Homeಕರ್ನಾಟಕಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕಾನೂನಿಗಿಂತ ಮಿಗಿಲಲ್ಲ: ಜಗ್ಗಿ ವಾಸುದೇವ್‌ಗೆ ಹೈಕೋರ್ಟ್‌ ತರಾಟೆ..

ಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕಾನೂನಿಗಿಂತ ಮಿಗಿಲಲ್ಲ: ಜಗ್ಗಿ ವಾಸುದೇವ್‌ಗೆ ಹೈಕೋರ್ಟ್‌ ತರಾಟೆ..

- Advertisement -
- Advertisement -

’ಕಾವೇರಿ ಕೂಗು’ ಅಭಿಯಾನಕ್ಕಾಗಿ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಸಂಗ್ರಹ ಮಾಡಿರುವ ಇಶಾ ಫೌಂಡೇಶನ್‌ ಸ್ಥಾಪಕ ಜಗ್ಗಿ ವಾಸುದೇವ್‌ ಅಫಿಡವಿಟ್‌ ಮೂಲಕ ಎಷ್ಟು ಹಣ ಸಂಗ್ರಹಿಸಿದ್ದಾರೆ ಮತ್ತು ಯಾವೆಲ್ಲಾ ವಿಧಾನಗಳ ಮೂಲಕ ಸಂಗ್ರಹಿಸಲಾಗಿದೆ ಎಂಬುದನ್ನು ಬಹಿರಂಗಪಡಿಸಬೇಕೆಂದು ಕರ್ನಾಟಕ ಹೈಕೋರ್ಟ್‌ ಆದೇಶಿಸಿದೆ.

ಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕೂಡ ಕಾನೂನಿಗಿಂತ ಮಿಗಿಲಲ್ಲ ಎಂದು ಒತ್ತಿ ಹೇಳಿದ ಮುಖ್ಯ ನ್ಯಾಯಮೂರ್ತಿ ಅಭಯ್‌ ಓಕ ಮತ್ತು ಹೇಮಂತ್‌ ಚಂದನ್‌ಗೌಡರ್‌ ಅವರಿದ್ದ ಪೀಠ, ಜಗ್ಗಿ ವಾಸುದೇವ್‌ ಸಂಗ್ರಹಿಸಿರುವ ಹಣದ ಲೆಕ್ಕ ಕೊಡಬೇಕು ಎಂದು ತಾಕೀತು ಮಾಡಿದೆ.

ಕಾವೇರಿ ಕೂಗು ಯೋಜನೆಗೆ ಯಾವ ಕಾರಣಕ್ಕೂ ಸಾರ್ವಜನಿಕರಿಂದ ಹಣ ಸಂಗ್ರಹಿಸಬಾರದು ಎಂದು ವಕೀಲ ಎ.ವಿ. ಅಮರನಾಥನ್ ಸಲ್ಲಿಸಿದ ಸಾರ್ವಜನಿಕ ಹಿತರಕ್ಷಣಾ ಅರ್ಜಿಯ ವಿಚಾರಣೆ ನಡೆಸಿದ ಪೀಠ ಈ ತೀರ್ಮಾನಕ್ಕೆ ಬಂದಿದೆ.

ಯಾರಾದರೂ ಜನರಿಗೆ ಅರಿವು ಮೂಡಿಸಿದರೆ ಅದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಅದರ ನೆಪದಲ್ಲಿ ಜನರಿಂದ ಒತ್ತಾಯಪೂರ್ವಕವಾಗಿ ಹಣ ಸಂಗ್ರಹಿಸುವುದನ್ನು ಒಪ್ಪುವುದಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಜಗ್ಗಿ ವಾಸುದೇವ್ ಹಣ ಸಂಗ್ರಹಿಸುವಂತಿಲ್ಲ: ಹೈಕೋರ್ಟ್ ನಲ್ಲಿ ಪಿ.ಐ.ಎಲ್

