Homeಕರ್ನಾಟಕಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕಾನೂನಿಗಿಂತ ಮಿಗಿಲಲ್ಲ: ಜಗ್ಗಿ ವಾಸುದೇವ್‌ಗೆ ಹೈಕೋರ್ಟ್‌ ತರಾಟೆ..

ಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕಾನೂನಿಗಿಂತ ಮಿಗಿಲಲ್ಲ: ಜಗ್ಗಿ ವಾಸುದೇವ್‌ಗೆ ಹೈಕೋರ್ಟ್‌ ತರಾಟೆ..

- Advertisement -
- Advertisement -

’ಕಾವೇರಿ ಕೂಗು’ ಅಭಿಯಾನಕ್ಕಾಗಿ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಸಂಗ್ರಹ ಮಾಡಿರುವ ಇಶಾ ಫೌಂಡೇಶನ್‌ ಸ್ಥಾಪಕ ಜಗ್ಗಿ ವಾಸುದೇವ್‌ ಅಫಿಡವಿಟ್‌ ಮೂಲಕ ಎಷ್ಟು ಹಣ ಸಂಗ್ರಹಿಸಿದ್ದಾರೆ ಮತ್ತು ಯಾವೆಲ್ಲಾ ವಿಧಾನಗಳ ಮೂಲಕ ಸಂಗ್ರಹಿಸಲಾಗಿದೆ ಎಂಬುದನ್ನು ಬಹಿರಂಗಪಡಿಸಬೇಕೆಂದು ಕರ್ನಾಟಕ ಹೈಕೋರ್ಟ್‌ ಆದೇಶಿಸಿದೆ.

ಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕೂಡ ಕಾನೂನಿಗಿಂತ ಮಿಗಿಲಲ್ಲ ಎಂದು ಒತ್ತಿ ಹೇಳಿದ ಮುಖ್ಯ ನ್ಯಾಯಮೂರ್ತಿ ಅಭಯ್‌ ಓಕ ಮತ್ತು ಹೇಮಂತ್‌ ಚಂದನ್‌ಗೌಡರ್‌ ಅವರಿದ್ದ ಪೀಠ, ಜಗ್ಗಿ ವಾಸುದೇವ್‌ ಸಂಗ್ರಹಿಸಿರುವ ಹಣದ ಲೆಕ್ಕ ಕೊಡಬೇಕು ಎಂದು ತಾಕೀತು ಮಾಡಿದೆ.

ಕಾವೇರಿ ಕೂಗು ಯೋಜನೆಗೆ ಯಾವ ಕಾರಣಕ್ಕೂ ಸಾರ್ವಜನಿಕರಿಂದ ಹಣ ಸಂಗ್ರಹಿಸಬಾರದು ಎಂದು ವಕೀಲ ಎ.ವಿ. ಅಮರನಾಥನ್ ಸಲ್ಲಿಸಿದ ಸಾರ್ವಜನಿಕ ಹಿತರಕ್ಷಣಾ ಅರ್ಜಿಯ ವಿಚಾರಣೆ ನಡೆಸಿದ ಪೀಠ ಈ ತೀರ್ಮಾನಕ್ಕೆ ಬಂದಿದೆ.

ಯಾರಾದರೂ ಜನರಿಗೆ ಅರಿವು ಮೂಡಿಸಿದರೆ ಅದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಅದರ ನೆಪದಲ್ಲಿ ಜನರಿಂದ ಒತ್ತಾಯಪೂರ್ವಕವಾಗಿ ಹಣ ಸಂಗ್ರಹಿಸುವುದನ್ನು ಒಪ್ಪುವುದಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಜಗ್ಗಿ ವಾಸುದೇವ್ ಹಣ ಸಂಗ್ರಹಿಸುವಂತಿಲ್ಲ: ಹೈಕೋರ್ಟ್ ನಲ್ಲಿ ಪಿ.ಐ.ಎಲ್

