Homeಮುಖಪುಟಪ್ಯಾಕೇಜ್ ಹಣವನ್ನು ಲಾಕ್‌ಡೌನ್‌ನಿಂದ ಬಳಲುವ ಜನರ ಖಾತೆಗೆ ಹಾಕಿ: ರಾಹುಲ್ ಗಾಂಧಿ

ಪ್ಯಾಕೇಜ್ ಹಣವನ್ನು ಲಾಕ್‌ಡೌನ್‌ನಿಂದ ಬಳಲುವ ಜನರ ಖಾತೆಗೆ ಹಾಕಿ: ರಾಹುಲ್ ಗಾಂಧಿ

ಕಳೆದ ವರ್ಷ ಸಾರ್ವತ್ರಿಕ ಚುನಾವಣೆಗಳಲ್ಲಿ ತಮ್ಮ ಪಕ್ಷವು ಪ್ರಸ್ತಾಪಿಸಿದ ನ್ಯಾಯ್ ಯೋಜನೆಯನ್ನು ಪ್ರಸ್ತಾಪಿಸಿದ ರಾಹುಲ್ ಗಾಂಧಿ ಅದೇ ರೀತಿಯ ಯೋಜನೆಯನ್ನು ತರಲು ಸರ್ಕಾರವನ್ನು ಒತ್ತಾಯಿಸಿದ್ದಾರೆ.

- Advertisement -
- Advertisement -

ಕೊರೊನಾ ಲಾಕ್‌ಡೌನ್ ನಿಂದಾಗಿ ಪೀಡಿತವಾಗಿದ್ದ ಆರ್ಥಿಕತೆಯನ್ನು ಮೇಲೆತ್ತಲು ಘೋಷಿಸಿದ 20 ಲಕ್ಷ ಕೋಟಿ ರೂ.ಗಳ ಪ್ಯಾಕೇಜ್ ಅನ್ನು ಮರುಪರಿಶೀಲಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಅದನ್ನು ಕೊರೊನಾ ಹಾಗೂ ಲಾಕ್‌ಡೌನ್‌ ಕೆಟ್ಟ ಪರಿಣಾಮದಿಂದ ಬಳಲುತ್ತಿರುವ ಜನರ ಬ್ಯಾಂಕ್ ಖಾತೆಗಳಿಗೆ ಹಣವನ್ನು ಹಾಕದಿದ್ದರೆ “ಘೋರವಾದ ಸಮಸ್ಯೆ” ಉಂಟಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಜೂಮ್ ವಿಡಿಯೋ ಕರೆಯ ಮೂಲಕ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ಸಾಲಗಳ ಪ್ಯಾಕೇಜ್” ಎಂದು ಅವರು ಹೇಳಿದ್ದ ಘೋಷಣೆಯೂ ರೈತರು ಮತ್ತು ವಲಸಿಗರಿಗೆ ತಕ್ಷಣದ ನೆರವು ನೀಡುವುದಿಲ್ಲ ಎಂದು ಹೇಳಿದ್ದಾರೆ.

“ನಮ್ಮ ಜನರಿಗೆ ಹಣ ಬೇಕು. ಪ್ರಧಾನಿ ಈ ಪ್ಯಾಕೇಜ್ ಅನ್ನು ಮರುಪರಿಶೀಲಿಸಿ, ನೇರ ನಗದು ವರ್ಗಾವಣೆಯ ಬಗ್ಗೆ ಯೋಚಿಸಬೇಕು. ನರೇಗಾ ಅಡಿಯಲ್ಲಿ 200 ಕೆಲಸದ ದಿನಗಳು, ರೈತರಿಗೆ ಹಣ ನೀಡಬೇಕು. ಯಾಕೆಂದರೆ ಅವರು ಭಾರತದ ಭವಿಷ್ಯ” ಎಂದು ರಾಹುಲ್ ಗಾಂಧಿ ಹೇಳಿದರು.

ಕಳೆದ ವರ್ಷ ಸಾರ್ವತ್ರಿಕ ಚುನಾವಣೆಗಳಲ್ಲಿ ಪ್ರಚಾರ ಮಾಡುವಾಗ ತಮ್ಮ ಪಕ್ಷವು ಪ್ರಣಾಳಿಕೆಯಲ್ಲಿ ಸೇರಿಸಿದ್ದ ನ್ಯಾಯ್ ಯೋಜನೆಯನ್ನು ಪ್ರಸ್ತಾಪಿಸಿದ ರಾಹುಲ್ ಗಾಂಧಿ ಅದೇ ರೀತಿಯ ಯೋಜನೆಯನ್ನು ತರಲು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನ್ಯಾಯ್ ಯೋಜನೆಯೂ ಸಮಾಜದ ಬಡ ವರ್ಗಗಳಿಗೆ ವಾರ್ಷಿಕ 72,000 ರೂ. ಆದಾಯದ ಬೆಂಬಲವನ್ನು ನೀಡುವುದಾಗಿ ಹೇಳುತ್ತದೆ.

