Homeಚಳವಳಿಕೂಡಲೇ 4G, 5G ಸೇವೆ ನೀಡಿ, BSNL ಬದುಕಿಸಿ: ದೇಶಾದ್ಯಂತ ನೌಕರರ ಹೋರಾಟ

ಕೂಡಲೇ 4G, 5G ಸೇವೆ ನೀಡಿ, BSNL ಬದುಕಿಸಿ: ದೇಶಾದ್ಯಂತ ನೌಕರರ ಹೋರಾಟ

- Advertisement -
- Advertisement -

ಕೂಡಲೇ 4G, 5G ಸೇವೆ ನೀಡುವುದರ ಮೂಲಕ ಸಾರ್ವಜನಿಕ ಉದ್ಯಮವಾದ BSNL ಉಳಿಸಬೇಕು ಎಂದು ಒತ್ತಾಯಿಸಿ ಬಿಎಸ್‌ಎನ್‌ಎಲ್‌ ಅಧಿಕಾರಿಯೇತರ ಸಂಘಟನೆಗಳ ಜಂಟಿ ವೇದಿಕೆ ವತಿಯಿಂದ ಇಂದು ದೇಶಾದ್ಯಂತ ಮಾನವ ಸರಪಳಿ ಪ್ರತಿಭಟನೆ ನಡೆಯಿತು.

ಬೆಂಗಳೂರಿನ ಕಬ್ಬನ್ ಪಾರ್ಕ್ ಎದುರು ಭಿತ್ತಿಫಲಕ ಹಿಡಿದು ಬಿಎಸ್‌ಎನ್‌ಎಲ್‌ ನೌಕರರು ಪ್ರತಿಭಟನೆ ನಡೆಸಿದರು. ಬಿಎಸ್‌ಎನ್‌ಎಲ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಕೆ.ಗುಂಡಣ್ಣ ಮಾತನಾಡಿ, “ಖಾಸಗಿ ಟೆಲಿಕಾಂ ಸಂಸ್ಥೆಗಳು ಈಗಾಗಲೇ 5G ಸೇವೆ ನೀಡುತ್ತಿರುವ ಸಂದರ್ಭದಲ್ಲಿ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ಗೆ ಇನ್ನೂ 4G ಸೇವೆ ನೀಡಲು ಸಾಧ್ಯವಾಗಿಲ್ಲ. 4ಜಿ ಸೇವೆ ನೀಡಲು ಇನ್ನು 18 ತಿಂಗಳು ಬೇಕಾಗಬಹುದು ಎಂದು ಮಾಹಿತಿ ಸಿಕ್ಕಿದೆ. ಕೇವಲ 4ಜಿ ಸೇವೆ ನೀಡಲು ಒಂದೂವರೆ ವರ್ಷ ಬೇಕಾಗುತ್ತದೆ ಅಂದರೆ ಅಷ್ಟರಲ್ಲಿ ಬಿಎಸ್‌ಎನ್‌ಎಲ್ ಸಂಪೂರ್ಣ ನಿರ್ನಾಮವಾಗುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.

4G, 5G ಸೇವೆ ಇಲ್ಲದ ಏಕೈಕ ಕಾರಣಕ್ಕಾಗಿ ಪ್ರತಿ ತಿಂಗಳು ಲಕ್ಷಾಂತರ ಗ್ರಾಹಕರು ಬಿಎಸ್‌ಎನ್‌ಎಲ್ ತ್ಯಜಿಸುತ್ತಿದ್ದಾರೆ. ಹೀಗಾಗಿ ಬಿಎಸ್‌ಎನ್‌ಎಲ್ ಉಳಿಸಿಕೊಳ್ಳಲು ನಿರಂತರ ಹೋರಾಟಕ್ಕೆ ಮುಂದಾಗಿದ್ದೇವೆ. ಇದೇ ತಿಂಗಳ 16 ರಂದು ಪ್ರತಿ ರಾಜ್ಯಗಳ ರಾಜ್ಯಪಾಲರಿಗೆ ಮನವಿ ನೀಡುತ್ತೇವೆ. ಜುಲೈ 7 ರಂದು ನವದೆಹಲಿಯ ಸಂಚಾರ್ ಭವನ್ ಚಲೋ ಹೋರಾಟ ನಡೆಯಲಿದೆ ಎಂದರು.

4G, 5G ಸೇವೆ ಜೊತೆಗೆ ನಮ್ಮ ಹಳೆಯ ಬೇಡಿಕೆಗಳಾದ 2017ರ ಜನವರಿಯಿಂದ 3ನೇ ವೇತನ ಪರಿಷ್ಕರಣೆ ಆಗಬೇಕಿದೆ. ಮಾತುಕತೆಗಳು ಮುಗಿದರೂ ಬಿಎಸ್‌ಎನ್‌ಎಲ್ ಮ್ಯಾನೇಜ್‌ಮೆಂಟ್ ಕಡೆ ಕ್ಷಣದಲ್ಲಿ ವಂಚಿಸುತ್ತಿದೆ. ಇನ್ನು ಪಿಂಚಣಿ ಪರಿಷ್ಕರಣೆ ಕೂಡ ಆಗಬೇಕು. ಈ ಮೂರು ಹಕ್ಕೊತ್ತಾಯಗಳ ಈಡೇರಿಕೆಗೆ ಹೋರಾಟ ಮಾಡುತ್ತಿದ್ದೇವೆ ಎಂದರು.

