Homeಮುಖಪುಟಹೆಚ್ಚು ಮಕ್ಕಳಿಗೆ ಜನ್ಮ ನೀಡಿ, ಪ್ರಧಾನಿ ಅವರಿಗಾಗಿ ಮನೆಗಳನ್ನು ನಿರ್ಮಿಸುತ್ತಾರೆ: ರಾಜಸ್ಥಾನ ಸಚಿವರ ವಿವಾದಾತ್ಮಕ ಹೇಳಿಕೆ

ಹೆಚ್ಚು ಮಕ್ಕಳಿಗೆ ಜನ್ಮ ನೀಡಿ, ಪ್ರಧಾನಿ ಅವರಿಗಾಗಿ ಮನೆಗಳನ್ನು ನಿರ್ಮಿಸುತ್ತಾರೆ: ರಾಜಸ್ಥಾನ ಸಚಿವರ ವಿವಾದಾತ್ಮಕ ಹೇಳಿಕೆ

- Advertisement -
- Advertisement -

‘ನೀವು ಸಾಕಷ್ಟು ಮಕ್ಕಳಿಗೆ ಜನ್ಮ ನೀಡುತ್ತಿರಿ, ಪ್ರಧಾನ ಮಂತ್ರಿಯವರು ನಿಮ್ಮ ಮನೆಗಳನ್ನು ನಿರ್ಮಿಸುತ್ತಾರೆ’ ಎಂದು ರಾಜಸ್ಥಾನದ ಸಚಿವ ಬಾಬುಲಾಲ್ ಖರಾಡಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬುಡಕಟ್ಟು ಪ್ರದೇಶ ಅಭಿವೃದ್ಧಿ ಸಚಿವರಾದ ಖಾರಾಡಿ ಮಾತನಾಡಿ, ‘ಯಾರೂ ಹಸಿವಿನಿಂದ ಮಲಗಬಾರದು ಮತ್ತು ತಲೆಯ ಮೇಲೆ ಸೂರು ಇಲ್ಲದೆ ಮಲಗಬಾರದು ಎಂಬುದು ಪ್ರಧಾನಿಯವರ ಕನಸು. ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲರಿಗೂ ಮನೆಗಳನ್ನು ನಿರ್ಮಿಸಿಕೊಡುವುದರಿಂದ ಯಾವುದೇ ತೊಂದರೆಯಾಗಬಾರದು’ ಎಂದು ಹೇಳಿದ ಅವರು, ಜನರಿಗೆ ಹೆಚ್ಚು ಮಕ್ಕಳನ್ನು ಹೊಂದುವಂತೆ ಒತ್ತಾಯಿಸಿದ್ದಾರೆ.

‘ತಲೆಯ ಮೇಲೆ ಸೂರು ಇಲ್ಲದೆ, ಯಾರೂ ಹಸಿವಿನಿಂದ ಮಲಗಬಾರದು ಎಂಬುದು ಪ್ರಧಾನಿಯವರ ಕನಸು. ನೀವು ಸಾಕಷ್ಟು ಮಕ್ಕಳಿಗೆ ಜನ್ಮ ನೀಡುತ್ತೀರಿ. ಪ್ರಧಾನ ಮಂತ್ರಿಯವರು ನಿಮ್ಮ ಮನೆಗಳನ್ನು ನಿರ್ಮಿಸುತ್ತಾರೆ, ಆಗ ಸಮಸ್ಯೆ ಏನು’ ಎಂದು ಮಂಗಳವಾರ ಉದಯಪುರದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದಾರೆ.

