Homeಅಂಕಣಗಳುಎಲ್ಲರಿಗೂ ಭೂಮಿ ಕೊಡಿ, ಸರ್ಕಾರದ ಮುಂದೆ ರೈತರನ್ನು ಭಿಕ್ಷುಕರನ್ನಾಗಿ ಮಾಡಬೇಡಿ

ಎಲ್ಲರಿಗೂ ಭೂಮಿ ಕೊಡಿ, ಸರ್ಕಾರದ ಮುಂದೆ ರೈತರನ್ನು ಭಿಕ್ಷುಕರನ್ನಾಗಿ ಮಾಡಬೇಡಿ

ಸರ್ಕಾರ ರೈತರ ಹೆಸರಿಗೆ 5000 ಹಾಕುವ ಬದಲು ವ್ಯವಸಾಯದಲ್ಲಿ ಕ್ರಾಂತಿ ತರುವ ಪಣ ತೊಡಬೇಕು.

- Advertisement -
- Advertisement -

ರೈತರ ಸಾಲಮನ್ನಾ ಪ್ರಹಸನಕ್ಕೆ ಇತಿಶ್ರೀ ಹಾಡಿ ಅವರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ಗೊತ್ತು ಮಾಡಿ ಎಂದು ಸರ್ಕಾರಕ್ಕೆ ಆಗ್ರಹ ಪೂರ್ವಕವಾಗಿ ಹೇಳುತ್ತಿದ್ದೇನೆ.

ರೈತರ ಸಾಲಮನ್ನಾ ಶ್ರೀಮಂತ ರೈತರಿಗೆ ಒಂದು ವರದಾನ. ಪ್ರತಿವರ್ಷ ಈ ಶ್ರೀಮಂತ ರೈತರು ಒಂದು ಲಕ್ಷ, ಎರಡು ಲಕ್ಷ ಬ್ಯಾಂಕಿನಿಂದ ಸಾಲ ಪಡೆಯುವುದು ವರ್ಷದ ಕೊನೆಯಲ್ಲಿ ಆ ಸಾಲಮನ್ನಾ ಮಾಡಿಸುವುದು. ಹತ್ತಾರು ವರ್ಷಗಳಿಂದ ನಡೆದೇ ಇದೆ. ಶ್ರೀಮಂತ ರೈತರು ಸೈಟು ಕೊಳ್ಳುವುದು, ಕಂಪೆನಿ ಷೇರುಕೊಳ್ಳುವುದಕ್ಕೆ, ವ್ಯವಸಾಯದ ಜೊತೆಗೆ ಅಕ್ಕಿ ಗಿರಣಿ, ಕಿರಾಣಿ ವ್ಯಾಪಾರ ಮಳಿಗೆ ತೆರೆಯಲು ಈ ಸಾಲಮನ್ನಾ ಹಣ ಬಳಕೆಯಾಗುತ್ತಿದೆ.

ಎರಡು ನಾಲ್ಕು ಎಕರೆ ಜಮೀನು ಹೊಂದಿದವರು ರೈತಾಪಿಗಳಲ್ಲವೇ? ಇಂತಹವರು ಶೇ.60ರಷ್ಟು ಜನ ಇದ್ದಾರೆ. ಇವರಿಗೆ ಸಿಗುವ ಸಾಲ ಬಹಳ ಕಡಿಮೆ. ಇವರಿಗೆ ಸಾಲದ ಬದಲು ಪವರ್ ಟಿಲ್ಲರ್‍ನಲ್ಲಿ ಇವರ ಭೂಮಿಯನ್ನ ಉಚಿತವಾಗಿ ಉತ್ತಿ ಕೊಡಬೇಕು, ಕಟಾವು ಮಾಡುವ ಸಾಧನೆ ಡ್ರೈಯರ್ ಹಾರ್ವೆಸ್ಟರ್‍ಗಳನ್ನು ಸಕಾಲದಲ್ಲಿ ಉಚಿತವಾಗಿ ಒದಗಿಸಬೇಕು.

ಕಾರ್ಖಾನೆಯಲ್ಲಿ ತಯಾರಾದ ಪದಾರ್ಥಕ್ಕೆ ಬೆಲೆ ನಿರ್ಧರಿಸುವಾಗ ಅಲ್ಲಿ ಅನುಸರಿಸುವ ಎಲ್ಲ ನಿಯಮಗಳನ್ನೂ ವೈಜ್ಞಾನಿಕವಾಗಿ ರೈತನಿಗೂ ಅನುಸರಿಸಬೇಕು. ವೈಜ್ಞಾನಿಕವಾಗಿ ಬೆಳೆದ ಬೆಳೆಗೆ ಬೆಲೆ ನಿರ್ಧರಿಸಲು ಒಂದು ವ್ಯವಸ್ಥೆ ಮಾಡಲಾಗಿತ್ತು. ಆ ಸಮಿತಿ ತನ್ನ ಅಂತಿಮ ವರದಿ ನೀಡಿದೆ. ಅದನ್ನು ಸರ್ಕಾರ ಕೂಡಲೇ ಅಂಗೀಕರಿಸಿ ಚಾಲ್ತಿಗೆ ಕೊಡಬೇಕು. ಸಾಲಮನ್ನಾ ಹುನ್ನಾರವನ್ನು ಕೊನೆಗಾಣಿಸಬೇಕು.

