Homeಮುಖಪುಟ'ನನ್ನ ಸಿಂಧೂರ ವಾಪಸ್ ಕೊಡಿ': ಪಾಕಿಸ್ತಾನ ಸೆರೆಹಿಡಿದ ಬಿಎಸ್‌ಎಫ್ ಯೋಧನ ಪತ್ನಿ ಕಣ್ಣೀರು

‘ನನ್ನ ಸಿಂಧೂರ ವಾಪಸ್ ಕೊಡಿ’: ಪಾಕಿಸ್ತಾನ ಸೆರೆಹಿಡಿದ ಬಿಎಸ್‌ಎಫ್ ಯೋಧನ ಪತ್ನಿ ಕಣ್ಣೀರು

- Advertisement -
- Advertisement -

‘ಆಪರೇಷನ್ ಸಿಂಧೂರ’ದ ಚರ್ಚೆಯ ನಡುವೆ ಕಳೆದ 20 ದಿನಗಳ ಹಿಂದೆ ಪಾಕಿಸ್ತಾನ ಸೇನೆ ಸೆರೆಹಿಡಿದಿದೆ ಎನ್ನಲಾದ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧ ಪೂರ್ಣಂ ಸಾಹು ಅವರ ಕುಟುಂಬ ತಮ್ಮ ಮನೆ ಮಗನನ್ನು ಮರಳಿ ಕರೆ ತರುವಂತೆ ಕಣ್ಣೀರು ಹಾಕುತ್ತಿದೆ.

ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಸೃಷ್ಟಿಯಾದ ಬಳಿಕ, ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧ ಸಂಪೂರ್ಣ ಹದೆಗೆಟ್ಟಿದೆ. ಆದರೂ, ಯೋಧ ಮರಳಿ ಬರುವ ಭರವಸೆಯನ್ನು ಪಶ್ಚಿಮ ಬಂಗಾಳದ ರಿಶ್ರಾದಲ್ಲಿರುವ ಅವರ ಕುಟುಂಬ ವ್ಯಕ್ತಪಡಿಸಿದೆ.

ಫಿರೋಝ್‌ಪುರದ ಬಿಎಸ್‌ಎಫ್‌ನ 24 ನೇ ಬೆಟಾಲಿಯನ್‌ನ ಯೋಧ ಪೂರ್ಣಂ ಸಾಹು ಅವರನ್ನು, ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ 26 ಭಾರತೀಯ ಪ್ರವಾಸಿಗರನ್ನು ಹತ್ಯೆಗೈದ ಒಂದು ದಿನದ ನಂತರ, ಅಂದರೆ ಏಪ್ರಿಲ್ 23ರಂದು ಭಾರತ-ಪಾಕ್ ಗಡಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.

ಅಂತಾರಾಷ್ಟ್ರೀಯ ಗಡಿಯಲ್ಲಿ ಸ್ಥಳೀಯ ರೈತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಲ್ಲಿ ಸಹಾಯ ಮಾಡುವಾಗ ಸಾಹು ಅವರು ತಪ್ಪಿ ಗಡಿ ದಾಟಿದ್ದಾರೆ ಎಂದು ಆರೋಪಿಸಲಾಗಿದೆ. ಬಳಿಕ ಪಾಕಿಸ್ತಾನಿ ಪಡೆಗಳು ಸಾಹು ಅವರನ್ನು ಬಂಧಿಸಿ, ಅವರ ಕಣ್ಣಿಗೆ ಕಪ್ಪು ಪಟ್ಟಿ ಕರೆದೊಯ್ಯುವ ಫೋಟೋ ಬಿಡುಗಡೆ ಮಾಡಿದೆ.

