Homeಮುಖಪುಟ'ನನ್ನ ಸಿಂಧೂರ ವಾಪಸ್ ಕೊಡಿ': ಪಾಕಿಸ್ತಾನ ಸೆರೆಹಿಡಿದ ಬಿಎಸ್‌ಎಫ್ ಯೋಧನ ಪತ್ನಿ ಕಣ್ಣೀರು

‘ನನ್ನ ಸಿಂಧೂರ ವಾಪಸ್ ಕೊಡಿ’: ಪಾಕಿಸ್ತಾನ ಸೆರೆಹಿಡಿದ ಬಿಎಸ್‌ಎಫ್ ಯೋಧನ ಪತ್ನಿ ಕಣ್ಣೀರು

- Advertisement -
- Advertisement -

‘ಆಪರೇಷನ್ ಸಿಂಧೂರ’ದ ಚರ್ಚೆಯ ನಡುವೆ ಕಳೆದ 20 ದಿನಗಳ ಹಿಂದೆ ಪಾಕಿಸ್ತಾನ ಸೇನೆ ಸೆರೆಹಿಡಿದಿದೆ ಎನ್ನಲಾದ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧ ಪೂರ್ಣಂ ಸಾಹು ಅವರ ಕುಟುಂಬ ತಮ್ಮ ಮನೆ ಮಗನನ್ನು ಮರಳಿ ಕರೆ ತರುವಂತೆ ಕಣ್ಣೀರು ಹಾಕುತ್ತಿದೆ.

ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಸೃಷ್ಟಿಯಾದ ಬಳಿಕ, ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧ ಸಂಪೂರ್ಣ ಹದೆಗೆಟ್ಟಿದೆ. ಆದರೂ, ಯೋಧ ಮರಳಿ ಬರುವ ಭರವಸೆಯನ್ನು ಪಶ್ಚಿಮ ಬಂಗಾಳದ ರಿಶ್ರಾದಲ್ಲಿರುವ ಅವರ ಕುಟುಂಬ ವ್ಯಕ್ತಪಡಿಸಿದೆ.

ಫಿರೋಝ್‌ಪುರದ ಬಿಎಸ್‌ಎಫ್‌ನ 24 ನೇ ಬೆಟಾಲಿಯನ್‌ನ ಯೋಧ ಪೂರ್ಣಂ ಸಾಹು ಅವರನ್ನು, ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ 26 ಭಾರತೀಯ ಪ್ರವಾಸಿಗರನ್ನು ಹತ್ಯೆಗೈದ ಒಂದು ದಿನದ ನಂತರ, ಅಂದರೆ ಏಪ್ರಿಲ್ 23ರಂದು ಭಾರತ-ಪಾಕ್ ಗಡಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.

ಅಂತಾರಾಷ್ಟ್ರೀಯ ಗಡಿಯಲ್ಲಿ ಸ್ಥಳೀಯ ರೈತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಲ್ಲಿ ಸಹಾಯ ಮಾಡುವಾಗ ಸಾಹು ಅವರು ತಪ್ಪಿ ಗಡಿ ದಾಟಿದ್ದಾರೆ ಎಂದು ಆರೋಪಿಸಲಾಗಿದೆ. ಬಳಿಕ ಪಾಕಿಸ್ತಾನಿ ಪಡೆಗಳು ಸಾಹು ಅವರನ್ನು ಬಂಧಿಸಿ, ಅವರ ಕಣ್ಣಿಗೆ ಕಪ್ಪು ಪಟ್ಟಿ ಕರೆದೊಯ್ಯುವ ಫೋಟೋ ಬಿಡುಗಡೆ ಮಾಡಿದೆ.

