Homeಕರ್ನಾಟಕಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕಾನೂನಿಗಿಂತ ಮಿಗಿಲಲ್ಲ: ಜಗ್ಗಿ ವಾಸುದೇವ್‌ಗೆ ಹೈಕೋರ್ಟ್‌ ತರಾಟೆ..

ಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕಾನೂನಿಗಿಂತ ಮಿಗಿಲಲ್ಲ: ಜಗ್ಗಿ ವಾಸುದೇವ್‌ಗೆ ಹೈಕೋರ್ಟ್‌ ತರಾಟೆ..

- Advertisement -
- Advertisement -

’ಕಾವೇರಿ ಕೂಗು’ ಅಭಿಯಾನಕ್ಕಾಗಿ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಸಂಗ್ರಹ ಮಾಡಿರುವ ಇಶಾ ಫೌಂಡೇಶನ್‌ ಸ್ಥಾಪಕ ಜಗ್ಗಿ ವಾಸುದೇವ್‌ ಅಫಿಡವಿಟ್‌ ಮೂಲಕ ಎಷ್ಟು ಹಣ ಸಂಗ್ರಹಿಸಿದ್ದಾರೆ ಮತ್ತು ಯಾವೆಲ್ಲಾ ವಿಧಾನಗಳ ಮೂಲಕ ಸಂಗ್ರಹಿಸಲಾಗಿದೆ ಎಂಬುದನ್ನು ಬಹಿರಂಗಪಡಿಸಬೇಕೆಂದು ಕರ್ನಾಟಕ ಹೈಕೋರ್ಟ್‌ ಆದೇಶಿಸಿದೆ.

ಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕೂಡ ಕಾನೂನಿಗಿಂತ ಮಿಗಿಲಲ್ಲ ಎಂದು ಒತ್ತಿ ಹೇಳಿದ ಮುಖ್ಯ ನ್ಯಾಯಮೂರ್ತಿ ಅಭಯ್‌ ಓಕ ಮತ್ತು ಹೇಮಂತ್‌ ಚಂದನ್‌ಗೌಡರ್‌ ಅವರಿದ್ದ ಪೀಠ, ಜಗ್ಗಿ ವಾಸುದೇವ್‌ ಸಂಗ್ರಹಿಸಿರುವ ಹಣದ ಲೆಕ್ಕ ಕೊಡಬೇಕು ಎಂದು ತಾಕೀತು ಮಾಡಿದೆ.

ಕಾವೇರಿ ಕೂಗು ಯೋಜನೆಗೆ ಯಾವ ಕಾರಣಕ್ಕೂ ಸಾರ್ವಜನಿಕರಿಂದ ಹಣ ಸಂಗ್ರಹಿಸಬಾರದು ಎಂದು ವಕೀಲ ಎ.ವಿ. ಅಮರನಾಥನ್ ಸಲ್ಲಿಸಿದ ಸಾರ್ವಜನಿಕ ಹಿತರಕ್ಷಣಾ ಅರ್ಜಿಯ ವಿಚಾರಣೆ ನಡೆಸಿದ ಪೀಠ ಈ ತೀರ್ಮಾನಕ್ಕೆ ಬಂದಿದೆ.

ಯಾರಾದರೂ ಜನರಿಗೆ ಅರಿವು ಮೂಡಿಸಿದರೆ ಅದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಅದರ ನೆಪದಲ್ಲಿ ಜನರಿಂದ ಒತ್ತಾಯಪೂರ್ವಕವಾಗಿ ಹಣ ಸಂಗ್ರಹಿಸುವುದನ್ನು ಒಪ್ಪುವುದಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಜಗ್ಗಿ ವಾಸುದೇವ್ ಹಣ ಸಂಗ್ರಹಿಸುವಂತಿಲ್ಲ: ಹೈಕೋರ್ಟ್ ನಲ್ಲಿ ಪಿ.ಐ.ಎಲ್

