಕಿಡಿಕಾರಲಾಗಿದೆ.

ಸರ್ಕಾರ ಮತ್ತು ವಿವಿಗಳು ಮಹಿಳೆಯರ ಓಡಾಡವನ್ನು ನಿರ್ಬಂಧಿಸುತ್ತಿವೆ. ಮುಂದೆ ಅವರು ಮನೆಯಿಂದಲೇ ಹೊರಬರಬಾರದು ಎಂದು ದಿಗ್ಬಂಧನ ವಿಧಿಸುತ್ತವೆ. ಈ ಮೂಲಕ ಪುರುಷಾಧಿಪತ್ಯ ಆಡಳಿತ ಎಗ್ಗಿಲ್ಲದೆ ನಡೆಯುತ್ತದೆ ಎಂದು ಪ್ರಗತಿಪರ ಚಿಂತಕರು ಆತಂಕ ವ್ಯಕ್ತಪಡಿಸಿದ್ದಾರೆ. ಇಲ್ಲಿ ಅತ್ಯಾಚಾರವೆಸಗಿದ ಗಂಡಸು ಜಾತಿಯ ಮೇಲೆ ಯಾವುದೇ ನಿರ್ಬಂಧ ವಿಧಿಸದೇ ಅತ್ಯಾಚಾರಕ್ಕೆ ಒಳಗಾದ ಮಹಿಳಾ ಸಮುದಾಯದ ಮೇಲೆ ನಿರ್ಬಂಧ ವಿಧಿಸುವುದು ಯಾವ ನ್ಯಾಯ ಎಂಬ ಪ್ರಶ್ನೆ ಎದ್ದಿದೆ.

7.30ಗೆ ಆಕೆ ಹೊರಗೆ ಹೋಗಿದ್ದಕ್ಕೆ ರೇಪ್ ಆಯ್ತು, ಹಾಗಾಗಿ 6.30 ರ ಮೇಲೆ ಯಾವ ಹೆಣ್ಮಕ್ಳೂ ಹೊರಗೇ ಬರಕೂಡದು!
ವಾವ್! ಎಷ್ಟು ಸುಲಭವಾಗಿ ಅದ್ಭುತ ಪರಿಹಾರ ಕಂಡುಕೊಳ್ಳಲಾಯ್ತು! ಆಮೇಲೆ 5.30ಕ್ಕೆ 2.30ಕ್ಕೆ, 10.30ಕ್ಕೆ ರೇಪ್ ಆದಾಗ ಹಾಗೇ ಸಮಯ ಕುಗ್ಗಿಸುತ್ತಾ ಬನ್ನಿ.
ಯಾಕೆ ಅವರು ಕಾಲೇಜಿಗೆ, ಯೂನಿವರ್ಸಿಟಿಗೆ ಬರಬೇಕು? ಬೇಡ ಅಂದು ಬಿಡಿ. ಆಮೇಲೆ ಬೀದಿಗೆ ಬರೋದೂ ಬೇಡ ಅನ್ನಿ.
ಆಮೇಲೆ ಮನೆಗಳಲ್ಲೇ ರೇಪ್ ಆಗುತ್ತಲ್ಲ, ಆಗ ಭೂಮಿ ಮೇಲೆ ಎಲ್ಲ ಹೆಣ್ಣುಗಳೂ ಸತ್ತುಬಿಡಿ ಅಂತನ್ನಿ!
ಒಟ್ಟಲ್ಲಿ ರೇಪ್ ಮಾಡೋರು ಆರಾಮಾಗಿ ಸುತ್ತಾಡ್ತಾ ಇರ್ಲಿ, ಅವರಿಗೆ ತೊಂದರೆ ಆಗಬಾರದಷ್ಟೇ.
ಅಂದಹಾಗೆ #ತಾಲಿಬಾನ್ ಅಂದ್ರೆ ಏನು? ಎಲ್ಲಿದೆ ಅದು? ಎಂದು ಚಿಂತಕಿ ವಿ.ಕೆ ಸಂಜ್ಯೋತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂವಿಧಾನವು ಭಾರತದ ಪ್ರಜೆಗಳಿಗೆಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿರುವಾಗ ಮಹಿಳೆಯರಿಗೆ ಮಾತ್ರವೇ ಮಿತಿಗಳನ್ನು ಹೇರುತ್ತಿರುವವರು ಯಾರು ಮತ್ತು ಯಾಕೆ? ಮಹಿಳೆಯರು ಇಲ್ಲಿ ಎರಡನೆಯ ದರ್ಜೆಯ ಪ್ರಜೆಗಳೇ? ಎಂದೂ ಅವರು ಪ್ರಶ್ನಿಸಿದ್ದಾರೆ.

