Homeಮುಖಪುಟಹೆಚ್ಚು ಮಕ್ಕಳಿಗೆ ಜನ್ಮ ನೀಡಿ, ಪ್ರಧಾನಿ ಅವರಿಗಾಗಿ ಮನೆಗಳನ್ನು ನಿರ್ಮಿಸುತ್ತಾರೆ: ರಾಜಸ್ಥಾನ ಸಚಿವರ ವಿವಾದಾತ್ಮಕ ಹೇಳಿಕೆ

ಹೆಚ್ಚು ಮಕ್ಕಳಿಗೆ ಜನ್ಮ ನೀಡಿ, ಪ್ರಧಾನಿ ಅವರಿಗಾಗಿ ಮನೆಗಳನ್ನು ನಿರ್ಮಿಸುತ್ತಾರೆ: ರಾಜಸ್ಥಾನ ಸಚಿವರ ವಿವಾದಾತ್ಮಕ ಹೇಳಿಕೆ

- Advertisement -
- Advertisement -

‘ನೀವು ಸಾಕಷ್ಟು ಮಕ್ಕಳಿಗೆ ಜನ್ಮ ನೀಡುತ್ತಿರಿ, ಪ್ರಧಾನ ಮಂತ್ರಿಯವರು ನಿಮ್ಮ ಮನೆಗಳನ್ನು ನಿರ್ಮಿಸುತ್ತಾರೆ’ ಎಂದು ರಾಜಸ್ಥಾನದ ಸಚಿವ ಬಾಬುಲಾಲ್ ಖರಾಡಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬುಡಕಟ್ಟು ಪ್ರದೇಶ ಅಭಿವೃದ್ಧಿ ಸಚಿವರಾದ ಖಾರಾಡಿ ಮಾತನಾಡಿ, ‘ಯಾರೂ ಹಸಿವಿನಿಂದ ಮಲಗಬಾರದು ಮತ್ತು ತಲೆಯ ಮೇಲೆ ಸೂರು ಇಲ್ಲದೆ ಮಲಗಬಾರದು ಎಂಬುದು ಪ್ರಧಾನಿಯವರ ಕನಸು. ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲರಿಗೂ ಮನೆಗಳನ್ನು ನಿರ್ಮಿಸಿಕೊಡುವುದರಿಂದ ಯಾವುದೇ ತೊಂದರೆಯಾಗಬಾರದು’ ಎಂದು ಹೇಳಿದ ಅವರು, ಜನರಿಗೆ ಹೆಚ್ಚು ಮಕ್ಕಳನ್ನು ಹೊಂದುವಂತೆ ಒತ್ತಾಯಿಸಿದ್ದಾರೆ.

‘ತಲೆಯ ಮೇಲೆ ಸೂರು ಇಲ್ಲದೆ, ಯಾರೂ ಹಸಿವಿನಿಂದ ಮಲಗಬಾರದು ಎಂಬುದು ಪ್ರಧಾನಿಯವರ ಕನಸು. ನೀವು ಸಾಕಷ್ಟು ಮಕ್ಕಳಿಗೆ ಜನ್ಮ ನೀಡುತ್ತೀರಿ. ಪ್ರಧಾನ ಮಂತ್ರಿಯವರು ನಿಮ್ಮ ಮನೆಗಳನ್ನು ನಿರ್ಮಿಸುತ್ತಾರೆ, ಆಗ ಸಮಸ್ಯೆ ಏನು’ ಎಂದು ಮಂಗಳವಾರ ಉದಯಪುರದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದಾರೆ.

