Homeಎಕಾನಮಿನಮ್ಮ ಪಾಲಿನ ಜಿಎಸ್‌ಟಿ ಪರಿಹಾರ ಕೊಡಲೇಬೇಕು: ಮೋದಿಗೆ ಪಿಣರಾಯಿ ವಿಜಯನ್ ಪತ್ರ

ನಮ್ಮ ಪಾಲಿನ ಜಿಎಸ್‌ಟಿ ಪರಿಹಾರ ಕೊಡಲೇಬೇಕು: ಮೋದಿಗೆ ಪಿಣರಾಯಿ ವಿಜಯನ್ ಪತ್ರ

ರಾಜ್ಯಗಳಿಗೆ ನೀಡಬೇಕಾದ ಜಿಎಸ್‌ಟಿ ಪರಿಹಾರ ಮೊತ್ತವನ್ನು ನೀಡಿ. ರಾಜ್ಯಗಳಿಗೆ ಎದುರಾಗಿರುವ ತೊಂದರೆಯನ್ನು ನೀಗಿಸಲು ಸಹಕಾರಿಯಾಗಬೇಕೆಂದು, ಮತ್ತು  ರಾಜ್ಯಗಳ ಪರಿಸ್ಥಿತಿಯನ್ನು ಪ್ರಧಾನಿಗೆ ಮನವರಿಕೆ ಮಾಡಿಕೊಡುವ ಸಲುವಾಗಿ ಈ ಪತ್ರವನ್ನು ಬರೆದಿದ್ದೇನೆ- ಪಿಣರಾಯಿ ವಿಜಯನ್

- Advertisement -
- Advertisement -

ಈ ಬಾರಿ ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರ ನೀಡಲು ಹಣವಿಲ್ಲ, ಸಾಲ ಮಾಡಿ ಎಂದು ಕೇಂದ್ರ ಸರ್ಕಾರ ಹೇಳಿದ ಬೆನ್ನಲ್ಲೇ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಜಿಎಸ್‌ಟಿ ಪರಿಹಾರ ನೀಡುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರವೊಂದನ್ನು ಬರೆದಿದ್ದಾರೆ.

ಈ ಕುರಿತು ಪಿಣರಾಯಿ ವಿಜಯನ್, “ರಾಜ್ಯಗಳಿಗೆ ನೀಡಬೇಕಾದ ಜಿಎಸ್‌ಟಿ ಪರಿಹಾರ ಮೊತ್ತವನ್ನು ನೀಡಿ. ರಾಜ್ಯಗಳಿಗೆ ಎದುರಾಗಿರುವ ತೊಂದರೆಯನ್ನು ನೀಗಿಸಲು ಸಹಕಾರಿಯಾಗಬೇಕೆಂದು, ಮತ್ತು  ರಾಜ್ಯಗಳ ಪರಿಸ್ಥಿತಿಯನ್ನು ಪ್ರಧಾನಿಗೆ ಮನವರಿಕೆ ಮಾಡಿಕೊಡುವ ಸಲುವಾಗಿ ಈ ಪತ್ರ ಬರೆದಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕೋವಿಡ್‌ನಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತ: ರಾಜ್ಯಗಳಿಗೆ ಪಾಲು ನೀಡಲು ಹಣವಿಲ್ಲವೆಂದ ಕೇಂದ್ರ!

“2017 ರ ಜಿಎಸ್‌ಟಿ ಕಾಯ್ದೆಯ ಸೆಕ್ಷನ್ 7ರ ಅಡಿಯಲ್ಲಿ ರಾಜ್ಯಗಳಿಗೆ ಪರಿಹಾರ ಮೊತ್ತವನ್ನು ಪ್ರತಿ ಎರಡು ತಿಂಗಳಿಗೊಮ್ಮೆ, ತಿಂಗಳಾಂತ್ಯದಲ್ಲಿ ಭರಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿತ್ತು. ಆದರೆ 2019-20ನೇ ಸಾಲಿನಿಂದ ಏಪ್ರಿಲ್ 2020ರವರೆಗೆ ಜಿಎಸ್‌ಟಿ ಪರಿಹಾರ ಮೊತ್ತವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಿರುವುದಿಲ್ಲ. ಕೇರಳಕ್ಕೆ ನೀಡಬೇಕಾದ ಬಾಕಿ, 2020-21ನೇ ಹಣಕಾಸು ವರ್ಷದಲ್ಲಿ ಆಗಸ್ಟ್ ವರೆಗೆ 7000 ಕೋಟಿ ಇದೆ” ಎಂದು ಪತ್ರದಲ್ಲಿ ಹೇಳಿದ್ದಾರೆ.

“41ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ, ಕೊರೊನಾ‌ ಸಾಂಕ್ರಾಮಿಕದಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತವಾಗಿದೆ ಎಂದು ಹೇಳಲಾಗಿತ್ತು. ಹಾಗಾಗಿ ಪರಿಹಾರವನ್ನು ರಾಜ್ಯಗಳಿಗೆ ನೀಡಲು ಸಾಧ್ಯವಿಲ್ಲ ಎಂದು ಹೇಳಲಾಗಿತ್ತು. ಆದರೆ ಇದರಿಂದ ರಾಜ್ಯಗಳ ಪರಿಸ್ಥಿತಿ ಇನ್ನೂ ಅಧೋಗತಿಗೆ ಹೋಗಬಹುದು” ಎಂದು ಹೇಳಿದ್ದಾರೆ.