ಹೆಣ್ಣುಮಕ್ಕಳನ್ನ ಗರ್ಭದಲ್ಲೇ ಕೊಂದುಬಿಡೋಣ; ಆಗ ಅತ್ಯಾಚಾರ ಮಾಡೋಕೆ ಆಗಲ್ಲ. ಏನಂತೀರಿ ಮಾನ್ಯ ಕುಲಪತಿಗಳೇ ಹಾಗು ಖಾಕಿ ಪುಂಡರೇ?
ಇದೂ ವಿಶ್ವವಿದ್ಯಾನಿಲಯ, ಇವರು ಮಕ್ಕಳಿಗೆ ಪಾಠ ಮಾಡ್ತಾರಂತೆ. ಥೂ!
ಒಂದು ವೇಳೆ ಅತ್ಯಾಚಾರ ಮಧ್ಯಾಹ್ನ 1 ಘಂಟೆಗೆ ಆಯ್ತು ಅಂತ ಇಟ್ಕೊಳಿ ಆಗ ಹೆಣ್ಣುಮಕ್ಕಳು 1 ಘಂಟೆ ಮೇಲೆ ಒಬ್ಬರೇ ಓಡಾಡುವ ಹಾಗಿಲ್ವಾ? ಎಂದು ವಿವೇಕ್‌ರವರು ಪ್ರಶ್ನಿಸಿದ್ದಾರೆ.

ಅತ್ಯಾಚಾರ ಮಾಡುವ ಅತ್ಯಾಚಾರಿಗಳಿಗೆ ನಿಭಂದನೆಯನ್ನು ಹಾಕುವುದನ್ನು ಬಿಟ್ಟು ಇನ್ನೂ ಹೆಣ್ಣು ಮಕ್ಕಳನ್ನೆ ಬಂಧಿಸುವ ಈ ವ್ಯವಸ್ಥೆಯ ಬಗ್ಗೆ ಎನು ಹೇಳ ಬೇಕೊ? ನಾಚಿಕೆಗೇಡು… ಹೆಣ್ಣು ಮಕ್ಕಳ ಮೇಲೆ ನಿರ್ಬಂಧ ಹಾಕುವುದನ್ನು ಬಿಟ್ಟು ಹೆಣ್ಣು ಮಕ್ಕಳು ನಿರ್ಭಿತಿಯಿಂದ ಓಡಾಡುವ ವಾತವರಣ ನಿರ್ಮಾಣ ಮಾಡಿ ತೋರಿಸಿ ನಿಮ್ಮ ಯೋಗ್ಯತೆಗೆ… ಎಂದು ಪೂರ್ಣಿಮಾರವರು ಸವಾಲು ಹಾಕಿದ್ದಾರೆ.

ಸಂಜೆ ಆರೂವರೆ ನಂತರ ಹೆಣ್ಣುಮಕ್ಕಳು ಯೂನಿವರ್ಸಿಟಿ ಕ್ಯಾಂಪಸ್ ನಲ್ಲಿ ಓಡಾಡುವುದನ್ನು ನಿಷೇಧಿಸುವ ಬದಲು ಪೂರ್ತಿಯಾಗಿ ಶಿಕ್ಷಣದಿಂದಲೇ ಹೆಣ್ಣುಮಕ್ಕಳನ್ನೇ ನಿಷೇಧಿಸಿಬಿಡಿ. ನಮ್ಮಲ್ಲೂ ತಾಲಿಬಾನ್ ಮಾದರಿ ಆಡಳಿತವಿದೆ ಎಂದು ಎದೆ ತಟ್ಟಿಕೊಂಡು ಹೇಳುತ್ತೇವೆ. ಥೂ, ನಿಮ್ಮ ಯೋಗ್ಯತೆಗಿಷ್ಟು ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಲಕಿಯಾಗಿದ್ದಾಗಲೂ, ಯುವತಿಯಾಗಿದ್ದಾಗಲೂ, ವೃದ್ದೆಯಾಗಿದ್ದಾಗಲೂ ಮನೆಗಳಲ್ಲಿದ್ದಾಗಲೂ ತಾನೇ ಸ್ವತಂತ್ರವಾಗಿ ಸ್ತ್ರೀಯು ಯಾವ ಕಾರ್ಯವನ್ನೂ ಮಾಡಬಾರದು. ಮಹಿಳೆ ಸ್ವಾತಂತ್ರ್ಯಕ್ಕೆ ಅರ್ಹಳಲ್ಲ ಎಂದು ಮನುಸ್ಮೃತಿ ಹೇಳುತ್ತದೆ.

