Homeಎಕಾನಮಿನಮ್ಮ ಪಾಲಿನ ಜಿಎಸ್‌ಟಿ ಪರಿಹಾರ ಕೊಡಲೇಬೇಕು: ಮೋದಿಗೆ ಪಿಣರಾಯಿ ವಿಜಯನ್ ಪತ್ರ

ನಮ್ಮ ಪಾಲಿನ ಜಿಎಸ್‌ಟಿ ಪರಿಹಾರ ಕೊಡಲೇಬೇಕು: ಮೋದಿಗೆ ಪಿಣರಾಯಿ ವಿಜಯನ್ ಪತ್ರ

ರಾಜ್ಯಗಳಿಗೆ ನೀಡಬೇಕಾದ ಜಿಎಸ್‌ಟಿ ಪರಿಹಾರ ಮೊತ್ತವನ್ನು ನೀಡಿ. ರಾಜ್ಯಗಳಿಗೆ ಎದುರಾಗಿರುವ ತೊಂದರೆಯನ್ನು ನೀಗಿಸಲು ಸಹಕಾರಿಯಾಗಬೇಕೆಂದು, ಮತ್ತು  ರಾಜ್ಯಗಳ ಪರಿಸ್ಥಿತಿಯನ್ನು ಪ್ರಧಾನಿಗೆ ಮನವರಿಕೆ ಮಾಡಿಕೊಡುವ ಸಲುವಾಗಿ ಈ ಪತ್ರವನ್ನು ಬರೆದಿದ್ದೇನೆ- ಪಿಣರಾಯಿ ವಿಜಯನ್

- Advertisement -
- Advertisement -

ಈ ಬಾರಿ ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರ ನೀಡಲು ಹಣವಿಲ್ಲ, ಸಾಲ ಮಾಡಿ ಎಂದು ಕೇಂದ್ರ ಸರ್ಕಾರ ಹೇಳಿದ ಬೆನ್ನಲ್ಲೇ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಜಿಎಸ್‌ಟಿ ಪರಿಹಾರ ನೀಡುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರವೊಂದನ್ನು ಬರೆದಿದ್ದಾರೆ.

ಈ ಕುರಿತು ಪಿಣರಾಯಿ ವಿಜಯನ್, “ರಾಜ್ಯಗಳಿಗೆ ನೀಡಬೇಕಾದ ಜಿಎಸ್‌ಟಿ ಪರಿಹಾರ ಮೊತ್ತವನ್ನು ನೀಡಿ. ರಾಜ್ಯಗಳಿಗೆ ಎದುರಾಗಿರುವ ತೊಂದರೆಯನ್ನು ನೀಗಿಸಲು ಸಹಕಾರಿಯಾಗಬೇಕೆಂದು, ಮತ್ತು  ರಾಜ್ಯಗಳ ಪರಿಸ್ಥಿತಿಯನ್ನು ಪ್ರಧಾನಿಗೆ ಮನವರಿಕೆ ಮಾಡಿಕೊಡುವ ಸಲುವಾಗಿ ಈ ಪತ್ರ ಬರೆದಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕೋವಿಡ್‌ನಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತ: ರಾಜ್ಯಗಳಿಗೆ ಪಾಲು ನೀಡಲು ಹಣವಿಲ್ಲವೆಂದ ಕೇಂದ್ರ!

“2017 ರ ಜಿಎಸ್‌ಟಿ ಕಾಯ್ದೆಯ ಸೆಕ್ಷನ್ 7ರ ಅಡಿಯಲ್ಲಿ ರಾಜ್ಯಗಳಿಗೆ ಪರಿಹಾರ ಮೊತ್ತವನ್ನು ಪ್ರತಿ ಎರಡು ತಿಂಗಳಿಗೊಮ್ಮೆ, ತಿಂಗಳಾಂತ್ಯದಲ್ಲಿ ಭರಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿತ್ತು. ಆದರೆ 2019-20ನೇ ಸಾಲಿನಿಂದ ಏಪ್ರಿಲ್ 2020ರವರೆಗೆ ಜಿಎಸ್‌ಟಿ ಪರಿಹಾರ ಮೊತ್ತವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಿರುವುದಿಲ್ಲ. ಕೇರಳಕ್ಕೆ ನೀಡಬೇಕಾದ ಬಾಕಿ, 2020-21ನೇ ಹಣಕಾಸು ವರ್ಷದಲ್ಲಿ ಆಗಸ್ಟ್ ವರೆಗೆ 7000 ಕೋಟಿ ಇದೆ” ಎಂದು ಪತ್ರದಲ್ಲಿ ಹೇಳಿದ್ದಾರೆ.

“41ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ, ಕೊರೊನಾ‌ ಸಾಂಕ್ರಾಮಿಕದಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತವಾಗಿದೆ ಎಂದು ಹೇಳಲಾಗಿತ್ತು. ಹಾಗಾಗಿ ಪರಿಹಾರವನ್ನು ರಾಜ್ಯಗಳಿಗೆ ನೀಡಲು ಸಾಧ್ಯವಿಲ್ಲ ಎಂದು ಹೇಳಲಾಗಿತ್ತು. ಆದರೆ ಇದರಿಂದ ರಾಜ್ಯಗಳ ಪರಿಸ್ಥಿತಿ ಇನ್ನೂ ಅಧೋಗತಿಗೆ ಹೋಗಬಹುದು” ಎಂದು ಹೇಳಿದ್ದಾರೆ.