ಖಾರಾಡಿ ಅವರಿಗೆ ಎಂಟು ಮಕ್ಕಳಿದ್ದು, ನಾಲ್ಕು ಗಂಡು ಮತ್ತು ನಾಲ್ಕು ಹೆಣ್ಣು ಮಕ್ಕಳಿದ್ದಾರೆ. ಇಬ್ಬರು ಪತ್ನಿಯರಿರುವ ಇಡೀ ಕುಟುಂಬವು ಉದಯಪುರದ ಕೋಟ್ಡಾ ತಹಸಿಲ್‌ನಿಂದ ಸುಮಾರು ಮೂರು ಕಿಲೋಮೀಟರ್ ದೂರದಲ್ಲಿರುವ ನೀಚಲಾ ತಾಲಾ ಗ್ರಾಮದಲ್ಲಿ ವಾಸಿಸುತ್ತಿದೆ.

ಸಚಿವರು ಹೇಳಿಕೆ ನೀಡುವಾಗ, ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರು ವೇದಿಕೆ ಮೇಲಿದ್ದರು ಉದಯಪುರದ ನೈ ಗ್ರಾಮದಲ್ಲಿ ‘ವಿಕಸಿತ್ ಭಾರತ್ ಸಂಕಲ್ಪ ಯಾತ್ರಾ ಶಿಬಿರ’ದಲ್ಲಿ ಈ ಹೇಳಿಕೆ ನೀಡಿದ್ದಾರೆ.
ಖಾರಾಡಿ ಹೇಳಿಕೆ ನೀಡುತ್ತಿದ್ದಂತೆಯೇ ಸಭಿಕರು ನಗೆಗಡಲಲ್ಲಿ ತೇಲಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜನಪ್ರತಿನಿಧಿಗಳು ಪರಸ್ಪರ ಮುಖ ನೋಡಿಕೊಂಡಿದ್ದು ಕಂಡುಬಂತು.

ಬಿಜೆಪಿ ನೇತೃತ್ವದ ಕೇಂದ್ರವು ವಿವಿಧ ಸಾರ್ವಜನಿಕ ಕಲ್ಯಾಣ ಕ್ರಮಗಳನ್ನು ಪ್ರಾರಂಭಿಸುತ್ತಿದೆ ಎಂದು ಹೇಳಿದ ಖಾರಾಡಿ ಅವರು, 2024ರ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಪ್ರಧಾನಿ ಮೋದಿಗೆ ಮತ ನೀಡುವಂತೆ ಜನರನ್ನು ಒತ್ತಾಯಿಸಿದರು. ಕೇಂದ್ರವು ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ₹200 ಕಡಿತಗೊಳಿಸಿದೆ. ರಾಜಸ್ಥಾನದ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರವು ಈಗ ಉಜ್ವಲ ಯೋಜನೆಯಡಿ ಜನರಿಗೆ ₹450 ಕ್ಕೆ ಸಿಲಿಂಡರ್‌ಗಳನ್ನು ಲಭ್ಯವಾಗುವಂತೆ ಮಾಡುತ್ತಿದೆ’ ಎಂದು ಅವರು ಹೇಳಿದರು.

‘2023ರ ವಿಧಾನಸಭಾ ಚುನಾವಣೆಯಲ್ಲಿ ಝಾಡೋಲ್‌ನಿಂದ ಖಾರಾಡಿ ನಾಲ್ಕನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು. 15ನೇ ರಾಜಸ್ಥಾನ ಅಸೆಂಬ್ಲಿಯಲ್ಲಿ 2022ರಲ್ಲಿ ಅತ್ಯುತ್ತಮ ಶಾಸಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಖಾರಾಡಿ ಅವರು ಇತ್ತೀಚೆಗೆ ರಾಜ್ಯದಲ್ಲಿ ಕ್ಯಾಬಿನೆಟ್ ಸಚಿವರಾಗಿ ಸೇರ್ಪಡೆಗೊಂಡಿದ್ದಾರೆ.

ಇದನ್ನೂ ಓದಿ; ಬಿಜೆಪಿ ಮುಖಂಡನ ಸೆಕ್ಸ್ ಟೇಪ್ ಸುದ್ದಿ ಪ್ರಸಾರ: ‘ಲೋಕಶಾಹಿ’ ಮರಾಠಿ ಚಾನೆಲ್‌ ಲೈಸೆನ್ಸ್ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...