Homeಅಂಕಣಗಳುಎಲ್ಲರಿಗೂ ಭೂಮಿ ಕೊಡಿ, ಸರ್ಕಾರದ ಮುಂದೆ ರೈತರನ್ನು ಭಿಕ್ಷುಕರನ್ನಾಗಿ ಮಾಡಬೇಡಿ

ಎಲ್ಲರಿಗೂ ಭೂಮಿ ಕೊಡಿ, ಸರ್ಕಾರದ ಮುಂದೆ ರೈತರನ್ನು ಭಿಕ್ಷುಕರನ್ನಾಗಿ ಮಾಡಬೇಡಿ

ಸರ್ಕಾರ ರೈತರ ಹೆಸರಿಗೆ 5000 ಹಾಕುವ ಬದಲು ವ್ಯವಸಾಯದಲ್ಲಿ ಕ್ರಾಂತಿ ತರುವ ಪಣ ತೊಡಬೇಕು.

- Advertisement -
- Advertisement -

ರೈತರ ಸಾಲಮನ್ನಾ ಪ್ರಹಸನಕ್ಕೆ ಇತಿಶ್ರೀ ಹಾಡಿ ಅವರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ಗೊತ್ತು ಮಾಡಿ ಎಂದು ಸರ್ಕಾರಕ್ಕೆ ಆಗ್ರಹ ಪೂರ್ವಕವಾಗಿ ಹೇಳುತ್ತಿದ್ದೇನೆ.

ರೈತರ ಸಾಲಮನ್ನಾ ಶ್ರೀಮಂತ ರೈತರಿಗೆ ಒಂದು ವರದಾನ. ಪ್ರತಿವರ್ಷ ಈ ಶ್ರೀಮಂತ ರೈತರು ಒಂದು ಲಕ್ಷ, ಎರಡು ಲಕ್ಷ ಬ್ಯಾಂಕಿನಿಂದ ಸಾಲ ಪಡೆಯುವುದು ವರ್ಷದ ಕೊನೆಯಲ್ಲಿ ಆ ಸಾಲಮನ್ನಾ ಮಾಡಿಸುವುದು. ಹತ್ತಾರು ವರ್ಷಗಳಿಂದ ನಡೆದೇ ಇದೆ. ಶ್ರೀಮಂತ ರೈತರು ಸೈಟು ಕೊಳ್ಳುವುದು, ಕಂಪೆನಿ ಷೇರುಕೊಳ್ಳುವುದಕ್ಕೆ, ವ್ಯವಸಾಯದ ಜೊತೆಗೆ ಅಕ್ಕಿ ಗಿರಣಿ, ಕಿರಾಣಿ ವ್ಯಾಪಾರ ಮಳಿಗೆ ತೆರೆಯಲು ಈ ಸಾಲಮನ್ನಾ ಹಣ ಬಳಕೆಯಾಗುತ್ತಿದೆ.

ಎರಡು ನಾಲ್ಕು ಎಕರೆ ಜಮೀನು ಹೊಂದಿದವರು ರೈತಾಪಿಗಳಲ್ಲವೇ? ಇಂತಹವರು ಶೇ.60ರಷ್ಟು ಜನ ಇದ್ದಾರೆ. ಇವರಿಗೆ ಸಿಗುವ ಸಾಲ ಬಹಳ ಕಡಿಮೆ. ಇವರಿಗೆ ಸಾಲದ ಬದಲು ಪವರ್ ಟಿಲ್ಲರ್‍ನಲ್ಲಿ ಇವರ ಭೂಮಿಯನ್ನ ಉಚಿತವಾಗಿ ಉತ್ತಿ ಕೊಡಬೇಕು, ಕಟಾವು ಮಾಡುವ ಸಾಧನೆ ಡ್ರೈಯರ್ ಹಾರ್ವೆಸ್ಟರ್‍ಗಳನ್ನು ಸಕಾಲದಲ್ಲಿ ಉಚಿತವಾಗಿ ಒದಗಿಸಬೇಕು.

ಕಾರ್ಖಾನೆಯಲ್ಲಿ ತಯಾರಾದ ಪದಾರ್ಥಕ್ಕೆ ಬೆಲೆ ನಿರ್ಧರಿಸುವಾಗ ಅಲ್ಲಿ ಅನುಸರಿಸುವ ಎಲ್ಲ ನಿಯಮಗಳನ್ನೂ ವೈಜ್ಞಾನಿಕವಾಗಿ ರೈತನಿಗೂ ಅನುಸರಿಸಬೇಕು. ವೈಜ್ಞಾನಿಕವಾಗಿ ಬೆಳೆದ ಬೆಳೆಗೆ ಬೆಲೆ ನಿರ್ಧರಿಸಲು ಒಂದು ವ್ಯವಸ್ಥೆ ಮಾಡಲಾಗಿತ್ತು. ಆ ಸಮಿತಿ ತನ್ನ ಅಂತಿಮ ವರದಿ ನೀಡಿದೆ. ಅದನ್ನು ಸರ್ಕಾರ ಕೂಡಲೇ ಅಂಗೀಕರಿಸಿ ಚಾಲ್ತಿಗೆ ಕೊಡಬೇಕು. ಸಾಲಮನ್ನಾ ಹುನ್ನಾರವನ್ನು ಕೊನೆಗಾಣಿಸಬೇಕು.

