Homeಕರ್ನಾಟಕಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕಾನೂನಿಗಿಂತ ಮಿಗಿಲಲ್ಲ: ಜಗ್ಗಿ ವಾಸುದೇವ್‌ಗೆ ಹೈಕೋರ್ಟ್‌ ತರಾಟೆ..

ಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕಾನೂನಿಗಿಂತ ಮಿಗಿಲಲ್ಲ: ಜಗ್ಗಿ ವಾಸುದೇವ್‌ಗೆ ಹೈಕೋರ್ಟ್‌ ತರಾಟೆ..

- Advertisement -
- Advertisement -

’ಕಾವೇರಿ ಕೂಗು’ ಅಭಿಯಾನಕ್ಕಾಗಿ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಸಂಗ್ರಹ ಮಾಡಿರುವ ಇಶಾ ಫೌಂಡೇಶನ್‌ ಸ್ಥಾಪಕ ಜಗ್ಗಿ ವಾಸುದೇವ್‌ ಅಫಿಡವಿಟ್‌ ಮೂಲಕ ಎಷ್ಟು ಹಣ ಸಂಗ್ರಹಿಸಿದ್ದಾರೆ ಮತ್ತು ಯಾವೆಲ್ಲಾ ವಿಧಾನಗಳ ಮೂಲಕ ಸಂಗ್ರಹಿಸಲಾಗಿದೆ ಎಂಬುದನ್ನು ಬಹಿರಂಗಪಡಿಸಬೇಕೆಂದು ಕರ್ನಾಟಕ ಹೈಕೋರ್ಟ್‌ ಆದೇಶಿಸಿದೆ.

ಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕೂಡ ಕಾನೂನಿಗಿಂತ ಮಿಗಿಲಲ್ಲ ಎಂದು ಒತ್ತಿ ಹೇಳಿದ ಮುಖ್ಯ ನ್ಯಾಯಮೂರ್ತಿ ಅಭಯ್‌ ಓಕ ಮತ್ತು ಹೇಮಂತ್‌ ಚಂದನ್‌ಗೌಡರ್‌ ಅವರಿದ್ದ ಪೀಠ, ಜಗ್ಗಿ ವಾಸುದೇವ್‌ ಸಂಗ್ರಹಿಸಿರುವ ಹಣದ ಲೆಕ್ಕ ಕೊಡಬೇಕು ಎಂದು ತಾಕೀತು ಮಾಡಿದೆ.

ಕಾವೇರಿ ಕೂಗು ಯೋಜನೆಗೆ ಯಾವ ಕಾರಣಕ್ಕೂ ಸಾರ್ವಜನಿಕರಿಂದ ಹಣ ಸಂಗ್ರಹಿಸಬಾರದು ಎಂದು ವಕೀಲ ಎ.ವಿ. ಅಮರನಾಥನ್ ಸಲ್ಲಿಸಿದ ಸಾರ್ವಜನಿಕ ಹಿತರಕ್ಷಣಾ ಅರ್ಜಿಯ ವಿಚಾರಣೆ ನಡೆಸಿದ ಪೀಠ ಈ ತೀರ್ಮಾನಕ್ಕೆ ಬಂದಿದೆ.

ಯಾರಾದರೂ ಜನರಿಗೆ ಅರಿವು ಮೂಡಿಸಿದರೆ ಅದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಅದರ ನೆಪದಲ್ಲಿ ಜನರಿಂದ ಒತ್ತಾಯಪೂರ್ವಕವಾಗಿ ಹಣ ಸಂಗ್ರಹಿಸುವುದನ್ನು ಒಪ್ಪುವುದಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಜಗ್ಗಿ ವಾಸುದೇವ್ ಹಣ ಸಂಗ್ರಹಿಸುವಂತಿಲ್ಲ: ಹೈಕೋರ್ಟ್ ನಲ್ಲಿ ಪಿ.ಐ.ಎಲ್