ಯೋಧ ಸಾಹು ಬಂಧನವಾಗಿ 20 ದಿನ ಕಳದರೂ, ಅವರನ್ನು ವಾಪಸ್ ಕರೆ ತರುವ ಕುರಿತು ಯಾವುದೇ ದೊಡ್ಡ ಬೆಳವಣಿಗೆಗಳು ನಡೆಯುತ್ತಿಲ್ಲ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ರಿಶ್ರಾ ವಾರ್ಡ್ ಸಂಖ್ಯೆ 13ರಲ್ಲಿರುವ ಸಾಹು ಅವರ ಕುಟುಂಬ ತೀವ್ರ ದುಖಃ ಮತ್ತು ಆತಂಕದಲ್ಲಿ ದಿನ ದೂಡುತ್ತಿದೆ. ಸಾಹು ಅವರ ಪತ್ನಿ ರಜನಿ ಸಾಹು ಏಳು ತಿಂಗಳ ಗರ್ಭಿಣಿಯಾಗಿದ್ದು, ತನ್ನ ಗಂಡನನ್ನು ನೆನೆದು ಕಣ್ಣೀರಿಟ್ಟಿದ್ದಾರೆ ಎಂದು ವರದಿಗಳು ಹೇಳಿವೆ.

“ನನ್ನ ಗಂಡನನ್ನು ಪಾಕಿಸ್ತಾನಿ ಸೇನೆ ಅಪಹರಿಸಿದೆ. ಅವರು ಸೇನೆಯ ವಶದಲ್ಲಿದ್ದಾರೆ. ಅವರ ಕಣ್ಣಿಗೆ ಬಟ್ಟೆ ಕಟ್ಟಿ ಕರೆದೊಯ್ಯುವ ಫೋಟೋ ಬಿಡುಗಡೆ ಮಾಡಿದ್ದಾರೆ” ಎಂದು ರಜಿನಿ ಸಾಹು ಅಳುತ್ತಾ ಹೇಳಿದ್ದಾರೆ.

ಅಪಹರಣಕ್ಕೆ ಒಳಗಾಗುವ ಕೆಲ ಗಂಟೆಗಳ ಮೊದಲು ಕುಟುಂಬಕ್ಕೆ ಕರೆ ಮಾಡಿದ್ದರು

“ಬಿಎಸ್‌ಎಫ್ ಅಧಿಕಾರಿಗಳು ನಮ್ಮ ಮನೆಗೆ ಭೇಟಿ ನೀಡಿ ನನ್ನ ಗಂಡನನ್ನು ಮರಳಿ ಕರೆತರಲು ಪ್ರಯತ್ನಿಸುತ್ತಿರುವುದಾಗಿ ತಿಳಿಸಿದ್ದಾರೆ. ಆದರೆ ಈಗ ಪರಿಸ್ಥಿತಿ ಯುದ್ಧದಂತಿದೆ. ಮುಂದೆ ಏನು ಸುದ್ದಿ ಬರುತ್ತದೆಯೋ ಗೊತ್ತಿಲ್ಲ” ಎಂದು ರಜನಿ ಕಳವಳ ವ್ಯಕ್ತಪಡಿಸಿದ್ದಾರೆ.

“ಒಂದು ತಿಂಗಳ ರಜೆ ಮುಗಿಸಿ ಹಿಂತಿರುಗಿದ ಪೂರ್ಣಂ, ಏಪ್ರಿಲ್ 1 ರಂದು ಕರ್ತವ್ಯಕ್ಕೆ ಮರಳಿದ್ದರು. ಏಪ್ರಿಲ್ 22ರ ರಾತ್ರಿ, ಅಪಹರಣಕ್ಕೆ ಒಳಗಾಗುವ ಕೆಲ ಗಂಟೆಗಳ ಮೊದಲು, ನನ್ನ ಆರೋಗ್ಯ ವಿಚಾರಿಸಲು ಕೊನೆಯ ಬಾರಿಗೆ ಕರೆ ಮಾಡಿದ್ದರು. ಆ ಬಳಿಕ ಇಷ್ಟು ದಿನ ಕಳೆದರೂ, ಅವರು ಬಗ್ಗೆ ಯಾವುದೇ ಸುದ್ದಿ ಬಂದಿಲ್ಲ” ಎಂದು ರಜನಿ ತಿಳಿಸಿದ್ದಾರೆ.