ಸಣ್ಣ ರೈತರು ತಾವೇ ಹೊಲದಲ್ಲಿ ದುಡಿದು ವ್ಯವಸಾಯ ಮಾಡುತ್ತಾರೆ. 20 ಎಕರೆ ಮೇಲೆ ಜಮೀನುಳ್ಳವರು ಸಂಪೂರ್ಣವಾಗಿ ಕೂಲಿಕಾರ್ಮಿಕರನ್ನೇ ಅವಲಂಬಿಸಿದ್ದಾರೆ. ಈ ವ್ಯವಸಾಯ ಕೂಲಿ ದರ ದಿನಕ್ಕೆ 500ರೂ.ಗಳು. ಕೇರಳದಲ್ಲಿ 800ರೂ ಎಂದು ಕೇಳಲ್ಪಟ್ಟಿದ್ದೇನೆ. ಇಷ್ಟೊಂದು ಕೂಲಿ ಕೊಟ್ಟು ತಮ್ಮ ಎಲ್ಲ ಜಮೀನಿನಲ್ಲೂ ಆಹಾರ ಧಾನ್ಯ ಬೆಳೆಯಲು ಆಗುವುದಿಲ್ಲ. ಬೆಳೆದ ಬೆಳೆಯನ್ನೆಲ್ಲಾ ಮಾರಾಟ ಮಾಡಿದರೂ ಬೆಳೆದವನಿಗೆ ಶೇ.30ರಷ್ಟು ಲಾಭ ದೊರೆಯುವುದಿಲ್ಲ. ಆದ್ದರಿಂದ ಈ ದೊಡ್ಡ ಹಿಡುವಳಿದಾರರು ಸ್ವಲ್ಪ ಜಮೀನಿನಲ್ಲಿ ಆಹಾರ ಧಾನ್ಯ ಬೆಳೆದು ಉಳಿದ ಜಮೀನಿನಲ್ಲಿ ವ್ಯಾಪಾರಕ್ಕೆ ಅನುಕೂಲವಾಗುವ ಶುಂಠಿ, ಕೊತ್ತಂಬರಿ, ತರ್ಕಾರಿ, ಹೂವು ಬೆಳೆಯುತ್ತಾರೆ. ಇನ್ನೂ ಹೆಚ್ಚು ಜಮೀನುಳ್ಳವರು ತೇಗ ಮೊದಲಾದ ಲಾಭ ತರುವ ಮರಗಳನ್ನು ಬೆಳೆಯುತ್ತಾರೆ. ಇದರಿಂದಾಗಿ ಭಾರತದಲ್ಲಿ ಆಹಾರ ಧಾನ್ಯಗಳ ಕೊರತೆ ಕಾಣಿಸಿಕೊಂಡಿದೆ. ಸಿ.ಸುಬ್ರಮಣ್ಯಂ ಅವರು ವ್ಯವಸಾಯ ಸಚಿವರಾಗಿದ್ದಾಗ ಆಹಾರ ಕ್ರಾಂತಿ ಒಂದನ್ನು ಮಾಡಿದ್ದರು. ಎಂದು ಇದನ್ನು ಕರೆದರು. ಭಾರತದಲ್ಲಿ ಆಹಾರ ಧಾನ್ಯಕ್ಕೆ ಕೊರತೆ ಉಂಟಾಗದಂತೆ ಅವರು ನೋಡಿಕೊಂಡರು. ಭಾರತ ವ್ಯವಸಾಯ ಪ್ರಧಾನ ದೇಶ ಭಾರತೀಯರು ಭಿಕ್ಷೆ ಪಾತ್ರೆ ಹಿಡಿದು ಅನ್ಯ ದೇಶಗಳ ಬಳಿ ಹೋಗಬಾರದು ಅದು ಅಪಮಾನಕರ ಎಂದು ಸಿ.ಸುಬ್ರಮಣ್ಯಂ ಅವರ ಧ್ಯೇಯವಾಗಿತ್ತು. ಅದಕ್ಕಾಗಿ ಅವರ ಕಾಲದಲ್ಲಿ ಅನೇಕ ದೊಡ್ಡ ನದಿಗಳಿಗೆ ಅಡ್ಡಗಟ್ಟಿ ಹಾಕಿ ದೊಡ್ಡ ಅಣೆಕಟ್ಟುಗಳನ್ನು ಕಟ್ಟಿಸಿದರು. ಹೊಲಗದ್ದೆಗಳ ಬದುವಿಗೆ ಗೊಬ್ಬರದ ಗಿಡಗಳನ್ನು ಬೆಳೆಸಲಾಯಿತು. ಒಡ್ಡುಗಳನ್ನು ಹಾಕಲಾಯಿತು. ಆಗ ವ್ಯವಸಾಯದ ಕೂಲಿ ಇಷ್ಟೊಂದು ಇರಲಿಲ್ಲ. ಹೀಗಾಗಿ ಭಾರತವು ಆಹಾರದ ವಿಷಯದಲ್ಲಿ ಸ್ವಪರಿಪೂರ್ಣವಾಯಿತು. ಈಗ ನಾವು ಸಕ್ಕರೆ, ಗೋಧಿ, ಅಕ್ಕಿ ಮುಂತಾದುದನ್ನು ಆಮದು ಮಾಡಿಕೊಳ್ಳುವ ಸ್ಥಿತಿಗೆ ಬಂದಿದ್ದೇವೆ.

