Homeಮುಖಪುಟ'ನನ್ನ ಸಿಂಧೂರ ವಾಪಸ್ ಕೊಡಿ': ಪಾಕಿಸ್ತಾನ ಸೆರೆಹಿಡಿದ ಬಿಎಸ್‌ಎಫ್ ಯೋಧನ ಪತ್ನಿ ಕಣ್ಣೀರು

‘ನನ್ನ ಸಿಂಧೂರ ವಾಪಸ್ ಕೊಡಿ’: ಪಾಕಿಸ್ತಾನ ಸೆರೆಹಿಡಿದ ಬಿಎಸ್‌ಎಫ್ ಯೋಧನ ಪತ್ನಿ ಕಣ್ಣೀರು

- Advertisement -
- Advertisement -

‘ಆಪರೇಷನ್ ಸಿಂಧೂರ’ದ ಚರ್ಚೆಯ ನಡುವೆ ಕಳೆದ 20 ದಿನಗಳ ಹಿಂದೆ ಪಾಕಿಸ್ತಾನ ಸೇನೆ ಸೆರೆಹಿಡಿದಿದೆ ಎನ್ನಲಾದ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧ ಪೂರ್ಣಂ ಸಾಹು ಅವರ ಕುಟುಂಬ ತಮ್ಮ ಮನೆ ಮಗನನ್ನು ಮರಳಿ ಕರೆ ತರುವಂತೆ ಕಣ್ಣೀರು ಹಾಕುತ್ತಿದೆ.

ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಸೃಷ್ಟಿಯಾದ ಬಳಿಕ, ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧ ಸಂಪೂರ್ಣ ಹದೆಗೆಟ್ಟಿದೆ. ಆದರೂ, ಯೋಧ ಮರಳಿ ಬರುವ ಭರವಸೆಯನ್ನು ಪಶ್ಚಿಮ ಬಂಗಾಳದ ರಿಶ್ರಾದಲ್ಲಿರುವ ಅವರ ಕುಟುಂಬ ವ್ಯಕ್ತಪಡಿಸಿದೆ.

ಫಿರೋಝ್‌ಪುರದ ಬಿಎಸ್‌ಎಫ್‌ನ 24 ನೇ ಬೆಟಾಲಿಯನ್‌ನ ಯೋಧ ಪೂರ್ಣಂ ಸಾಹು ಅವರನ್ನು, ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ 26 ಭಾರತೀಯ ಪ್ರವಾಸಿಗರನ್ನು ಹತ್ಯೆಗೈದ ಒಂದು ದಿನದ ನಂತರ, ಅಂದರೆ ಏಪ್ರಿಲ್ 23ರಂದು ಭಾರತ-ಪಾಕ್ ಗಡಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.

ಅಂತಾರಾಷ್ಟ್ರೀಯ ಗಡಿಯಲ್ಲಿ ಸ್ಥಳೀಯ ರೈತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಲ್ಲಿ ಸಹಾಯ ಮಾಡುವಾಗ ಸಾಹು ಅವರು ತಪ್ಪಿ ಗಡಿ ದಾಟಿದ್ದಾರೆ ಎಂದು ಆರೋಪಿಸಲಾಗಿದೆ. ಬಳಿಕ ಪಾಕಿಸ್ತಾನಿ ಪಡೆಗಳು ಸಾಹು ಅವರನ್ನು ಬಂಧಿಸಿ, ಅವರ ಕಣ್ಣಿಗೆ ಕಪ್ಪು ಪಟ್ಟಿ ಕರೆದೊಯ್ಯುವ ಫೋಟೋ ಬಿಡುಗಡೆ ಮಾಡಿದೆ.