ದಂಪತಿಯ ಎಂಟು ವರ್ಷದ ಮಗನನ್ನು ಈಗ ನೆರೆಹೊರೆಯವರು ನೋಡಿಕೊಳ್ಳುತ್ತಿದ್ದಾರೆ. ಆತನಿಗೆ ಪರಿಸ್ಥಿತಿಯ ಗಂಭೀರತೆಯ ಅರಿವಿಲ್ಲ. ಪೂರ್ಣಂ ಅವರ ತಂದೆ, ನಿವೃತ್ತ ಭದ್ರತಾ ಸಿಬ್ಬಂದಿ ಭೋಲಾ ಸಾಹು ಅವರು, ಆರಂಭಿಕ ಭರವಸೆಗಳ ನಂತರದ ಸೇನೆಯ ಮೌನದ ಬಗ್ಗೆ ಹತಾಶೆ ವ್ಯಕ್ತಪಡಿಸಿದ್ದಾರೆ.

“ನಾವು ನಮ್ಮ ಸೊಸೆಯೊಂದಿಗೆ ಫಿರೋಝ್‌ಪುರಕ್ಕೆ ಹೋಗಿದ್ದೆವು. ಸೇನಾ ಅಧಿಕಾರಿಗಳು ಮಗನನ್ನು ಕರೆತರಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈಗ ಯಾವುದೇ ಮಾಹಿತಿ ಇಲ್ಲ. ಪ್ರಧಾನ ಮಂತ್ರಿಯನ್ನು ಸಂಪರ್ಕಿಸಲು ನಮಗೆ ಸಾಧ್ಯವಾದರೆ, ಮಗನನ್ನು ವಾಪಸ್ ಕರೆತರಲು ಬೇಡಿಕೊಳ್ಳುತ್ತೇವೆ.” ಎಂದು ಹೇಳಿದ್ದಾರೆ.

“ನನ್ನ ಮಗ 18 ವರ್ಷಗಳಿಂದ ದೇಶ ಸೇವೆ ಮಾಡಿದ್ದಾನೆ. ಇಂದು ನಾವು ಪರಿತ್ಯಕ್ತರಾಗಿದ್ದೇವೆಂದು ಅನಿಸುತ್ತಿದೆ” ಎಂದು ಪೂರ್ಣ ಸಾಹು ಅವರ ತಾಯಿ ದುಃಖ ವ್ಯಕ್ತಪಡಿಸಿದ್ದಾರೆ.

ಈ ಘಟನೆಯು ರಿಶ್ರಾದ ಸ್ಥಳೀಯ ಬಂಗಾಳಿ ಅಲ್ಲದ ವಲಸೆ ಸಮುದಾಯವನ್ನು, ವಿಶೇಷವಾಗಿ ಬಿಹಾರ ಮತ್ತು ಉತ್ತರ ಪ್ರದೇಶದ ಸೆಣಬಿನ ಗಿರಣಿ ಕಾರ್ಮಿಕ ಸಮುದಾಯವನ್ನು ಒಂದುಗೂಡಿಸಿದೆ. ಸ್ಥಳೀಯರು ವಾರ್ಡ್ ಸಂಖ್ಯೆ 13 ಯೋಧ ಪೂರ್ಣಂ ಅವರ ಮನೆಗೆ ಭೇಟಿ ನೀಡುತ್ತಿದ್ದಾರೆ. ಅಲ್ಲಿನ ಟಿವಿ ಪರದೆಯಲ್ಲಿ 24/7 ಸುದ್ದಿಗಳನ್ನು ಪ್ರಸಾರ ಆಗುತ್ತಿದೆ ಎಂದು ವರದಿಗಳು ಹೇಳಿವೆ.

