Homeಕರ್ನಾಟಕಮೋದಿಯವರೆ ಬಾಯಿ ಬಡಾಯಿ ಬಿಟ್ಟಾಕಿ ಉಚಿತ ಲಸಿಕೆ ನೀಡಿ: ಸಿದ್ದರಾಮಯ್ಯ

ಮೋದಿಯವರೆ ಬಾಯಿ ಬಡಾಯಿ ಬಿಟ್ಟಾಕಿ ಉಚಿತ ಲಸಿಕೆ ನೀಡಿ: ಸಿದ್ದರಾಮಯ್ಯ

- Advertisement -
- Advertisement -

ಲಸಿಕೆ‌ ಪಡೆಯುವುದನ್ನು ಪ್ರೊತ್ಸಾಹಿಸಬೇಕಾದ ಕೇಂದ್ರ ಬಿಜೆಪಿ ಸರ್ಕಾರ, ಲಸಿಕೆ ಬೆಲೆ ಏರಿಸಿ ಜನತೆ ಅದನ್ನು  ಪಡೆಯದಂತೆ ಮಾಡಲು ಹೊರಟಿದೆ. ನರೇಂದ್ರ ಮೋದಿ ಅವರೇ, ‘ಟೀಕಾ ಉತ್ಸವ್’ ನಂತಹ ಬಾಯಿ ಬಡಾಯಿಯನ್ನು ಬಿಟ್ಟಾಕಿ ಮೊದಲು ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಿ ಎಂದು ಭಾನುವಾರ ಹೇಳಿದ್ದಾರೆ.

ನಿನ್ನೆ ಸರಣಿ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, “ಅನ್ನಭಾಗ್ಯ ಯೋಜನೆ ಎಂದರೆ ಉರ್ಕೊಳ್ಳುತ್ತಿದ್ದ ಮತ್ತು ಆ ಯೋಜನೆಗೆ ಕಲ್ಲು ಹಾಕಲು ಪ್ರಯತ್ನಿಸುತ್ತಿರುವ ರಾಜ್ಯ ಬಿಜೆಪಿ ನಾಯಕರು, ಈಗ ಪ್ರಧಾನಿಗಳು ಘೋಷಿಸಿರುವ ಎರಡು ತಿಂಗಳ ಕಾಲ ಐದು ಕಿಲೋ ಅಕ್ಕಿ ನೀಡುವ ಯೋಜನೆಯನ್ನು ಕೊಂಡಾಡುತ್ತಿರುವುದು ತಮಾಷೆಯಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ’ಕೊರೊನಾ ಸಾವುಗಳೆಲ್ಲವೂ ಬಿಜೆಪಿ ನಡೆಸುತ್ತಿರುವ ಕಗ್ಗೊಲೆಗಳು’- ಕಾಂಗ್ರೆಸ್

“ಕೊರೊನಾದಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ಜನರಿಗೆ ಪ್ರತಿ ತಿಂಗಳು ಉಚಿತವಾಗಿ ಹತ್ತು ಕಿಲೋ ಅಕ್ಕಿ ನೀಡಬೇಕೆಂದು ಪ್ರಾರಂಭದಿಂದಲೂ ಒತ್ತಾಯಿಸುತ್ತಾ ಬಂದಿದ್ದೇನೆ. ಪ್ರಧಾನಿಗಳು ಈಗಲಾದರೂ ಎಚ್ಚೆತ್ತುಕೊಳ್ಳಿ. ಕೊರೊನಾ‌ ಕಷ್ಟ ಕೊನೆಯಾಗುವ ವರೆಗಾದರೂ ಹತ್ತು ಕಿಲೋ ಅಕ್ಕಿ ನೀಡಿ ಪುಣ್ಯ ಕಟ್ಕೊಳ್ಳಿ” ಎಂದು ವಿನಂತಿಸಿದ್ದಾರೆ.

“ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸಲು ಶತಪ್ರಯತ್ನ ಮಾಡುತ್ತಿರುವ ರಾಜ್ಯ ಸರ್ಕಾರ ಹಲವಾರು ಜಿಲ್ಲೆಗಳಲ್ಲಿ ತಿಂಗಳಿಗೆ ಐದು‌ ಕಿಲೋ ಅಕ್ಕಿ ಬದಲಿಗೆ ಎರಡು ಕಿಲೋ ಅಕ್ಕಿ ನೀಡುತ್ತಿದೆ. ಮುಖ್ಯಮಂತ್ರಿ ಅವರೇ, ಈ ಅನ್ಯಾಯವನ್ನು ತಕ್ಷಣ ಸರಿಪಡಿಸಿ. ಬಡವರ ಶಾಪಕ್ಕೆ ಈಡಾಗಬೇಡಿ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಸಂಪಾದಕರ ವಿರುದ್ಧ ಪತ್ರ: ಟೈಮ್ಸ್ ನೌ ಚಾನೆಲ್‌ನ ಹಾಲಿ, ಮಾಜಿ ಪತ್ರಕರ್ತರ ಜೊತೆ ನಿಲ್ಲೋಣ

“ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯ ಮಾಡುವ ಉದ್ದೇಶದಿಂದ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್, ಮಾತೃಪೂರ್ಣ ಮೊದಲಾದ ಯೋಜನೆಗಳನ್ನು ಜಾರಿಗೆ ತಂದಿದ್ದೆ. ಅವೆಲ್ಲವನ್ನೂ ಬಡವರ ವಿರೋಧಿ ಬಿಜೆಪಿ ಸರ್ಕಾರ ನಿಲ್ಲಿಸಲು ಹೊರಟಿದೆ. ಅವುಗಳಿಗೆ ಅಡ್ಡಗಾಲು ಹಾಕಿದರೆ ಬಡವರ ಶಾಪ ತಟ್ಟದೆ ಇರದು” ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಔಷಧಿ,‌ಆಮ್ಲಜನಕ, ವೆಂಟಿಲೇಟರ್ ಕೊಡಿ ಎಂದು‌  ಪ್ರಧಾನಿ ಅವರನ್ನು ಬೇಡುತ್ತಿರುವ ಮುಖ್ಯಮಂತ್ರಿ ಅವರನ್ನು ಕಂಡಾಗ‌ ಕನಿಕರ ಮೂಡುತ್ತಿದೆ. 25 ಬಿಜೆಪಿ  ಸಂಸದರು ಎಲ್ಲಿ ಅಡಗಿ ಕೂತಿದ್ದಾರೆ? ಅವರನ್ನು ದೆಹಲಿಗೆ ಅಟ್ಟಿ ರಾಜ್ಯದ ನ್ಯಾಯಬದ್ಧ ಪಾಲಿಗಾಗಿ ಪ್ರಧಾನಿ ಮನೆ ಮುಂದೆ ಧರಣಿ ಕೂರಿಸಿ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಜಕೀಯ ಕೆಲಸ ಬಿಟ್ಟು, ಜನರ ಸಹಾಯಕ್ಕೆ ನಿಲ್ಲುವಂತೆ ಕಾರ್ಯಕರ್ತರಲ್ಲಿ ರಾಹುಲ್ ಗಾಂಧಿ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...