Homeಚಳವಳಿಸಂಜೆ ವೇಳೆ ಹೆಣ್ಣು ಮಕ್ಕಳು ಹೊರಬರಬಾರದು: ಮೈಸೂರು ವಿ.ವಿ ಸುತ್ತೋಲೆಗೆ ತೀವ್ರ ಆಕ್ರೋಶ

ಸಂಜೆ ವೇಳೆ ಹೆಣ್ಣು ಮಕ್ಕಳು ಹೊರಬರಬಾರದು: ಮೈಸೂರು ವಿ.ವಿ ಸುತ್ತೋಲೆಗೆ ತೀವ್ರ ಆಕ್ರೋಶ

ಮೈಸೂರು ವಿಶ್ವವಿದ್ಯಾನಿಲಯ ಭಾರತದ ಸಂವಿಧಾನವನ್ನು ಪಾಲಿಸುತ್ತಿದೆಯೋ ಅಥವಾ ಮನುಸ್ಮೃತಿಯನ್ನು ಪಾಲಿಸುತ್ತಿದೆಯೋ ಎಂದು ಕಿಡಿಕಾರಲಾಗಿದೆ.

- Advertisement -
- Advertisement -

ಇತ್ತೀಚೆಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಘಟಿಸಿದ ಅಮಾನವೀಯ ಅತ್ಯಾಚಾರದ ಹಿನ್ನೆಲೆಯಲ್ಲಿ ‘ಇನ್ನು ಮುಂದೆ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಸಂಜೆ 6:30ರ ನಂತರ ಹೆಣ್ಣು ಮಕ್ಕಳು ಏಕಾಂಗಿಯಾಗಿ ತಿರುಗಾಡುವುದನ್ನು, ಕೂರುವುದನ್ನು ನಿಷೇಧಿಸಲಾಗಿದೆ’ ಎಂಬ ವಿವಿಯ ವಿವಾದಾತ್ಮಕ ಸುತ್ತೋಲೆ ವಿರುದ್ಧ ವ್ಯಾಪಕ ಆಕ್ರೋಶ ಕೇಳಿಬಂದಿದೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕಾದ ಗುರುತರ ಜವಾಬ್ದಾರಿ ನಿರ್ವಹಿಸುವಲ್ಲಿ ಸರ್ಕಾರ, ಗೃಹ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ. ತಮ್ಮ ಅದಕ್ಷತನವನ್ನು ಮುಚ್ಚಿಕೊಳ್ಳಲು ಹೆಣ್ಣು ಮಕ್ಕಳನ್ನು ಹೊಣೆ ಮಾಡಲಾಗುತ್ತಿದೆ. ಅವರ ಹೊರಬರಬಾರದು, ಇಂಥದ್ದೆ ಬಟ್ಟೆ ಧರಿಸಬೇಕು ಎಂಬ ನಿಯಮಗಳನ್ನು ಹೇರುವ ಮೂಲಕ ಸಂತ್ರಸ್ತರನ್ನೆ ಬಲಿಪಶು ಮಾಡಲು ಹುನ್ನಾರ ನಡೆಸಲಾಗುತ್ತಿದೆ ಎಂದು ಕಿಡಿಕಾರಲಾಗಿದೆ.

ಸರ್ಕಾರ ಮತ್ತು ವಿವಿಗಳು ಮಹಿಳೆಯರ ಓಡಾಡವನ್ನು ನಿರ್ಬಂಧಿಸುತ್ತಿವೆ. ಮುಂದೆ ಅವರು ಮನೆಯಿಂದಲೇ ಹೊರಬರಬಾರದು ಎಂದು ದಿಗ್ಬಂಧನ ವಿಧಿಸುತ್ತವೆ. ಈ ಮೂಲಕ ಪುರುಷಾಧಿಪತ್ಯ ಆಡಳಿತ ಎಗ್ಗಿಲ್ಲದೆ ನಡೆಯುತ್ತದೆ ಎಂದು ಪ್ರಗತಿಪರ ಚಿಂತಕರು ಆತಂಕ ವ್ಯಕ್ತಪಡಿಸಿದ್ದಾರೆ. ಇಲ್ಲಿ ಅತ್ಯಾಚಾರವೆಸಗಿದ ಗಂಡಸು ಜಾತಿಯ ಮೇಲೆ ಯಾವುದೇ ನಿರ್ಬಂಧ ವಿಧಿಸದೇ ಅತ್ಯಾಚಾರಕ್ಕೆ ಒಳಗಾದ ಮಹಿಳಾ ಸಮುದಾಯದ ಮೇಲೆ ನಿರ್ಬಂಧ ವಿಧಿಸುವುದು ಯಾವ ನ್ಯಾಯ ಎಂಬ ಪ್ರಶ್ನೆ ಎದ್ದಿದೆ.