“ಒಂದೆಡೆ ಸಂಘರ್ಷ, ಮತ್ತೊಂದೆಡೆ ಶಾಂತಿ. ಇದರಿಂದ ನಾವು ಗೊಂದಲಕ್ಕೀಡಾಗಿದ್ದೇವೆ. ಪೂರ್ಣ> ಸುರಕ್ಷಿತವಾಗಿ ಮನೆಗೆ ಬರಲೆಂದು ಬೇಡಿಕೊಳ್ಳುತ್ತೇವೆ. ಅವರು ಮನೆಗೆ ಬಂದರೆ ನಾವು ‘ಸಿಂಧೂರ’ ಆಚರಣೆ ಮಾಡುತ್ತೇವೆ” ಎಂದು ಯೋಧ ಪೂರ್ಣಂ ಅವರ ಸಹೋದರ ಶ್ಯಾಮ್‌ಸುಂದರ್ ಶಾವ್ ಹೇಳಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಳೆದ ಸೋಮವಾರ ಗೃಹ ಸಚಿವಾಲಯದಿಂದ ತ್ವರಿತ ಪರಿಹಾರದ ಭರವಸೆ ವ್ಯಕ್ತಪಡಿಸಿದ್ದಾರೆ. ಹೂಗ್ಲಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಬಿಎಸ್‌ಎಫ್ ಕಮಾಂಡರ್‌ಗಳೊಂದಿಗೆ ಈ ವಿಷಯವನ್ನು ಪ್ರಸ್ತಾಪಿಸಿದ್ದಾಗಿ ದೃಢಪಡಿಸಿದ್ದಾರೆ.

“ನಾನು ಬಿಎಸ್‌ಎಫ್ ಕಮಾಂಡರ್‌ಗಳೊಂದಿಗೆ ಮಾತನಾಡಿದ್ದೇನೆ. ಅವರು ಪೂರ್ಣಂ ಅವರ ಬಿಡುಗಡೆಗೆ ಪ್ರಯತ್ನಿಸುತ್ತಿರುವುದಾಗಿ ತಿಳಿಸಿದ್ದಾರೆ. ನಾನು ಪೂರ್ಣಂ ಅವರ ಕುಟುಂಬಸ್ಥರನ್ನು ಭೇಟಿ ಮಾಡಿದ್ದೇನೆ. ಆದರೆ, ಅವರ ಪರಿಸ್ಥಿತಿ ಹದಗೆಟ್ಟಿದೆ” ಎಂದು ಕಲ್ಯಾಣ್ ಬ್ಯಾನರ್ಜಿ ಹೇಳಿದ್ದಾರೆ.

‘ಆಪರೇಷನ್ ಸಿಂಧೂರ’ ಬಗ್ಗೆ ಕೇಳಿದ ಕೂಡಲೇ ಒಮ್ಮೆಲೆ ಆಘಾತ ವ್ಯಕ್ತಪಡಿಸಿ, ಮುಖದ ಮೇಲೆ ಮುಸುಕನ್ನು ಎಳೆದುಕೊಂಡ ಯೋಧ ಪೂರ್ಣಂ ಪತ್ನಿ ರಜನಿ “ನನ್ನ ಸಿಂಧೂರವನ್ನು ನನಗೆ ಮರಳಿ ಕೊಡಿ” ಎಂದು ಸರ್ಕಾರಕ್ಕೆ ಮೊರೆಯಿಟ್ಟಿದ್ದಾರೆ ಎಂದು ವರದಿ ಹೇಳಿದೆ.

ಸೌಜನ್ಯ : thewire.in

ನಾಲ್ಕು ದಿನಗಳ ಭಾರತ-ಪಾಕ್‌ ಸಂಘರ್ಷ: ಜಮ್ಮು ಕಾಶ್ಮೀರದಲ್ಲಿ 21 ನಾಗರಿಕರು, ಐವರು ಸಶಸ್ತ್ರ ಪಡೆ ಸಿಬ್ಬಂದಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....