ಈ ಹಣ ಸಂಗ್ರಹಣೆಯ ವಿಚಾರದಲ್ಲಿ ಯಾವುದೇ ತನಿಖೆ ನಡೆಸದೇ, ಕೈಕಟ್ಟಿ ಕೂತಿರುವ ರಾಜ್ಯಸರ್ಕಾರವನ್ನು ಸಹ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ರಾಜ್ಯಸರ್ಕಾರದ ಹೆಸರಿನಲ್ಲಿ ಯಾರಾದರೂ ಜನರಿಂದ ಒತ್ತಾಯಪೂರ್ವಕವಾಗಿ ಹಣ ಸಂಗ್ರಹಣೆ ಮಾಡತ್ತಿದ್ದಾರೆ ಎಂಬ ದೂರು ಬಂದರೆ ಅದನ್ನು ತನಿಖೆ ಮಾಡುವುದು, ಸಮಸ್ಯೆ ಬಗೆಹರಿಸುವುದು ನಿಮ್ಮ ಕರ್ತವ್ಯವಲ್ಲವೇ ಎಂದು ಸರ್ಕಾರವನ್ನು ಪ್ರಶ್ನಿಸಿದೆ.

ಸರ್ಕಾರವು ಬಲವಂತವಾಗಿ ಹಣ ವಸೂಲಿ ಮಾಡುತ್ತಿರುವುದರ ಬಗ್ಗೆ ನಮಗೆ ಯಾವುದೇ ದೂರುಗಳು ಬಂದಿಲ್ಲ ಮತ್ತು ಸರ್ಕಾರಿ ಜಾಗದಲ್ಲಿ ಫೌಂಡೇಶನ್‌ ಕೆಲಸ ಮಾಡಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿತು.

ಮಾಡುತ್ತಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆಯಿಂದ ನ್ಯಾ.ಎಸ್.ಆರ್‌.ಕೃಷ್ಣಕುಮಾರ್‌ ಹಿಂದೆ ಸರಿದಿದ್ದಾರೆ. ’ಕಾವೇರಿ ಕೂಗು’ ಹೆಸರಲ್ಲಿ ಈಶ ಫೌಂಡೇಶನ್ ಸುಮಾರು ೨೫೩ ಕೋಟಿ ಸಸಿ ನೆಡುವ ಅಭಿಯಾನ ಹಮ್ಮಿಕೊಂಡಿದೆ. ಅದಕ್ಕಾಗಿ ಒಂದು ಸಸಿಗೆ ೪೨ ರೂ.ಗಳಂತೆ ಜನರಿಂದ ೧೦,೬೨೬ ಕೋಟಿ ರೂ. ಸಂಗ್ರಹಿಸಲಾಗುತ್ತಿದೆ ಎಂದು ವಕೀಲ ಎ.ವಿ.ಅಮರನಾಥನ್ ಅರ್ಜಿ ಸಲ್ಲಿಸಿದ್ದರು.

ಈ ಅಭಿಯಾನವು ತಲಕಾವೇರಿಯಿಂದ ತಿರುವರೂರಿನವರೆಗೆ ಕಾವೇರಿ ನದಿಗೆ ಅಡ್ಡಲಾಗಿ ಮರಗಳನ್ನು ಬೆಳೆಸುವ ಯೋಜನೆ ಹೊಂದಿದ್ದು, ಇದಕ್ಕಾಗಿ 253 ಕೋಟಿ ಸಸ್ಯಗಳನ್ನು ಸಂಗ್ರಹಿಸುವ ಗುರಿ ಹೊಂದಿದೆ. ಇದಕ್ಕಾಗಿ ಪ್ರತಿ ಮರಕ್ಕೆ 42 ರೂ. ಸಂಗ್ರಹಿಸುತ್ತಿದ್ದು ಇದು 10,626 ಕೋಟಿ ರೂ. ಆಗುತ್ತದೆ ಎಂದು ಅರ್ಜಿದಾರರ ವಕೀಲ ಎ.ವಿ. ಅಮರನಾಥನ್ ಹೈಕೋರ್ಟ್ ಗೆ ತಿಳಿಸಿದ್ದಾರೆ.

