Homeಕರ್ನಾಟಕಮೋದಿಯವರೆ ಬಾಯಿ ಬಡಾಯಿ ಬಿಟ್ಟಾಕಿ ಉಚಿತ ಲಸಿಕೆ ನೀಡಿ: ಸಿದ್ದರಾಮಯ್ಯ

ಮೋದಿಯವರೆ ಬಾಯಿ ಬಡಾಯಿ ಬಿಟ್ಟಾಕಿ ಉಚಿತ ಲಸಿಕೆ ನೀಡಿ: ಸಿದ್ದರಾಮಯ್ಯ

- Advertisement -
- Advertisement -

ಲಸಿಕೆ‌ ಪಡೆಯುವುದನ್ನು ಪ್ರೊತ್ಸಾಹಿಸಬೇಕಾದ ಕೇಂದ್ರ ಬಿಜೆಪಿ ಸರ್ಕಾರ, ಲಸಿಕೆ ಬೆಲೆ ಏರಿಸಿ ಜನತೆ ಅದನ್ನು  ಪಡೆಯದಂತೆ ಮಾಡಲು ಹೊರಟಿದೆ. ನರೇಂದ್ರ ಮೋದಿ ಅವರೇ, ‘ಟೀಕಾ ಉತ್ಸವ್’ ನಂತಹ ಬಾಯಿ ಬಡಾಯಿಯನ್ನು ಬಿಟ್ಟಾಕಿ ಮೊದಲು ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಿ ಎಂದು ಭಾನುವಾರ ಹೇಳಿದ್ದಾರೆ.

ನಿನ್ನೆ ಸರಣಿ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, “ಅನ್ನಭಾಗ್ಯ ಯೋಜನೆ ಎಂದರೆ ಉರ್ಕೊಳ್ಳುತ್ತಿದ್ದ ಮತ್ತು ಆ ಯೋಜನೆಗೆ ಕಲ್ಲು ಹಾಕಲು ಪ್ರಯತ್ನಿಸುತ್ತಿರುವ ರಾಜ್ಯ ಬಿಜೆಪಿ ನಾಯಕರು, ಈಗ ಪ್ರಧಾನಿಗಳು ಘೋಷಿಸಿರುವ ಎರಡು ತಿಂಗಳ ಕಾಲ ಐದು ಕಿಲೋ ಅಕ್ಕಿ ನೀಡುವ ಯೋಜನೆಯನ್ನು ಕೊಂಡಾಡುತ್ತಿರುವುದು ತಮಾಷೆಯಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ’ಕೊರೊನಾ ಸಾವುಗಳೆಲ್ಲವೂ ಬಿಜೆಪಿ ನಡೆಸುತ್ತಿರುವ ಕಗ್ಗೊಲೆಗಳು’- ಕಾಂಗ್ರೆಸ್

“ಕೊರೊನಾದಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ಜನರಿಗೆ ಪ್ರತಿ ತಿಂಗಳು ಉಚಿತವಾಗಿ ಹತ್ತು ಕಿಲೋ ಅಕ್ಕಿ ನೀಡಬೇಕೆಂದು ಪ್ರಾರಂಭದಿಂದಲೂ ಒತ್ತಾಯಿಸುತ್ತಾ ಬಂದಿದ್ದೇನೆ. ಪ್ರಧಾನಿಗಳು ಈಗಲಾದರೂ ಎಚ್ಚೆತ್ತುಕೊಳ್ಳಿ. ಕೊರೊನಾ‌ ಕಷ್ಟ ಕೊನೆಯಾಗುವ ವರೆಗಾದರೂ ಹತ್ತು ಕಿಲೋ ಅಕ್ಕಿ ನೀಡಿ ಪುಣ್ಯ ಕಟ್ಕೊಳ್ಳಿ” ಎಂದು ವಿನಂತಿಸಿದ್ದಾರೆ.

“ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸಲು ಶತಪ್ರಯತ್ನ ಮಾಡುತ್ತಿರುವ ರಾಜ್ಯ ಸರ್ಕಾರ ಹಲವಾರು ಜಿಲ್ಲೆಗಳಲ್ಲಿ ತಿಂಗಳಿಗೆ ಐದು‌ ಕಿಲೋ ಅಕ್ಕಿ ಬದಲಿಗೆ ಎರಡು ಕಿಲೋ ಅಕ್ಕಿ ನೀಡುತ್ತಿದೆ. ಮುಖ್ಯಮಂತ್ರಿ ಅವರೇ, ಈ ಅನ್ಯಾಯವನ್ನು ತಕ್ಷಣ ಸರಿಪಡಿಸಿ. ಬಡವರ ಶಾಪಕ್ಕೆ ಈಡಾಗಬೇಡಿ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಸಂಪಾದಕರ ವಿರುದ್ಧ ಪತ್ರ: ಟೈಮ್ಸ್ ನೌ ಚಾನೆಲ್‌ನ ಹಾಲಿ, ಮಾಜಿ ಪತ್ರಕರ್ತರ ಜೊತೆ ನಿಲ್ಲೋಣ

“ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯ ಮಾಡುವ ಉದ್ದೇಶದಿಂದ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್, ಮಾತೃಪೂರ್ಣ ಮೊದಲಾದ ಯೋಜನೆಗಳನ್ನು ಜಾರಿಗೆ ತಂದಿದ್ದೆ. ಅವೆಲ್ಲವನ್ನೂ ಬಡವರ ವಿರೋಧಿ ಬಿಜೆಪಿ ಸರ್ಕಾರ ನಿಲ್ಲಿಸಲು ಹೊರಟಿದೆ. ಅವುಗಳಿಗೆ ಅಡ್ಡಗಾಲು ಹಾಕಿದರೆ ಬಡವರ ಶಾಪ ತಟ್ಟದೆ ಇರದು” ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಔಷಧಿ,‌ಆಮ್ಲಜನಕ, ವೆಂಟಿಲೇಟರ್ ಕೊಡಿ ಎಂದು‌  ಪ್ರಧಾನಿ ಅವರನ್ನು ಬೇಡುತ್ತಿರುವ ಮುಖ್ಯಮಂತ್ರಿ ಅವರನ್ನು ಕಂಡಾಗ‌ ಕನಿಕರ ಮೂಡುತ್ತಿದೆ. 25 ಬಿಜೆಪಿ  ಸಂಸದರು ಎಲ್ಲಿ ಅಡಗಿ ಕೂತಿದ್ದಾರೆ? ಅವರನ್ನು ದೆಹಲಿಗೆ ಅಟ್ಟಿ ರಾಜ್ಯದ ನ್ಯಾಯಬದ್ಧ ಪಾಲಿಗಾಗಿ ಪ್ರಧಾನಿ ಮನೆ ಮುಂದೆ ಧರಣಿ ಕೂರಿಸಿ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಜಕೀಯ ಕೆಲಸ ಬಿಟ್ಟು, ಜನರ ಸಹಾಯಕ್ಕೆ ನಿಲ್ಲುವಂತೆ ಕಾರ್ಯಕರ್ತರಲ್ಲಿ ರಾಹುಲ್ ಗಾಂಧಿ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...