Homeಕರ್ನಾಟಕಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕಾನೂನಿಗಿಂತ ಮಿಗಿಲಲ್ಲ: ಜಗ್ಗಿ ವಾಸುದೇವ್‌ಗೆ ಹೈಕೋರ್ಟ್‌ ತರಾಟೆ..

ಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕಾನೂನಿಗಿಂತ ಮಿಗಿಲಲ್ಲ: ಜಗ್ಗಿ ವಾಸುದೇವ್‌ಗೆ ಹೈಕೋರ್ಟ್‌ ತರಾಟೆ..

- Advertisement -
- Advertisement -

’ಕಾವೇರಿ ಕೂಗು’ ಅಭಿಯಾನಕ್ಕಾಗಿ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಸಂಗ್ರಹ ಮಾಡಿರುವ ಇಶಾ ಫೌಂಡೇಶನ್‌ ಸ್ಥಾಪಕ ಜಗ್ಗಿ ವಾಸುದೇವ್‌ ಅಫಿಡವಿಟ್‌ ಮೂಲಕ ಎಷ್ಟು ಹಣ ಸಂಗ್ರಹಿಸಿದ್ದಾರೆ ಮತ್ತು ಯಾವೆಲ್ಲಾ ವಿಧಾನಗಳ ಮೂಲಕ ಸಂಗ್ರಹಿಸಲಾಗಿದೆ ಎಂಬುದನ್ನು ಬಹಿರಂಗಪಡಿಸಬೇಕೆಂದು ಕರ್ನಾಟಕ ಹೈಕೋರ್ಟ್‌ ಆದೇಶಿಸಿದೆ.

ಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕೂಡ ಕಾನೂನಿಗಿಂತ ಮಿಗಿಲಲ್ಲ ಎಂದು ಒತ್ತಿ ಹೇಳಿದ ಮುಖ್ಯ ನ್ಯಾಯಮೂರ್ತಿ ಅಭಯ್‌ ಓಕ ಮತ್ತು ಹೇಮಂತ್‌ ಚಂದನ್‌ಗೌಡರ್‌ ಅವರಿದ್ದ ಪೀಠ, ಜಗ್ಗಿ ವಾಸುದೇವ್‌ ಸಂಗ್ರಹಿಸಿರುವ ಹಣದ ಲೆಕ್ಕ ಕೊಡಬೇಕು ಎಂದು ತಾಕೀತು ಮಾಡಿದೆ.

ಕಾವೇರಿ ಕೂಗು ಯೋಜನೆಗೆ ಯಾವ ಕಾರಣಕ್ಕೂ ಸಾರ್ವಜನಿಕರಿಂದ ಹಣ ಸಂಗ್ರಹಿಸಬಾರದು ಎಂದು ವಕೀಲ ಎ.ವಿ. ಅಮರನಾಥನ್ ಸಲ್ಲಿಸಿದ ಸಾರ್ವಜನಿಕ ಹಿತರಕ್ಷಣಾ ಅರ್ಜಿಯ ವಿಚಾರಣೆ ನಡೆಸಿದ ಪೀಠ ಈ ತೀರ್ಮಾನಕ್ಕೆ ಬಂದಿದೆ.

ಯಾರಾದರೂ ಜನರಿಗೆ ಅರಿವು ಮೂಡಿಸಿದರೆ ಅದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಅದರ ನೆಪದಲ್ಲಿ ಜನರಿಂದ ಒತ್ತಾಯಪೂರ್ವಕವಾಗಿ ಹಣ ಸಂಗ್ರಹಿಸುವುದನ್ನು ಒಪ್ಪುವುದಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಜಗ್ಗಿ ವಾಸುದೇವ್ ಹಣ ಸಂಗ್ರಹಿಸುವಂತಿಲ್ಲ: ಹೈಕೋರ್ಟ್ ನಲ್ಲಿ ಪಿ.ಐ.ಎಲ್

