Homeಮುಖಪುಟ'ನನ್ನ ಸಿಂಧೂರ ವಾಪಸ್ ಕೊಡಿ': ಪಾಕಿಸ್ತಾನ ಸೆರೆಹಿಡಿದ ಬಿಎಸ್‌ಎಫ್ ಯೋಧನ ಪತ್ನಿ ಕಣ್ಣೀರು

‘ನನ್ನ ಸಿಂಧೂರ ವಾಪಸ್ ಕೊಡಿ’: ಪಾಕಿಸ್ತಾನ ಸೆರೆಹಿಡಿದ ಬಿಎಸ್‌ಎಫ್ ಯೋಧನ ಪತ್ನಿ ಕಣ್ಣೀರು

- Advertisement -
- Advertisement -

‘ಆಪರೇಷನ್ ಸಿಂಧೂರ’ದ ಚರ್ಚೆಯ ನಡುವೆ ಕಳೆದ 20 ದಿನಗಳ ಹಿಂದೆ ಪಾಕಿಸ್ತಾನ ಸೇನೆ ಸೆರೆಹಿಡಿದಿದೆ ಎನ್ನಲಾದ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧ ಪೂರ್ಣಂ ಸಾಹು ಅವರ ಕುಟುಂಬ ತಮ್ಮ ಮನೆ ಮಗನನ್ನು ಮರಳಿ ಕರೆ ತರುವಂತೆ ಕಣ್ಣೀರು ಹಾಕುತ್ತಿದೆ.

ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಸೃಷ್ಟಿಯಾದ ಬಳಿಕ, ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧ ಸಂಪೂರ್ಣ ಹದೆಗೆಟ್ಟಿದೆ. ಆದರೂ, ಯೋಧ ಮರಳಿ ಬರುವ ಭರವಸೆಯನ್ನು ಪಶ್ಚಿಮ ಬಂಗಾಳದ ರಿಶ್ರಾದಲ್ಲಿರುವ ಅವರ ಕುಟುಂಬ ವ್ಯಕ್ತಪಡಿಸಿದೆ.

ಫಿರೋಝ್‌ಪುರದ ಬಿಎಸ್‌ಎಫ್‌ನ 24 ನೇ ಬೆಟಾಲಿಯನ್‌ನ ಯೋಧ ಪೂರ್ಣಂ ಸಾಹು ಅವರನ್ನು, ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ 26 ಭಾರತೀಯ ಪ್ರವಾಸಿಗರನ್ನು ಹತ್ಯೆಗೈದ ಒಂದು ದಿನದ ನಂತರ, ಅಂದರೆ ಏಪ್ರಿಲ್ 23ರಂದು ಭಾರತ-ಪಾಕ್ ಗಡಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.

ಅಂತಾರಾಷ್ಟ್ರೀಯ ಗಡಿಯಲ್ಲಿ ಸ್ಥಳೀಯ ರೈತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಲ್ಲಿ ಸಹಾಯ ಮಾಡುವಾಗ ಸಾಹು ಅವರು ತಪ್ಪಿ ಗಡಿ ದಾಟಿದ್ದಾರೆ ಎಂದು ಆರೋಪಿಸಲಾಗಿದೆ. ಬಳಿಕ ಪಾಕಿಸ್ತಾನಿ ಪಡೆಗಳು ಸಾಹು ಅವರನ್ನು ಬಂಧಿಸಿ, ಅವರ ಕಣ್ಣಿಗೆ ಕಪ್ಪು ಪಟ್ಟಿ ಕರೆದೊಯ್ಯುವ ಫೋಟೋ ಬಿಡುಗಡೆ ಮಾಡಿದೆ.

