Homeಮುಖಪುಟ'ನನ್ನ ಸಿಂಧೂರ ವಾಪಸ್ ಕೊಡಿ': ಪಾಕಿಸ್ತಾನ ಸೆರೆಹಿಡಿದ ಬಿಎಸ್‌ಎಫ್ ಯೋಧನ ಪತ್ನಿ ಕಣ್ಣೀರು

‘ನನ್ನ ಸಿಂಧೂರ ವಾಪಸ್ ಕೊಡಿ’: ಪಾಕಿಸ್ತಾನ ಸೆರೆಹಿಡಿದ ಬಿಎಸ್‌ಎಫ್ ಯೋಧನ ಪತ್ನಿ ಕಣ್ಣೀರು

- Advertisement -
- Advertisement -

‘ಆಪರೇಷನ್ ಸಿಂಧೂರ’ದ ಚರ್ಚೆಯ ನಡುವೆ ಕಳೆದ 20 ದಿನಗಳ ಹಿಂದೆ ಪಾಕಿಸ್ತಾನ ಸೇನೆ ಸೆರೆಹಿಡಿದಿದೆ ಎನ್ನಲಾದ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧ ಪೂರ್ಣಂ ಸಾಹು ಅವರ ಕುಟುಂಬ ತಮ್ಮ ಮನೆ ಮಗನನ್ನು ಮರಳಿ ಕರೆ ತರುವಂತೆ ಕಣ್ಣೀರು ಹಾಕುತ್ತಿದೆ.

ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಸೃಷ್ಟಿಯಾದ ಬಳಿಕ, ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧ ಸಂಪೂರ್ಣ ಹದೆಗೆಟ್ಟಿದೆ. ಆದರೂ, ಯೋಧ ಮರಳಿ ಬರುವ ಭರವಸೆಯನ್ನು ಪಶ್ಚಿಮ ಬಂಗಾಳದ ರಿಶ್ರಾದಲ್ಲಿರುವ ಅವರ ಕುಟುಂಬ ವ್ಯಕ್ತಪಡಿಸಿದೆ.

ಫಿರೋಝ್‌ಪುರದ ಬಿಎಸ್‌ಎಫ್‌ನ 24 ನೇ ಬೆಟಾಲಿಯನ್‌ನ ಯೋಧ ಪೂರ್ಣಂ ಸಾಹು ಅವರನ್ನು, ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ 26 ಭಾರತೀಯ ಪ್ರವಾಸಿಗರನ್ನು ಹತ್ಯೆಗೈದ ಒಂದು ದಿನದ ನಂತರ, ಅಂದರೆ ಏಪ್ರಿಲ್ 23ರಂದು ಭಾರತ-ಪಾಕ್ ಗಡಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.

ಅಂತಾರಾಷ್ಟ್ರೀಯ ಗಡಿಯಲ್ಲಿ ಸ್ಥಳೀಯ ರೈತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಲ್ಲಿ ಸಹಾಯ ಮಾಡುವಾಗ ಸಾಹು ಅವರು ತಪ್ಪಿ ಗಡಿ ದಾಟಿದ್ದಾರೆ ಎಂದು ಆರೋಪಿಸಲಾಗಿದೆ. ಬಳಿಕ ಪಾಕಿಸ್ತಾನಿ ಪಡೆಗಳು ಸಾಹು ಅವರನ್ನು ಬಂಧಿಸಿ, ಅವರ ಕಣ್ಣಿಗೆ ಕಪ್ಪು ಪಟ್ಟಿ ಕರೆದೊಯ್ಯುವ ಫೋಟೋ ಬಿಡುಗಡೆ ಮಾಡಿದೆ.