ಈ ಹಣ ಸಂಗ್ರಹಣೆಯ ವಿಚಾರದಲ್ಲಿ ಯಾವುದೇ ತನಿಖೆ ನಡೆಸದೇ, ಕೈಕಟ್ಟಿ ಕೂತಿರುವ ರಾಜ್ಯಸರ್ಕಾರವನ್ನು ಸಹ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ರಾಜ್ಯಸರ್ಕಾರದ ಹೆಸರಿನಲ್ಲಿ ಯಾರಾದರೂ ಜನರಿಂದ ಒತ್ತಾಯಪೂರ್ವಕವಾಗಿ ಹಣ ಸಂಗ್ರಹಣೆ ಮಾಡತ್ತಿದ್ದಾರೆ ಎಂಬ ದೂರು ಬಂದರೆ ಅದನ್ನು ತನಿಖೆ ಮಾಡುವುದು, ಸಮಸ್ಯೆ ಬಗೆಹರಿಸುವುದು ನಿಮ್ಮ ಕರ್ತವ್ಯವಲ್ಲವೇ ಎಂದು ಸರ್ಕಾರವನ್ನು ಪ್ರಶ್ನಿಸಿದೆ.

ಸರ್ಕಾರವು ಬಲವಂತವಾಗಿ ಹಣ ವಸೂಲಿ ಮಾಡುತ್ತಿರುವುದರ ಬಗ್ಗೆ ನಮಗೆ ಯಾವುದೇ ದೂರುಗಳು ಬಂದಿಲ್ಲ ಮತ್ತು ಸರ್ಕಾರಿ ಜಾಗದಲ್ಲಿ ಫೌಂಡೇಶನ್‌ ಕೆಲಸ ಮಾಡಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿತು.

ಮಾಡುತ್ತಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆಯಿಂದ ನ್ಯಾ.ಎಸ್.ಆರ್‌.ಕೃಷ್ಣಕುಮಾರ್‌ ಹಿಂದೆ ಸರಿದಿದ್ದಾರೆ. ’ಕಾವೇರಿ ಕೂಗು’ ಹೆಸರಲ್ಲಿ ಈಶ ಫೌಂಡೇಶನ್ ಸುಮಾರು ೨೫೩ ಕೋಟಿ ಸಸಿ ನೆಡುವ ಅಭಿಯಾನ ಹಮ್ಮಿಕೊಂಡಿದೆ. ಅದಕ್ಕಾಗಿ ಒಂದು ಸಸಿಗೆ ೪೨ ರೂ.ಗಳಂತೆ ಜನರಿಂದ ೧೦,೬೨೬ ಕೋಟಿ ರೂ. ಸಂಗ್ರಹಿಸಲಾಗುತ್ತಿದೆ ಎಂದು ವಕೀಲ ಎ.ವಿ.ಅಮರನಾಥನ್ ಅರ್ಜಿ ಸಲ್ಲಿಸಿದ್ದರು.

ಈ ಅಭಿಯಾನವು ತಲಕಾವೇರಿಯಿಂದ ತಿರುವರೂರಿನವರೆಗೆ ಕಾವೇರಿ ನದಿಗೆ ಅಡ್ಡಲಾಗಿ ಮರಗಳನ್ನು ಬೆಳೆಸುವ ಯೋಜನೆ ಹೊಂದಿದ್ದು, ಇದಕ್ಕಾಗಿ 253 ಕೋಟಿ ಸಸ್ಯಗಳನ್ನು ಸಂಗ್ರಹಿಸುವ ಗುರಿ ಹೊಂದಿದೆ. ಇದಕ್ಕಾಗಿ ಪ್ರತಿ ಮರಕ್ಕೆ 42 ರೂ. ಸಂಗ್ರಹಿಸುತ್ತಿದ್ದು ಇದು 10,626 ಕೋಟಿ ರೂ. ಆಗುತ್ತದೆ ಎಂದು ಅರ್ಜಿದಾರರ ವಕೀಲ ಎ.ವಿ. ಅಮರನಾಥನ್ ಹೈಕೋರ್ಟ್ ಗೆ ತಿಳಿಸಿದ್ದಾರೆ.

