Homeಮುಖಪುಟಹೆಚ್ಚು ಮಕ್ಕಳಿಗೆ ಜನ್ಮ ನೀಡಿ, ಪ್ರಧಾನಿ ಅವರಿಗಾಗಿ ಮನೆಗಳನ್ನು ನಿರ್ಮಿಸುತ್ತಾರೆ: ರಾಜಸ್ಥಾನ ಸಚಿವರ ವಿವಾದಾತ್ಮಕ ಹೇಳಿಕೆ

ಹೆಚ್ಚು ಮಕ್ಕಳಿಗೆ ಜನ್ಮ ನೀಡಿ, ಪ್ರಧಾನಿ ಅವರಿಗಾಗಿ ಮನೆಗಳನ್ನು ನಿರ್ಮಿಸುತ್ತಾರೆ: ರಾಜಸ್ಥಾನ ಸಚಿವರ ವಿವಾದಾತ್ಮಕ ಹೇಳಿಕೆ

- Advertisement -
- Advertisement -

‘ನೀವು ಸಾಕಷ್ಟು ಮಕ್ಕಳಿಗೆ ಜನ್ಮ ನೀಡುತ್ತಿರಿ, ಪ್ರಧಾನ ಮಂತ್ರಿಯವರು ನಿಮ್ಮ ಮನೆಗಳನ್ನು ನಿರ್ಮಿಸುತ್ತಾರೆ’ ಎಂದು ರಾಜಸ್ಥಾನದ ಸಚಿವ ಬಾಬುಲಾಲ್ ಖರಾಡಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬುಡಕಟ್ಟು ಪ್ರದೇಶ ಅಭಿವೃದ್ಧಿ ಸಚಿವರಾದ ಖಾರಾಡಿ ಮಾತನಾಡಿ, ‘ಯಾರೂ ಹಸಿವಿನಿಂದ ಮಲಗಬಾರದು ಮತ್ತು ತಲೆಯ ಮೇಲೆ ಸೂರು ಇಲ್ಲದೆ ಮಲಗಬಾರದು ಎಂಬುದು ಪ್ರಧಾನಿಯವರ ಕನಸು. ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲರಿಗೂ ಮನೆಗಳನ್ನು ನಿರ್ಮಿಸಿಕೊಡುವುದರಿಂದ ಯಾವುದೇ ತೊಂದರೆಯಾಗಬಾರದು’ ಎಂದು ಹೇಳಿದ ಅವರು, ಜನರಿಗೆ ಹೆಚ್ಚು ಮಕ್ಕಳನ್ನು ಹೊಂದುವಂತೆ ಒತ್ತಾಯಿಸಿದ್ದಾರೆ.

‘ತಲೆಯ ಮೇಲೆ ಸೂರು ಇಲ್ಲದೆ, ಯಾರೂ ಹಸಿವಿನಿಂದ ಮಲಗಬಾರದು ಎಂಬುದು ಪ್ರಧಾನಿಯವರ ಕನಸು. ನೀವು ಸಾಕಷ್ಟು ಮಕ್ಕಳಿಗೆ ಜನ್ಮ ನೀಡುತ್ತೀರಿ. ಪ್ರಧಾನ ಮಂತ್ರಿಯವರು ನಿಮ್ಮ ಮನೆಗಳನ್ನು ನಿರ್ಮಿಸುತ್ತಾರೆ, ಆಗ ಸಮಸ್ಯೆ ಏನು’ ಎಂದು ಮಂಗಳವಾರ ಉದಯಪುರದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದಾರೆ.

