Homeನಿಜವೋ ಸುಳ್ಳೋಅಯೋಧ್ಯೆಯ ವಿವಾದಿತ ಜಾಗದಲ್ಲಿ ಚರ್ಚ್‌ ನಿರ್ಮಿಸಲು ಜಾಗ ಕೊಡಬೇಕು: ರಾನು ಮೊಂಡಲ್‌??

ಅಯೋಧ್ಯೆಯ ವಿವಾದಿತ ಜಾಗದಲ್ಲಿ ಚರ್ಚ್‌ ನಿರ್ಮಿಸಲು ಜಾಗ ಕೊಡಬೇಕು: ರಾನು ಮೊಂಡಲ್‌??

- Advertisement -
- Advertisement -

ಬಾಬ್ರಿ ಮಸೀದಿ ಧ್ವಂಸದ ನಂತರ ಬಹುನೀರಿಕ್ಷಿತ ತೀರ್ಪು ಸುಪ್ರೀಂ ಕೋರ್ಟ್‌‌ನಿಂದ ಹೊರಬಿದ್ದಿದೆ. ಅಲ್ಲಿ ರಾಮಮಂದಿರ ನಿರ್ಮಿಸಬೇಕೆಂದು, ಮುಸ್ಲಿಂಮರಿಗೆ ಮಸೀದಿ ಕಟ್ಟಲು ಬೇರೆಡೆ 5 ಎಕರೆ ಜಾಗ ನಿಡಬೇಕೆಂದು ತೀರ್ಪಿತ್ತಿದೆ. ಇಂತಹ ಸೂಕ್ಷ್ಮ ಸಮಯದಲ್ಲಿ ರೈಲ್ವೆ ನಿಲ್ದಾಣದಲ್ಲಿ ಭಿಕ್ಷೆ ಬೇಡುತ್ತಿದ್ದ ತನ್ನ ಸುಮಧುರ ಕಂಠದಿಂದ ರಾತ್ರೋರಾತ್ರಿ ಸ್ಟಾರ್‌ ಆದ ರಾನು ಮೊಂಡಲ್‌ ಅಯೋಧ್ಯೆಯ ವಿವಾದಿತ ಜಾಗದಲ್ಲಿ ಚರ್ಚ್‌ ನಿರ್ಮಿಸಲು ಜಾಗ ಕೊಡಬೇಕು ಎಂದು ಹೇಳಿದ್ದಾರೆ ಎಂಬ ಪೋಸ್ಟ್‌ಗಳು ಎಲ್ಲೆಡೆ ಹರಿದಾಡುತ್ತಿವೆ.

ಟ್ವಿಟ್ಟರ್‌ನಲ್ಲಿ 20 ಲಕ್ಷ ಅನುಯಾಯಿಗಳನ್ನು ಹೊಂದಿರುವ ಲೇಖಕಿ ಮಧು ಪೂರ್ಣಿಮ ಕಿಶ್ವರ್‌ ಎಂಬುವವರು ಪ್ರಶಾಂತ್‌ ಆರ್‌ಎಸ್‌ಎಸ್‌ ಎಂಬುವವರ ಟ್ವೀಟ್‌ ಒಂದನ್ನು ರೀಟ್ವೀಟ್‌ ಮಾಡಿದ್ದಾರೆ. ಅದರಲ್ಲಿ “ಅಯೋಧ್ಯೆಯ ವಿವಾದಿತ ಜಾಗದಲ್ಲಿ ಚರ್ಚ್‌ ನಿರ್ಮಿಸಲು ಜಾಗ ಕೊಡಬೇಕು ಎಂದು ರಾನು ಮೊಂಡಲ್‌ ಹೇಳಿದ್ದಾರೆ. ಅವಳು ರೈಲು ನಿಲ್ದಾಣದಲ್ಲಿ ಕುಳಿತಿದ್ದರೆ ಚೆನ್ನಾಗಿರುತ್ತಿತ್ತು ಬದಲಿಗೆ ಈಗ ನಮ್ಮ ತಲೆಯ ಮೇಲೆ ಕುಳಿತಿದ್ದಾಳೆ” ಎಂದು ಬರೆದಿದೆ.