7.30ಗೆ ಆಕೆ ಹೊರಗೆ ಹೋಗಿದ್ದಕ್ಕೆ ರೇಪ್ ಆಯ್ತು, ಹಾಗಾಗಿ 6.30 ರ ಮೇಲೆ ಯಾವ ಹೆಣ್ಮಕ್ಳೂ ಹೊರಗೇ ಬರಕೂಡದು!
ವಾವ್! ಎಷ್ಟು ಸುಲಭವಾಗಿ ಅದ್ಭುತ ಪರಿಹಾರ ಕಂಡುಕೊಳ್ಳಲಾಯ್ತು! ಆಮೇಲೆ 5.30ಕ್ಕೆ 2.30ಕ್ಕೆ, 10.30ಕ್ಕೆ ರೇಪ್ ಆದಾಗ ಹಾಗೇ ಸಮಯ ಕುಗ್ಗಿಸುತ್ತಾ ಬನ್ನಿ.
ಯಾಕೆ ಅವರು ಕಾಲೇಜಿಗೆ, ಯೂನಿವರ್ಸಿಟಿಗೆ ಬರಬೇಕು? ಬೇಡ ಅಂದು ಬಿಡಿ. ಆಮೇಲೆ ಬೀದಿಗೆ ಬರೋದೂ ಬೇಡ ಅನ್ನಿ.
ಆಮೇಲೆ ಮನೆಗಳಲ್ಲೇ ರೇಪ್ ಆಗುತ್ತಲ್ಲ, ಆಗ ಭೂಮಿ ಮೇಲೆ ಎಲ್ಲ ಹೆಣ್ಣುಗಳೂ ಸತ್ತುಬಿಡಿ ಅಂತನ್ನಿ!
ಒಟ್ಟಲ್ಲಿ ರೇಪ್ ಮಾಡೋರು ಆರಾಮಾಗಿ ಸುತ್ತಾಡ್ತಾ ಇರ್ಲಿ, ಅವರಿಗೆ ತೊಂದರೆ ಆಗಬಾರದಷ್ಟೇ.
ಅಂದಹಾಗೆ #ತಾಲಿಬಾನ್ ಅಂದ್ರೆ ಏನು? ಎಲ್ಲಿದೆ ಅದು? ಎಂದು ಚಿಂತಕಿ ವಿ.ಕೆ ಸಂಜ್ಯೋತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂವಿಧಾನವು ಭಾರತದ ಪ್ರಜೆಗಳಿಗೆಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿರುವಾಗ ಮಹಿಳೆಯರಿಗೆ ಮಾತ್ರವೇ ಮಿತಿಗಳನ್ನು ಹೇರುತ್ತಿರುವವರು ಯಾರು ಮತ್ತು ಯಾಕೆ? ಮಹಿಳೆಯರು ಇಲ್ಲಿ ಎರಡನೆಯ ದರ್ಜೆಯ ಪ್ರಜೆಗಳೇ? ಎಂದೂ ಅವರು ಪ್ರಶ್ನಿಸಿದ್ದಾರೆ.