ಈ ಹಣ ಸಂಗ್ರಹಣೆಯ ವಿಚಾರದಲ್ಲಿ ಯಾವುದೇ ತನಿಖೆ ನಡೆಸದೇ, ಕೈಕಟ್ಟಿ ಕೂತಿರುವ ರಾಜ್ಯಸರ್ಕಾರವನ್ನು ಸಹ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ರಾಜ್ಯಸರ್ಕಾರದ ಹೆಸರಿನಲ್ಲಿ ಯಾರಾದರೂ ಜನರಿಂದ ಒತ್ತಾಯಪೂರ್ವಕವಾಗಿ ಹಣ ಸಂಗ್ರಹಣೆ ಮಾಡತ್ತಿದ್ದಾರೆ ಎಂಬ ದೂರು ಬಂದರೆ ಅದನ್ನು ತನಿಖೆ ಮಾಡುವುದು, ಸಮಸ್ಯೆ ಬಗೆಹರಿಸುವುದು ನಿಮ್ಮ ಕರ್ತವ್ಯವಲ್ಲವೇ ಎಂದು ಸರ್ಕಾರವನ್ನು ಪ್ರಶ್ನಿಸಿದೆ.

ಸರ್ಕಾರವು ಬಲವಂತವಾಗಿ ಹಣ ವಸೂಲಿ ಮಾಡುತ್ತಿರುವುದರ ಬಗ್ಗೆ ನಮಗೆ ಯಾವುದೇ ದೂರುಗಳು ಬಂದಿಲ್ಲ ಮತ್ತು ಸರ್ಕಾರಿ ಜಾಗದಲ್ಲಿ ಫೌಂಡೇಶನ್‌ ಕೆಲಸ ಮಾಡಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿತು.

ಮಾಡುತ್ತಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆಯಿಂದ ನ್ಯಾ.ಎಸ್.ಆರ್‌.ಕೃಷ್ಣಕುಮಾರ್‌ ಹಿಂದೆ ಸರಿದಿದ್ದಾರೆ. ’ಕಾವೇರಿ ಕೂಗು’ ಹೆಸರಲ್ಲಿ ಈಶ ಫೌಂಡೇಶನ್ ಸುಮಾರು ೨೫೩ ಕೋಟಿ ಸಸಿ ನೆಡುವ ಅಭಿಯಾನ ಹಮ್ಮಿಕೊಂಡಿದೆ. ಅದಕ್ಕಾಗಿ ಒಂದು ಸಸಿಗೆ ೪೨ ರೂ.ಗಳಂತೆ ಜನರಿಂದ ೧೦,೬೨೬ ಕೋಟಿ ರೂ. ಸಂಗ್ರಹಿಸಲಾಗುತ್ತಿದೆ ಎಂದು ವಕೀಲ ಎ.ವಿ.ಅಮರನಾಥನ್ ಅರ್ಜಿ ಸಲ್ಲಿಸಿದ್ದರು.

ಈ ಅಭಿಯಾನವು ತಲಕಾವೇರಿಯಿಂದ ತಿರುವರೂರಿನವರೆಗೆ ಕಾವೇರಿ ನದಿಗೆ ಅಡ್ಡಲಾಗಿ ಮರಗಳನ್ನು ಬೆಳೆಸುವ ಯೋಜನೆ ಹೊಂದಿದ್ದು, ಇದಕ್ಕಾಗಿ 253 ಕೋಟಿ ಸಸ್ಯಗಳನ್ನು ಸಂಗ್ರಹಿಸುವ ಗುರಿ ಹೊಂದಿದೆ. ಇದಕ್ಕಾಗಿ ಪ್ರತಿ ಮರಕ್ಕೆ 42 ರೂ. ಸಂಗ್ರಹಿಸುತ್ತಿದ್ದು ಇದು 10,626 ಕೋಟಿ ರೂ. ಆಗುತ್ತದೆ ಎಂದು ಅರ್ಜಿದಾರರ ವಕೀಲ ಎ.ವಿ. ಅಮರನಾಥನ್ ಹೈಕೋರ್ಟ್ ಗೆ ತಿಳಿಸಿದ್ದಾರೆ.