ಸಣ್ಣ ರೈತರು ತಾವೇ ಹೊಲದಲ್ಲಿ ದುಡಿದು ವ್ಯವಸಾಯ ಮಾಡುತ್ತಾರೆ. 20 ಎಕರೆ ಮೇಲೆ ಜಮೀನುಳ್ಳವರು ಸಂಪೂರ್ಣವಾಗಿ ಕೂಲಿಕಾರ್ಮಿಕರನ್ನೇ ಅವಲಂಬಿಸಿದ್ದಾರೆ. ಈ ವ್ಯವಸಾಯ ಕೂಲಿ ದರ ದಿನಕ್ಕೆ 500ರೂ.ಗಳು. ಕೇರಳದಲ್ಲಿ 800ರೂ ಎಂದು ಕೇಳಲ್ಪಟ್ಟಿದ್ದೇನೆ. ಇಷ್ಟೊಂದು ಕೂಲಿ ಕೊಟ್ಟು ತಮ್ಮ ಎಲ್ಲ ಜಮೀನಿನಲ್ಲೂ ಆಹಾರ ಧಾನ್ಯ ಬೆಳೆಯಲು ಆಗುವುದಿಲ್ಲ. ಬೆಳೆದ ಬೆಳೆಯನ್ನೆಲ್ಲಾ ಮಾರಾಟ ಮಾಡಿದರೂ ಬೆಳೆದವನಿಗೆ ಶೇ.30ರಷ್ಟು ಲಾಭ ದೊರೆಯುವುದಿಲ್ಲ. ಆದ್ದರಿಂದ ಈ ದೊಡ್ಡ ಹಿಡುವಳಿದಾರರು ಸ್ವಲ್ಪ ಜಮೀನಿನಲ್ಲಿ ಆಹಾರ ಧಾನ್ಯ ಬೆಳೆದು ಉಳಿದ ಜಮೀನಿನಲ್ಲಿ ವ್ಯಾಪಾರಕ್ಕೆ ಅನುಕೂಲವಾಗುವ ಶುಂಠಿ, ಕೊತ್ತಂಬರಿ, ತರ್ಕಾರಿ, ಹೂವು ಬೆಳೆಯುತ್ತಾರೆ. ಇನ್ನೂ ಹೆಚ್ಚು ಜಮೀನುಳ್ಳವರು ತೇಗ ಮೊದಲಾದ ಲಾಭ ತರುವ ಮರಗಳನ್ನು ಬೆಳೆಯುತ್ತಾರೆ. ಇದರಿಂದಾಗಿ ಭಾರತದಲ್ಲಿ ಆಹಾರ ಧಾನ್ಯಗಳ ಕೊರತೆ ಕಾಣಿಸಿಕೊಂಡಿದೆ. ಸಿ.ಸುಬ್ರಮಣ್ಯಂ ಅವರು ವ್ಯವಸಾಯ ಸಚಿವರಾಗಿದ್ದಾಗ ಆಹಾರ ಕ್ರಾಂತಿ ಒಂದನ್ನು ಮಾಡಿದ್ದರು. ಎಂದು ಇದನ್ನು ಕರೆದರು. ಭಾರತದಲ್ಲಿ ಆಹಾರ ಧಾನ್ಯಕ್ಕೆ ಕೊರತೆ ಉಂಟಾಗದಂತೆ ಅವರು ನೋಡಿಕೊಂಡರು. ಭಾರತ ವ್ಯವಸಾಯ ಪ್ರಧಾನ ದೇಶ ಭಾರತೀಯರು ಭಿಕ್ಷೆ ಪಾತ್ರೆ ಹಿಡಿದು ಅನ್ಯ ದೇಶಗಳ ಬಳಿ ಹೋಗಬಾರದು ಅದು ಅಪಮಾನಕರ ಎಂದು ಸಿ.ಸುಬ್ರಮಣ್ಯಂ ಅವರ ಧ್ಯೇಯವಾಗಿತ್ತು. ಅದಕ್ಕಾಗಿ ಅವರ ಕಾಲದಲ್ಲಿ ಅನೇಕ ದೊಡ್ಡ ನದಿಗಳಿಗೆ ಅಡ್ಡಗಟ್ಟಿ ಹಾಕಿ ದೊಡ್ಡ ಅಣೆಕಟ್ಟುಗಳನ್ನು ಕಟ್ಟಿಸಿದರು. ಹೊಲಗದ್ದೆಗಳ ಬದುವಿಗೆ ಗೊಬ್ಬರದ ಗಿಡಗಳನ್ನು ಬೆಳೆಸಲಾಯಿತು. ಒಡ್ಡುಗಳನ್ನು ಹಾಕಲಾಯಿತು. ಆಗ ವ್ಯವಸಾಯದ ಕೂಲಿ ಇಷ್ಟೊಂದು ಇರಲಿಲ್ಲ. ಹೀಗಾಗಿ ಭಾರತವು ಆಹಾರದ ವಿಷಯದಲ್ಲಿ ಸ್ವಪರಿಪೂರ್ಣವಾಯಿತು. ಈಗ ನಾವು ಸಕ್ಕರೆ, ಗೋಧಿ, ಅಕ್ಕಿ ಮುಂತಾದುದನ್ನು ಆಮದು ಮಾಡಿಕೊಳ್ಳುವ ಸ್ಥಿತಿಗೆ ಬಂದಿದ್ದೇವೆ.