ಖಾರಾಡಿ ಅವರಿಗೆ ಎಂಟು ಮಕ್ಕಳಿದ್ದು, ನಾಲ್ಕು ಗಂಡು ಮತ್ತು ನಾಲ್ಕು ಹೆಣ್ಣು ಮಕ್ಕಳಿದ್ದಾರೆ. ಇಬ್ಬರು ಪತ್ನಿಯರಿರುವ ಇಡೀ ಕುಟುಂಬವು ಉದಯಪುರದ ಕೋಟ್ಡಾ ತಹಸಿಲ್‌ನಿಂದ ಸುಮಾರು ಮೂರು ಕಿಲೋಮೀಟರ್ ದೂರದಲ್ಲಿರುವ ನೀಚಲಾ ತಾಲಾ ಗ್ರಾಮದಲ್ಲಿ ವಾಸಿಸುತ್ತಿದೆ.

ಸಚಿವರು ಹೇಳಿಕೆ ನೀಡುವಾಗ, ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರು ವೇದಿಕೆ ಮೇಲಿದ್ದರು ಉದಯಪುರದ ನೈ ಗ್ರಾಮದಲ್ಲಿ ‘ವಿಕಸಿತ್ ಭಾರತ್ ಸಂಕಲ್ಪ ಯಾತ್ರಾ ಶಿಬಿರ’ದಲ್ಲಿ ಈ ಹೇಳಿಕೆ ನೀಡಿದ್ದಾರೆ.
ಖಾರಾಡಿ ಹೇಳಿಕೆ ನೀಡುತ್ತಿದ್ದಂತೆಯೇ ಸಭಿಕರು ನಗೆಗಡಲಲ್ಲಿ ತೇಲಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜನಪ್ರತಿನಿಧಿಗಳು ಪರಸ್ಪರ ಮುಖ ನೋಡಿಕೊಂಡಿದ್ದು ಕಂಡುಬಂತು.

ಬಿಜೆಪಿ ನೇತೃತ್ವದ ಕೇಂದ್ರವು ವಿವಿಧ ಸಾರ್ವಜನಿಕ ಕಲ್ಯಾಣ ಕ್ರಮಗಳನ್ನು ಪ್ರಾರಂಭಿಸುತ್ತಿದೆ ಎಂದು ಹೇಳಿದ ಖಾರಾಡಿ ಅವರು, 2024ರ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಪ್ರಧಾನಿ ಮೋದಿಗೆ ಮತ ನೀಡುವಂತೆ ಜನರನ್ನು ಒತ್ತಾಯಿಸಿದರು. ಕೇಂದ್ರವು ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ₹200 ಕಡಿತಗೊಳಿಸಿದೆ. ರಾಜಸ್ಥಾನದ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರವು ಈಗ ಉಜ್ವಲ ಯೋಜನೆಯಡಿ ಜನರಿಗೆ ₹450 ಕ್ಕೆ ಸಿಲಿಂಡರ್‌ಗಳನ್ನು ಲಭ್ಯವಾಗುವಂತೆ ಮಾಡುತ್ತಿದೆ’ ಎಂದು ಅವರು ಹೇಳಿದರು.

‘2023ರ ವಿಧಾನಸಭಾ ಚುನಾವಣೆಯಲ್ಲಿ ಝಾಡೋಲ್‌ನಿಂದ ಖಾರಾಡಿ ನಾಲ್ಕನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು. 15ನೇ ರಾಜಸ್ಥಾನ ಅಸೆಂಬ್ಲಿಯಲ್ಲಿ 2022ರಲ್ಲಿ ಅತ್ಯುತ್ತಮ ಶಾಸಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಖಾರಾಡಿ ಅವರು ಇತ್ತೀಚೆಗೆ ರಾಜ್ಯದಲ್ಲಿ ಕ್ಯಾಬಿನೆಟ್ ಸಚಿವರಾಗಿ ಸೇರ್ಪಡೆಗೊಂಡಿದ್ದಾರೆ.

ಇದನ್ನೂ ಓದಿ; ಬಿಜೆಪಿ ಮುಖಂಡನ ಸೆಕ್ಸ್ ಟೇಪ್ ಸುದ್ದಿ ಪ್ರಸಾರ: ‘ಲೋಕಶಾಹಿ’ ಮರಾಠಿ ಚಾನೆಲ್‌ ಲೈಸೆನ್ಸ್ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...