Homeಮುಖಪುಟಒಂದು ಸ್ವತಂತ್ರ ಮಾಧ್ಯಮವನ್ನು ನನಗೆ ಕೊಡಿ, ಮರುಕ್ಷಣ ಈ ಸರ್ಕಾರ ಅಧಿಕಾರದಲ್ಲಿರುವುದಿಲ್ಲ: ರಾಹುಲ್ ಗಾಂಧಿ

ಒಂದು ಸ್ವತಂತ್ರ ಮಾಧ್ಯಮವನ್ನು ನನಗೆ ಕೊಡಿ, ಮರುಕ್ಷಣ ಈ ಸರ್ಕಾರ ಅಧಿಕಾರದಲ್ಲಿರುವುದಿಲ್ಲ: ರಾಹುಲ್ ಗಾಂಧಿ

ಗೆಳಯರೇ, ನೀವೂ ಸಹ ಗುಲಾಮಗಿರಿಗೆ ಒಳಗಾಗುತ್ತಿದ್ದೀರಿ. ಒಂದು ದೇಶದ ಭೂಭಾಗವನ್ನು ಇನ್ನೊಂದು ದೇಶ ಆಕ್ರಮಿಸಿದೆ. ಆದರೆ ಮಾಧ್ಯಮಗಳೂ ಕೂಡ ಸರ್ಕಾರವನ್ನು ಪ್ರಶ್ನಿಸದೇ ಇರುವಂತಹ ಪರಿಸ್ಥಿತಿಯನ್ನು ಜಗತ್ತಿನಲ್ಲಿ ಯಾವುದೇ ದೇಶ ಇಂದು ಎದುರಿಸುತ್ತಿಲ್ಲ.

- Advertisement -
- Advertisement -

“ಒಂದು ಸ್ವತಂತ್ರ ಮಾಧ್ಯಮವನ್ನು ನನಗೆ ಕೊಡಿ. ಸ್ವತಂತ್ರ ಸಂಸ್ಥೆಗಳನ್ನು ನೀಡಿ. ಮರುಕ್ಷಣ ಈ ಕೇಂದ್ರ ಸರ್ಕಾರ ಆಡಳಿತದಲ್ಲಿರುವುದಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಿರೋಧಿಸಿ ಕೈಗೊಂಡಿದ್ದ ಯಾತ್ರೆಯ ಅಂತಿಮ ದಿನವಾದ ಇಂದು ಪಂಜಾಬಿನ ಪಟಿಯಾಲದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಅವರು ನರೇಂದ್ರ ಮೋದಿ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಟ್ರ್ಯಾಕ್ಟರ್‌ ರ್‍ಯಾಲಿ

ವಿರೋಧ ಪಕ್ಷಗಳು ದುರ್ಬಲವಾಗಿವೆ ಎಂಬ ಆರೋಪವನ್ನು ಸಾರಾಸಗಟಾಗಿ ತಳ್ಳಿಹಾಕಿದ ರಾಹುಲ್ ಗಾಂಧಿ, “ದುರ್ಬಲಗೊಂಡಿರುವುದು ವಿರೋಧ ಪಕ್ಷಗಳಲ್ಲ. ನಮ್ಮ ಸುದ್ದಿ ಮಾಧ್ಯಮಗಳನ್ನು, ಸಂಸ್ಥೆಗಳನ್ನು ಎಲ್ಲವನ್ನೂ ಕೈವಶ ಮಾಡಿಕೊಳ್ಳಲಾಗಿದೆ. ಒಂದು ಸ್ವತಂತ್ರ ಮಾಧ್ಯಮವನ್ನು ನನಗೆ ಕೊಡಿ, ಸ್ವತಂತ್ರವಾಗಿರುವ ಸಂಸ್ಥೆಗಳನ್ನು ಕೊಡಿ. ಮರುಗಳಿಗೆ ಈ ಸರಕಾರ ಅಧಿಕಾರದಲ್ಲಿ ಇರುವುದಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಕರಾಳ ಕಾಯ್ದೆಗಳನ್ನು ತೆಗೆದುಹಾಕುತ್ತದೆ: ರಾಹುಲ್ ಗಾಂಧಿ

