Homeಚಳವಳಿಸಂಜೆ ವೇಳೆ ಹೆಣ್ಣು ಮಕ್ಕಳು ಹೊರಬರಬಾರದು: ಮೈಸೂರು ವಿ.ವಿ ಸುತ್ತೋಲೆಗೆ ತೀವ್ರ ಆಕ್ರೋಶ

ಸಂಜೆ ವೇಳೆ ಹೆಣ್ಣು ಮಕ್ಕಳು ಹೊರಬರಬಾರದು: ಮೈಸೂರು ವಿ.ವಿ ಸುತ್ತೋಲೆಗೆ ತೀವ್ರ ಆಕ್ರೋಶ

ಮೈಸೂರು ವಿಶ್ವವಿದ್ಯಾನಿಲಯ ಭಾರತದ ಸಂವಿಧಾನವನ್ನು ಪಾಲಿಸುತ್ತಿದೆಯೋ ಅಥವಾ ಮನುಸ್ಮೃತಿಯನ್ನು ಪಾಲಿಸುತ್ತಿದೆಯೋ ಎಂದು ಕಿಡಿಕಾರಲಾಗಿದೆ.

- Advertisement -
- Advertisement -

ಇತ್ತೀಚೆಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಘಟಿಸಿದ ಅಮಾನವೀಯ ಅತ್ಯಾಚಾರದ ಹಿನ್ನೆಲೆಯಲ್ಲಿ ‘ಇನ್ನು ಮುಂದೆ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಸಂಜೆ 6:30ರ ನಂತರ ಹೆಣ್ಣು ಮಕ್ಕಳು ಏಕಾಂಗಿಯಾಗಿ ತಿರುಗಾಡುವುದನ್ನು, ಕೂರುವುದನ್ನು ನಿಷೇಧಿಸಲಾಗಿದೆ’ ಎಂಬ ವಿವಿಯ ವಿವಾದಾತ್ಮಕ ಸುತ್ತೋಲೆ ವಿರುದ್ಧ ವ್ಯಾಪಕ ಆಕ್ರೋಶ ಕೇಳಿಬಂದಿದೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕಾದ ಗುರುತರ ಜವಾಬ್ದಾರಿ ನಿರ್ವಹಿಸುವಲ್ಲಿ ಸರ್ಕಾರ, ಗೃಹ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ. ತಮ್ಮ ಅದಕ್ಷತನವನ್ನು ಮುಚ್ಚಿಕೊಳ್ಳಲು ಹೆಣ್ಣು ಮಕ್ಕಳನ್ನು ಹೊಣೆ ಮಾಡಲಾಗುತ್ತಿದೆ. ಅವರ ಹೊರಬರಬಾರದು, ಇಂಥದ್ದೆ ಬಟ್ಟೆ ಧರಿಸಬೇಕು ಎಂಬ ನಿಯಮಗಳನ್ನು ಹೇರುವ ಮೂಲಕ ಸಂತ್ರಸ್ತರನ್ನೆ ಬಲಿಪಶು ಮಾಡಲು ಹುನ್ನಾರ ನಡೆಸಲಾಗುತ್ತಿದೆ ಎಂದು ಕಿಡಿಕಾರಲಾಗಿದೆ.

ಸರ್ಕಾರ ಮತ್ತು ವಿವಿಗಳು ಮಹಿಳೆಯರ ಓಡಾಡವನ್ನು ನಿರ್ಬಂಧಿಸುತ್ತಿವೆ. ಮುಂದೆ ಅವರು ಮನೆಯಿಂದಲೇ ಹೊರಬರಬಾರದು ಎಂದು ದಿಗ್ಬಂಧನ ವಿಧಿಸುತ್ತವೆ. ಈ ಮೂಲಕ ಪುರುಷಾಧಿಪತ್ಯ ಆಡಳಿತ ಎಗ್ಗಿಲ್ಲದೆ ನಡೆಯುತ್ತದೆ ಎಂದು ಪ್ರಗತಿಪರ ಚಿಂತಕರು ಆತಂಕ ವ್ಯಕ್ತಪಡಿಸಿದ್ದಾರೆ. ಇಲ್ಲಿ ಅತ್ಯಾಚಾರವೆಸಗಿದ ಗಂಡಸು ಜಾತಿಯ ಮೇಲೆ ಯಾವುದೇ ನಿರ್ಬಂಧ ವಿಧಿಸದೇ ಅತ್ಯಾಚಾರಕ್ಕೆ ಒಳಗಾದ ಮಹಿಳಾ ಸಮುದಾಯದ ಮೇಲೆ ನಿರ್ಬಂಧ ವಿಧಿಸುವುದು ಯಾವ ನ್ಯಾಯ ಎಂಬ ಪ್ರಶ್ನೆ ಎದ್ದಿದೆ.