ಯೋಧ ಸಾಹು ಬಂಧನವಾಗಿ 20 ದಿನ ಕಳದರೂ, ಅವರನ್ನು ವಾಪಸ್ ಕರೆ ತರುವ ಕುರಿತು ಯಾವುದೇ ದೊಡ್ಡ ಬೆಳವಣಿಗೆಗಳು ನಡೆಯುತ್ತಿಲ್ಲ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ರಿಶ್ರಾ ವಾರ್ಡ್ ಸಂಖ್ಯೆ 13ರಲ್ಲಿರುವ ಸಾಹು ಅವರ ಕುಟುಂಬ ತೀವ್ರ ದುಖಃ ಮತ್ತು ಆತಂಕದಲ್ಲಿ ದಿನ ದೂಡುತ್ತಿದೆ. ಸಾಹು ಅವರ ಪತ್ನಿ ರಜನಿ ಸಾಹು ಏಳು ತಿಂಗಳ ಗರ್ಭಿಣಿಯಾಗಿದ್ದು, ತನ್ನ ಗಂಡನನ್ನು ನೆನೆದು ಕಣ್ಣೀರಿಟ್ಟಿದ್ದಾರೆ ಎಂದು ವರದಿಗಳು ಹೇಳಿವೆ.

“ನನ್ನ ಗಂಡನನ್ನು ಪಾಕಿಸ್ತಾನಿ ಸೇನೆ ಅಪಹರಿಸಿದೆ. ಅವರು ಸೇನೆಯ ವಶದಲ್ಲಿದ್ದಾರೆ. ಅವರ ಕಣ್ಣಿಗೆ ಬಟ್ಟೆ ಕಟ್ಟಿ ಕರೆದೊಯ್ಯುವ ಫೋಟೋ ಬಿಡುಗಡೆ ಮಾಡಿದ್ದಾರೆ” ಎಂದು ರಜಿನಿ ಸಾಹು ಅಳುತ್ತಾ ಹೇಳಿದ್ದಾರೆ.

ಅಪಹರಣಕ್ಕೆ ಒಳಗಾಗುವ ಕೆಲ ಗಂಟೆಗಳ ಮೊದಲು ಕುಟುಂಬಕ್ಕೆ ಕರೆ ಮಾಡಿದ್ದರು

“ಬಿಎಸ್‌ಎಫ್ ಅಧಿಕಾರಿಗಳು ನಮ್ಮ ಮನೆಗೆ ಭೇಟಿ ನೀಡಿ ನನ್ನ ಗಂಡನನ್ನು ಮರಳಿ ಕರೆತರಲು ಪ್ರಯತ್ನಿಸುತ್ತಿರುವುದಾಗಿ ತಿಳಿಸಿದ್ದಾರೆ. ಆದರೆ ಈಗ ಪರಿಸ್ಥಿತಿ ಯುದ್ಧದಂತಿದೆ. ಮುಂದೆ ಏನು ಸುದ್ದಿ ಬರುತ್ತದೆಯೋ ಗೊತ್ತಿಲ್ಲ” ಎಂದು ರಜನಿ ಕಳವಳ ವ್ಯಕ್ತಪಡಿಸಿದ್ದಾರೆ.

“ಒಂದು ತಿಂಗಳ ರಜೆ ಮುಗಿಸಿ ಹಿಂತಿರುಗಿದ ಪೂರ್ಣಂ, ಏಪ್ರಿಲ್ 1 ರಂದು ಕರ್ತವ್ಯಕ್ಕೆ ಮರಳಿದ್ದರು. ಏಪ್ರಿಲ್ 22ರ ರಾತ್ರಿ, ಅಪಹರಣಕ್ಕೆ ಒಳಗಾಗುವ ಕೆಲ ಗಂಟೆಗಳ ಮೊದಲು, ನನ್ನ ಆರೋಗ್ಯ ವಿಚಾರಿಸಲು ಕೊನೆಯ ಬಾರಿಗೆ ಕರೆ ಮಾಡಿದ್ದರು. ಆ ಬಳಿಕ ಇಷ್ಟು ದಿನ ಕಳೆದರೂ, ಅವರು ಬಗ್ಗೆ ಯಾವುದೇ ಸುದ್ದಿ ಬಂದಿಲ್ಲ” ಎಂದು ರಜನಿ ತಿಳಿಸಿದ್ದಾರೆ.