ಯೋಧ ಸಾಹು ಬಂಧನವಾಗಿ 20 ದಿನ ಕಳದರೂ, ಅವರನ್ನು ವಾಪಸ್ ಕರೆ ತರುವ ಕುರಿತು ಯಾವುದೇ ದೊಡ್ಡ ಬೆಳವಣಿಗೆಗಳು ನಡೆಯುತ್ತಿಲ್ಲ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ರಿಶ್ರಾ ವಾರ್ಡ್ ಸಂಖ್ಯೆ 13ರಲ್ಲಿರುವ ಸಾಹು ಅವರ ಕುಟುಂಬ ತೀವ್ರ ದುಖಃ ಮತ್ತು ಆತಂಕದಲ್ಲಿ ದಿನ ದೂಡುತ್ತಿದೆ. ಸಾಹು ಅವರ ಪತ್ನಿ ರಜನಿ ಸಾಹು ಏಳು ತಿಂಗಳ ಗರ್ಭಿಣಿಯಾಗಿದ್ದು, ತನ್ನ ಗಂಡನನ್ನು ನೆನೆದು ಕಣ್ಣೀರಿಟ್ಟಿದ್ದಾರೆ ಎಂದು ವರದಿಗಳು ಹೇಳಿವೆ.

“ನನ್ನ ಗಂಡನನ್ನು ಪಾಕಿಸ್ತಾನಿ ಸೇನೆ ಅಪಹರಿಸಿದೆ. ಅವರು ಸೇನೆಯ ವಶದಲ್ಲಿದ್ದಾರೆ. ಅವರ ಕಣ್ಣಿಗೆ ಬಟ್ಟೆ ಕಟ್ಟಿ ಕರೆದೊಯ್ಯುವ ಫೋಟೋ ಬಿಡುಗಡೆ ಮಾಡಿದ್ದಾರೆ” ಎಂದು ರಜಿನಿ ಸಾಹು ಅಳುತ್ತಾ ಹೇಳಿದ್ದಾರೆ.

ಅಪಹರಣಕ್ಕೆ ಒಳಗಾಗುವ ಕೆಲ ಗಂಟೆಗಳ ಮೊದಲು ಕುಟುಂಬಕ್ಕೆ ಕರೆ ಮಾಡಿದ್ದರು

“ಬಿಎಸ್‌ಎಫ್ ಅಧಿಕಾರಿಗಳು ನಮ್ಮ ಮನೆಗೆ ಭೇಟಿ ನೀಡಿ ನನ್ನ ಗಂಡನನ್ನು ಮರಳಿ ಕರೆತರಲು ಪ್ರಯತ್ನಿಸುತ್ತಿರುವುದಾಗಿ ತಿಳಿಸಿದ್ದಾರೆ. ಆದರೆ ಈಗ ಪರಿಸ್ಥಿತಿ ಯುದ್ಧದಂತಿದೆ. ಮುಂದೆ ಏನು ಸುದ್ದಿ ಬರುತ್ತದೆಯೋ ಗೊತ್ತಿಲ್ಲ” ಎಂದು ರಜನಿ ಕಳವಳ ವ್ಯಕ್ತಪಡಿಸಿದ್ದಾರೆ.

“ಒಂದು ತಿಂಗಳ ರಜೆ ಮುಗಿಸಿ ಹಿಂತಿರುಗಿದ ಪೂರ್ಣಂ, ಏಪ್ರಿಲ್ 1 ರಂದು ಕರ್ತವ್ಯಕ್ಕೆ ಮರಳಿದ್ದರು. ಏಪ್ರಿಲ್ 22ರ ರಾತ್ರಿ, ಅಪಹರಣಕ್ಕೆ ಒಳಗಾಗುವ ಕೆಲ ಗಂಟೆಗಳ ಮೊದಲು, ನನ್ನ ಆರೋಗ್ಯ ವಿಚಾರಿಸಲು ಕೊನೆಯ ಬಾರಿಗೆ ಕರೆ ಮಾಡಿದ್ದರು. ಆ ಬಳಿಕ ಇಷ್ಟು ದಿನ ಕಳೆದರೂ, ಅವರು ಬಗ್ಗೆ ಯಾವುದೇ ಸುದ್ದಿ ಬಂದಿಲ್ಲ” ಎಂದು ರಜನಿ ತಿಳಿಸಿದ್ದಾರೆ.

