HomeಮುಖಪುಟNEET ಪರೀಕ್ಷೆಯಲ್ಲಿ OBC ಮೀಸಲಾತಿ ನೀಡಿ, ಸಾಮಾಜಿಕ ನ್ಯಾಯ ಪಾಲಿಸಿ: ಪ್ರಿಯಾಂಕಾ ಗಾಂಧಿ

NEET ಪರೀಕ್ಷೆಯಲ್ಲಿ OBC ಮೀಸಲಾತಿ ನೀಡಿ, ಸಾಮಾಜಿಕ ನ್ಯಾಯ ಪಾಲಿಸಿ: ಪ್ರಿಯಾಂಕಾ ಗಾಂಧಿ

ರಾಜ್ಯ ವೈದ್ಯಕೀಯ ಸಂಸ್ಥೆಗಳಲ್ಲಿ ಒಬಿಸಿ ವಿದ್ಯಾರ್ಥಿಗಳಿಗೆ ಮೀಸಲಾತಿ ನಿರಾಕರಿಸುವುದು ಅರ್ಹ ಅಭ್ಯರ್ಥಿಗಳಿಗೆ ವೈದ್ಯಕೀಯ ಶಿಕ್ಷಣದ ಪ್ರವೇಶಕ್ಕೆ ತಡೆ ಎಂದು ಸೋನಿಯಾ ಗಾಂಧಿ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಯ ರಾಷ್ಟ್ರೀಯ ಕೋಟಾ ಅಡಿಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ವೈದ್ಯಕೀಯ ಸಂಸ್ಥೆಗಳಲ್ಲಿ ಇತರ ಹಿಂದುಳಿದ ವರ್ಗದ (ಒಬಿಸಿ) ವಿದ್ಯಾರ್ಥಿಗಳಿಗೆ ಸೀಟು ಕಾಯ್ದಿರಿಸುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ. ಈ ಬೇಡಿಕೆಯು ನ್ಯಾಯಸಮ್ಮತವಾಗಿದೆ ಮತ್ತು ಸಾಮಾಜಿಕ ನ್ಯಾಯವನ್ನು ಖಚಿತಪಡಿಸುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ತನ್ನ ತಾಯಿಯ ಬೇಡಿಕೆಯನ್ನು ಪುನರುಚ್ಚರಿಸಿರುವ ಪ್ರಿಯಾಂಕಾ, ಸೋನಿಯಾ ಗಾಂಧಿಯವರು ಈ ವಿಚಾರದಲ್ಲಿ ಬರೆದ ಪತ್ರವನ್ನು ಟ್ವೀಟ್ ಮಾಡಿದ್ದು ಕೇಂದ್ರ ಸರ್ಕಾರ ಇದನ್ನು ಕಾರ್ಯಗತಗೊಳಿಸುತ್ತದೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

ನೀಟ್‌ ಪರೀಕ್ಷೆಯ ಅಖಿಲ ಭಾರತ ಕೋಟಾ ಅಡಿಯಲ್ಲಿ ಪದವಿಪೂರ್ವ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾರ್ಥಿಗಳಿಗೆ ದೇಶದ ಏಕೈಕ ಪ್ರವೇಶ ಪರೀಕ್ಷೆಯಡಿ ರಾಜ್ಯ ವೈದ್ಯಕೀಯ ಕಾಲೇಜುಗಳಲ್ಲಿ ಇತರ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡುವಂತೆ ಕೋರಿ ಶುಕ್ರವಾರ ಸೋನಿಯಾ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಮೀಸಲಾತಿ ನಿರಾಕರಿಸಿದ್ದರಿಂದ ಒಬಿಸಿ ವಿದ್ಯಾರ್ಥಿಗಳು 2017 ರಿಂದ 11,000 ಸ್ಥಾನಗಳನ್ನು ಕಳೆದುಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಒಬಿಸಿ ಅಭ್ಯರ್ಥಿಗಳಿಗೆ ನೀಟ್ ಮೀಸಲಾತಿಯಲ್ಲಿ ಅನ್ಯಾಯ: ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ


“ಅಖಿಲ ಭಾರತ ಕೋಟಾ ಅಡಿಯಲ್ಲಿ ಒಬಿಸಿ ಅಭ್ಯರ್ಥಿಗಳಿಗೆ ಮೀಸಲಾತಿ ನಿರಾಕರಿಸಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) ಮೂಲಕ ರಾಜ್ಯ / ಕೇಂದ್ರಾಡಳಿತ ಪ್ರದೇಶಗಳಲ್ಲಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಭರ್ತಿ ಮಾಡಲಾಗುತ್ತಿದೆ. ಇದನ್ನು ನಾನು ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ” ಎಂದು ಪ್ರಿಯಾಂಕ ಗಾಂಧಿ ಬರೆದಿದ್ದಾರೆ.