ಖಾರಾಡಿ ಅವರಿಗೆ ಎಂಟು ಮಕ್ಕಳಿದ್ದು, ನಾಲ್ಕು ಗಂಡು ಮತ್ತು ನಾಲ್ಕು ಹೆಣ್ಣು ಮಕ್ಕಳಿದ್ದಾರೆ. ಇಬ್ಬರು ಪತ್ನಿಯರಿರುವ ಇಡೀ ಕುಟುಂಬವು ಉದಯಪುರದ ಕೋಟ್ಡಾ ತಹಸಿಲ್‌ನಿಂದ ಸುಮಾರು ಮೂರು ಕಿಲೋಮೀಟರ್ ದೂರದಲ್ಲಿರುವ ನೀಚಲಾ ತಾಲಾ ಗ್ರಾಮದಲ್ಲಿ ವಾಸಿಸುತ್ತಿದೆ.

ಸಚಿವರು ಹೇಳಿಕೆ ನೀಡುವಾಗ, ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರು ವೇದಿಕೆ ಮೇಲಿದ್ದರು ಉದಯಪುರದ ನೈ ಗ್ರಾಮದಲ್ಲಿ ‘ವಿಕಸಿತ್ ಭಾರತ್ ಸಂಕಲ್ಪ ಯಾತ್ರಾ ಶಿಬಿರ’ದಲ್ಲಿ ಈ ಹೇಳಿಕೆ ನೀಡಿದ್ದಾರೆ.
ಖಾರಾಡಿ ಹೇಳಿಕೆ ನೀಡುತ್ತಿದ್ದಂತೆಯೇ ಸಭಿಕರು ನಗೆಗಡಲಲ್ಲಿ ತೇಲಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜನಪ್ರತಿನಿಧಿಗಳು ಪರಸ್ಪರ ಮುಖ ನೋಡಿಕೊಂಡಿದ್ದು ಕಂಡುಬಂತು.

ಬಿಜೆಪಿ ನೇತೃತ್ವದ ಕೇಂದ್ರವು ವಿವಿಧ ಸಾರ್ವಜನಿಕ ಕಲ್ಯಾಣ ಕ್ರಮಗಳನ್ನು ಪ್ರಾರಂಭಿಸುತ್ತಿದೆ ಎಂದು ಹೇಳಿದ ಖಾರಾಡಿ ಅವರು, 2024ರ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಪ್ರಧಾನಿ ಮೋದಿಗೆ ಮತ ನೀಡುವಂತೆ ಜನರನ್ನು ಒತ್ತಾಯಿಸಿದರು. ಕೇಂದ್ರವು ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ₹200 ಕಡಿತಗೊಳಿಸಿದೆ. ರಾಜಸ್ಥಾನದ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರವು ಈಗ ಉಜ್ವಲ ಯೋಜನೆಯಡಿ ಜನರಿಗೆ ₹450 ಕ್ಕೆ ಸಿಲಿಂಡರ್‌ಗಳನ್ನು ಲಭ್ಯವಾಗುವಂತೆ ಮಾಡುತ್ತಿದೆ’ ಎಂದು ಅವರು ಹೇಳಿದರು.

‘2023ರ ವಿಧಾನಸಭಾ ಚುನಾವಣೆಯಲ್ಲಿ ಝಾಡೋಲ್‌ನಿಂದ ಖಾರಾಡಿ ನಾಲ್ಕನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು. 15ನೇ ರಾಜಸ್ಥಾನ ಅಸೆಂಬ್ಲಿಯಲ್ಲಿ 2022ರಲ್ಲಿ ಅತ್ಯುತ್ತಮ ಶಾಸಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಖಾರಾಡಿ ಅವರು ಇತ್ತೀಚೆಗೆ ರಾಜ್ಯದಲ್ಲಿ ಕ್ಯಾಬಿನೆಟ್ ಸಚಿವರಾಗಿ ಸೇರ್ಪಡೆಗೊಂಡಿದ್ದಾರೆ.

ಇದನ್ನೂ ಓದಿ; ಬಿಜೆಪಿ ಮುಖಂಡನ ಸೆಕ್ಸ್ ಟೇಪ್ ಸುದ್ದಿ ಪ್ರಸಾರ: ‘ಲೋಕಶಾಹಿ’ ಮರಾಠಿ ಚಾನೆಲ್‌ ಲೈಸೆನ್ಸ್ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...