ದಂಪತಿಯ ಎಂಟು ವರ್ಷದ ಮಗನನ್ನು ಈಗ ನೆರೆಹೊರೆಯವರು ನೋಡಿಕೊಳ್ಳುತ್ತಿದ್ದಾರೆ. ಆತನಿಗೆ ಪರಿಸ್ಥಿತಿಯ ಗಂಭೀರತೆಯ ಅರಿವಿಲ್ಲ. ಪೂರ್ಣಂ ಅವರ ತಂದೆ, ನಿವೃತ್ತ ಭದ್ರತಾ ಸಿಬ್ಬಂದಿ ಭೋಲಾ ಸಾಹು ಅವರು, ಆರಂಭಿಕ ಭರವಸೆಗಳ ನಂತರದ ಸೇನೆಯ ಮೌನದ ಬಗ್ಗೆ ಹತಾಶೆ ವ್ಯಕ್ತಪಡಿಸಿದ್ದಾರೆ.

“ನಾವು ನಮ್ಮ ಸೊಸೆಯೊಂದಿಗೆ ಫಿರೋಝ್‌ಪುರಕ್ಕೆ ಹೋಗಿದ್ದೆವು. ಸೇನಾ ಅಧಿಕಾರಿಗಳು ಮಗನನ್ನು ಕರೆತರಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈಗ ಯಾವುದೇ ಮಾಹಿತಿ ಇಲ್ಲ. ಪ್ರಧಾನ ಮಂತ್ರಿಯನ್ನು ಸಂಪರ್ಕಿಸಲು ನಮಗೆ ಸಾಧ್ಯವಾದರೆ, ಮಗನನ್ನು ವಾಪಸ್ ಕರೆತರಲು ಬೇಡಿಕೊಳ್ಳುತ್ತೇವೆ.” ಎಂದು ಹೇಳಿದ್ದಾರೆ.

“ನನ್ನ ಮಗ 18 ವರ್ಷಗಳಿಂದ ದೇಶ ಸೇವೆ ಮಾಡಿದ್ದಾನೆ. ಇಂದು ನಾವು ಪರಿತ್ಯಕ್ತರಾಗಿದ್ದೇವೆಂದು ಅನಿಸುತ್ತಿದೆ” ಎಂದು ಪೂರ್ಣ ಸಾಹು ಅವರ ತಾಯಿ ದುಃಖ ವ್ಯಕ್ತಪಡಿಸಿದ್ದಾರೆ.

ಈ ಘಟನೆಯು ರಿಶ್ರಾದ ಸ್ಥಳೀಯ ಬಂಗಾಳಿ ಅಲ್ಲದ ವಲಸೆ ಸಮುದಾಯವನ್ನು, ವಿಶೇಷವಾಗಿ ಬಿಹಾರ ಮತ್ತು ಉತ್ತರ ಪ್ರದೇಶದ ಸೆಣಬಿನ ಗಿರಣಿ ಕಾರ್ಮಿಕ ಸಮುದಾಯವನ್ನು ಒಂದುಗೂಡಿಸಿದೆ. ಸ್ಥಳೀಯರು ವಾರ್ಡ್ ಸಂಖ್ಯೆ 13 ಯೋಧ ಪೂರ್ಣಂ ಅವರ ಮನೆಗೆ ಭೇಟಿ ನೀಡುತ್ತಿದ್ದಾರೆ. ಅಲ್ಲಿನ ಟಿವಿ ಪರದೆಯಲ್ಲಿ 24/7 ಸುದ್ದಿಗಳನ್ನು ಪ್ರಸಾರ ಆಗುತ್ತಿದೆ ಎಂದು ವರದಿಗಳು ಹೇಳಿವೆ.