ಭಾರತದ ಯಾವುದೇ ನಾಗರೀಕರಿಗೆ ಜಾತಿ, ವರ್ಗ, ಧರ್ಮ, ಲಿಂಗ, ಜನಾಂಗದ ಆಧಾರದಲ್ಲಿ ತಾರತಮ್ಯ ಮಾಡಬಾರದು ಎಂದು ಭಾರತದ ಸಂವಿಧಾನದ ವಿಧಿ 15 ಹೇಳುತ್ತದೆ.

ಯುವತಿಯರು ಸಂಜೆ 6:30 ರ ನಂತರ ವಿಶ್ವವಿದ್ಯಾಲಯದ ಅವರಣದಲ್ಲಿ ಏಕಾಂಗಿಯಾಗಿ ಸಂಚರಿಸಬಾರದು ಎಂದು ಮೈಸೂರು ವಿಶ್ವವಿದ್ಯಾಲಯ ಸುತ್ತೋಲೆ ಹೊರಡಿಸಿದೆ.

ಈಗ ಹೇಳಿ.. ಮೈಸೂರು ವಿವಿ ಯಾವುದನ್ನು ಪಾಲಿಸುತ್ತಿದೆ ಎಂದು ಎಂದು ಕರ್ನಾಟಕ ಜನಶಕ್ತಿ ಸಂಘಟನೆ ಪ್ರಶ್ನಿಸಿದೆ.

ಈ ಕುರಿತು ಮೈಸೂರು ವಿಶ್ವವಿದ್ಯಾನಿಲಯ ಕುಲಸಚಿವ ಶಿವಪ್ಪ ರಾಮಕೃಷ್ಣರವರನ್ನು ನಾನುಗೌರಿ.ಕಾಂ ಸಂಪರ್ಕಿಸಿತು. ಅವರು, “ನಾವು ಸುರಕ್ಷತಾ ದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ಬರೆದಿದ್ದೇವೆ. ಆ ರೀತಿಯ ಯಾವ ನಿಬಂಧನೆಗಳು ಹಾಕುವ ಉದ್ದೇಶ ನಮಗಿಲ್ಲ” ಎಂದರು. ಆದರೆ ನಿಮ್ಮ ಸುತ್ತೋಲೆ ನೇರವಾಗಿ ಹೆಣ್ಣು ಮಕ್ಕಳ ವಿರುದ್ಧವಿದೆ ಮತ್ತು ಸಮಾಜಕ್ಕೆ ತಪ್ಪು ಸಂದೇಶ ಕೊಡುತ್ತಿದೆಯಲ್ಲ ಎಂದು ಪ್ರಶ್ನಿಸಿದಾದ ಅದನ್ನು ತಿದ್ದುಕೊಳ್ಳುತ್ತೇವೆ. ಅದನ್ನು ವಾಪಸ್ ಪಡೆದು ಮತ್ತೊಂದು ಸುತ್ತೋಲೆ ಹೊರಡಿಸುತ್ತೇವೆ ಎಂದರು.

ಒಟ್ಟಿನಲ್ಲಿ ಅತ್ಯಾಚಾರದಂತಹ ಅಪರಾಧಗಳ ಹಿಂದಿನ ಕಾರಣಗಳನ್ನು ಅರಿಯುವಲ್ಲಿ ಸರ್ಕಾರಗಳು ಮತ್ತು ನಮ್ಮ ವಿಶ್ವವಿದ್ಯಾನಿಲಯಗಳು ಸಂಪೂರ್ಣ ವಿಫಲವಾಗಿವೆ ಎಂಬುದು ಈ ಘಟನೆಯಿಂದ ಮತ್ತೆ ಸಾಬೀತಾಗಿದೆ. ಪ್ರಜ್ಞಾಂವಂತ ವಲಯದಿಂದ ಬಂದ ತೀವ್ರ ಆಕ್ರೋಶಕ್ಕೆ ಸರ್ಕಾರ ಮತ್ತು ವಿವಿಗಳು ಪಾಠ ಕಲಿಯಬೇಕಿದೆ.


ಇದನ್ನೂ ಓದಿ: ತುಮಕೂರು: ದನ ಮೇಯಿಸಲು ಹೋಗಿದ್ದ ಮಹಿಳೆ ಮೇಲೆ ಅತ್ಯಾಚಾರ, ಕೊಲೆ- ತನಿಖೆಗೆ ತಂಡ ರಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...