15% (ಪರಿಶಿಷ್ಟ ಜಾತಿ), 7.5% (ಪರಿಶಿಷ್ಟ ಪಂಗಡ) ಮತ್ತು 10% ಸ್ಥಾನಗಳನ್ನು ಆರ್ಥಿಕವಾಗಿ ದುರ್ಬಲ ವಿಭಾಗದ ಅಭ್ಯರ್ಥಿಗಳಿಗೆ ಕಾಯ್ದಿರಿಸಲಾಗಿದೆ. ಆದರೆ ಒಬಿಸಿ ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಕೇಂದ್ರ ಸರ್ಕಾರ ನಿರಾಕರಿಸಿದೆ ಎಂದು ಅವರು ದೂರಿದ್ದಾರೆ.

ರಾಜ್ಯ ವೈದ್ಯಕೀಯ ಸಂಸ್ಥೆಗಳಲ್ಲಿ ಒಬಿಸಿ ವಿದ್ಯಾರ್ಥಿಗಳಿಗೆ ಮೀಸಲಾತಿ ನಿರಾಕರಿಸುವುದು ಅರ್ಹ ಅಭ್ಯರ್ಥಿಗಳಿಗೆ ವೈದ್ಯಕೀಯ ಶಿಕ್ಷಣದ ಪ್ರವೇಶಕ್ಕೆ ತಡೆ ಎಂದು ಸೋನಿಯಾ ಗಾಂಧಿ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

“ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಹಿತದೃಷ್ಟಿಯಿಂದ, ರಾಜ್ಯ / ಕೇಂದ್ರಾಡಳಿತ ಪ್ರದೇಶಗಳ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿಯೂ ಸಹ, ಅಖಿಲ ಭಾರತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ಥಾನಗಳಲ್ಲಿ ಒಬಿಸಿ ಅಭ್ಯರ್ಥಿಗಳಿಗೆ ಮೀಸಲಾತಿ ವಿಸ್ತರಿಸಬೇಕೆಂದು ನಾನು ಬಲವಾಗಿ ಒತ್ತಾಯಿಸುತ್ತೇನೆ” ಎಂದು ಅವರು ತಿಳಿಸಿದ್ದಾರೆ.

ಈ ಕುರಿತ ತಮಿಳುನಾಡಿನ ರಾಜಕೀಯ ಪಕ್ಷಗಳ ಮೊಕದ್ದಮೆಗೆ ಉತ್ತರಿಸಿದ ಕೇಂದ್ರವು ಅಖಿಲ ಭಾರತ ಕೋಟಾ ಅಡಿಯಲ್ಲಿ ಒಬಿಸಿ ವಿದ್ಯಾರ್ಥಿಗಳಿಗೆ ಎಲ್ಲಾ ಸರ್ಕಾರಿ ಸಂಸ್ಥೆಗಳಲ್ಲಿ ಮೀಸಲಾತಿ ನೀಡುವುದರಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸದ ಹೊರತು ನಮಗೆ ಸಾಧ್ಯವಿಲ್ಲ ಎಂದು ಕಳೆದ ತಿಂಗಳು ಮದ್ರಾಸ್ ಹೈಕೋರ್ಟ್‌ಗೆ ತಿಳಿಸಿದೆ.

ಕೊರೊನಾ ವೈರಸ್ ಸಾಂಕ್ರಾಮಿಕ ಮತ್ತು ರಾಷ್ಟ್ರವ್ಯಾಪಿ ಲಾಕ್‌ಡೌನ್ ಕಾರಣ ಮೇ ತಿಂಗಳಲ್ಲಿ ನಡೆಯಬೇಕಿದ್ದ NEET ಪರೀಕ್ಷೆಯನ್ನು ಮುಂದೂಡಿದ್ದು, ಸೆಪ್ಟೆಂಬರ್‌ನಲ್ಲಿ ನಡೆಸಲು ತೀರ್ಮಾನಿಸಲಾಗಿದೆ.


ಧೋನಿ ಹೋದಾಗ ಪಾರ್ಟಿ ಹಾಲ್, ಮೋದಿ ಹೋದರೆ ಆಸ್ಪತ್ರೆ: ಗಾಯಾಳು ಸೈನಿಕರ ಭೇಟಿಗೆ ನೆಟ್ಟಿಗರ ತರಾಟೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು ಯಾವುದೇ...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...