“ಒಂದೆಡೆ ಸಂಘರ್ಷ, ಮತ್ತೊಂದೆಡೆ ಶಾಂತಿ. ಇದರಿಂದ ನಾವು ಗೊಂದಲಕ್ಕೀಡಾಗಿದ್ದೇವೆ. ಪೂರ್ಣ> ಸುರಕ್ಷಿತವಾಗಿ ಮನೆಗೆ ಬರಲೆಂದು ಬೇಡಿಕೊಳ್ಳುತ್ತೇವೆ. ಅವರು ಮನೆಗೆ ಬಂದರೆ ನಾವು ‘ಸಿಂಧೂರ’ ಆಚರಣೆ ಮಾಡುತ್ತೇವೆ” ಎಂದು ಯೋಧ ಪೂರ್ಣಂ ಅವರ ಸಹೋದರ ಶ್ಯಾಮ್‌ಸುಂದರ್ ಶಾವ್ ಹೇಳಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಳೆದ ಸೋಮವಾರ ಗೃಹ ಸಚಿವಾಲಯದಿಂದ ತ್ವರಿತ ಪರಿಹಾರದ ಭರವಸೆ ವ್ಯಕ್ತಪಡಿಸಿದ್ದಾರೆ. ಹೂಗ್ಲಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಬಿಎಸ್‌ಎಫ್ ಕಮಾಂಡರ್‌ಗಳೊಂದಿಗೆ ಈ ವಿಷಯವನ್ನು ಪ್ರಸ್ತಾಪಿಸಿದ್ದಾಗಿ ದೃಢಪಡಿಸಿದ್ದಾರೆ.

“ನಾನು ಬಿಎಸ್‌ಎಫ್ ಕಮಾಂಡರ್‌ಗಳೊಂದಿಗೆ ಮಾತನಾಡಿದ್ದೇನೆ. ಅವರು ಪೂರ್ಣಂ ಅವರ ಬಿಡುಗಡೆಗೆ ಪ್ರಯತ್ನಿಸುತ್ತಿರುವುದಾಗಿ ತಿಳಿಸಿದ್ದಾರೆ. ನಾನು ಪೂರ್ಣಂ ಅವರ ಕುಟುಂಬಸ್ಥರನ್ನು ಭೇಟಿ ಮಾಡಿದ್ದೇನೆ. ಆದರೆ, ಅವರ ಪರಿಸ್ಥಿತಿ ಹದಗೆಟ್ಟಿದೆ” ಎಂದು ಕಲ್ಯಾಣ್ ಬ್ಯಾನರ್ಜಿ ಹೇಳಿದ್ದಾರೆ.

‘ಆಪರೇಷನ್ ಸಿಂಧೂರ’ ಬಗ್ಗೆ ಕೇಳಿದ ಕೂಡಲೇ ಒಮ್ಮೆಲೆ ಆಘಾತ ವ್ಯಕ್ತಪಡಿಸಿ, ಮುಖದ ಮೇಲೆ ಮುಸುಕನ್ನು ಎಳೆದುಕೊಂಡ ಯೋಧ ಪೂರ್ಣಂ ಪತ್ನಿ ರಜನಿ “ನನ್ನ ಸಿಂಧೂರವನ್ನು ನನಗೆ ಮರಳಿ ಕೊಡಿ” ಎಂದು ಸರ್ಕಾರಕ್ಕೆ ಮೊರೆಯಿಟ್ಟಿದ್ದಾರೆ ಎಂದು ವರದಿ ಹೇಳಿದೆ.

ಸೌಜನ್ಯ : thewire.in

ನಾಲ್ಕು ದಿನಗಳ ಭಾರತ-ಪಾಕ್‌ ಸಂಘರ್ಷ: ಜಮ್ಮು ಕಾಶ್ಮೀರದಲ್ಲಿ 21 ನಾಗರಿಕರು, ಐವರು ಸಶಸ್ತ್ರ ಪಡೆ ಸಿಬ್ಬಂದಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...