Homeಚಳವಳಿಕೂಡಲೇ 4G, 5G ಸೇವೆ ನೀಡಿ, BSNL ಬದುಕಿಸಿ: ದೇಶಾದ್ಯಂತ ನೌಕರರ ಹೋರಾಟ

ಕೂಡಲೇ 4G, 5G ಸೇವೆ ನೀಡಿ, BSNL ಬದುಕಿಸಿ: ದೇಶಾದ್ಯಂತ ನೌಕರರ ಹೋರಾಟ

- Advertisement -
- Advertisement -

ಕೂಡಲೇ 4G, 5G ಸೇವೆ ನೀಡುವುದರ ಮೂಲಕ ಸಾರ್ವಜನಿಕ ಉದ್ಯಮವಾದ BSNL ಉಳಿಸಬೇಕು ಎಂದು ಒತ್ತಾಯಿಸಿ ಬಿಎಸ್‌ಎನ್‌ಎಲ್‌ ಅಧಿಕಾರಿಯೇತರ ಸಂಘಟನೆಗಳ ಜಂಟಿ ವೇದಿಕೆ ವತಿಯಿಂದ ಇಂದು ದೇಶಾದ್ಯಂತ ಮಾನವ ಸರಪಳಿ ಪ್ರತಿಭಟನೆ ನಡೆಯಿತು.

ಬೆಂಗಳೂರಿನ ಕಬ್ಬನ್ ಪಾರ್ಕ್ ಎದುರು ಭಿತ್ತಿಫಲಕ ಹಿಡಿದು ಬಿಎಸ್‌ಎನ್‌ಎಲ್‌ ನೌಕರರು ಪ್ರತಿಭಟನೆ ನಡೆಸಿದರು. ಬಿಎಸ್‌ಎನ್‌ಎಲ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಕೆ.ಗುಂಡಣ್ಣ ಮಾತನಾಡಿ, “ಖಾಸಗಿ ಟೆಲಿಕಾಂ ಸಂಸ್ಥೆಗಳು ಈಗಾಗಲೇ 5G ಸೇವೆ ನೀಡುತ್ತಿರುವ ಸಂದರ್ಭದಲ್ಲಿ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ಗೆ ಇನ್ನೂ 4G ಸೇವೆ ನೀಡಲು ಸಾಧ್ಯವಾಗಿಲ್ಲ. 4ಜಿ ಸೇವೆ ನೀಡಲು ಇನ್ನು 18 ತಿಂಗಳು ಬೇಕಾಗಬಹುದು ಎಂದು ಮಾಹಿತಿ ಸಿಕ್ಕಿದೆ. ಕೇವಲ 4ಜಿ ಸೇವೆ ನೀಡಲು ಒಂದೂವರೆ ವರ್ಷ ಬೇಕಾಗುತ್ತದೆ ಅಂದರೆ ಅಷ್ಟರಲ್ಲಿ ಬಿಎಸ್‌ಎನ್‌ಎಲ್ ಸಂಪೂರ್ಣ ನಿರ್ನಾಮವಾಗುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.

4G, 5G ಸೇವೆ ಇಲ್ಲದ ಏಕೈಕ ಕಾರಣಕ್ಕಾಗಿ ಪ್ರತಿ ತಿಂಗಳು ಲಕ್ಷಾಂತರ ಗ್ರಾಹಕರು ಬಿಎಸ್‌ಎನ್‌ಎಲ್ ತ್ಯಜಿಸುತ್ತಿದ್ದಾರೆ. ಹೀಗಾಗಿ ಬಿಎಸ್‌ಎನ್‌ಎಲ್ ಉಳಿಸಿಕೊಳ್ಳಲು ನಿರಂತರ ಹೋರಾಟಕ್ಕೆ ಮುಂದಾಗಿದ್ದೇವೆ. ಇದೇ ತಿಂಗಳ 16 ರಂದು ಪ್ರತಿ ರಾಜ್ಯಗಳ ರಾಜ್ಯಪಾಲರಿಗೆ ಮನವಿ ನೀಡುತ್ತೇವೆ. ಜುಲೈ 7 ರಂದು ನವದೆಹಲಿಯ ಸಂಚಾರ್ ಭವನ್ ಚಲೋ ಹೋರಾಟ ನಡೆಯಲಿದೆ ಎಂದರು.

4G, 5G ಸೇವೆ ಜೊತೆಗೆ ನಮ್ಮ ಹಳೆಯ ಬೇಡಿಕೆಗಳಾದ 2017ರ ಜನವರಿಯಿಂದ 3ನೇ ವೇತನ ಪರಿಷ್ಕರಣೆ ಆಗಬೇಕಿದೆ. ಮಾತುಕತೆಗಳು ಮುಗಿದರೂ ಬಿಎಸ್‌ಎನ್‌ಎಲ್ ಮ್ಯಾನೇಜ್‌ಮೆಂಟ್ ಕಡೆ ಕ್ಷಣದಲ್ಲಿ ವಂಚಿಸುತ್ತಿದೆ. ಇನ್ನು ಪಿಂಚಣಿ ಪರಿಷ್ಕರಣೆ ಕೂಡ ಆಗಬೇಕು. ಈ ಮೂರು ಹಕ್ಕೊತ್ತಾಯಗಳ ಈಡೇರಿಕೆಗೆ ಹೋರಾಟ ಮಾಡುತ್ತಿದ್ದೇವೆ ಎಂದರು.