ಯೋಧ ಸಾಹು ಬಂಧನವಾಗಿ 20 ದಿನ ಕಳದರೂ, ಅವರನ್ನು ವಾಪಸ್ ಕರೆ ತರುವ ಕುರಿತು ಯಾವುದೇ ದೊಡ್ಡ ಬೆಳವಣಿಗೆಗಳು ನಡೆಯುತ್ತಿಲ್ಲ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ರಿಶ್ರಾ ವಾರ್ಡ್ ಸಂಖ್ಯೆ 13ರಲ್ಲಿರುವ ಸಾಹು ಅವರ ಕುಟುಂಬ ತೀವ್ರ ದುಖಃ ಮತ್ತು ಆತಂಕದಲ್ಲಿ ದಿನ ದೂಡುತ್ತಿದೆ. ಸಾಹು ಅವರ ಪತ್ನಿ ರಜನಿ ಸಾಹು ಏಳು ತಿಂಗಳ ಗರ್ಭಿಣಿಯಾಗಿದ್ದು, ತನ್ನ ಗಂಡನನ್ನು ನೆನೆದು ಕಣ್ಣೀರಿಟ್ಟಿದ್ದಾರೆ ಎಂದು ವರದಿಗಳು ಹೇಳಿವೆ.

“ನನ್ನ ಗಂಡನನ್ನು ಪಾಕಿಸ್ತಾನಿ ಸೇನೆ ಅಪಹರಿಸಿದೆ. ಅವರು ಸೇನೆಯ ವಶದಲ್ಲಿದ್ದಾರೆ. ಅವರ ಕಣ್ಣಿಗೆ ಬಟ್ಟೆ ಕಟ್ಟಿ ಕರೆದೊಯ್ಯುವ ಫೋಟೋ ಬಿಡುಗಡೆ ಮಾಡಿದ್ದಾರೆ” ಎಂದು ರಜಿನಿ ಸಾಹು ಅಳುತ್ತಾ ಹೇಳಿದ್ದಾರೆ.

ಅಪಹರಣಕ್ಕೆ ಒಳಗಾಗುವ ಕೆಲ ಗಂಟೆಗಳ ಮೊದಲು ಕುಟುಂಬಕ್ಕೆ ಕರೆ ಮಾಡಿದ್ದರು

“ಬಿಎಸ್‌ಎಫ್ ಅಧಿಕಾರಿಗಳು ನಮ್ಮ ಮನೆಗೆ ಭೇಟಿ ನೀಡಿ ನನ್ನ ಗಂಡನನ್ನು ಮರಳಿ ಕರೆತರಲು ಪ್ರಯತ್ನಿಸುತ್ತಿರುವುದಾಗಿ ತಿಳಿಸಿದ್ದಾರೆ. ಆದರೆ ಈಗ ಪರಿಸ್ಥಿತಿ ಯುದ್ಧದಂತಿದೆ. ಮುಂದೆ ಏನು ಸುದ್ದಿ ಬರುತ್ತದೆಯೋ ಗೊತ್ತಿಲ್ಲ” ಎಂದು ರಜನಿ ಕಳವಳ ವ್ಯಕ್ತಪಡಿಸಿದ್ದಾರೆ.

“ಒಂದು ತಿಂಗಳ ರಜೆ ಮುಗಿಸಿ ಹಿಂತಿರುಗಿದ ಪೂರ್ಣಂ, ಏಪ್ರಿಲ್ 1 ರಂದು ಕರ್ತವ್ಯಕ್ಕೆ ಮರಳಿದ್ದರು. ಏಪ್ರಿಲ್ 22ರ ರಾತ್ರಿ, ಅಪಹರಣಕ್ಕೆ ಒಳಗಾಗುವ ಕೆಲ ಗಂಟೆಗಳ ಮೊದಲು, ನನ್ನ ಆರೋಗ್ಯ ವಿಚಾರಿಸಲು ಕೊನೆಯ ಬಾರಿಗೆ ಕರೆ ಮಾಡಿದ್ದರು. ಆ ಬಳಿಕ ಇಷ್ಟು ದಿನ ಕಳೆದರೂ, ಅವರು ಬಗ್ಗೆ ಯಾವುದೇ ಸುದ್ದಿ ಬಂದಿಲ್ಲ” ಎಂದು ರಜನಿ ತಿಳಿಸಿದ್ದಾರೆ.