“ಬೀದಿಯಲ್ಲಿ ನಡೆಯುವ ವಲಸೆ ಕಾರ್ಮಿಕನಿಗೆ ಹಣ ಬೇಕು, ಸಾಲವಲ್ಲ. ಬಳಲುತ್ತಿರುವ ರೈತನಿಗೆ ಹಣ ಬೇಕು, ಸಾಲವಲ್ಲ. ಇದನ್ನು ಮಾಡದಿದ್ದರೆ ಘೋರವಾದ ಸಮಸ್ಯೆಯಾಗುತ್ತದೆ” ಎಂದು ರಾಹುಲ್ ಗಾಂಧಿ ಹೇಳಿದರು.

ಈ ತಿಂಗಳ ಆರಂಭದಲ್ಲಿ ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ರಾಹುಲ್ ಗಾಂಧಿ ಅವರೊಂದಿಗಿನ ಚರ್ಚೆಯಲ್ಲಿ ಈ ವಿಷಯವನ್ನು ತಿಳಿಸಿದ್ದರು. “ಜನಸಂಖ್ಯೆಯ ಶೇಕಡಾ 60 ರಷ್ಟು ಜನರಿಗೆ ನಾವು  ಸ್ವಲ್ಪ ಹಣವನ್ನು ನೀಡಿದರೆ, ಕೆಟ್ಟದ್ದೇನೂ ಆಗುವುದಿಲ್ಲ, ಇದೇ ರೀತಿಯ ಅಭ್ಯಾಸವನ್ನು ಅಮೆರಿಕಾ ಕೂಡಾ ಅನುಸರಿಸುತ್ತಿದೆ” ಎಂದು ಹೇಳಿದ್ದರು.

ಭಾರತದಲ್ಲಿ ಇದುವರೆಗೂ ಸುಮಾರು 86,000 ಕೊರೊನಾ ಪ್ರಕರಣಗಳನ್ನು ವರದಿಯಾಗಿವೆ. ಅದಲ್ಲದೆ ಸೋಂಕಿನಿಂದ 2,700 ಕ್ಕೂ ಹೆಚ್ಚು ಸಾವುಗಳು ಸಂಭವಿಸಿದೆ. ಇಷ್ಟೇ ಅಲ್ಲದೆ ಕೊರೊನಾ ಹರಡುವಿಕೆಯನ್ನು ತಡೆಯಲು ದೇಶಾದ್ಯಂತ ಘೋಷಿಸಿದ್ದ ಲಾಕ್‌ಡೌನ್ ನಿಂದಾಗಿ ಲಕ್ಷಾಂತರ ಜನರ ದುಡಿಮೆಯ ಮೇಲೆ ಕೆಟ್ಟ ಪರಿಣಾಮ ಬೀರಿದೆ, ಅದರಲ್ಲೂ ವಲಸೆ ಕಾರ್ಮಿಕರು ಮತ್ತು ದಿನಗೂಲಿ ಕಾರ್ಮಿಕರು ಹೆಚ್ಚು ಹಾನಿಗೊಳಗಾಗಿದ್ದಾರೆ.


ಓದಿ: ಗಾಯಗೊಂಡ ಬಾಲಕನನ್ನು ಸ್ಟ್ರೆಚರ್‌ನಲ್ಲಿ ಹೊತ್ತುಕೊಂಡು 1300 ಕಿ.ಮಿ. ಹೊರಟ ವಲಸೆ ಕಾರ್ಮಿಕರು


ಸದ್ದು…ಈ ಸುದ್ದಿಯೇನಾಗಿದೆ ? ವಿಶೇಷ ಕಾರ್ಯಕ್ರಮದ ಸರಣಿ ಸಂಚಿಕೆಗಾಗಿ ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...