ಬಡವರನೇಕರ ಕೈಯಲ್ಲಿ ಭೂಮಿ ಇಲ್ಲ; ದುಡಿದು ತಿನ್ನುತ್ತೇವೆಂದರೆ ತಮ್ಮದಾಗಿ ನೆಲ ಇಲ್ಲ. ಈ ಭೂಮಿಹೀನರೂ ಭಾರತೀಯರೆ ಅಲ್ಲವೇ? ಅವರಿಗೆ ಓಟು ಕೊಟ್ಟಿದ್ದೇವೆ, ಊಟ ಕೊಟ್ಟಿಲ್ಲ, ಉದ್ಯೋಗ ಕೊಟ್ಟಿಲ್ಲ. ಸರ್ಕಾರ ಭೂಮಿಯ ಮರು ಹಂಚಿಕೆ ಮಾಡಬೇಕು. ಆದಾಗಬೇಕಾದರೆ ಸೀಲಿಂಗ್‍ಅನ್ನು ಇಳಿಸಬೇಕು. ಭೂಮಿ ಕಾಯ್ದೆಯಲ್ಲಿ ತಿದ್ದುಪಡಿ ತಂದು ದುಡಿಯಲು ತಯಾರಿರುವ ಭೂಹೀನರಿಗೆ ತಲಾ 5 ಎಕರೆ ಖುಷ್ಕಿ ಅಥವಾ 3 ಎಕರೆ ತರಿ ಅಥವಾ ಒಂದು ಎಕರೆ ತೋಟದ ಜಮೀನನ್ನು ನೀಡಬೇಕು. ಹೀಗೆ ನೀಡಿದ ಜಮೀನನ್ನು ಖಾಸಗಿಯವರಿಗೆ ಮಾರಾಟ, ಭೋಗ್ಯ ಆಧಾರ ಮಾಡುವಂತಿಲ್ಲ ಎಂಬ ಕರಾರು ಹಾಕಿ ಭೂಮಿ ಹಂಚಬೇಕು. ಎರಡು ವರ್ಷ ಕಾಲ ಹೀಗೆ ನೀಡಿದ ಜಮೀನನ್ನು ಎರಡು ವರ್ಷ ಕಾಲ ಉಳುಮೆ ಮಾಡದಿದ್ದರೆ, ಆ ಜಮೀನನ್ನು ಅವರ ವಶದಿಂದ ಹಿಂಪಡೆದು ದುಡಿಮೆ ಮಾಡುವ ಬೇರೊಬ್ಬರಿಗೆ ಕೊಡಬೇಕು.

ಸರ್ಕಾರ ರೈತರ ಹೆಸರಿಗೆ 5000 ಹಾಕುವ ಬದಲು ವ್ಯವಸಾಯದಲ್ಲಿ ಕ್ರಾಂತಿ ತರುವ ಪಣ ತೊಡಬೇಕು. ಮೋದಿ ಸರ್ಕಾರ ಭೂಮಿ ನೀಡಿ ರೈತರನ್ನ ಕಾಲ ಮೇಲೆ ನಿಲ್ಲುವ ಹಾಗೆ ಮಾಡಬೇಕೇ ಹೊರತು, ಸರ್ಕಾರದಿಂದ ಭಿಕ್ಷೆಗೆ ಕಾಯುವಂತೆ ಮಾಡುವುದು ಭಾರತೀಯರನ್ನು ಅಪಮಾನಗೊಳಿಸಿದಂತೆ ಎಂದು ತಿಳಿಯಬೇಕು.


ಇದನ್ನು ಓದಿ: ಬಡವರಿಗೆ ನೇರ ನಗದು ವರ್ಗಾವಣೆಯಲ್ಲದೇ ಬೇರೆ ದಾರಿ ಇಲ್ಲ : ’ಶ್ರಮಜೀವಿಗಳಿಗೆ ಲಾಕ್ ಡೌನ್’ ಅಧ್ಯಯನ ವರದಿ ಬಿಡುಗಡೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...