ಯೋಧ ಸಾಹು ಬಂಧನವಾಗಿ 20 ದಿನ ಕಳದರೂ, ಅವರನ್ನು ವಾಪಸ್ ಕರೆ ತರುವ ಕುರಿತು ಯಾವುದೇ ದೊಡ್ಡ ಬೆಳವಣಿಗೆಗಳು ನಡೆಯುತ್ತಿಲ್ಲ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ರಿಶ್ರಾ ವಾರ್ಡ್ ಸಂಖ್ಯೆ 13ರಲ್ಲಿರುವ ಸಾಹು ಅವರ ಕುಟುಂಬ ತೀವ್ರ ದುಖಃ ಮತ್ತು ಆತಂಕದಲ್ಲಿ ದಿನ ದೂಡುತ್ತಿದೆ. ಸಾಹು ಅವರ ಪತ್ನಿ ರಜನಿ ಸಾಹು ಏಳು ತಿಂಗಳ ಗರ್ಭಿಣಿಯಾಗಿದ್ದು, ತನ್ನ ಗಂಡನನ್ನು ನೆನೆದು ಕಣ್ಣೀರಿಟ್ಟಿದ್ದಾರೆ ಎಂದು ವರದಿಗಳು ಹೇಳಿವೆ.

“ನನ್ನ ಗಂಡನನ್ನು ಪಾಕಿಸ್ತಾನಿ ಸೇನೆ ಅಪಹರಿಸಿದೆ. ಅವರು ಸೇನೆಯ ವಶದಲ್ಲಿದ್ದಾರೆ. ಅವರ ಕಣ್ಣಿಗೆ ಬಟ್ಟೆ ಕಟ್ಟಿ ಕರೆದೊಯ್ಯುವ ಫೋಟೋ ಬಿಡುಗಡೆ ಮಾಡಿದ್ದಾರೆ” ಎಂದು ರಜಿನಿ ಸಾಹು ಅಳುತ್ತಾ ಹೇಳಿದ್ದಾರೆ.

ಅಪಹರಣಕ್ಕೆ ಒಳಗಾಗುವ ಕೆಲ ಗಂಟೆಗಳ ಮೊದಲು ಕುಟುಂಬಕ್ಕೆ ಕರೆ ಮಾಡಿದ್ದರು

“ಬಿಎಸ್‌ಎಫ್ ಅಧಿಕಾರಿಗಳು ನಮ್ಮ ಮನೆಗೆ ಭೇಟಿ ನೀಡಿ ನನ್ನ ಗಂಡನನ್ನು ಮರಳಿ ಕರೆತರಲು ಪ್ರಯತ್ನಿಸುತ್ತಿರುವುದಾಗಿ ತಿಳಿಸಿದ್ದಾರೆ. ಆದರೆ ಈಗ ಪರಿಸ್ಥಿತಿ ಯುದ್ಧದಂತಿದೆ. ಮುಂದೆ ಏನು ಸುದ್ದಿ ಬರುತ್ತದೆಯೋ ಗೊತ್ತಿಲ್ಲ” ಎಂದು ರಜನಿ ಕಳವಳ ವ್ಯಕ್ತಪಡಿಸಿದ್ದಾರೆ.

“ಒಂದು ತಿಂಗಳ ರಜೆ ಮುಗಿಸಿ ಹಿಂತಿರುಗಿದ ಪೂರ್ಣಂ, ಏಪ್ರಿಲ್ 1 ರಂದು ಕರ್ತವ್ಯಕ್ಕೆ ಮರಳಿದ್ದರು. ಏಪ್ರಿಲ್ 22ರ ರಾತ್ರಿ, ಅಪಹರಣಕ್ಕೆ ಒಳಗಾಗುವ ಕೆಲ ಗಂಟೆಗಳ ಮೊದಲು, ನನ್ನ ಆರೋಗ್ಯ ವಿಚಾರಿಸಲು ಕೊನೆಯ ಬಾರಿಗೆ ಕರೆ ಮಾಡಿದ್ದರು. ಆ ಬಳಿಕ ಇಷ್ಟು ದಿನ ಕಳೆದರೂ, ಅವರು ಬಗ್ಗೆ ಯಾವುದೇ ಸುದ್ದಿ ಬಂದಿಲ್ಲ” ಎಂದು ರಜನಿ ತಿಳಿಸಿದ್ದಾರೆ.