ದಂಪತಿಯ ಎಂಟು ವರ್ಷದ ಮಗನನ್ನು ಈಗ ನೆರೆಹೊರೆಯವರು ನೋಡಿಕೊಳ್ಳುತ್ತಿದ್ದಾರೆ. ಆತನಿಗೆ ಪರಿಸ್ಥಿತಿಯ ಗಂಭೀರತೆಯ ಅರಿವಿಲ್ಲ. ಪೂರ್ಣಂ ಅವರ ತಂದೆ, ನಿವೃತ್ತ ಭದ್ರತಾ ಸಿಬ್ಬಂದಿ ಭೋಲಾ ಸಾಹು ಅವರು, ಆರಂಭಿಕ ಭರವಸೆಗಳ ನಂತರದ ಸೇನೆಯ ಮೌನದ ಬಗ್ಗೆ ಹತಾಶೆ ವ್ಯಕ್ತಪಡಿಸಿದ್ದಾರೆ.

“ನಾವು ನಮ್ಮ ಸೊಸೆಯೊಂದಿಗೆ ಫಿರೋಝ್‌ಪುರಕ್ಕೆ ಹೋಗಿದ್ದೆವು. ಸೇನಾ ಅಧಿಕಾರಿಗಳು ಮಗನನ್ನು ಕರೆತರಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈಗ ಯಾವುದೇ ಮಾಹಿತಿ ಇಲ್ಲ. ಪ್ರಧಾನ ಮಂತ್ರಿಯನ್ನು ಸಂಪರ್ಕಿಸಲು ನಮಗೆ ಸಾಧ್ಯವಾದರೆ, ಮಗನನ್ನು ವಾಪಸ್ ಕರೆತರಲು ಬೇಡಿಕೊಳ್ಳುತ್ತೇವೆ.” ಎಂದು ಹೇಳಿದ್ದಾರೆ.

“ನನ್ನ ಮಗ 18 ವರ್ಷಗಳಿಂದ ದೇಶ ಸೇವೆ ಮಾಡಿದ್ದಾನೆ. ಇಂದು ನಾವು ಪರಿತ್ಯಕ್ತರಾಗಿದ್ದೇವೆಂದು ಅನಿಸುತ್ತಿದೆ” ಎಂದು ಪೂರ್ಣ ಸಾಹು ಅವರ ತಾಯಿ ದುಃಖ ವ್ಯಕ್ತಪಡಿಸಿದ್ದಾರೆ.

ಈ ಘಟನೆಯು ರಿಶ್ರಾದ ಸ್ಥಳೀಯ ಬಂಗಾಳಿ ಅಲ್ಲದ ವಲಸೆ ಸಮುದಾಯವನ್ನು, ವಿಶೇಷವಾಗಿ ಬಿಹಾರ ಮತ್ತು ಉತ್ತರ ಪ್ರದೇಶದ ಸೆಣಬಿನ ಗಿರಣಿ ಕಾರ್ಮಿಕ ಸಮುದಾಯವನ್ನು ಒಂದುಗೂಡಿಸಿದೆ. ಸ್ಥಳೀಯರು ವಾರ್ಡ್ ಸಂಖ್ಯೆ 13 ಯೋಧ ಪೂರ್ಣಂ ಅವರ ಮನೆಗೆ ಭೇಟಿ ನೀಡುತ್ತಿದ್ದಾರೆ. ಅಲ್ಲಿನ ಟಿವಿ ಪರದೆಯಲ್ಲಿ 24/7 ಸುದ್ದಿಗಳನ್ನು ಪ್ರಸಾರ ಆಗುತ್ತಿದೆ ಎಂದು ವರದಿಗಳು ಹೇಳಿವೆ.