ಈ ಹಣ ಸಂಗ್ರಹಣೆಯ ವಿಚಾರದಲ್ಲಿ ಯಾವುದೇ ತನಿಖೆ ನಡೆಸದೇ, ಕೈಕಟ್ಟಿ ಕೂತಿರುವ ರಾಜ್ಯಸರ್ಕಾರವನ್ನು ಸಹ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ರಾಜ್ಯಸರ್ಕಾರದ ಹೆಸರಿನಲ್ಲಿ ಯಾರಾದರೂ ಜನರಿಂದ ಒತ್ತಾಯಪೂರ್ವಕವಾಗಿ ಹಣ ಸಂಗ್ರಹಣೆ ಮಾಡತ್ತಿದ್ದಾರೆ ಎಂಬ ದೂರು ಬಂದರೆ ಅದನ್ನು ತನಿಖೆ ಮಾಡುವುದು, ಸಮಸ್ಯೆ ಬಗೆಹರಿಸುವುದು ನಿಮ್ಮ ಕರ್ತವ್ಯವಲ್ಲವೇ ಎಂದು ಸರ್ಕಾರವನ್ನು ಪ್ರಶ್ನಿಸಿದೆ.

ಸರ್ಕಾರವು ಬಲವಂತವಾಗಿ ಹಣ ವಸೂಲಿ ಮಾಡುತ್ತಿರುವುದರ ಬಗ್ಗೆ ನಮಗೆ ಯಾವುದೇ ದೂರುಗಳು ಬಂದಿಲ್ಲ ಮತ್ತು ಸರ್ಕಾರಿ ಜಾಗದಲ್ಲಿ ಫೌಂಡೇಶನ್‌ ಕೆಲಸ ಮಾಡಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿತು.

ಮಾಡುತ್ತಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆಯಿಂದ ನ್ಯಾ.ಎಸ್.ಆರ್‌.ಕೃಷ್ಣಕುಮಾರ್‌ ಹಿಂದೆ ಸರಿದಿದ್ದಾರೆ. ’ಕಾವೇರಿ ಕೂಗು’ ಹೆಸರಲ್ಲಿ ಈಶ ಫೌಂಡೇಶನ್ ಸುಮಾರು ೨೫೩ ಕೋಟಿ ಸಸಿ ನೆಡುವ ಅಭಿಯಾನ ಹಮ್ಮಿಕೊಂಡಿದೆ. ಅದಕ್ಕಾಗಿ ಒಂದು ಸಸಿಗೆ ೪೨ ರೂ.ಗಳಂತೆ ಜನರಿಂದ ೧೦,೬೨೬ ಕೋಟಿ ರೂ. ಸಂಗ್ರಹಿಸಲಾಗುತ್ತಿದೆ ಎಂದು ವಕೀಲ ಎ.ವಿ.ಅಮರನಾಥನ್ ಅರ್ಜಿ ಸಲ್ಲಿಸಿದ್ದರು.

ಈ ಅಭಿಯಾನವು ತಲಕಾವೇರಿಯಿಂದ ತಿರುವರೂರಿನವರೆಗೆ ಕಾವೇರಿ ನದಿಗೆ ಅಡ್ಡಲಾಗಿ ಮರಗಳನ್ನು ಬೆಳೆಸುವ ಯೋಜನೆ ಹೊಂದಿದ್ದು, ಇದಕ್ಕಾಗಿ 253 ಕೋಟಿ ಸಸ್ಯಗಳನ್ನು ಸಂಗ್ರಹಿಸುವ ಗುರಿ ಹೊಂದಿದೆ. ಇದಕ್ಕಾಗಿ ಪ್ರತಿ ಮರಕ್ಕೆ 42 ರೂ. ಸಂಗ್ರಹಿಸುತ್ತಿದ್ದು ಇದು 10,626 ಕೋಟಿ ರೂ. ಆಗುತ್ತದೆ ಎಂದು ಅರ್ಜಿದಾರರ ವಕೀಲ ಎ.ವಿ. ಅಮರನಾಥನ್ ಹೈಕೋರ್ಟ್ ಗೆ ತಿಳಿಸಿದ್ದಾರೆ.