ದಂಪತಿಯ ಎಂಟು ವರ್ಷದ ಮಗನನ್ನು ಈಗ ನೆರೆಹೊರೆಯವರು ನೋಡಿಕೊಳ್ಳುತ್ತಿದ್ದಾರೆ. ಆತನಿಗೆ ಪರಿಸ್ಥಿತಿಯ ಗಂಭೀರತೆಯ ಅರಿವಿಲ್ಲ. ಪೂರ್ಣಂ ಅವರ ತಂದೆ, ನಿವೃತ್ತ ಭದ್ರತಾ ಸಿಬ್ಬಂದಿ ಭೋಲಾ ಸಾಹು ಅವರು, ಆರಂಭಿಕ ಭರವಸೆಗಳ ನಂತರದ ಸೇನೆಯ ಮೌನದ ಬಗ್ಗೆ ಹತಾಶೆ ವ್ಯಕ್ತಪಡಿಸಿದ್ದಾರೆ.

“ನಾವು ನಮ್ಮ ಸೊಸೆಯೊಂದಿಗೆ ಫಿರೋಝ್‌ಪುರಕ್ಕೆ ಹೋಗಿದ್ದೆವು. ಸೇನಾ ಅಧಿಕಾರಿಗಳು ಮಗನನ್ನು ಕರೆತರಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈಗ ಯಾವುದೇ ಮಾಹಿತಿ ಇಲ್ಲ. ಪ್ರಧಾನ ಮಂತ್ರಿಯನ್ನು ಸಂಪರ್ಕಿಸಲು ನಮಗೆ ಸಾಧ್ಯವಾದರೆ, ಮಗನನ್ನು ವಾಪಸ್ ಕರೆತರಲು ಬೇಡಿಕೊಳ್ಳುತ್ತೇವೆ.” ಎಂದು ಹೇಳಿದ್ದಾರೆ.

“ನನ್ನ ಮಗ 18 ವರ್ಷಗಳಿಂದ ದೇಶ ಸೇವೆ ಮಾಡಿದ್ದಾನೆ. ಇಂದು ನಾವು ಪರಿತ್ಯಕ್ತರಾಗಿದ್ದೇವೆಂದು ಅನಿಸುತ್ತಿದೆ” ಎಂದು ಪೂರ್ಣ ಸಾಹು ಅವರ ತಾಯಿ ದುಃಖ ವ್ಯಕ್ತಪಡಿಸಿದ್ದಾರೆ.

ಈ ಘಟನೆಯು ರಿಶ್ರಾದ ಸ್ಥಳೀಯ ಬಂಗಾಳಿ ಅಲ್ಲದ ವಲಸೆ ಸಮುದಾಯವನ್ನು, ವಿಶೇಷವಾಗಿ ಬಿಹಾರ ಮತ್ತು ಉತ್ತರ ಪ್ರದೇಶದ ಸೆಣಬಿನ ಗಿರಣಿ ಕಾರ್ಮಿಕ ಸಮುದಾಯವನ್ನು ಒಂದುಗೂಡಿಸಿದೆ. ಸ್ಥಳೀಯರು ವಾರ್ಡ್ ಸಂಖ್ಯೆ 13 ಯೋಧ ಪೂರ್ಣಂ ಅವರ ಮನೆಗೆ ಭೇಟಿ ನೀಡುತ್ತಿದ್ದಾರೆ. ಅಲ್ಲಿನ ಟಿವಿ ಪರದೆಯಲ್ಲಿ 24/7 ಸುದ್ದಿಗಳನ್ನು ಪ್ರಸಾರ ಆಗುತ್ತಿದೆ ಎಂದು ವರದಿಗಳು ಹೇಳಿವೆ.