ಶಬರಿಮಲೆ ತುಪ್ಪ ಮಾರಾಟ ಹಗರಣ: ತನಿಖೆ ಪೂರ್ಣಗೊಳಿಸಲು ವಿಎಸಿಬಿಗೆ 30 ದಿನ ಕಾಲಾವಕಾಶ ನೀಡಿದ ಕೇರಳ ಹೈಕೋರ್ಟ್ 

ಕೊಚ್ಚಿ: ಶಬರಿಮಲೆಯ ಅಯ್ಯಪ್ಪ ದೇಗುಲದಲ್ಲಿ ಭಕ್ತರಿಗೆ ಮಾರಾಟವಾಗುವ ಪವಿತ್ರ ನೈವೇದ್ಯ 'ಆದಿಯ ಸಿಷ್ಟಂ ತುಪ್ಪ' ಮಾರಾಟಕ್ಕೆ ಸಂಬಂಧಿಸಿದಂತೆ ಟಿಡಿಬಿ ನೌಕರರು ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ತನಿಖೆಯನ್ನು ಪೂರ್ಣಗೊಳಿಸಲು ಕೇರಳ ಹೈಕೋರ್ಟ್ ಜಾಗೃತ...

ಧಾರ್ಮಿಕ ಆಚರಣೆ ಹೆಸರಿನಲ್ಲಿ ನರ್ಮದಾ ನದಿಗೆ 11,000 ಲೀಟರ್ ಹಾಲು ಸುರಿದ ಭಕ್ತರು

ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯ ನರ್ಮದಾ ನದಿ ದಂಡೆಯಲ್ಲಿ ಬುಧವಾರ ನಡೆದ ಧಾರ್ಮಿಕ ಆಚರಣೆಯ ಸಂದರ್ಭದಲ್ಲಿ 11,000 ಲೀಟರ್ ಹಾಲು ನರ್ಮದಾ ನದಿಗೆ ಸುರಿಯಲಾಗಿದ್ದು, ಇದು ನಂಬಿಕೆ ಮತ್ತು ಪರಿಸರ ಹಾನಿಯ ಕುರಿತು ಚರ್ಚೆಗೆ...

ಪಶ್ಚಿಮ ಬಂಗಾಳ: ಹುಮಾಯೂನ್ ಕಬೀರ್ ಪಕ್ಷದೊಂದಿಗಿನ ಮೈತ್ರಿ ಹಿಂತೆಗೆದುಕೊಂಡ ಎಐಎಂಐಎಂ; ಸ್ವತಂತ್ರ ಸ್ಪರ್ಧೆ ಘೋಷಣೆ

ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಹುಮಾಯೂನ್ ಕಬೀರ್ ನೇತೃತ್ವದ ಪಕ್ಷದೊಂದಿಗಿನ ಮೈತ್ರಿಯಿಂದ ಹಿಂದೆ ಸರಿಯುತ್ತಿರುವುದಾಗಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಘೋಷಿಸಿದೆ. ಕಬೀರ್ ಅವರ ಹೇಳಿಕೆಗಳು ಮತ್ತು ಬಹಿರಂಗಪಡಿಸುವಿಕೆಗಳು "ಮುಸ್ಲಿಮರ ಸಮಗ್ರತೆ"ಯ ಬಗ್ಗೆ...

ಏಕನಾಥ್ ಶಿಂಧೆ ಕುರಿತ ಹೇಳಿಕೆ ವಿವಾದ; ‘ಕ್ಷಮೆಯಾಚಿಸುವುದಿಲ್ಲ’ ಎಂದ ಕುನಾಲ್ ಕಮ್ರಾ

ಕೋಮುವಾದಿ ರಾಜಕಾರಣವನ್ನು ವಿರೋಧಿಸುತ್ತಾ ಬಲಪಂಥೀಯ ರಾಜಕೀಯವನ್ನು ವಿಡಂಬನೆ ಮಾಡುವ ಭಾರತದ ಖ್ಯಾತ 'ಸ್ಟಾಂಡಪ್‌ ಕಾಮಿಡಿಯನ್' ಕುನಾಲ್ ಕಮ್ರಾ ಗುರುವಾರ ಮಹಾರಾಷ್ಟ್ರ ಶಾಸಕಾಂಗ ಸಮಿತಿಯ ಮುಂದೆ ಹಾಜರಾದರು. "ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಯನ್ನು ಗುರಿಯಾಗಿಸಿಕೊಂಡು...