ಒಟ್ಟು 3 ಲಕ್ಷ ಕೋಟಿ ರೂಗಳ ಕುಸಿತವನ್ನು ಕೇಂದ್ರ ಎದುರಿಸುತ್ತಿದೆ. ಕೇವಲ 65000 ಕೋಟಿ ಸೆಸ್ ಸಂಗ್ರಹವಾಗುವ ನಿರೀಕ್ಷೆಯಿದ್ದು ಉಳಿದ 2.35 ಲಕ್ಷ ಕೋಟಿ ಕೊರತೆ ಬೀಳುತ್ತದೆ. ಹಾಗಾಗಿ ಮೊದಲ ಆಯ್ಕೆಯಾಗಿ ಆರ್‌ಬಿಐನಿಂದ 97,000 ಕೋಟಿ ರೂ. ಸಾಲ ಪಡೆಯಬಹುದು. ಎರಡನೇ ಆಯ್ಕೆಯಾಗಿ ಹೊರಗಿನಿಂದ 2.35 ಲಕ್ಷ ಕೋಟಿ ಸಾಲ ಪಡೆಯಬಹುದೆಂಬ ಮತ್ತು ಅದನ್ನು 2022ರ ನಂತರ ಕೇಂದ್ರ ಭಾಗಶಃ ತೀರಿಸುತ್ತದೆ ಎಂಬ ಎರಡು ಆಯ್ಕೆಗಳನ್ನು ಕೇಂದ್ರವು ರಾಜ್ಯಗಳ ಮುಂದಿಟ್ಟಿದೆ.

ಆರ್‌ಬಿಐ ನಿಂದ ಸಾಲ ಪಡೆದರೆ ಅಸಲು ಬಡ್ಡಿ ಎರಡನ್ನು ಕೇಂದ್ರ ತೀರಿಸಲಿದೆ. ಒಂದು ವೇಳೆ ಹೊರಗಿನಿಂದ 2.35 ಲಕ್ಷ ಸಾಲ ಪಡೆದರೆ ಕೇಂದ್ರ ಅಸಲನ್ನು ಮಾತ್ರ ತೀರಿಸುವುದಾಗಿಯೂ, ರಾಜ್ಯಗಳು ಬಡ್ಡಿ ಭರಿಸಬೇಕೆಂದು ಕೇಂದ್ರ ಹೇಳಿದೆ.

“ಈ ಎರಡೂ ಆಯ್ಕೆಗಳನ್ನು ಹಿಂತೆಗೆದುಕೊಂಡು, ರಾಜ್ಯಗಳಿಗೆ ನೀಡಬೇಕಾಗಿರುವ ಪರಿಹಾರವನ್ನು ನೀಡುವಂತೆ ಹಣಕಾಸು ಸಚಿವಾಲಯಕ್ಕೆ ಸೂಚನೆ ನೀಡಬೇಕೆಂದು ಪ್ರಧಾನಿಯವರನ್ನು ಕೇಳಿಕೊಳ್ಳುತ್ತೇನೆ” ಎಂದು ವಿನಂತಿಸಿದ್ದಾರೆ.

“ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹದ ಕೊರತೆ ಸರಿದೂಗಿಸಲು ಪರಿಹಾರಕ್ಕಾಗಿ ಕೇಂದ್ರ ನೀಡಿರುವ ಆಯ್ಕೆಗಳು ಸ್ವೀಕಾರಾರ್ಹವಲ್ಲ. ಜಿಎಸ್‌ಟಿ ಆದಾಯದ ಕೊರತೆಯನ್ನು ನೀಗಿಸಲು ರಾಜ್ಯಗಳು ಸಾಲ ಪಡೆಯುವ ಪ್ರಸ್ತಾಪವನ್ನು ಕೇರಳ ರಾಜ್ಯವು ತಿರಸ್ಕರಿಸುತ್ತದೆ” ಎಂದು ಕೇರಳ ಹಣಕಾಸು ಸಚಿವ ಥಾಮಸ್ ಐಸಾಕ್ ನಿನ್ನೆ ಹೇಳಿದ್ದರು.

ಜಿಎಸ್‌ಟಿ ನಿಯಂತ್ರಣ ಕಾನೂನಿನಡಿಯಲ್ಲಿ, ಜಿಎಸ್‌ಟಿ ಜಾರಿಗೆ ಬಂದ ಜುಲೈ 1, 2017 ರಿಂದ ಮೊದಲ ಐದು ವರ್ಷಗಳಲ್ಲಿ ರಾಜ್ಯಗಳಿಗೆ ಆದಾಯ ನಷ್ಟಕ್ಕೆ ಕೇಂದ್ರದಿಂದ ಪಾವತಿ ಖಾತರಿ ನೀಡಲಾಗಿದೆ. 2022ರವರೆಗೂ ರಾಜ್ಯಗಳು ನಷ್ಟ ಹೊಂದಿದ್ದಲ್ಲಿ ಕೇಂದ್ರ ಅದನ್ನು ತುಂಬಿಕೊಡುವ ಭರವಸೆ ನೀಡಿತ್ತು.


ಇದನ್ನೂ ಓದಿ: ಜಿಎಸ್‌ಟಿ ಸಂಗ್ರಹ ಕೊರತೆ: ಸಾಲ ಪಡೆಯಿರಿ ಎಂಬ ಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ಕೇರಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...