“ಒಂದೆಡೆ ಸಂಘರ್ಷ, ಮತ್ತೊಂದೆಡೆ ಶಾಂತಿ. ಇದರಿಂದ ನಾವು ಗೊಂದಲಕ್ಕೀಡಾಗಿದ್ದೇವೆ. ಪೂರ್ಣ> ಸುರಕ್ಷಿತವಾಗಿ ಮನೆಗೆ ಬರಲೆಂದು ಬೇಡಿಕೊಳ್ಳುತ್ತೇವೆ. ಅವರು ಮನೆಗೆ ಬಂದರೆ ನಾವು ‘ಸಿಂಧೂರ’ ಆಚರಣೆ ಮಾಡುತ್ತೇವೆ” ಎಂದು ಯೋಧ ಪೂರ್ಣಂ ಅವರ ಸಹೋದರ ಶ್ಯಾಮ್‌ಸುಂದರ್ ಶಾವ್ ಹೇಳಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಳೆದ ಸೋಮವಾರ ಗೃಹ ಸಚಿವಾಲಯದಿಂದ ತ್ವರಿತ ಪರಿಹಾರದ ಭರವಸೆ ವ್ಯಕ್ತಪಡಿಸಿದ್ದಾರೆ. ಹೂಗ್ಲಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಬಿಎಸ್‌ಎಫ್ ಕಮಾಂಡರ್‌ಗಳೊಂದಿಗೆ ಈ ವಿಷಯವನ್ನು ಪ್ರಸ್ತಾಪಿಸಿದ್ದಾಗಿ ದೃಢಪಡಿಸಿದ್ದಾರೆ.

“ನಾನು ಬಿಎಸ್‌ಎಫ್ ಕಮಾಂಡರ್‌ಗಳೊಂದಿಗೆ ಮಾತನಾಡಿದ್ದೇನೆ. ಅವರು ಪೂರ್ಣಂ ಅವರ ಬಿಡುಗಡೆಗೆ ಪ್ರಯತ್ನಿಸುತ್ತಿರುವುದಾಗಿ ತಿಳಿಸಿದ್ದಾರೆ. ನಾನು ಪೂರ್ಣಂ ಅವರ ಕುಟುಂಬಸ್ಥರನ್ನು ಭೇಟಿ ಮಾಡಿದ್ದೇನೆ. ಆದರೆ, ಅವರ ಪರಿಸ್ಥಿತಿ ಹದಗೆಟ್ಟಿದೆ” ಎಂದು ಕಲ್ಯಾಣ್ ಬ್ಯಾನರ್ಜಿ ಹೇಳಿದ್ದಾರೆ.

‘ಆಪರೇಷನ್ ಸಿಂಧೂರ’ ಬಗ್ಗೆ ಕೇಳಿದ ಕೂಡಲೇ ಒಮ್ಮೆಲೆ ಆಘಾತ ವ್ಯಕ್ತಪಡಿಸಿ, ಮುಖದ ಮೇಲೆ ಮುಸುಕನ್ನು ಎಳೆದುಕೊಂಡ ಯೋಧ ಪೂರ್ಣಂ ಪತ್ನಿ ರಜನಿ “ನನ್ನ ಸಿಂಧೂರವನ್ನು ನನಗೆ ಮರಳಿ ಕೊಡಿ” ಎಂದು ಸರ್ಕಾರಕ್ಕೆ ಮೊರೆಯಿಟ್ಟಿದ್ದಾರೆ ಎಂದು ವರದಿ ಹೇಳಿದೆ.

ಸೌಜನ್ಯ : thewire.in

ನಾಲ್ಕು ದಿನಗಳ ಭಾರತ-ಪಾಕ್‌ ಸಂಘರ್ಷ: ಜಮ್ಮು ಕಾಶ್ಮೀರದಲ್ಲಿ 21 ನಾಗರಿಕರು, ಐವರು ಸಶಸ್ತ್ರ ಪಡೆ ಸಿಬ್ಬಂದಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...