“ಸರಿ ವಿರೋಧ ಪಕ್ಷಗಳು ದುರ್ಬಲವಾಗಿವೆ ಎಂಬುದು ನಿಮ್ಮ ಆರೋಪ. ಆದರೆ ಗೆಳಯರೇ, ನೀವೂ ಸಹ ಗುಲಾಮಗಿರಿಗೆ ಒಳಗಾಗುತ್ತಿದ್ದೀರಿ. ಒಂದು ದೇಶದ ಭೂಭಾಗವನ್ನು ಇನ್ನೊಂದು ದೇಶ ಆಕ್ರಮಿಸಿದೆ. ಆದರೆ ಮಾಧ್ಯಮಗಳೂ ಕೂಡ ಸರ್ಕಾರವನ್ನು ಪ್ರಶ್ನಿಸದೇ ಇರುವಂತಹ ಪರಿಸ್ಥಿತಿಯನ್ನು ಜಗತ್ತಿನಲ್ಲಿ ಯಾವುದೇ ದೇಶ ಇಂದು ಎದುರಿಸುತ್ತಿಲ್ಲ. ನೀವೇಕೆ ಅವರನ್ನು ಪತ್ರಿಕಾಗೋಷ್ಠಿಗಳಲ್ಲಿ ಪ್ರಶ್ನಿಸಬಾರದು?” ಎಂದು ಮಾಧ್ಯಮಗಳಿಗೆ ಮರುಪ್ರಶ್ನೆ ಮಾಡಿದ್ದಾರೆ.


“ಸರ್ಕಾರ ವಿವಿಧ ಸಂಸ್ಥೆಗಳನ್ನು ತನ್ನ ಕೈವಶ ಮಾಡಿರಬಹುದು. ಆದರೆ ರೈತರನ್ನು, ಯುವಜನತೆಯನ್ನು ಹಾಗೂ ಸಣ್ಣ ವರ್ತಕರ ವಿಚಾರದಲ್ಲಿ ಹಾಗೆ ಮಾಡಲು ಸಾಧ್ಯವಿಲ್ಲ. ಮೋದಿ ಸರ್ಕಾರದ ನೀತಿಗಳಿಂದ ತೀವ್ರ ಬಾಧಿತಕ್ಕೊಳಗಾಗಿರುವ ಜನರೊಂದಿಗೆ ನಾನಿದ್ದೇನೆ. ನಾನು ತಾಳ್ಮೆ ಇರುವ ವ್ಯಕ್ತಿ. ಜನರಿಗೆ ಸತ್ಯದ ಅರಿವು ಆಗುವ ತನಕ ಕಾಯುತ್ತೇನೆ” ಎಂದು ಹೇಳಿದರು.

ಇದನ್ನೂ ಓದಿ: ವಿವಾದಾತ್ಮಕ ಮಸೂದೆ ವಿರುದ್ಧ ನಿಲ್ಲದ ರೈತರ ಪ್ರತಿಭಟನೆ: ಜೈ ಕಿಸಾನ್ ಆಂದೋಲನ

ಕೃಷಿ ಮಸೂದೆಗಳನ್ನು ವಿರೋಧಿಸಿ ರಾಹುಲ್ ಗಾಂಧಿ ಮುಂದಾಳತ್ವದಲ್ಲಿ ಪಂಜಾಬ್‌ನಿಂದ ದೆಹಲಿಯವರೆಗೆ ಟ್ರ್ಯಾಕ್ಟರ್ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ಹರಿಯಾಣ ಗಡಿಯ ಬಳಿ ಅವರನ್ನು ತಡೆಯಲಾಗಿದೆ. ವಿಶೇಷವೆಂದರೆ ಈ ರ‍್ಯಾಲಿಯಲ್ಲಿ ರಾಹುಲ್ ಗಾಂಧಿಯವರೇ ಸ್ವತಃ ಟ್ರ್ಯಾಕ್ಟರ್ ಚಲಾಯಿಸಿದ್ದರು.

ತಮ್ಮನ್ನು ಗಡಿಯಲ್ಲಿ ತಡೆದಿದ್ದನ್ನು ವಿರೋಧಿಸಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಅವರು ನಮ್ಮನ್ನು ಹರಿಯಾಣ ಗಡಿಯ ಬ್ರಿಡ್ಜ್ ಬಳಿ ತಡೆಯಲಾಗಿದೆ. ನಾನು ಅಲುಗಾಡುವುದಿಲ್ಲ. ಇಲ್ಲಿ ಕಾಯುವುದಕ್ಕೆ ನನಗೆ ಸಂತೋಷವಿದೆ. 1 ಗಂಟೆ, 5 ಗಂಟೆ, 24 ಗಂಟೆ, 100 ಗಂಟೆಗಳು, 1000 ಗಂಟೆಗಳು ಅಥವಾ 5000 ಗಂಟೆಗಳು ಬೇಕಾದರೂ ಕಾಯುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ”ಅನ್ನದಾತ’ರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...