ಇದಕ್ಕೆ ಮಧು ಪೂರ್ಣಿಮ ಕಿಶ್ವರ್‌ ’ನಿಜವಾಗಿಯೂ ನಿರಾಶಾದಾಯಕ. ಈಕೆ ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ವಾಸಿಸುತ್ತಿದ್ದಾಗ ಮಿಷನರಿಗಳು ಅವಳನ್ನು ಏಕೆ ಕಂಡುಹಿಡಿಯಲಿಲ್ಲ? ಎಂದು ಸೇರಿಸಿ ಟ್ವೀಟ್‌ ಮಾಡಿದ್ದಾರೆ. ಇದನ್ನು ಸುಮಾರು ಎರಡೂವರೆ ಸಾವಿರ ಜನರು ಇಷ್ಟಪಟ್ಟಿದ್ದಾರೆ. ಅಲ್ಲದೇ ನೂರಾರು ಜಾಲತಾಣಿಗರು ಇದೇ ವಿಷಯವನ್ನು ಷೇರ್‌ ಮಾಡಿದ್ದಾರೆ.

ಸತ್ಯ ಏನು?

ಆದರೆ ಇದರ ಫ್ಯಾಕ್ಟ್‌ ಚೆಕ್‌ ನಡೆಸಿದಾಗ ಈ ಸುದ್ದಿ ಸಂಪೂರ್ಣ ಸುಳ್ಳು ಎಂದು ತಿಳಿದುಬಂದಿದೆ. ಈ ಕುರಿತು ಮೊದಲ ಸುಳ್ಳು ಲೇಖನ ’Fauxy’ ಎಂಬ ವೆಬ್‌ ಸೈಟ್‌ನಲ್ಲಿ ಪ್ರಕಟಗೊಂಡಿದೆ. ನಂತರ ಅಲ್ಲಿಂದ ಉಳಿದವರು ತೆಗೆದಕೊಂಡು ಷೇರ್ ಮಾಡಿ ಸುಳ್ಳು ಹರಿಡಿದ್ದಾರೆ. ಈ ವೆಬ್‌ ಸೈಟ್‌ನ ಕೊನೆಯಲ್ಲಿ “ದಿ ಫಾಕ್ಸಿ ಒಂದು ವಿಡಂಬನಾತ್ಮಕ ವೆಬ್ ಪೋರ್ಟಲ್. ಈ ವೆಬ್‌ಸೈಟ್‌ನ ವಿಷಯವು ಕಾಲ್ಪನಿಕ ಕೃತಿಯಾಗಿದೆ. ದಿ ಫಾಕ್ಸಿಯ ಲೇಖನಗಳನ್ನು ನಿಜವಾದ ಮತ್ತು ನಿಜವೆಂದು ಗೊಂದಲಗೊಳಿಸದಂತೆ ಓದುಗರಿಗೆ ಸೂಚಿಸಲಾಗಿದೆ. ” ಎಂದು ಬರೆದುಕೊಂಡಿದ್ದಾರೆ. ಅಂದರೆ ಸುಳ್ಳು ಸುದ್ದಿ ಹರಡಲೆಂದೇ ಇರುವ ವೆಬ್‌ ಇದಾಗಿದೆ.

ಅಂದರೆ ರಾನು ಮೊಂಡಲ್‌ ಚರ್ಚ್‌‌ಗೆ ಜಾಗಬೇಕೆಂದು ಎಲ್ಲಿಯೂ ಹೇಳಿಲ್ಲ. ಆಕೆ ಕ್ರಿಶ್ಚಿಯನ್ ಆದ ಕಾರಣಕ್ಕಾಗಿ ಆಕೆಯ ವಿರುದ್ಧ ಅಪಪ್ರಚಾರ ಮಾಡಲು ಕೆಲವರು ಹೀಗೆ ಸುಳ್ಳು ಹಬ್ಬಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...