Homeಚಳವಳಿಕೂಡಲೇ 4G, 5G ಸೇವೆ ನೀಡಿ, BSNL ಬದುಕಿಸಿ: ದೇಶಾದ್ಯಂತ ನೌಕರರ ಹೋರಾಟ

ಕೂಡಲೇ 4G, 5G ಸೇವೆ ನೀಡಿ, BSNL ಬದುಕಿಸಿ: ದೇಶಾದ್ಯಂತ ನೌಕರರ ಹೋರಾಟ

- Advertisement -
- Advertisement -

ಕೂಡಲೇ 4G, 5G ಸೇವೆ ನೀಡುವುದರ ಮೂಲಕ ಸಾರ್ವಜನಿಕ ಉದ್ಯಮವಾದ BSNL ಉಳಿಸಬೇಕು ಎಂದು ಒತ್ತಾಯಿಸಿ ಬಿಎಸ್‌ಎನ್‌ಎಲ್‌ ಅಧಿಕಾರಿಯೇತರ ಸಂಘಟನೆಗಳ ಜಂಟಿ ವೇದಿಕೆ ವತಿಯಿಂದ ಇಂದು ದೇಶಾದ್ಯಂತ ಮಾನವ ಸರಪಳಿ ಪ್ರತಿಭಟನೆ ನಡೆಯಿತು.

ಬೆಂಗಳೂರಿನ ಕಬ್ಬನ್ ಪಾರ್ಕ್ ಎದುರು ಭಿತ್ತಿಫಲಕ ಹಿಡಿದು ಬಿಎಸ್‌ಎನ್‌ಎಲ್‌ ನೌಕರರು ಪ್ರತಿಭಟನೆ ನಡೆಸಿದರು. ಬಿಎಸ್‌ಎನ್‌ಎಲ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಕೆ.ಗುಂಡಣ್ಣ ಮಾತನಾಡಿ, “ಖಾಸಗಿ ಟೆಲಿಕಾಂ ಸಂಸ್ಥೆಗಳು ಈಗಾಗಲೇ 5G ಸೇವೆ ನೀಡುತ್ತಿರುವ ಸಂದರ್ಭದಲ್ಲಿ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ಗೆ ಇನ್ನೂ 4G ಸೇವೆ ನೀಡಲು ಸಾಧ್ಯವಾಗಿಲ್ಲ. 4ಜಿ ಸೇವೆ ನೀಡಲು ಇನ್ನು 18 ತಿಂಗಳು ಬೇಕಾಗಬಹುದು ಎಂದು ಮಾಹಿತಿ ಸಿಕ್ಕಿದೆ. ಕೇವಲ 4ಜಿ ಸೇವೆ ನೀಡಲು ಒಂದೂವರೆ ವರ್ಷ ಬೇಕಾಗುತ್ತದೆ ಅಂದರೆ ಅಷ್ಟರಲ್ಲಿ ಬಿಎಸ್‌ಎನ್‌ಎಲ್ ಸಂಪೂರ್ಣ ನಿರ್ನಾಮವಾಗುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.

4G, 5G ಸೇವೆ ಇಲ್ಲದ ಏಕೈಕ ಕಾರಣಕ್ಕಾಗಿ ಪ್ರತಿ ತಿಂಗಳು ಲಕ್ಷಾಂತರ ಗ್ರಾಹಕರು ಬಿಎಸ್‌ಎನ್‌ಎಲ್ ತ್ಯಜಿಸುತ್ತಿದ್ದಾರೆ. ಹೀಗಾಗಿ ಬಿಎಸ್‌ಎನ್‌ಎಲ್ ಉಳಿಸಿಕೊಳ್ಳಲು ನಿರಂತರ ಹೋರಾಟಕ್ಕೆ ಮುಂದಾಗಿದ್ದೇವೆ. ಇದೇ ತಿಂಗಳ 16 ರಂದು ಪ್ರತಿ ರಾಜ್ಯಗಳ ರಾಜ್ಯಪಾಲರಿಗೆ ಮನವಿ ನೀಡುತ್ತೇವೆ. ಜುಲೈ 7 ರಂದು ನವದೆಹಲಿಯ ಸಂಚಾರ್ ಭವನ್ ಚಲೋ ಹೋರಾಟ ನಡೆಯಲಿದೆ ಎಂದರು.

4G, 5G ಸೇವೆ ಜೊತೆಗೆ ನಮ್ಮ ಹಳೆಯ ಬೇಡಿಕೆಗಳಾದ 2017ರ ಜನವರಿಯಿಂದ 3ನೇ ವೇತನ ಪರಿಷ್ಕರಣೆ ಆಗಬೇಕಿದೆ. ಮಾತುಕತೆಗಳು ಮುಗಿದರೂ ಬಿಎಸ್‌ಎನ್‌ಎಲ್ ಮ್ಯಾನೇಜ್‌ಮೆಂಟ್ ಕಡೆ ಕ್ಷಣದಲ್ಲಿ ವಂಚಿಸುತ್ತಿದೆ. ಇನ್ನು ಪಿಂಚಣಿ ಪರಿಷ್ಕರಣೆ ಕೂಡ ಆಗಬೇಕು. ಈ ಮೂರು ಹಕ್ಕೊತ್ತಾಯಗಳ ಈಡೇರಿಕೆಗೆ ಹೋರಾಟ ಮಾಡುತ್ತಿದ್ದೇವೆ ಎಂದರು.