“ಒಂದೆಡೆ ಸಂಘರ್ಷ, ಮತ್ತೊಂದೆಡೆ ಶಾಂತಿ. ಇದರಿಂದ ನಾವು ಗೊಂದಲಕ್ಕೀಡಾಗಿದ್ದೇವೆ. ಪೂರ್ಣ> ಸುರಕ್ಷಿತವಾಗಿ ಮನೆಗೆ ಬರಲೆಂದು ಬೇಡಿಕೊಳ್ಳುತ್ತೇವೆ. ಅವರು ಮನೆಗೆ ಬಂದರೆ ನಾವು ‘ಸಿಂಧೂರ’ ಆಚರಣೆ ಮಾಡುತ್ತೇವೆ” ಎಂದು ಯೋಧ ಪೂರ್ಣಂ ಅವರ ಸಹೋದರ ಶ್ಯಾಮ್‌ಸುಂದರ್ ಶಾವ್ ಹೇಳಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಳೆದ ಸೋಮವಾರ ಗೃಹ ಸಚಿವಾಲಯದಿಂದ ತ್ವರಿತ ಪರಿಹಾರದ ಭರವಸೆ ವ್ಯಕ್ತಪಡಿಸಿದ್ದಾರೆ. ಹೂಗ್ಲಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಬಿಎಸ್‌ಎಫ್ ಕಮಾಂಡರ್‌ಗಳೊಂದಿಗೆ ಈ ವಿಷಯವನ್ನು ಪ್ರಸ್ತಾಪಿಸಿದ್ದಾಗಿ ದೃಢಪಡಿಸಿದ್ದಾರೆ.

“ನಾನು ಬಿಎಸ್‌ಎಫ್ ಕಮಾಂಡರ್‌ಗಳೊಂದಿಗೆ ಮಾತನಾಡಿದ್ದೇನೆ. ಅವರು ಪೂರ್ಣಂ ಅವರ ಬಿಡುಗಡೆಗೆ ಪ್ರಯತ್ನಿಸುತ್ತಿರುವುದಾಗಿ ತಿಳಿಸಿದ್ದಾರೆ. ನಾನು ಪೂರ್ಣಂ ಅವರ ಕುಟುಂಬಸ್ಥರನ್ನು ಭೇಟಿ ಮಾಡಿದ್ದೇನೆ. ಆದರೆ, ಅವರ ಪರಿಸ್ಥಿತಿ ಹದಗೆಟ್ಟಿದೆ” ಎಂದು ಕಲ್ಯಾಣ್ ಬ್ಯಾನರ್ಜಿ ಹೇಳಿದ್ದಾರೆ.

‘ಆಪರೇಷನ್ ಸಿಂಧೂರ’ ಬಗ್ಗೆ ಕೇಳಿದ ಕೂಡಲೇ ಒಮ್ಮೆಲೆ ಆಘಾತ ವ್ಯಕ್ತಪಡಿಸಿ, ಮುಖದ ಮೇಲೆ ಮುಸುಕನ್ನು ಎಳೆದುಕೊಂಡ ಯೋಧ ಪೂರ್ಣಂ ಪತ್ನಿ ರಜನಿ “ನನ್ನ ಸಿಂಧೂರವನ್ನು ನನಗೆ ಮರಳಿ ಕೊಡಿ” ಎಂದು ಸರ್ಕಾರಕ್ಕೆ ಮೊರೆಯಿಟ್ಟಿದ್ದಾರೆ ಎಂದು ವರದಿ ಹೇಳಿದೆ.

ಸೌಜನ್ಯ : thewire.in

ನಾಲ್ಕು ದಿನಗಳ ಭಾರತ-ಪಾಕ್‌ ಸಂಘರ್ಷ: ಜಮ್ಮು ಕಾಶ್ಮೀರದಲ್ಲಿ 21 ನಾಗರಿಕರು, ಐವರು ಸಶಸ್ತ್ರ ಪಡೆ ಸಿಬ್ಬಂದಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...