Homeಚಳವಳಿಕೂಡಲೇ 4G, 5G ಸೇವೆ ನೀಡಿ, BSNL ಬದುಕಿಸಿ: ದೇಶಾದ್ಯಂತ ನೌಕರರ ಹೋರಾಟ

ಕೂಡಲೇ 4G, 5G ಸೇವೆ ನೀಡಿ, BSNL ಬದುಕಿಸಿ: ದೇಶಾದ್ಯಂತ ನೌಕರರ ಹೋರಾಟ

- Advertisement -
- Advertisement -

ಕೂಡಲೇ 4G, 5G ಸೇವೆ ನೀಡುವುದರ ಮೂಲಕ ಸಾರ್ವಜನಿಕ ಉದ್ಯಮವಾದ BSNL ಉಳಿಸಬೇಕು ಎಂದು ಒತ್ತಾಯಿಸಿ ಬಿಎಸ್‌ಎನ್‌ಎಲ್‌ ಅಧಿಕಾರಿಯೇತರ ಸಂಘಟನೆಗಳ ಜಂಟಿ ವೇದಿಕೆ ವತಿಯಿಂದ ಇಂದು ದೇಶಾದ್ಯಂತ ಮಾನವ ಸರಪಳಿ ಪ್ರತಿಭಟನೆ ನಡೆಯಿತು.

ಬೆಂಗಳೂರಿನ ಕಬ್ಬನ್ ಪಾರ್ಕ್ ಎದುರು ಭಿತ್ತಿಫಲಕ ಹಿಡಿದು ಬಿಎಸ್‌ಎನ್‌ಎಲ್‌ ನೌಕರರು ಪ್ರತಿಭಟನೆ ನಡೆಸಿದರು. ಬಿಎಸ್‌ಎನ್‌ಎಲ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಕೆ.ಗುಂಡಣ್ಣ ಮಾತನಾಡಿ, “ಖಾಸಗಿ ಟೆಲಿಕಾಂ ಸಂಸ್ಥೆಗಳು ಈಗಾಗಲೇ 5G ಸೇವೆ ನೀಡುತ್ತಿರುವ ಸಂದರ್ಭದಲ್ಲಿ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ಗೆ ಇನ್ನೂ 4G ಸೇವೆ ನೀಡಲು ಸಾಧ್ಯವಾಗಿಲ್ಲ. 4ಜಿ ಸೇವೆ ನೀಡಲು ಇನ್ನು 18 ತಿಂಗಳು ಬೇಕಾಗಬಹುದು ಎಂದು ಮಾಹಿತಿ ಸಿಕ್ಕಿದೆ. ಕೇವಲ 4ಜಿ ಸೇವೆ ನೀಡಲು ಒಂದೂವರೆ ವರ್ಷ ಬೇಕಾಗುತ್ತದೆ ಅಂದರೆ ಅಷ್ಟರಲ್ಲಿ ಬಿಎಸ್‌ಎನ್‌ಎಲ್ ಸಂಪೂರ್ಣ ನಿರ್ನಾಮವಾಗುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.

4G, 5G ಸೇವೆ ಇಲ್ಲದ ಏಕೈಕ ಕಾರಣಕ್ಕಾಗಿ ಪ್ರತಿ ತಿಂಗಳು ಲಕ್ಷಾಂತರ ಗ್ರಾಹಕರು ಬಿಎಸ್‌ಎನ್‌ಎಲ್ ತ್ಯಜಿಸುತ್ತಿದ್ದಾರೆ. ಹೀಗಾಗಿ ಬಿಎಸ್‌ಎನ್‌ಎಲ್ ಉಳಿಸಿಕೊಳ್ಳಲು ನಿರಂತರ ಹೋರಾಟಕ್ಕೆ ಮುಂದಾಗಿದ್ದೇವೆ. ಇದೇ ತಿಂಗಳ 16 ರಂದು ಪ್ರತಿ ರಾಜ್ಯಗಳ ರಾಜ್ಯಪಾಲರಿಗೆ ಮನವಿ ನೀಡುತ್ತೇವೆ. ಜುಲೈ 7 ರಂದು ನವದೆಹಲಿಯ ಸಂಚಾರ್ ಭವನ್ ಚಲೋ ಹೋರಾಟ ನಡೆಯಲಿದೆ ಎಂದರು.

4G, 5G ಸೇವೆ ಜೊತೆಗೆ ನಮ್ಮ ಹಳೆಯ ಬೇಡಿಕೆಗಳಾದ 2017ರ ಜನವರಿಯಿಂದ 3ನೇ ವೇತನ ಪರಿಷ್ಕರಣೆ ಆಗಬೇಕಿದೆ. ಮಾತುಕತೆಗಳು ಮುಗಿದರೂ ಬಿಎಸ್‌ಎನ್‌ಎಲ್ ಮ್ಯಾನೇಜ್‌ಮೆಂಟ್ ಕಡೆ ಕ್ಷಣದಲ್ಲಿ ವಂಚಿಸುತ್ತಿದೆ. ಇನ್ನು ಪಿಂಚಣಿ ಪರಿಷ್ಕರಣೆ ಕೂಡ ಆಗಬೇಕು. ಈ ಮೂರು ಹಕ್ಕೊತ್ತಾಯಗಳ ಈಡೇರಿಕೆಗೆ ಹೋರಾಟ ಮಾಡುತ್ತಿದ್ದೇವೆ ಎಂದರು.