ಅರ್ಜಿದಾರ ವಕೀಲ ಎ.ವಿ.ಅಮರನಾಥನ್, ಸಸಿ ನೆಡುವುದಕ್ಕೆ ಆಕ್ಷೇಪವಿಲ್ಲ. ಆದರೆ ಸರ್ಕಾರಿ ಜಮೀನಿನಲ್ಲಿ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಸಸಿ ನೆಡಲು ಜನರಿಂದ ಸಾವಿರಾರು ಕೋಟಿ ರೂ. ಸಂಗ್ರಹ ಮಾಡುತ್ತಿರುವುದಕ್ಕೆ ವಿರೊಧವಿದೆ ಎಂದು ಹೇಳಿದ್ದರು.

ಸಮಾನತೆ ಮತ್ತು ನ್ಯಾಯದ ಹಿತದೃಷ್ಟಿಯಿಂದ ‘ಕಾವೇರಿ ಕೂಗು ಯೋಜನೆ’ಗಾಗಿ ಸಾರ್ವಜನಿಕರಿಂದ ಯಾವುದೇ ಹಣವನ್ನು ಸಂಗ್ರಹಿಸಬಾರದು ಎಂದು ಈ ಹಿಂದೆ ಕರ್ನಾಟಕ ಹೈಕೋರ್ಟ್‌ ಜಗ್ಗಿ ವಾಸುದೇವ್ ನೇತೃತ್ವದ ಇಶಾ ಫೌಂಡೇಶನ್‌ಗೆ ನಿರ್ದೇಶನ ನೀಡಿತ್ತು.

ಪಿಐಎಲ್ ಪ್ರಕಾರ, ಕಾವೇರಿ ನದಿಗೆ ಅಡ್ಡಲಾಗಿ ತಲಕಾವೆರಿಯಿಂದ ತಿರುವರೂರುವರೆಗೆ ಮರಗಳನ್ನು ನೆಡಲು ಇಶಾ ಪ್ರತಿಷ್ಠಾನ ಯೋಜಿಸುತ್ತಿದೆ. ಅದಕ್ಕಾಗಿ 639.1 ಕಿ.ಮೀ ಉದ್ದ ತಲಕಾವೆರಿಯಿಂದ ತಿರುವರೂರುವರೆಗೆ ತನ್ನ ಬೈಕ್ ರ್ಯಾಲಿಯನ್ನು ಪ್ರಾರಂಭಿಸಿದೆ. “ಕಾವೇರಿ ಜಲಾನಯನ ಪ್ರದೇಶಕ್ಕೆ ಸಂಬಂಧಿಸಿದಂತೆ ಅಧ್ಯಯನಗಳನ್ನು ನಡೆಸಿದೆ ಎಂದು ಫೌಂಡೇಶನ್ ಹೇಳುತ್ತದೆ. ಆದರೆ ಅದರ ವರದಿಯನ್ನು ರಾಜ್ಯಕ್ಕೆ ಸಲ್ಲಿಸಬೇಕಾಗಿತ್ತು. ತಾವು ಮಾಡಿದ ಅಧ್ಯಯನಗಳನ್ನು ಚರ್ಚಿಸಿದ ನಂತರ ರಾಜ್ಯವು ಅನುಮೋದನೆ ನೀಡಬೇಕು. ಆದರೆ ಅಂತಹ ಯಾವುದೇ ಪ್ರಕ್ರಿಯೆಯನ್ನು ಕೈಗೊಳ್ಳಲಾಗುವುದಿಲ್ಲ. ರಾಜ್ಯದಿಂದ ಸರಿಯಾದ ಅನುಮೋದನೆ ಪಡೆಯದೆ ಯಾವುದೇ ಖಾಸಗಿ ಸಂಸ್ಥೆಗೆ ಸರ್ಕಾರಿ ಜಮೀನಿನಲ್ಲಿ ಯಾವುದೇ ಕೆಲಸ ಮಾಡಲು ಅನುಮತಿ ನೀಡಲಾಗುವುದಿಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...