ಈ ಹಣ ಸಂಗ್ರಹಣೆಯ ವಿಚಾರದಲ್ಲಿ ಯಾವುದೇ ತನಿಖೆ ನಡೆಸದೇ, ಕೈಕಟ್ಟಿ ಕೂತಿರುವ ರಾಜ್ಯಸರ್ಕಾರವನ್ನು ಸಹ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ರಾಜ್ಯಸರ್ಕಾರದ ಹೆಸರಿನಲ್ಲಿ ಯಾರಾದರೂ ಜನರಿಂದ ಒತ್ತಾಯಪೂರ್ವಕವಾಗಿ ಹಣ ಸಂಗ್ರಹಣೆ ಮಾಡತ್ತಿದ್ದಾರೆ ಎಂಬ ದೂರು ಬಂದರೆ ಅದನ್ನು ತನಿಖೆ ಮಾಡುವುದು, ಸಮಸ್ಯೆ ಬಗೆಹರಿಸುವುದು ನಿಮ್ಮ ಕರ್ತವ್ಯವಲ್ಲವೇ ಎಂದು ಸರ್ಕಾರವನ್ನು ಪ್ರಶ್ನಿಸಿದೆ.

ಸರ್ಕಾರವು ಬಲವಂತವಾಗಿ ಹಣ ವಸೂಲಿ ಮಾಡುತ್ತಿರುವುದರ ಬಗ್ಗೆ ನಮಗೆ ಯಾವುದೇ ದೂರುಗಳು ಬಂದಿಲ್ಲ ಮತ್ತು ಸರ್ಕಾರಿ ಜಾಗದಲ್ಲಿ ಫೌಂಡೇಶನ್‌ ಕೆಲಸ ಮಾಡಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿತು.

ಮಾಡುತ್ತಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆಯಿಂದ ನ್ಯಾ.ಎಸ್.ಆರ್‌.ಕೃಷ್ಣಕುಮಾರ್‌ ಹಿಂದೆ ಸರಿದಿದ್ದಾರೆ. ’ಕಾವೇರಿ ಕೂಗು’ ಹೆಸರಲ್ಲಿ ಈಶ ಫೌಂಡೇಶನ್ ಸುಮಾರು ೨೫೩ ಕೋಟಿ ಸಸಿ ನೆಡುವ ಅಭಿಯಾನ ಹಮ್ಮಿಕೊಂಡಿದೆ. ಅದಕ್ಕಾಗಿ ಒಂದು ಸಸಿಗೆ ೪೨ ರೂ.ಗಳಂತೆ ಜನರಿಂದ ೧೦,೬೨೬ ಕೋಟಿ ರೂ. ಸಂಗ್ರಹಿಸಲಾಗುತ್ತಿದೆ ಎಂದು ವಕೀಲ ಎ.ವಿ.ಅಮರನಾಥನ್ ಅರ್ಜಿ ಸಲ್ಲಿಸಿದ್ದರು.

ಈ ಅಭಿಯಾನವು ತಲಕಾವೇರಿಯಿಂದ ತಿರುವರೂರಿನವರೆಗೆ ಕಾವೇರಿ ನದಿಗೆ ಅಡ್ಡಲಾಗಿ ಮರಗಳನ್ನು ಬೆಳೆಸುವ ಯೋಜನೆ ಹೊಂದಿದ್ದು, ಇದಕ್ಕಾಗಿ 253 ಕೋಟಿ ಸಸ್ಯಗಳನ್ನು ಸಂಗ್ರಹಿಸುವ ಗುರಿ ಹೊಂದಿದೆ. ಇದಕ್ಕಾಗಿ ಪ್ರತಿ ಮರಕ್ಕೆ 42 ರೂ. ಸಂಗ್ರಹಿಸುತ್ತಿದ್ದು ಇದು 10,626 ಕೋಟಿ ರೂ. ಆಗುತ್ತದೆ ಎಂದು ಅರ್ಜಿದಾರರ ವಕೀಲ ಎ.ವಿ. ಅಮರನಾಥನ್ ಹೈಕೋರ್ಟ್ ಗೆ ತಿಳಿಸಿದ್ದಾರೆ.