ಬಿಎಸ್‌ಎನ್‌ಎಲ್‌ ಮುಳುಗುತ್ತಿರುವ ಹಡಗು

ಕರ್ನಾಟಕ ರಾಜ್ಯ ಪೊಲೀಸರು ತಾವು ಬಳಸುತ್ತಿರುವ ಸರ್ಕಾರಿ ಸ್ವಾಮ್ಯದ ಭಾರತ್‌ ಸಂಚಾರ ನಿಗಮ ಲಿಮಿಟೆಡ್‌ (ಬಿಎಸ್‌ಎನ್‌ಎಲ್‌)ನ ತಮ್ಮ ಎಲ್ಲಾ 38,000 ಅಧಿಕೃತ ಮೊಬೈಲ್ ಫೋನ್ ಸಿಮ್ ಕಾರ್ಡ್‌ಗಳನ್ನು ರಿಲಯನ್ಸ್ ಜಿಯೋಗೆ ಪೋರ್ಟ್ ಮಾಡಲು ಕಳೆದ ಫೆಬ್ರವರಿ ತಿಂಗಳಿನಲ್ಲಿಯೇ ನಿರ್ಧರಿಸಿದ್ದಾರೆ.

“ಪೊಲೀಸ್ ವ್ಯವಸ್ಥೆಯಂತಹ ತುರ್ತು ಸೇವೆಗೆ ನೆಟ್‌ವರ್ಕ್ ಉತ್ತಮವಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ. ಲಭ್ಯವಿರುವ ನೆಟ್‌ವರ್ಕ್‌ನ ದಕ್ಷತೆಯನ್ನು ಹೆಚ್ಚಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ. ಇದು ಸಂಪೂರ್ಣವಾಗಿ ವಾಣಿಜ್ಯಿಕ ನಿರ್ಧಾರವಾಗಿದೆ” ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

“ಖಾಸಗಿ ಸಂಸ್ಥೆಗಳು 5G ಸೇವೆಗಳನ್ನು ನೀಡುತ್ತಿದ್ದರೆ, ಬಿಎಸ್‌ಎನ್‌ಎಲ್‌ ಇನ್ನೂ 4G ಸೇವೆಗಳನ್ನೂ ನೀಡುತ್ತಿಲ್ಲ. ನಮ್ಮಂಥವರ ತುರ್ತು ಸೇವೆಗೆ ಇದು ತೊಂದರೆಯುಂಟುಮಾಡಿದೆ. ವಾಣಿಜ್ಯ ಮೌಲ್ಯಮಾಪನದ ನಂತರ, ‘ಕರ್ನಾಟಕ ಟ್ರಾನ್ಸ್‌ಪರೆನ್ಸಿ ಇನ್‌ ಪಬ್ಲಿಕ್‌ ಪ್ರೊಕ್ಯೂರ್‌ಮೆಂಟ್ ಆಕ್ಟ್‌’ 1999ರ ಪ್ರಕಾರ ರಿಲಯನ್ಸ್ ಜಿಯೋವನ್ನು ಪರ್ಯಾಯ ಸೇವಾ ಪೂರೈಕೆದಾರರಾಗಿ ಆಯ್ಕೆ ಮಾಡಲಾಗಿದೆ” ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಭಾರತೀಯ ರೈಲ್ವೇ ಮತ್ತು ತೆಲಂಗಾಣ ಪೊಲೀಸ್‌ ಸೇರಿದಂತೆ ಕೇಂದ್ರ ಸರ್ಕಾರದ ಹಲವು ಇಲಾಖೆಗಳಲ್ಲಿ ರಿಲಯನ್ಸ್ ಜಿಯೋಗೆ ಪೋರ್ಟ್‌ ಆಗಲು ನಿರ್ದೇಶನ ನೀಡಲಾಗಿದೆ. ಒಟ್ಟಾರೆಯಾಗಿ ಸಾರ್ವಜನಿಕ ವಲಯದ ಪ್ರಮುಖ ಸಂಸ್ಥೆಯೊಂದು ಸರ್ಕಾರದ ನಿರ್ಲಕ್ಷ್ಯ ಮತ್ತು ಖಾಸಗಿಯವರ ಲಾಬಿಗೆ ಕೊನೆಯುಸಿರೆಳೆಯುವ ಸ್ಥಿತಿಗೆ ಬಂದು ತಲುಪಿದೆ.

ಇದನ್ನೂ ಓದಿ: BSNL ದುಸ್ಥಿತಿಗೆ ಕೇಂದ್ರ ಸರ್ಕಾರವೇ ಹೊಣೆ: ಹಾಗಾದರೆ ಯಾರು ದೇಶದ್ರೋಹಿಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...