ಹೆಣ್ಣುಮಕ್ಕಳನ್ನ ಗರ್ಭದಲ್ಲೇ ಕೊಂದುಬಿಡೋಣ; ಆಗ ಅತ್ಯಾಚಾರ ಮಾಡೋಕೆ ಆಗಲ್ಲ. ಏನಂತೀರಿ ಮಾನ್ಯ ಕುಲಪತಿಗಳೇ ಹಾಗು ಖಾಕಿ ಪುಂಡರೇ?
ಇದೂ ವಿಶ್ವವಿದ್ಯಾನಿಲಯ, ಇವರು ಮಕ್ಕಳಿಗೆ ಪಾಠ ಮಾಡ್ತಾರಂತೆ. ಥೂ!
ಒಂದು ವೇಳೆ ಅತ್ಯಾಚಾರ ಮಧ್ಯಾಹ್ನ 1 ಘಂಟೆಗೆ ಆಯ್ತು ಅಂತ ಇಟ್ಕೊಳಿ ಆಗ ಹೆಣ್ಣುಮಕ್ಕಳು 1 ಘಂಟೆ ಮೇಲೆ ಒಬ್ಬರೇ ಓಡಾಡುವ ಹಾಗಿಲ್ವಾ? ಎಂದು ವಿವೇಕ್‌ರವರು ಪ್ರಶ್ನಿಸಿದ್ದಾರೆ.

ಅತ್ಯಾಚಾರ ಮಾಡುವ ಅತ್ಯಾಚಾರಿಗಳಿಗೆ ನಿಭಂದನೆಯನ್ನು ಹಾಕುವುದನ್ನು ಬಿಟ್ಟು ಇನ್ನೂ ಹೆಣ್ಣು ಮಕ್ಕಳನ್ನೆ ಬಂಧಿಸುವ ಈ ವ್ಯವಸ್ಥೆಯ ಬಗ್ಗೆ ಎನು ಹೇಳ ಬೇಕೊ? ನಾಚಿಕೆಗೇಡು… ಹೆಣ್ಣು ಮಕ್ಕಳ ಮೇಲೆ ನಿರ್ಬಂಧ ಹಾಕುವುದನ್ನು ಬಿಟ್ಟು ಹೆಣ್ಣು ಮಕ್ಕಳು ನಿರ್ಭಿತಿಯಿಂದ ಓಡಾಡುವ ವಾತವರಣ ನಿರ್ಮಾಣ ಮಾಡಿ ತೋರಿಸಿ ನಿಮ್ಮ ಯೋಗ್ಯತೆಗೆ… ಎಂದು ಪೂರ್ಣಿಮಾರವರು ಸವಾಲು ಹಾಕಿದ್ದಾರೆ.

ಸಂಜೆ ಆರೂವರೆ ನಂತರ ಹೆಣ್ಣುಮಕ್ಕಳು ಯೂನಿವರ್ಸಿಟಿ ಕ್ಯಾಂಪಸ್ ನಲ್ಲಿ ಓಡಾಡುವುದನ್ನು ನಿಷೇಧಿಸುವ ಬದಲು ಪೂರ್ತಿಯಾಗಿ ಶಿಕ್ಷಣದಿಂದಲೇ ಹೆಣ್ಣುಮಕ್ಕಳನ್ನೇ ನಿಷೇಧಿಸಿಬಿಡಿ. ನಮ್ಮಲ್ಲೂ ತಾಲಿಬಾನ್ ಮಾದರಿ ಆಡಳಿತವಿದೆ ಎಂದು ಎದೆ ತಟ್ಟಿಕೊಂಡು ಹೇಳುತ್ತೇವೆ. ಥೂ, ನಿಮ್ಮ ಯೋಗ್ಯತೆಗಿಷ್ಟು ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಲಕಿಯಾಗಿದ್ದಾಗಲೂ, ಯುವತಿಯಾಗಿದ್ದಾಗಲೂ, ವೃದ್ದೆಯಾಗಿದ್ದಾಗಲೂ ಮನೆಗಳಲ್ಲಿದ್ದಾಗಲೂ ತಾನೇ ಸ್ವತಂತ್ರವಾಗಿ ಸ್ತ್ರೀಯು ಯಾವ ಕಾರ್ಯವನ್ನೂ ಮಾಡಬಾರದು. ಮಹಿಳೆ ಸ್ವಾತಂತ್ರ್ಯಕ್ಕೆ ಅರ್ಹಳಲ್ಲ ಎಂದು ಮನುಸ್ಮೃತಿ ಹೇಳುತ್ತದೆ.