ಬಿಎಸ್‌ಎನ್‌ಎಲ್‌ ಮುಳುಗುತ್ತಿರುವ ಹಡಗು

ಕರ್ನಾಟಕ ರಾಜ್ಯ ಪೊಲೀಸರು ತಾವು ಬಳಸುತ್ತಿರುವ ಸರ್ಕಾರಿ ಸ್ವಾಮ್ಯದ ಭಾರತ್‌ ಸಂಚಾರ ನಿಗಮ ಲಿಮಿಟೆಡ್‌ (ಬಿಎಸ್‌ಎನ್‌ಎಲ್‌)ನ ತಮ್ಮ ಎಲ್ಲಾ 38,000 ಅಧಿಕೃತ ಮೊಬೈಲ್ ಫೋನ್ ಸಿಮ್ ಕಾರ್ಡ್‌ಗಳನ್ನು ರಿಲಯನ್ಸ್ ಜಿಯೋಗೆ ಪೋರ್ಟ್ ಮಾಡಲು ಕಳೆದ ಫೆಬ್ರವರಿ ತಿಂಗಳಿನಲ್ಲಿಯೇ ನಿರ್ಧರಿಸಿದ್ದಾರೆ.

“ಪೊಲೀಸ್ ವ್ಯವಸ್ಥೆಯಂತಹ ತುರ್ತು ಸೇವೆಗೆ ನೆಟ್‌ವರ್ಕ್ ಉತ್ತಮವಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ. ಲಭ್ಯವಿರುವ ನೆಟ್‌ವರ್ಕ್‌ನ ದಕ್ಷತೆಯನ್ನು ಹೆಚ್ಚಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ. ಇದು ಸಂಪೂರ್ಣವಾಗಿ ವಾಣಿಜ್ಯಿಕ ನಿರ್ಧಾರವಾಗಿದೆ” ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

“ಖಾಸಗಿ ಸಂಸ್ಥೆಗಳು 5G ಸೇವೆಗಳನ್ನು ನೀಡುತ್ತಿದ್ದರೆ, ಬಿಎಸ್‌ಎನ್‌ಎಲ್‌ ಇನ್ನೂ 4G ಸೇವೆಗಳನ್ನೂ ನೀಡುತ್ತಿಲ್ಲ. ನಮ್ಮಂಥವರ ತುರ್ತು ಸೇವೆಗೆ ಇದು ತೊಂದರೆಯುಂಟುಮಾಡಿದೆ. ವಾಣಿಜ್ಯ ಮೌಲ್ಯಮಾಪನದ ನಂತರ, ‘ಕರ್ನಾಟಕ ಟ್ರಾನ್ಸ್‌ಪರೆನ್ಸಿ ಇನ್‌ ಪಬ್ಲಿಕ್‌ ಪ್ರೊಕ್ಯೂರ್‌ಮೆಂಟ್ ಆಕ್ಟ್‌’ 1999ರ ಪ್ರಕಾರ ರಿಲಯನ್ಸ್ ಜಿಯೋವನ್ನು ಪರ್ಯಾಯ ಸೇವಾ ಪೂರೈಕೆದಾರರಾಗಿ ಆಯ್ಕೆ ಮಾಡಲಾಗಿದೆ” ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಭಾರತೀಯ ರೈಲ್ವೇ ಮತ್ತು ತೆಲಂಗಾಣ ಪೊಲೀಸ್‌ ಸೇರಿದಂತೆ ಕೇಂದ್ರ ಸರ್ಕಾರದ ಹಲವು ಇಲಾಖೆಗಳಲ್ಲಿ ರಿಲಯನ್ಸ್ ಜಿಯೋಗೆ ಪೋರ್ಟ್‌ ಆಗಲು ನಿರ್ದೇಶನ ನೀಡಲಾಗಿದೆ. ಒಟ್ಟಾರೆಯಾಗಿ ಸಾರ್ವಜನಿಕ ವಲಯದ ಪ್ರಮುಖ ಸಂಸ್ಥೆಯೊಂದು ಸರ್ಕಾರದ ನಿರ್ಲಕ್ಷ್ಯ ಮತ್ತು ಖಾಸಗಿಯವರ ಲಾಬಿಗೆ ಕೊನೆಯುಸಿರೆಳೆಯುವ ಸ್ಥಿತಿಗೆ ಬಂದು ತಲುಪಿದೆ.

ಇದನ್ನೂ ಓದಿ: BSNL ದುಸ್ಥಿತಿಗೆ ಕೇಂದ್ರ ಸರ್ಕಾರವೇ ಹೊಣೆ: ಹಾಗಾದರೆ ಯಾರು ದೇಶದ್ರೋಹಿಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...