ಬಿಎಸ್‌ಎನ್‌ಎಲ್‌ ಮುಳುಗುತ್ತಿರುವ ಹಡಗು

ಕರ್ನಾಟಕ ರಾಜ್ಯ ಪೊಲೀಸರು ತಾವು ಬಳಸುತ್ತಿರುವ ಸರ್ಕಾರಿ ಸ್ವಾಮ್ಯದ ಭಾರತ್‌ ಸಂಚಾರ ನಿಗಮ ಲಿಮಿಟೆಡ್‌ (ಬಿಎಸ್‌ಎನ್‌ಎಲ್‌)ನ ತಮ್ಮ ಎಲ್ಲಾ 38,000 ಅಧಿಕೃತ ಮೊಬೈಲ್ ಫೋನ್ ಸಿಮ್ ಕಾರ್ಡ್‌ಗಳನ್ನು ರಿಲಯನ್ಸ್ ಜಿಯೋಗೆ ಪೋರ್ಟ್ ಮಾಡಲು ಕಳೆದ ಫೆಬ್ರವರಿ ತಿಂಗಳಿನಲ್ಲಿಯೇ ನಿರ್ಧರಿಸಿದ್ದಾರೆ.

“ಪೊಲೀಸ್ ವ್ಯವಸ್ಥೆಯಂತಹ ತುರ್ತು ಸೇವೆಗೆ ನೆಟ್‌ವರ್ಕ್ ಉತ್ತಮವಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ. ಲಭ್ಯವಿರುವ ನೆಟ್‌ವರ್ಕ್‌ನ ದಕ್ಷತೆಯನ್ನು ಹೆಚ್ಚಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ. ಇದು ಸಂಪೂರ್ಣವಾಗಿ ವಾಣಿಜ್ಯಿಕ ನಿರ್ಧಾರವಾಗಿದೆ” ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

“ಖಾಸಗಿ ಸಂಸ್ಥೆಗಳು 5G ಸೇವೆಗಳನ್ನು ನೀಡುತ್ತಿದ್ದರೆ, ಬಿಎಸ್‌ಎನ್‌ಎಲ್‌ ಇನ್ನೂ 4G ಸೇವೆಗಳನ್ನೂ ನೀಡುತ್ತಿಲ್ಲ. ನಮ್ಮಂಥವರ ತುರ್ತು ಸೇವೆಗೆ ಇದು ತೊಂದರೆಯುಂಟುಮಾಡಿದೆ. ವಾಣಿಜ್ಯ ಮೌಲ್ಯಮಾಪನದ ನಂತರ, ‘ಕರ್ನಾಟಕ ಟ್ರಾನ್ಸ್‌ಪರೆನ್ಸಿ ಇನ್‌ ಪಬ್ಲಿಕ್‌ ಪ್ರೊಕ್ಯೂರ್‌ಮೆಂಟ್ ಆಕ್ಟ್‌’ 1999ರ ಪ್ರಕಾರ ರಿಲಯನ್ಸ್ ಜಿಯೋವನ್ನು ಪರ್ಯಾಯ ಸೇವಾ ಪೂರೈಕೆದಾರರಾಗಿ ಆಯ್ಕೆ ಮಾಡಲಾಗಿದೆ” ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಭಾರತೀಯ ರೈಲ್ವೇ ಮತ್ತು ತೆಲಂಗಾಣ ಪೊಲೀಸ್‌ ಸೇರಿದಂತೆ ಕೇಂದ್ರ ಸರ್ಕಾರದ ಹಲವು ಇಲಾಖೆಗಳಲ್ಲಿ ರಿಲಯನ್ಸ್ ಜಿಯೋಗೆ ಪೋರ್ಟ್‌ ಆಗಲು ನಿರ್ದೇಶನ ನೀಡಲಾಗಿದೆ. ಒಟ್ಟಾರೆಯಾಗಿ ಸಾರ್ವಜನಿಕ ವಲಯದ ಪ್ರಮುಖ ಸಂಸ್ಥೆಯೊಂದು ಸರ್ಕಾರದ ನಿರ್ಲಕ್ಷ್ಯ ಮತ್ತು ಖಾಸಗಿಯವರ ಲಾಬಿಗೆ ಕೊನೆಯುಸಿರೆಳೆಯುವ ಸ್ಥಿತಿಗೆ ಬಂದು ತಲುಪಿದೆ.

ಇದನ್ನೂ ಓದಿ: BSNL ದುಸ್ಥಿತಿಗೆ ಕೇಂದ್ರ ಸರ್ಕಾರವೇ ಹೊಣೆ: ಹಾಗಾದರೆ ಯಾರು ದೇಶದ್ರೋಹಿಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...