ಜ್ಯೋತಿಷಿ ಅಶೋಕ್ ಖರತ್ ಲೈಂಗಿಕ ದೌರ್ಜನ್ಯ; ಸಂತ್ರಸ್ತರ ವಿಡಿಯೋ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ದೇವೇಂದ್ರ ಫಡ್ನವೀಸ್

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಕ್ಷಿಪಣಿಗಳ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಧನ್ಯವಾದ ಸಂದೇಶ ಬರೆದ ಇರಾನ್

ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ವಿರುದ್ಧದ ಯುದ್ಧದ ಮಧ್ಯೆ ಇರಾನ್‌ನೊಂದಿಗೆ ಒಗ್ಗಟ್ಟನ್ನು ತೋರಿಸಿದ ರಾಷ್ಟ್ರಗಳಿಗೆ ಇರಾನ್‌ ತನ್ನ ಕ್ಷಿಪಣಿಗಳು ಕೃತಜ್ಞತಾ ಸಂದೇಶ ಬರೆದಿದೆ. ಕ್ಷಿಪಣಿಗಳ ಮೇಲೆ ಬರೆಯಲಾದ ಸಂದೇಶಗಲ್ಲಿ "ಭಾರತದ ಜನರಿಗೆ ಧನ್ಯವಾದಗಳು" ಎಂದು ಕಂಡುಬಂದಿದೆ. ಜೊತೆಗೆ,...

ಬಿಜೆಪಿಗೆ ಉಳಿದೆಲ್ಲಾ ಪಕ್ಷಗಳಿಗಿಂತ 10 ಪಟ್ಟು ಹೆಚ್ಚು ದೇಣಿಗೆ: ವರದಿ

2024–25ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ( ಬಿಜೆಪಿ ) ಇತರ ಎಲ್ಲಾ ರಾಷ್ಟ್ರೀಯ ಪಕ್ಷಗಳು ಒಟ್ಟು ಸೇರಿಸಿ ಪಡೆದ ದೇಣಿಗೆಗಿಂತ ಸುಮಾರು ಹತ್ತು ಪಟ್ಟು ಹೆಚ್ಚು ದೇಣಿಗೆ ಪಡೆದಿದೆ...

ವಿಶಾಖಪಟ್ಟಣ| ಕುಡಿದ ಮತ್ತಿನಲ್ಲಿ ಎಪಿಎಸ್‌ಆರ್‌ಟಿಸಿ ಬಸ್‌ ಅಪಹರಿಸಿದ ವ್ಯಕ್ತಿ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಎಪಿಎಸ್‌ಆರ್‌ಟಿಸಿ ಬಸ್ಸನ್ನು ಅಪಹರಿಸಿ ಸುಮಾರು ಒಂದು ಕಿಲೋಮೀಟರ್ ಅಜಾಗರೂಕತೆಯಿಂದ ಚಲಾಯಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆಘಾತಕಾರಿ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಪ್ರತ್ಯಕ್ಷ್ಯದರ್ಶಿಗಳ ಪ್ರಕಾರ, ಮಾರ್ಚ್ 26 ರ ಗುರುವಾರ ಬಸ್...

ಕರ್ನಾಟಕ ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್ ವಿವಾದ; ಶಾಸಕರನ್ನು ಟೀಕಿಸಿದ ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವಾಗ್ದಾಳಿ

ಶಾಸಕರಿಗೆ ಐಪಿಎಲ್ 2026 ಟಿಕೆಟ್ ಹಂಚಿಕೆ ವಿವಾದದ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿದ್ದಾರೆ  ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ವಿಐಪಿ ಟಿಕೆಟ್‌ಗಳಿಗೆ...

ವಿಚಾರಣೆಯ ನಂತರವೂ 8 ಲಕ್ಷ ಮತದಾರರ ಹೆಸರು ಅಳಿಸಲಾಗಿದೆ; ಬಂಗಾಳದಲ್ಲಿ ಎನ್.ಆರ್.ಸಿ ಇಲ್ಲ: ಮಮತಾ ಬ್ಯಾನರ್ಜಿ

ಮೊದಲ ಪೂರಕ ಮತದಾರರ ಪಟ್ಟಿ ಪ್ರಕಟವಾದ ನಂತರ ಎಂಟು ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ರಾಜ್ಯದಲ್ಲಿ ಚುನಾವಣಾ ಪಾರದರ್ಶಕತೆಯ ಬಗ್ಗೆ ಗಂಭೀರ...

ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಜಾಗತಿಕ ತೈಲ ಬೆಲೆಗಳ ಏರಿಕೆಯ ಪರಿಣಾಮವನ್ನು ತಗ್ಗಿಸುವ ಪ್ರಯತ್ನದಲ್ಲಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 10 ರೂ.ಗಳಷ್ಟು ಕಡಿಮೆ ಮಾಡಿದೆ, ಇದರಿಂದಾಗಿ ಪೆಟ್ರೋಲ್‌ಗೆ 3 ರೂ.ಗಳಷ್ಟು...