Homeಮುಖಪುಟಒಂದು ಸ್ವತಂತ್ರ ಮಾಧ್ಯಮವನ್ನು ನನಗೆ ಕೊಡಿ, ಮರುಕ್ಷಣ ಈ ಸರ್ಕಾರ ಅಧಿಕಾರದಲ್ಲಿರುವುದಿಲ್ಲ: ರಾಹುಲ್ ಗಾಂಧಿ

ಒಂದು ಸ್ವತಂತ್ರ ಮಾಧ್ಯಮವನ್ನು ನನಗೆ ಕೊಡಿ, ಮರುಕ್ಷಣ ಈ ಸರ್ಕಾರ ಅಧಿಕಾರದಲ್ಲಿರುವುದಿಲ್ಲ: ರಾಹುಲ್ ಗಾಂಧಿ

ಗೆಳಯರೇ, ನೀವೂ ಸಹ ಗುಲಾಮಗಿರಿಗೆ ಒಳಗಾಗುತ್ತಿದ್ದೀರಿ. ಒಂದು ದೇಶದ ಭೂಭಾಗವನ್ನು ಇನ್ನೊಂದು ದೇಶ ಆಕ್ರಮಿಸಿದೆ. ಆದರೆ ಮಾಧ್ಯಮಗಳೂ ಕೂಡ ಸರ್ಕಾರವನ್ನು ಪ್ರಶ್ನಿಸದೇ ಇರುವಂತಹ ಪರಿಸ್ಥಿತಿಯನ್ನು ಜಗತ್ತಿನಲ್ಲಿ ಯಾವುದೇ ದೇಶ ಇಂದು ಎದುರಿಸುತ್ತಿಲ್ಲ.

- Advertisement -
- Advertisement -

“ಒಂದು ಸ್ವತಂತ್ರ ಮಾಧ್ಯಮವನ್ನು ನನಗೆ ಕೊಡಿ. ಸ್ವತಂತ್ರ ಸಂಸ್ಥೆಗಳನ್ನು ನೀಡಿ. ಮರುಕ್ಷಣ ಈ ಕೇಂದ್ರ ಸರ್ಕಾರ ಆಡಳಿತದಲ್ಲಿರುವುದಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಿರೋಧಿಸಿ ಕೈಗೊಂಡಿದ್ದ ಯಾತ್ರೆಯ ಅಂತಿಮ ದಿನವಾದ ಇಂದು ಪಂಜಾಬಿನ ಪಟಿಯಾಲದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಅವರು ನರೇಂದ್ರ ಮೋದಿ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಟ್ರ್ಯಾಕ್ಟರ್‌ ರ್‍ಯಾಲಿ

ವಿರೋಧ ಪಕ್ಷಗಳು ದುರ್ಬಲವಾಗಿವೆ ಎಂಬ ಆರೋಪವನ್ನು ಸಾರಾಸಗಟಾಗಿ ತಳ್ಳಿಹಾಕಿದ ರಾಹುಲ್ ಗಾಂಧಿ, “ದುರ್ಬಲಗೊಂಡಿರುವುದು ವಿರೋಧ ಪಕ್ಷಗಳಲ್ಲ. ನಮ್ಮ ಸುದ್ದಿ ಮಾಧ್ಯಮಗಳನ್ನು, ಸಂಸ್ಥೆಗಳನ್ನು ಎಲ್ಲವನ್ನೂ ಕೈವಶ ಮಾಡಿಕೊಳ್ಳಲಾಗಿದೆ. ಒಂದು ಸ್ವತಂತ್ರ ಮಾಧ್ಯಮವನ್ನು ನನಗೆ ಕೊಡಿ, ಸ್ವತಂತ್ರವಾಗಿರುವ ಸಂಸ್ಥೆಗಳನ್ನು ಕೊಡಿ. ಮರುಗಳಿಗೆ ಈ ಸರಕಾರ ಅಧಿಕಾರದಲ್ಲಿ ಇರುವುದಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಕರಾಳ ಕಾಯ್ದೆಗಳನ್ನು ತೆಗೆದುಹಾಕುತ್ತದೆ: ರಾಹುಲ್ ಗಾಂಧಿ