ಅರ್ಜಿದಾರ ವಕೀಲ ಎ.ವಿ.ಅಮರನಾಥನ್, ಸಸಿ ನೆಡುವುದಕ್ಕೆ ಆಕ್ಷೇಪವಿಲ್ಲ. ಆದರೆ ಸರ್ಕಾರಿ ಜಮೀನಿನಲ್ಲಿ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಸಸಿ ನೆಡಲು ಜನರಿಂದ ಸಾವಿರಾರು ಕೋಟಿ ರೂ. ಸಂಗ್ರಹ ಮಾಡುತ್ತಿರುವುದಕ್ಕೆ ವಿರೊಧವಿದೆ ಎಂದು ಹೇಳಿದ್ದರು.

ಸಮಾನತೆ ಮತ್ತು ನ್ಯಾಯದ ಹಿತದೃಷ್ಟಿಯಿಂದ ‘ಕಾವೇರಿ ಕೂಗು ಯೋಜನೆ’ಗಾಗಿ ಸಾರ್ವಜನಿಕರಿಂದ ಯಾವುದೇ ಹಣವನ್ನು ಸಂಗ್ರಹಿಸಬಾರದು ಎಂದು ಈ ಹಿಂದೆ ಕರ್ನಾಟಕ ಹೈಕೋರ್ಟ್‌ ಜಗ್ಗಿ ವಾಸುದೇವ್ ನೇತೃತ್ವದ ಇಶಾ ಫೌಂಡೇಶನ್‌ಗೆ ನಿರ್ದೇಶನ ನೀಡಿತ್ತು.

ಪಿಐಎಲ್ ಪ್ರಕಾರ, ಕಾವೇರಿ ನದಿಗೆ ಅಡ್ಡಲಾಗಿ ತಲಕಾವೆರಿಯಿಂದ ತಿರುವರೂರುವರೆಗೆ ಮರಗಳನ್ನು ನೆಡಲು ಇಶಾ ಪ್ರತಿಷ್ಠಾನ ಯೋಜಿಸುತ್ತಿದೆ. ಅದಕ್ಕಾಗಿ 639.1 ಕಿ.ಮೀ ಉದ್ದ ತಲಕಾವೆರಿಯಿಂದ ತಿರುವರೂರುವರೆಗೆ ತನ್ನ ಬೈಕ್ ರ್ಯಾಲಿಯನ್ನು ಪ್ರಾರಂಭಿಸಿದೆ. “ಕಾವೇರಿ ಜಲಾನಯನ ಪ್ರದೇಶಕ್ಕೆ ಸಂಬಂಧಿಸಿದಂತೆ ಅಧ್ಯಯನಗಳನ್ನು ನಡೆಸಿದೆ ಎಂದು ಫೌಂಡೇಶನ್ ಹೇಳುತ್ತದೆ. ಆದರೆ ಅದರ ವರದಿಯನ್ನು ರಾಜ್ಯಕ್ಕೆ ಸಲ್ಲಿಸಬೇಕಾಗಿತ್ತು. ತಾವು ಮಾಡಿದ ಅಧ್ಯಯನಗಳನ್ನು ಚರ್ಚಿಸಿದ ನಂತರ ರಾಜ್ಯವು ಅನುಮೋದನೆ ನೀಡಬೇಕು. ಆದರೆ ಅಂತಹ ಯಾವುದೇ ಪ್ರಕ್ರಿಯೆಯನ್ನು ಕೈಗೊಳ್ಳಲಾಗುವುದಿಲ್ಲ. ರಾಜ್ಯದಿಂದ ಸರಿಯಾದ ಅನುಮೋದನೆ ಪಡೆಯದೆ ಯಾವುದೇ ಖಾಸಗಿ ಸಂಸ್ಥೆಗೆ ಸರ್ಕಾರಿ ಜಮೀನಿನಲ್ಲಿ ಯಾವುದೇ ಕೆಲಸ ಮಾಡಲು ಅನುಮತಿ ನೀಡಲಾಗುವುದಿಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...