ಬಡವರನೇಕರ ಕೈಯಲ್ಲಿ ಭೂಮಿ ಇಲ್ಲ; ದುಡಿದು ತಿನ್ನುತ್ತೇವೆಂದರೆ ತಮ್ಮದಾಗಿ ನೆಲ ಇಲ್ಲ. ಈ ಭೂಮಿಹೀನರೂ ಭಾರತೀಯರೆ ಅಲ್ಲವೇ? ಅವರಿಗೆ ಓಟು ಕೊಟ್ಟಿದ್ದೇವೆ, ಊಟ ಕೊಟ್ಟಿಲ್ಲ, ಉದ್ಯೋಗ ಕೊಟ್ಟಿಲ್ಲ. ಸರ್ಕಾರ ಭೂಮಿಯ ಮರು ಹಂಚಿಕೆ ಮಾಡಬೇಕು. ಆದಾಗಬೇಕಾದರೆ ಸೀಲಿಂಗ್‍ಅನ್ನು ಇಳಿಸಬೇಕು. ಭೂಮಿ ಕಾಯ್ದೆಯಲ್ಲಿ ತಿದ್ದುಪಡಿ ತಂದು ದುಡಿಯಲು ತಯಾರಿರುವ ಭೂಹೀನರಿಗೆ ತಲಾ 5 ಎಕರೆ ಖುಷ್ಕಿ ಅಥವಾ 3 ಎಕರೆ ತರಿ ಅಥವಾ ಒಂದು ಎಕರೆ ತೋಟದ ಜಮೀನನ್ನು ನೀಡಬೇಕು. ಹೀಗೆ ನೀಡಿದ ಜಮೀನನ್ನು ಖಾಸಗಿಯವರಿಗೆ ಮಾರಾಟ, ಭೋಗ್ಯ ಆಧಾರ ಮಾಡುವಂತಿಲ್ಲ ಎಂಬ ಕರಾರು ಹಾಕಿ ಭೂಮಿ ಹಂಚಬೇಕು. ಎರಡು ವರ್ಷ ಕಾಲ ಹೀಗೆ ನೀಡಿದ ಜಮೀನನ್ನು ಎರಡು ವರ್ಷ ಕಾಲ ಉಳುಮೆ ಮಾಡದಿದ್ದರೆ, ಆ ಜಮೀನನ್ನು ಅವರ ವಶದಿಂದ ಹಿಂಪಡೆದು ದುಡಿಮೆ ಮಾಡುವ ಬೇರೊಬ್ಬರಿಗೆ ಕೊಡಬೇಕು.

ಸರ್ಕಾರ ರೈತರ ಹೆಸರಿಗೆ 5000 ಹಾಕುವ ಬದಲು ವ್ಯವಸಾಯದಲ್ಲಿ ಕ್ರಾಂತಿ ತರುವ ಪಣ ತೊಡಬೇಕು. ಮೋದಿ ಸರ್ಕಾರ ಭೂಮಿ ನೀಡಿ ರೈತರನ್ನ ಕಾಲ ಮೇಲೆ ನಿಲ್ಲುವ ಹಾಗೆ ಮಾಡಬೇಕೇ ಹೊರತು, ಸರ್ಕಾರದಿಂದ ಭಿಕ್ಷೆಗೆ ಕಾಯುವಂತೆ ಮಾಡುವುದು ಭಾರತೀಯರನ್ನು ಅಪಮಾನಗೊಳಿಸಿದಂತೆ ಎಂದು ತಿಳಿಯಬೇಕು.


ಇದನ್ನು ಓದಿ: ಬಡವರಿಗೆ ನೇರ ನಗದು ವರ್ಗಾವಣೆಯಲ್ಲದೇ ಬೇರೆ ದಾರಿ ಇಲ್ಲ : ’ಶ್ರಮಜೀವಿಗಳಿಗೆ ಲಾಕ್ ಡೌನ್’ ಅಧ್ಯಯನ ವರದಿ ಬಿಡುಗಡೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...