ಭಾರತದ ಯಾವುದೇ ನಾಗರೀಕರಿಗೆ ಜಾತಿ, ವರ್ಗ, ಧರ್ಮ, ಲಿಂಗ, ಜನಾಂಗದ ಆಧಾರದಲ್ಲಿ ತಾರತಮ್ಯ ಮಾಡಬಾರದು ಎಂದು ಭಾರತದ ಸಂವಿಧಾನದ ವಿಧಿ 15 ಹೇಳುತ್ತದೆ.

ಯುವತಿಯರು ಸಂಜೆ 6:30 ರ ನಂತರ ವಿಶ್ವವಿದ್ಯಾಲಯದ ಅವರಣದಲ್ಲಿ ಏಕಾಂಗಿಯಾಗಿ ಸಂಚರಿಸಬಾರದು ಎಂದು ಮೈಸೂರು ವಿಶ್ವವಿದ್ಯಾಲಯ ಸುತ್ತೋಲೆ ಹೊರಡಿಸಿದೆ.

ಈಗ ಹೇಳಿ.. ಮೈಸೂರು ವಿವಿ ಯಾವುದನ್ನು ಪಾಲಿಸುತ್ತಿದೆ ಎಂದು ಎಂದು ಕರ್ನಾಟಕ ಜನಶಕ್ತಿ ಸಂಘಟನೆ ಪ್ರಶ್ನಿಸಿದೆ.

ಈ ಕುರಿತು ಮೈಸೂರು ವಿಶ್ವವಿದ್ಯಾನಿಲಯ ಕುಲಸಚಿವ ಶಿವಪ್ಪ ರಾಮಕೃಷ್ಣರವರನ್ನು ನಾನುಗೌರಿ.ಕಾಂ ಸಂಪರ್ಕಿಸಿತು. ಅವರು, “ನಾವು ಸುರಕ್ಷತಾ ದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ಬರೆದಿದ್ದೇವೆ. ಆ ರೀತಿಯ ಯಾವ ನಿಬಂಧನೆಗಳು ಹಾಕುವ ಉದ್ದೇಶ ನಮಗಿಲ್ಲ” ಎಂದರು. ಆದರೆ ನಿಮ್ಮ ಸುತ್ತೋಲೆ ನೇರವಾಗಿ ಹೆಣ್ಣು ಮಕ್ಕಳ ವಿರುದ್ಧವಿದೆ ಮತ್ತು ಸಮಾಜಕ್ಕೆ ತಪ್ಪು ಸಂದೇಶ ಕೊಡುತ್ತಿದೆಯಲ್ಲ ಎಂದು ಪ್ರಶ್ನಿಸಿದಾದ ಅದನ್ನು ತಿದ್ದುಕೊಳ್ಳುತ್ತೇವೆ. ಅದನ್ನು ವಾಪಸ್ ಪಡೆದು ಮತ್ತೊಂದು ಸುತ್ತೋಲೆ ಹೊರಡಿಸುತ್ತೇವೆ ಎಂದರು.

ಒಟ್ಟಿನಲ್ಲಿ ಅತ್ಯಾಚಾರದಂತಹ ಅಪರಾಧಗಳ ಹಿಂದಿನ ಕಾರಣಗಳನ್ನು ಅರಿಯುವಲ್ಲಿ ಸರ್ಕಾರಗಳು ಮತ್ತು ನಮ್ಮ ವಿಶ್ವವಿದ್ಯಾನಿಲಯಗಳು ಸಂಪೂರ್ಣ ವಿಫಲವಾಗಿವೆ ಎಂಬುದು ಈ ಘಟನೆಯಿಂದ ಮತ್ತೆ ಸಾಬೀತಾಗಿದೆ. ಪ್ರಜ್ಞಾಂವಂತ ವಲಯದಿಂದ ಬಂದ ತೀವ್ರ ಆಕ್ರೋಶಕ್ಕೆ ಸರ್ಕಾರ ಮತ್ತು ವಿವಿಗಳು ಪಾಠ ಕಲಿಯಬೇಕಿದೆ.


ಇದನ್ನೂ ಓದಿ: ತುಮಕೂರು: ದನ ಮೇಯಿಸಲು ಹೋಗಿದ್ದ ಮಹಿಳೆ ಮೇಲೆ ಅತ್ಯಾಚಾರ, ಕೊಲೆ- ತನಿಖೆಗೆ ತಂಡ ರಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....