ಅರ್ಜಿದಾರ ವಕೀಲ ಎ.ವಿ.ಅಮರನಾಥನ್, ಸಸಿ ನೆಡುವುದಕ್ಕೆ ಆಕ್ಷೇಪವಿಲ್ಲ. ಆದರೆ ಸರ್ಕಾರಿ ಜಮೀನಿನಲ್ಲಿ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಸಸಿ ನೆಡಲು ಜನರಿಂದ ಸಾವಿರಾರು ಕೋಟಿ ರೂ. ಸಂಗ್ರಹ ಮಾಡುತ್ತಿರುವುದಕ್ಕೆ ವಿರೊಧವಿದೆ ಎಂದು ಹೇಳಿದ್ದರು.

ಸಮಾನತೆ ಮತ್ತು ನ್ಯಾಯದ ಹಿತದೃಷ್ಟಿಯಿಂದ ‘ಕಾವೇರಿ ಕೂಗು ಯೋಜನೆ’ಗಾಗಿ ಸಾರ್ವಜನಿಕರಿಂದ ಯಾವುದೇ ಹಣವನ್ನು ಸಂಗ್ರಹಿಸಬಾರದು ಎಂದು ಈ ಹಿಂದೆ ಕರ್ನಾಟಕ ಹೈಕೋರ್ಟ್‌ ಜಗ್ಗಿ ವಾಸುದೇವ್ ನೇತೃತ್ವದ ಇಶಾ ಫೌಂಡೇಶನ್‌ಗೆ ನಿರ್ದೇಶನ ನೀಡಿತ್ತು.

ಪಿಐಎಲ್ ಪ್ರಕಾರ, ಕಾವೇರಿ ನದಿಗೆ ಅಡ್ಡಲಾಗಿ ತಲಕಾವೆರಿಯಿಂದ ತಿರುವರೂರುವರೆಗೆ ಮರಗಳನ್ನು ನೆಡಲು ಇಶಾ ಪ್ರತಿಷ್ಠಾನ ಯೋಜಿಸುತ್ತಿದೆ. ಅದಕ್ಕಾಗಿ 639.1 ಕಿ.ಮೀ ಉದ್ದ ತಲಕಾವೆರಿಯಿಂದ ತಿರುವರೂರುವರೆಗೆ ತನ್ನ ಬೈಕ್ ರ್ಯಾಲಿಯನ್ನು ಪ್ರಾರಂಭಿಸಿದೆ. “ಕಾವೇರಿ ಜಲಾನಯನ ಪ್ರದೇಶಕ್ಕೆ ಸಂಬಂಧಿಸಿದಂತೆ ಅಧ್ಯಯನಗಳನ್ನು ನಡೆಸಿದೆ ಎಂದು ಫೌಂಡೇಶನ್ ಹೇಳುತ್ತದೆ. ಆದರೆ ಅದರ ವರದಿಯನ್ನು ರಾಜ್ಯಕ್ಕೆ ಸಲ್ಲಿಸಬೇಕಾಗಿತ್ತು. ತಾವು ಮಾಡಿದ ಅಧ್ಯಯನಗಳನ್ನು ಚರ್ಚಿಸಿದ ನಂತರ ರಾಜ್ಯವು ಅನುಮೋದನೆ ನೀಡಬೇಕು. ಆದರೆ ಅಂತಹ ಯಾವುದೇ ಪ್ರಕ್ರಿಯೆಯನ್ನು ಕೈಗೊಳ್ಳಲಾಗುವುದಿಲ್ಲ. ರಾಜ್ಯದಿಂದ ಸರಿಯಾದ ಅನುಮೋದನೆ ಪಡೆಯದೆ ಯಾವುದೇ ಖಾಸಗಿ ಸಂಸ್ಥೆಗೆ ಸರ್ಕಾರಿ ಜಮೀನಿನಲ್ಲಿ ಯಾವುದೇ ಕೆಲಸ ಮಾಡಲು ಅನುಮತಿ ನೀಡಲಾಗುವುದಿಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....