7.30ಗೆ ಆಕೆ ಹೊರಗೆ ಹೋಗಿದ್ದಕ್ಕೆ ರೇಪ್ ಆಯ್ತು, ಹಾಗಾಗಿ 6.30 ರ ಮೇಲೆ ಯಾವ ಹೆಣ್ಮಕ್ಳೂ ಹೊರಗೇ ಬರಕೂಡದು!
ವಾವ್! ಎಷ್ಟು ಸುಲಭವಾಗಿ ಅದ್ಭುತ ಪರಿಹಾರ ಕಂಡುಕೊಳ್ಳಲಾಯ್ತು! ಆಮೇಲೆ 5.30ಕ್ಕೆ 2.30ಕ್ಕೆ, 10.30ಕ್ಕೆ ರೇಪ್ ಆದಾಗ ಹಾಗೇ ಸಮಯ ಕುಗ್ಗಿಸುತ್ತಾ ಬನ್ನಿ.
ಯಾಕೆ ಅವರು ಕಾಲೇಜಿಗೆ, ಯೂನಿವರ್ಸಿಟಿಗೆ ಬರಬೇಕು? ಬೇಡ ಅಂದು ಬಿಡಿ. ಆಮೇಲೆ ಬೀದಿಗೆ ಬರೋದೂ ಬೇಡ ಅನ್ನಿ.
ಆಮೇಲೆ ಮನೆಗಳಲ್ಲೇ ರೇಪ್ ಆಗುತ್ತಲ್ಲ, ಆಗ ಭೂಮಿ ಮೇಲೆ ಎಲ್ಲ ಹೆಣ್ಣುಗಳೂ ಸತ್ತುಬಿಡಿ ಅಂತನ್ನಿ!
ಒಟ್ಟಲ್ಲಿ ರೇಪ್ ಮಾಡೋರು ಆರಾಮಾಗಿ ಸುತ್ತಾಡ್ತಾ ಇರ್ಲಿ, ಅವರಿಗೆ ತೊಂದರೆ ಆಗಬಾರದಷ್ಟೇ.
ಅಂದಹಾಗೆ #ತಾಲಿಬಾನ್ ಅಂದ್ರೆ ಏನು? ಎಲ್ಲಿದೆ ಅದು? ಎಂದು ಚಿಂತಕಿ ವಿ.ಕೆ ಸಂಜ್ಯೋತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂವಿಧಾನವು ಭಾರತದ ಪ್ರಜೆಗಳಿಗೆಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿರುವಾಗ ಮಹಿಳೆಯರಿಗೆ ಮಾತ್ರವೇ ಮಿತಿಗಳನ್ನು ಹೇರುತ್ತಿರುವವರು ಯಾರು ಮತ್ತು ಯಾಕೆ? ಮಹಿಳೆಯರು ಇಲ್ಲಿ ಎರಡನೆಯ ದರ್ಜೆಯ ಪ್ರಜೆಗಳೇ? ಎಂದೂ ಅವರು ಪ್ರಶ್ನಿಸಿದ್ದಾರೆ.