ದಂಪತಿಯ ಎಂಟು ವರ್ಷದ ಮಗನನ್ನು ಈಗ ನೆರೆಹೊರೆಯವರು ನೋಡಿಕೊಳ್ಳುತ್ತಿದ್ದಾರೆ. ಆತನಿಗೆ ಪರಿಸ್ಥಿತಿಯ ಗಂಭೀರತೆಯ ಅರಿವಿಲ್ಲ. ಪೂರ್ಣಂ ಅವರ ತಂದೆ, ನಿವೃತ್ತ ಭದ್ರತಾ ಸಿಬ್ಬಂದಿ ಭೋಲಾ ಸಾಹು ಅವರು, ಆರಂಭಿಕ ಭರವಸೆಗಳ ನಂತರದ ಸೇನೆಯ ಮೌನದ ಬಗ್ಗೆ ಹತಾಶೆ ವ್ಯಕ್ತಪಡಿಸಿದ್ದಾರೆ.

“ನಾವು ನಮ್ಮ ಸೊಸೆಯೊಂದಿಗೆ ಫಿರೋಝ್‌ಪುರಕ್ಕೆ ಹೋಗಿದ್ದೆವು. ಸೇನಾ ಅಧಿಕಾರಿಗಳು ಮಗನನ್ನು ಕರೆತರಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈಗ ಯಾವುದೇ ಮಾಹಿತಿ ಇಲ್ಲ. ಪ್ರಧಾನ ಮಂತ್ರಿಯನ್ನು ಸಂಪರ್ಕಿಸಲು ನಮಗೆ ಸಾಧ್ಯವಾದರೆ, ಮಗನನ್ನು ವಾಪಸ್ ಕರೆತರಲು ಬೇಡಿಕೊಳ್ಳುತ್ತೇವೆ.” ಎಂದು ಹೇಳಿದ್ದಾರೆ.

“ನನ್ನ ಮಗ 18 ವರ್ಷಗಳಿಂದ ದೇಶ ಸೇವೆ ಮಾಡಿದ್ದಾನೆ. ಇಂದು ನಾವು ಪರಿತ್ಯಕ್ತರಾಗಿದ್ದೇವೆಂದು ಅನಿಸುತ್ತಿದೆ” ಎಂದು ಪೂರ್ಣ ಸಾಹು ಅವರ ತಾಯಿ ದುಃಖ ವ್ಯಕ್ತಪಡಿಸಿದ್ದಾರೆ.

ಈ ಘಟನೆಯು ರಿಶ್ರಾದ ಸ್ಥಳೀಯ ಬಂಗಾಳಿ ಅಲ್ಲದ ವಲಸೆ ಸಮುದಾಯವನ್ನು, ವಿಶೇಷವಾಗಿ ಬಿಹಾರ ಮತ್ತು ಉತ್ತರ ಪ್ರದೇಶದ ಸೆಣಬಿನ ಗಿರಣಿ ಕಾರ್ಮಿಕ ಸಮುದಾಯವನ್ನು ಒಂದುಗೂಡಿಸಿದೆ. ಸ್ಥಳೀಯರು ವಾರ್ಡ್ ಸಂಖ್ಯೆ 13 ಯೋಧ ಪೂರ್ಣಂ ಅವರ ಮನೆಗೆ ಭೇಟಿ ನೀಡುತ್ತಿದ್ದಾರೆ. ಅಲ್ಲಿನ ಟಿವಿ ಪರದೆಯಲ್ಲಿ 24/7 ಸುದ್ದಿಗಳನ್ನು ಪ್ರಸಾರ ಆಗುತ್ತಿದೆ ಎಂದು ವರದಿಗಳು ಹೇಳಿವೆ.