“ಸರಿ ವಿರೋಧ ಪಕ್ಷಗಳು ದುರ್ಬಲವಾಗಿವೆ ಎಂಬುದು ನಿಮ್ಮ ಆರೋಪ. ಆದರೆ ಗೆಳಯರೇ, ನೀವೂ ಸಹ ಗುಲಾಮಗಿರಿಗೆ ಒಳಗಾಗುತ್ತಿದ್ದೀರಿ. ಒಂದು ದೇಶದ ಭೂಭಾಗವನ್ನು ಇನ್ನೊಂದು ದೇಶ ಆಕ್ರಮಿಸಿದೆ. ಆದರೆ ಮಾಧ್ಯಮಗಳೂ ಕೂಡ ಸರ್ಕಾರವನ್ನು ಪ್ರಶ್ನಿಸದೇ ಇರುವಂತಹ ಪರಿಸ್ಥಿತಿಯನ್ನು ಜಗತ್ತಿನಲ್ಲಿ ಯಾವುದೇ ದೇಶ ಇಂದು ಎದುರಿಸುತ್ತಿಲ್ಲ. ನೀವೇಕೆ ಅವರನ್ನು ಪತ್ರಿಕಾಗೋಷ್ಠಿಗಳಲ್ಲಿ ಪ್ರಶ್ನಿಸಬಾರದು?” ಎಂದು ಮಾಧ್ಯಮಗಳಿಗೆ ಮರುಪ್ರಶ್ನೆ ಮಾಡಿದ್ದಾರೆ.


“ಸರ್ಕಾರ ವಿವಿಧ ಸಂಸ್ಥೆಗಳನ್ನು ತನ್ನ ಕೈವಶ ಮಾಡಿರಬಹುದು. ಆದರೆ ರೈತರನ್ನು, ಯುವಜನತೆಯನ್ನು ಹಾಗೂ ಸಣ್ಣ ವರ್ತಕರ ವಿಚಾರದಲ್ಲಿ ಹಾಗೆ ಮಾಡಲು ಸಾಧ್ಯವಿಲ್ಲ. ಮೋದಿ ಸರ್ಕಾರದ ನೀತಿಗಳಿಂದ ತೀವ್ರ ಬಾಧಿತಕ್ಕೊಳಗಾಗಿರುವ ಜನರೊಂದಿಗೆ ನಾನಿದ್ದೇನೆ. ನಾನು ತಾಳ್ಮೆ ಇರುವ ವ್ಯಕ್ತಿ. ಜನರಿಗೆ ಸತ್ಯದ ಅರಿವು ಆಗುವ ತನಕ ಕಾಯುತ್ತೇನೆ” ಎಂದು ಹೇಳಿದರು.

ಇದನ್ನೂ ಓದಿ: ವಿವಾದಾತ್ಮಕ ಮಸೂದೆ ವಿರುದ್ಧ ನಿಲ್ಲದ ರೈತರ ಪ್ರತಿಭಟನೆ: ಜೈ ಕಿಸಾನ್ ಆಂದೋಲನ

ಕೃಷಿ ಮಸೂದೆಗಳನ್ನು ವಿರೋಧಿಸಿ ರಾಹುಲ್ ಗಾಂಧಿ ಮುಂದಾಳತ್ವದಲ್ಲಿ ಪಂಜಾಬ್‌ನಿಂದ ದೆಹಲಿಯವರೆಗೆ ಟ್ರ್ಯಾಕ್ಟರ್ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ಹರಿಯಾಣ ಗಡಿಯ ಬಳಿ ಅವರನ್ನು ತಡೆಯಲಾಗಿದೆ. ವಿಶೇಷವೆಂದರೆ ಈ ರ‍್ಯಾಲಿಯಲ್ಲಿ ರಾಹುಲ್ ಗಾಂಧಿಯವರೇ ಸ್ವತಃ ಟ್ರ್ಯಾಕ್ಟರ್ ಚಲಾಯಿಸಿದ್ದರು.

ತಮ್ಮನ್ನು ಗಡಿಯಲ್ಲಿ ತಡೆದಿದ್ದನ್ನು ವಿರೋಧಿಸಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಅವರು ನಮ್ಮನ್ನು ಹರಿಯಾಣ ಗಡಿಯ ಬ್ರಿಡ್ಜ್ ಬಳಿ ತಡೆಯಲಾಗಿದೆ. ನಾನು ಅಲುಗಾಡುವುದಿಲ್ಲ. ಇಲ್ಲಿ ಕಾಯುವುದಕ್ಕೆ ನನಗೆ ಸಂತೋಷವಿದೆ. 1 ಗಂಟೆ, 5 ಗಂಟೆ, 24 ಗಂಟೆ, 100 ಗಂಟೆಗಳು, 1000 ಗಂಟೆಗಳು ಅಥವಾ 5000 ಗಂಟೆಗಳು ಬೇಕಾದರೂ ಕಾಯುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ”ಅನ್ನದಾತ’ರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...