ಅರ್ಜಿದಾರ ವಕೀಲ ಎ.ವಿ.ಅಮರನಾಥನ್, ಸಸಿ ನೆಡುವುದಕ್ಕೆ ಆಕ್ಷೇಪವಿಲ್ಲ. ಆದರೆ ಸರ್ಕಾರಿ ಜಮೀನಿನಲ್ಲಿ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಸಸಿ ನೆಡಲು ಜನರಿಂದ ಸಾವಿರಾರು ಕೋಟಿ ರೂ. ಸಂಗ್ರಹ ಮಾಡುತ್ತಿರುವುದಕ್ಕೆ ವಿರೊಧವಿದೆ ಎಂದು ಹೇಳಿದ್ದರು.

ಸಮಾನತೆ ಮತ್ತು ನ್ಯಾಯದ ಹಿತದೃಷ್ಟಿಯಿಂದ ‘ಕಾವೇರಿ ಕೂಗು ಯೋಜನೆ’ಗಾಗಿ ಸಾರ್ವಜನಿಕರಿಂದ ಯಾವುದೇ ಹಣವನ್ನು ಸಂಗ್ರಹಿಸಬಾರದು ಎಂದು ಈ ಹಿಂದೆ ಕರ್ನಾಟಕ ಹೈಕೋರ್ಟ್‌ ಜಗ್ಗಿ ವಾಸುದೇವ್ ನೇತೃತ್ವದ ಇಶಾ ಫೌಂಡೇಶನ್‌ಗೆ ನಿರ್ದೇಶನ ನೀಡಿತ್ತು.

ಪಿಐಎಲ್ ಪ್ರಕಾರ, ಕಾವೇರಿ ನದಿಗೆ ಅಡ್ಡಲಾಗಿ ತಲಕಾವೆರಿಯಿಂದ ತಿರುವರೂರುವರೆಗೆ ಮರಗಳನ್ನು ನೆಡಲು ಇಶಾ ಪ್ರತಿಷ್ಠಾನ ಯೋಜಿಸುತ್ತಿದೆ. ಅದಕ್ಕಾಗಿ 639.1 ಕಿ.ಮೀ ಉದ್ದ ತಲಕಾವೆರಿಯಿಂದ ತಿರುವರೂರುವರೆಗೆ ತನ್ನ ಬೈಕ್ ರ್ಯಾಲಿಯನ್ನು ಪ್ರಾರಂಭಿಸಿದೆ. “ಕಾವೇರಿ ಜಲಾನಯನ ಪ್ರದೇಶಕ್ಕೆ ಸಂಬಂಧಿಸಿದಂತೆ ಅಧ್ಯಯನಗಳನ್ನು ನಡೆಸಿದೆ ಎಂದು ಫೌಂಡೇಶನ್ ಹೇಳುತ್ತದೆ. ಆದರೆ ಅದರ ವರದಿಯನ್ನು ರಾಜ್ಯಕ್ಕೆ ಸಲ್ಲಿಸಬೇಕಾಗಿತ್ತು. ತಾವು ಮಾಡಿದ ಅಧ್ಯಯನಗಳನ್ನು ಚರ್ಚಿಸಿದ ನಂತರ ರಾಜ್ಯವು ಅನುಮೋದನೆ ನೀಡಬೇಕು. ಆದರೆ ಅಂತಹ ಯಾವುದೇ ಪ್ರಕ್ರಿಯೆಯನ್ನು ಕೈಗೊಳ್ಳಲಾಗುವುದಿಲ್ಲ. ರಾಜ್ಯದಿಂದ ಸರಿಯಾದ ಅನುಮೋದನೆ ಪಡೆಯದೆ ಯಾವುದೇ ಖಾಸಗಿ ಸಂಸ್ಥೆಗೆ ಸರ್ಕಾರಿ ಜಮೀನಿನಲ್ಲಿ ಯಾವುದೇ ಕೆಲಸ ಮಾಡಲು ಅನುಮತಿ ನೀಡಲಾಗುವುದಿಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...