ಹೆಣ್ಣುಮಕ್ಕಳನ್ನ ಗರ್ಭದಲ್ಲೇ ಕೊಂದುಬಿಡೋಣ; ಆಗ ಅತ್ಯಾಚಾರ ಮಾಡೋಕೆ ಆಗಲ್ಲ. ಏನಂತೀರಿ ಮಾನ್ಯ ಕುಲಪತಿಗಳೇ ಹಾಗು ಖಾಕಿ ಪುಂಡರೇ?
ಇದೂ ವಿಶ್ವವಿದ್ಯಾನಿಲಯ, ಇವರು ಮಕ್ಕಳಿಗೆ ಪಾಠ ಮಾಡ್ತಾರಂತೆ. ಥೂ!
ಒಂದು ವೇಳೆ ಅತ್ಯಾಚಾರ ಮಧ್ಯಾಹ್ನ 1 ಘಂಟೆಗೆ ಆಯ್ತು ಅಂತ ಇಟ್ಕೊಳಿ ಆಗ ಹೆಣ್ಣುಮಕ್ಕಳು 1 ಘಂಟೆ ಮೇಲೆ ಒಬ್ಬರೇ ಓಡಾಡುವ ಹಾಗಿಲ್ವಾ? ಎಂದು ವಿವೇಕ್‌ರವರು ಪ್ರಶ್ನಿಸಿದ್ದಾರೆ.

ಅತ್ಯಾಚಾರ ಮಾಡುವ ಅತ್ಯಾಚಾರಿಗಳಿಗೆ ನಿಭಂದನೆಯನ್ನು ಹಾಕುವುದನ್ನು ಬಿಟ್ಟು ಇನ್ನೂ ಹೆಣ್ಣು ಮಕ್ಕಳನ್ನೆ ಬಂಧಿಸುವ ಈ ವ್ಯವಸ್ಥೆಯ ಬಗ್ಗೆ ಎನು ಹೇಳ ಬೇಕೊ? ನಾಚಿಕೆಗೇಡು… ಹೆಣ್ಣು ಮಕ್ಕಳ ಮೇಲೆ ನಿರ್ಬಂಧ ಹಾಕುವುದನ್ನು ಬಿಟ್ಟು ಹೆಣ್ಣು ಮಕ್ಕಳು ನಿರ್ಭಿತಿಯಿಂದ ಓಡಾಡುವ ವಾತವರಣ ನಿರ್ಮಾಣ ಮಾಡಿ ತೋರಿಸಿ ನಿಮ್ಮ ಯೋಗ್ಯತೆಗೆ… ಎಂದು ಪೂರ್ಣಿಮಾರವರು ಸವಾಲು ಹಾಕಿದ್ದಾರೆ.

ಸಂಜೆ ಆರೂವರೆ ನಂತರ ಹೆಣ್ಣುಮಕ್ಕಳು ಯೂನಿವರ್ಸಿಟಿ ಕ್ಯಾಂಪಸ್ ನಲ್ಲಿ ಓಡಾಡುವುದನ್ನು ನಿಷೇಧಿಸುವ ಬದಲು ಪೂರ್ತಿಯಾಗಿ ಶಿಕ್ಷಣದಿಂದಲೇ ಹೆಣ್ಣುಮಕ್ಕಳನ್ನೇ ನಿಷೇಧಿಸಿಬಿಡಿ. ನಮ್ಮಲ್ಲೂ ತಾಲಿಬಾನ್ ಮಾದರಿ ಆಡಳಿತವಿದೆ ಎಂದು ಎದೆ ತಟ್ಟಿಕೊಂಡು ಹೇಳುತ್ತೇವೆ. ಥೂ, ನಿಮ್ಮ ಯೋಗ್ಯತೆಗಿಷ್ಟು ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಲಕಿಯಾಗಿದ್ದಾಗಲೂ, ಯುವತಿಯಾಗಿದ್ದಾಗಲೂ, ವೃದ್ದೆಯಾಗಿದ್ದಾಗಲೂ ಮನೆಗಳಲ್ಲಿದ್ದಾಗಲೂ ತಾನೇ ಸ್ವತಂತ್ರವಾಗಿ ಸ್ತ್ರೀಯು ಯಾವ ಕಾರ್ಯವನ್ನೂ ಮಾಡಬಾರದು. ಮಹಿಳೆ ಸ್ವಾತಂತ್ರ್ಯಕ್ಕೆ ಅರ್ಹಳಲ್ಲ ಎಂದು ಮನುಸ್ಮೃತಿ ಹೇಳುತ್ತದೆ.