“ಒಂದೆಡೆ ಸಂಘರ್ಷ, ಮತ್ತೊಂದೆಡೆ ಶಾಂತಿ. ಇದರಿಂದ ನಾವು ಗೊಂದಲಕ್ಕೀಡಾಗಿದ್ದೇವೆ. ಪೂರ್ಣ> ಸುರಕ್ಷಿತವಾಗಿ ಮನೆಗೆ ಬರಲೆಂದು ಬೇಡಿಕೊಳ್ಳುತ್ತೇವೆ. ಅವರು ಮನೆಗೆ ಬಂದರೆ ನಾವು ‘ಸಿಂಧೂರ’ ಆಚರಣೆ ಮಾಡುತ್ತೇವೆ” ಎಂದು ಯೋಧ ಪೂರ್ಣಂ ಅವರ ಸಹೋದರ ಶ್ಯಾಮ್‌ಸುಂದರ್ ಶಾವ್ ಹೇಳಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಳೆದ ಸೋಮವಾರ ಗೃಹ ಸಚಿವಾಲಯದಿಂದ ತ್ವರಿತ ಪರಿಹಾರದ ಭರವಸೆ ವ್ಯಕ್ತಪಡಿಸಿದ್ದಾರೆ. ಹೂಗ್ಲಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಬಿಎಸ್‌ಎಫ್ ಕಮಾಂಡರ್‌ಗಳೊಂದಿಗೆ ಈ ವಿಷಯವನ್ನು ಪ್ರಸ್ತಾಪಿಸಿದ್ದಾಗಿ ದೃಢಪಡಿಸಿದ್ದಾರೆ.

“ನಾನು ಬಿಎಸ್‌ಎಫ್ ಕಮಾಂಡರ್‌ಗಳೊಂದಿಗೆ ಮಾತನಾಡಿದ್ದೇನೆ. ಅವರು ಪೂರ್ಣಂ ಅವರ ಬಿಡುಗಡೆಗೆ ಪ್ರಯತ್ನಿಸುತ್ತಿರುವುದಾಗಿ ತಿಳಿಸಿದ್ದಾರೆ. ನಾನು ಪೂರ್ಣಂ ಅವರ ಕುಟುಂಬಸ್ಥರನ್ನು ಭೇಟಿ ಮಾಡಿದ್ದೇನೆ. ಆದರೆ, ಅವರ ಪರಿಸ್ಥಿತಿ ಹದಗೆಟ್ಟಿದೆ” ಎಂದು ಕಲ್ಯಾಣ್ ಬ್ಯಾನರ್ಜಿ ಹೇಳಿದ್ದಾರೆ.

‘ಆಪರೇಷನ್ ಸಿಂಧೂರ’ ಬಗ್ಗೆ ಕೇಳಿದ ಕೂಡಲೇ ಒಮ್ಮೆಲೆ ಆಘಾತ ವ್ಯಕ್ತಪಡಿಸಿ, ಮುಖದ ಮೇಲೆ ಮುಸುಕನ್ನು ಎಳೆದುಕೊಂಡ ಯೋಧ ಪೂರ್ಣಂ ಪತ್ನಿ ರಜನಿ “ನನ್ನ ಸಿಂಧೂರವನ್ನು ನನಗೆ ಮರಳಿ ಕೊಡಿ” ಎಂದು ಸರ್ಕಾರಕ್ಕೆ ಮೊರೆಯಿಟ್ಟಿದ್ದಾರೆ ಎಂದು ವರದಿ ಹೇಳಿದೆ.

ಸೌಜನ್ಯ : thewire.in

ನಾಲ್ಕು ದಿನಗಳ ಭಾರತ-ಪಾಕ್‌ ಸಂಘರ್ಷ: ಜಮ್ಮು ಕಾಶ್ಮೀರದಲ್ಲಿ 21 ನಾಗರಿಕರು, ಐವರು ಸಶಸ್ತ್ರ ಪಡೆ ಸಿಬ್ಬಂದಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...