ಅರ್ಜಿದಾರ ವಕೀಲ ಎ.ವಿ.ಅಮರನಾಥನ್, ಸಸಿ ನೆಡುವುದಕ್ಕೆ ಆಕ್ಷೇಪವಿಲ್ಲ. ಆದರೆ ಸರ್ಕಾರಿ ಜಮೀನಿನಲ್ಲಿ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಸಸಿ ನೆಡಲು ಜನರಿಂದ ಸಾವಿರಾರು ಕೋಟಿ ರೂ. ಸಂಗ್ರಹ ಮಾಡುತ್ತಿರುವುದಕ್ಕೆ ವಿರೊಧವಿದೆ ಎಂದು ಹೇಳಿದ್ದರು.

ಸಮಾನತೆ ಮತ್ತು ನ್ಯಾಯದ ಹಿತದೃಷ್ಟಿಯಿಂದ ‘ಕಾವೇರಿ ಕೂಗು ಯೋಜನೆ’ಗಾಗಿ ಸಾರ್ವಜನಿಕರಿಂದ ಯಾವುದೇ ಹಣವನ್ನು ಸಂಗ್ರಹಿಸಬಾರದು ಎಂದು ಈ ಹಿಂದೆ ಕರ್ನಾಟಕ ಹೈಕೋರ್ಟ್‌ ಜಗ್ಗಿ ವಾಸುದೇವ್ ನೇತೃತ್ವದ ಇಶಾ ಫೌಂಡೇಶನ್‌ಗೆ ನಿರ್ದೇಶನ ನೀಡಿತ್ತು.

ಪಿಐಎಲ್ ಪ್ರಕಾರ, ಕಾವೇರಿ ನದಿಗೆ ಅಡ್ಡಲಾಗಿ ತಲಕಾವೆರಿಯಿಂದ ತಿರುವರೂರುವರೆಗೆ ಮರಗಳನ್ನು ನೆಡಲು ಇಶಾ ಪ್ರತಿಷ್ಠಾನ ಯೋಜಿಸುತ್ತಿದೆ. ಅದಕ್ಕಾಗಿ 639.1 ಕಿ.ಮೀ ಉದ್ದ ತಲಕಾವೆರಿಯಿಂದ ತಿರುವರೂರುವರೆಗೆ ತನ್ನ ಬೈಕ್ ರ್ಯಾಲಿಯನ್ನು ಪ್ರಾರಂಭಿಸಿದೆ. “ಕಾವೇರಿ ಜಲಾನಯನ ಪ್ರದೇಶಕ್ಕೆ ಸಂಬಂಧಿಸಿದಂತೆ ಅಧ್ಯಯನಗಳನ್ನು ನಡೆಸಿದೆ ಎಂದು ಫೌಂಡೇಶನ್ ಹೇಳುತ್ತದೆ. ಆದರೆ ಅದರ ವರದಿಯನ್ನು ರಾಜ್ಯಕ್ಕೆ ಸಲ್ಲಿಸಬೇಕಾಗಿತ್ತು. ತಾವು ಮಾಡಿದ ಅಧ್ಯಯನಗಳನ್ನು ಚರ್ಚಿಸಿದ ನಂತರ ರಾಜ್ಯವು ಅನುಮೋದನೆ ನೀಡಬೇಕು. ಆದರೆ ಅಂತಹ ಯಾವುದೇ ಪ್ರಕ್ರಿಯೆಯನ್ನು ಕೈಗೊಳ್ಳಲಾಗುವುದಿಲ್ಲ. ರಾಜ್ಯದಿಂದ ಸರಿಯಾದ ಅನುಮೋದನೆ ಪಡೆಯದೆ ಯಾವುದೇ ಖಾಸಗಿ ಸಂಸ್ಥೆಗೆ ಸರ್ಕಾರಿ ಜಮೀನಿನಲ್ಲಿ ಯಾವುದೇ ಕೆಲಸ ಮಾಡಲು ಅನುಮತಿ ನೀಡಲಾಗುವುದಿಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...