ಭಾರತದ ಯಾವುದೇ ನಾಗರೀಕರಿಗೆ ಜಾತಿ, ವರ್ಗ, ಧರ್ಮ, ಲಿಂಗ, ಜನಾಂಗದ ಆಧಾರದಲ್ಲಿ ತಾರತಮ್ಯ ಮಾಡಬಾರದು ಎಂದು ಭಾರತದ ಸಂವಿಧಾನದ ವಿಧಿ 15 ಹೇಳುತ್ತದೆ.

ಯುವತಿಯರು ಸಂಜೆ 6:30 ರ ನಂತರ ವಿಶ್ವವಿದ್ಯಾಲಯದ ಅವರಣದಲ್ಲಿ ಏಕಾಂಗಿಯಾಗಿ ಸಂಚರಿಸಬಾರದು ಎಂದು ಮೈಸೂರು ವಿಶ್ವವಿದ್ಯಾಲಯ ಸುತ್ತೋಲೆ ಹೊರಡಿಸಿದೆ.

ಈಗ ಹೇಳಿ.. ಮೈಸೂರು ವಿವಿ ಯಾವುದನ್ನು ಪಾಲಿಸುತ್ತಿದೆ ಎಂದು ಎಂದು ಕರ್ನಾಟಕ ಜನಶಕ್ತಿ ಸಂಘಟನೆ ಪ್ರಶ್ನಿಸಿದೆ.

ಈ ಕುರಿತು ಮೈಸೂರು ವಿಶ್ವವಿದ್ಯಾನಿಲಯ ಕುಲಸಚಿವ ಶಿವಪ್ಪ ರಾಮಕೃಷ್ಣರವರನ್ನು ನಾನುಗೌರಿ.ಕಾಂ ಸಂಪರ್ಕಿಸಿತು. ಅವರು, “ನಾವು ಸುರಕ್ಷತಾ ದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ಬರೆದಿದ್ದೇವೆ. ಆ ರೀತಿಯ ಯಾವ ನಿಬಂಧನೆಗಳು ಹಾಕುವ ಉದ್ದೇಶ ನಮಗಿಲ್ಲ” ಎಂದರು. ಆದರೆ ನಿಮ್ಮ ಸುತ್ತೋಲೆ ನೇರವಾಗಿ ಹೆಣ್ಣು ಮಕ್ಕಳ ವಿರುದ್ಧವಿದೆ ಮತ್ತು ಸಮಾಜಕ್ಕೆ ತಪ್ಪು ಸಂದೇಶ ಕೊಡುತ್ತಿದೆಯಲ್ಲ ಎಂದು ಪ್ರಶ್ನಿಸಿದಾದ ಅದನ್ನು ತಿದ್ದುಕೊಳ್ಳುತ್ತೇವೆ. ಅದನ್ನು ವಾಪಸ್ ಪಡೆದು ಮತ್ತೊಂದು ಸುತ್ತೋಲೆ ಹೊರಡಿಸುತ್ತೇವೆ ಎಂದರು.

ಒಟ್ಟಿನಲ್ಲಿ ಅತ್ಯಾಚಾರದಂತಹ ಅಪರಾಧಗಳ ಹಿಂದಿನ ಕಾರಣಗಳನ್ನು ಅರಿಯುವಲ್ಲಿ ಸರ್ಕಾರಗಳು ಮತ್ತು ನಮ್ಮ ವಿಶ್ವವಿದ್ಯಾನಿಲಯಗಳು ಸಂಪೂರ್ಣ ವಿಫಲವಾಗಿವೆ ಎಂಬುದು ಈ ಘಟನೆಯಿಂದ ಮತ್ತೆ ಸಾಬೀತಾಗಿದೆ. ಪ್ರಜ್ಞಾಂವಂತ ವಲಯದಿಂದ ಬಂದ ತೀವ್ರ ಆಕ್ರೋಶಕ್ಕೆ ಸರ್ಕಾರ ಮತ್ತು ವಿವಿಗಳು ಪಾಠ ಕಲಿಯಬೇಕಿದೆ.


ಇದನ್ನೂ ಓದಿ: ತುಮಕೂರು: ದನ ಮೇಯಿಸಲು ಹೋಗಿದ್ದ ಮಹಿಳೆ ಮೇಲೆ ಅತ್ಯಾಚಾರ, ಕೊಲೆ- ತನಿಖೆಗೆ ತಂಡ ರಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...