ಒಟ್ಟು 3 ಲಕ್ಷ ಕೋಟಿ ರೂಗಳ ಕುಸಿತವನ್ನು ಕೇಂದ್ರ ಎದುರಿಸುತ್ತಿದೆ. ಕೇವಲ 65000 ಕೋಟಿ ಸೆಸ್ ಸಂಗ್ರಹವಾಗುವ ನಿರೀಕ್ಷೆಯಿದ್ದು ಉಳಿದ 2.35 ಲಕ್ಷ ಕೋಟಿ ಕೊರತೆ ಬೀಳುತ್ತದೆ. ಹಾಗಾಗಿ ಮೊದಲ ಆಯ್ಕೆಯಾಗಿ ಆರ್‌ಬಿಐನಿಂದ 97,000 ಕೋಟಿ ರೂ. ಸಾಲ ಪಡೆಯಬಹುದು. ಎರಡನೇ ಆಯ್ಕೆಯಾಗಿ ಹೊರಗಿನಿಂದ 2.35 ಲಕ್ಷ ಕೋಟಿ ಸಾಲ ಪಡೆಯಬಹುದೆಂಬ ಮತ್ತು ಅದನ್ನು 2022ರ ನಂತರ ಕೇಂದ್ರ ಭಾಗಶಃ ತೀರಿಸುತ್ತದೆ ಎಂಬ ಎರಡು ಆಯ್ಕೆಗಳನ್ನು ಕೇಂದ್ರವು ರಾಜ್ಯಗಳ ಮುಂದಿಟ್ಟಿದೆ.

ಆರ್‌ಬಿಐ ನಿಂದ ಸಾಲ ಪಡೆದರೆ ಅಸಲು ಬಡ್ಡಿ ಎರಡನ್ನು ಕೇಂದ್ರ ತೀರಿಸಲಿದೆ. ಒಂದು ವೇಳೆ ಹೊರಗಿನಿಂದ 2.35 ಲಕ್ಷ ಸಾಲ ಪಡೆದರೆ ಕೇಂದ್ರ ಅಸಲನ್ನು ಮಾತ್ರ ತೀರಿಸುವುದಾಗಿಯೂ, ರಾಜ್ಯಗಳು ಬಡ್ಡಿ ಭರಿಸಬೇಕೆಂದು ಕೇಂದ್ರ ಹೇಳಿದೆ.

“ಈ ಎರಡೂ ಆಯ್ಕೆಗಳನ್ನು ಹಿಂತೆಗೆದುಕೊಂಡು, ರಾಜ್ಯಗಳಿಗೆ ನೀಡಬೇಕಾಗಿರುವ ಪರಿಹಾರವನ್ನು ನೀಡುವಂತೆ ಹಣಕಾಸು ಸಚಿವಾಲಯಕ್ಕೆ ಸೂಚನೆ ನೀಡಬೇಕೆಂದು ಪ್ರಧಾನಿಯವರನ್ನು ಕೇಳಿಕೊಳ್ಳುತ್ತೇನೆ” ಎಂದು ವಿನಂತಿಸಿದ್ದಾರೆ.

“ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹದ ಕೊರತೆ ಸರಿದೂಗಿಸಲು ಪರಿಹಾರಕ್ಕಾಗಿ ಕೇಂದ್ರ ನೀಡಿರುವ ಆಯ್ಕೆಗಳು ಸ್ವೀಕಾರಾರ್ಹವಲ್ಲ. ಜಿಎಸ್‌ಟಿ ಆದಾಯದ ಕೊರತೆಯನ್ನು ನೀಗಿಸಲು ರಾಜ್ಯಗಳು ಸಾಲ ಪಡೆಯುವ ಪ್ರಸ್ತಾಪವನ್ನು ಕೇರಳ ರಾಜ್ಯವು ತಿರಸ್ಕರಿಸುತ್ತದೆ” ಎಂದು ಕೇರಳ ಹಣಕಾಸು ಸಚಿವ ಥಾಮಸ್ ಐಸಾಕ್ ನಿನ್ನೆ ಹೇಳಿದ್ದರು.

ಜಿಎಸ್‌ಟಿ ನಿಯಂತ್ರಣ ಕಾನೂನಿನಡಿಯಲ್ಲಿ, ಜಿಎಸ್‌ಟಿ ಜಾರಿಗೆ ಬಂದ ಜುಲೈ 1, 2017 ರಿಂದ ಮೊದಲ ಐದು ವರ್ಷಗಳಲ್ಲಿ ರಾಜ್ಯಗಳಿಗೆ ಆದಾಯ ನಷ್ಟಕ್ಕೆ ಕೇಂದ್ರದಿಂದ ಪಾವತಿ ಖಾತರಿ ನೀಡಲಾಗಿದೆ. 2022ರವರೆಗೂ ರಾಜ್ಯಗಳು ನಷ್ಟ ಹೊಂದಿದ್ದಲ್ಲಿ ಕೇಂದ್ರ ಅದನ್ನು ತುಂಬಿಕೊಡುವ ಭರವಸೆ ನೀಡಿತ್ತು.


ಇದನ್ನೂ ಓದಿ: ಜಿಎಸ್‌ಟಿ ಸಂಗ್ರಹ ಕೊರತೆ: ಸಾಲ ಪಡೆಯಿರಿ ಎಂಬ ಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ಕೇರಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...