ಬಿಎಸ್‌ಎನ್‌ಎಲ್‌ ಮುಳುಗುತ್ತಿರುವ ಹಡಗು

ಕರ್ನಾಟಕ ರಾಜ್ಯ ಪೊಲೀಸರು ತಾವು ಬಳಸುತ್ತಿರುವ ಸರ್ಕಾರಿ ಸ್ವಾಮ್ಯದ ಭಾರತ್‌ ಸಂಚಾರ ನಿಗಮ ಲಿಮಿಟೆಡ್‌ (ಬಿಎಸ್‌ಎನ್‌ಎಲ್‌)ನ ತಮ್ಮ ಎಲ್ಲಾ 38,000 ಅಧಿಕೃತ ಮೊಬೈಲ್ ಫೋನ್ ಸಿಮ್ ಕಾರ್ಡ್‌ಗಳನ್ನು ರಿಲಯನ್ಸ್ ಜಿಯೋಗೆ ಪೋರ್ಟ್ ಮಾಡಲು ಕಳೆದ ಫೆಬ್ರವರಿ ತಿಂಗಳಿನಲ್ಲಿಯೇ ನಿರ್ಧರಿಸಿದ್ದಾರೆ.

“ಪೊಲೀಸ್ ವ್ಯವಸ್ಥೆಯಂತಹ ತುರ್ತು ಸೇವೆಗೆ ನೆಟ್‌ವರ್ಕ್ ಉತ್ತಮವಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ. ಲಭ್ಯವಿರುವ ನೆಟ್‌ವರ್ಕ್‌ನ ದಕ್ಷತೆಯನ್ನು ಹೆಚ್ಚಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ. ಇದು ಸಂಪೂರ್ಣವಾಗಿ ವಾಣಿಜ್ಯಿಕ ನಿರ್ಧಾರವಾಗಿದೆ” ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

“ಖಾಸಗಿ ಸಂಸ್ಥೆಗಳು 5G ಸೇವೆಗಳನ್ನು ನೀಡುತ್ತಿದ್ದರೆ, ಬಿಎಸ್‌ಎನ್‌ಎಲ್‌ ಇನ್ನೂ 4G ಸೇವೆಗಳನ್ನೂ ನೀಡುತ್ತಿಲ್ಲ. ನಮ್ಮಂಥವರ ತುರ್ತು ಸೇವೆಗೆ ಇದು ತೊಂದರೆಯುಂಟುಮಾಡಿದೆ. ವಾಣಿಜ್ಯ ಮೌಲ್ಯಮಾಪನದ ನಂತರ, ‘ಕರ್ನಾಟಕ ಟ್ರಾನ್ಸ್‌ಪರೆನ್ಸಿ ಇನ್‌ ಪಬ್ಲಿಕ್‌ ಪ್ರೊಕ್ಯೂರ್‌ಮೆಂಟ್ ಆಕ್ಟ್‌’ 1999ರ ಪ್ರಕಾರ ರಿಲಯನ್ಸ್ ಜಿಯೋವನ್ನು ಪರ್ಯಾಯ ಸೇವಾ ಪೂರೈಕೆದಾರರಾಗಿ ಆಯ್ಕೆ ಮಾಡಲಾಗಿದೆ” ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಭಾರತೀಯ ರೈಲ್ವೇ ಮತ್ತು ತೆಲಂಗಾಣ ಪೊಲೀಸ್‌ ಸೇರಿದಂತೆ ಕೇಂದ್ರ ಸರ್ಕಾರದ ಹಲವು ಇಲಾಖೆಗಳಲ್ಲಿ ರಿಲಯನ್ಸ್ ಜಿಯೋಗೆ ಪೋರ್ಟ್‌ ಆಗಲು ನಿರ್ದೇಶನ ನೀಡಲಾಗಿದೆ. ಒಟ್ಟಾರೆಯಾಗಿ ಸಾರ್ವಜನಿಕ ವಲಯದ ಪ್ರಮುಖ ಸಂಸ್ಥೆಯೊಂದು ಸರ್ಕಾರದ ನಿರ್ಲಕ್ಷ್ಯ ಮತ್ತು ಖಾಸಗಿಯವರ ಲಾಬಿಗೆ ಕೊನೆಯುಸಿರೆಳೆಯುವ ಸ್ಥಿತಿಗೆ ಬಂದು ತಲುಪಿದೆ.

ಇದನ್ನೂ ಓದಿ: BSNL ದುಸ್ಥಿತಿಗೆ ಕೇಂದ್ರ ಸರ್ಕಾರವೇ ಹೊಣೆ: ಹಾಗಾದರೆ ಯಾರು ದೇಶದ್ರೋಹಿಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...