Homeಎಕಾನಮಿನಮ್ಮ ಪಾಲಿನ ಜಿಎಸ್‌ಟಿ ಪರಿಹಾರ ಕೊಡಲೇಬೇಕು: ಮೋದಿಗೆ ಪಿಣರಾಯಿ ವಿಜಯನ್ ಪತ್ರ

ನಮ್ಮ ಪಾಲಿನ ಜಿಎಸ್‌ಟಿ ಪರಿಹಾರ ಕೊಡಲೇಬೇಕು: ಮೋದಿಗೆ ಪಿಣರಾಯಿ ವಿಜಯನ್ ಪತ್ರ

ರಾಜ್ಯಗಳಿಗೆ ನೀಡಬೇಕಾದ ಜಿಎಸ್‌ಟಿ ಪರಿಹಾರ ಮೊತ್ತವನ್ನು ನೀಡಿ. ರಾಜ್ಯಗಳಿಗೆ ಎದುರಾಗಿರುವ ತೊಂದರೆಯನ್ನು ನೀಗಿಸಲು ಸಹಕಾರಿಯಾಗಬೇಕೆಂದು, ಮತ್ತು  ರಾಜ್ಯಗಳ ಪರಿಸ್ಥಿತಿಯನ್ನು ಪ್ರಧಾನಿಗೆ ಮನವರಿಕೆ ಮಾಡಿಕೊಡುವ ಸಲುವಾಗಿ ಈ ಪತ್ರವನ್ನು ಬರೆದಿದ್ದೇನೆ- ಪಿಣರಾಯಿ ವಿಜಯನ್

- Advertisement -
- Advertisement -

ಈ ಬಾರಿ ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರ ನೀಡಲು ಹಣವಿಲ್ಲ, ಸಾಲ ಮಾಡಿ ಎಂದು ಕೇಂದ್ರ ಸರ್ಕಾರ ಹೇಳಿದ ಬೆನ್ನಲ್ಲೇ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಜಿಎಸ್‌ಟಿ ಪರಿಹಾರ ನೀಡುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರವೊಂದನ್ನು ಬರೆದಿದ್ದಾರೆ.

ಈ ಕುರಿತು ಪಿಣರಾಯಿ ವಿಜಯನ್, “ರಾಜ್ಯಗಳಿಗೆ ನೀಡಬೇಕಾದ ಜಿಎಸ್‌ಟಿ ಪರಿಹಾರ ಮೊತ್ತವನ್ನು ನೀಡಿ. ರಾಜ್ಯಗಳಿಗೆ ಎದುರಾಗಿರುವ ತೊಂದರೆಯನ್ನು ನೀಗಿಸಲು ಸಹಕಾರಿಯಾಗಬೇಕೆಂದು, ಮತ್ತು  ರಾಜ್ಯಗಳ ಪರಿಸ್ಥಿತಿಯನ್ನು ಪ್ರಧಾನಿಗೆ ಮನವರಿಕೆ ಮಾಡಿಕೊಡುವ ಸಲುವಾಗಿ ಈ ಪತ್ರ ಬರೆದಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕೋವಿಡ್‌ನಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತ: ರಾಜ್ಯಗಳಿಗೆ ಪಾಲು ನೀಡಲು ಹಣವಿಲ್ಲವೆಂದ ಕೇಂದ್ರ!

“2017 ರ ಜಿಎಸ್‌ಟಿ ಕಾಯ್ದೆಯ ಸೆಕ್ಷನ್ 7ರ ಅಡಿಯಲ್ಲಿ ರಾಜ್ಯಗಳಿಗೆ ಪರಿಹಾರ ಮೊತ್ತವನ್ನು ಪ್ರತಿ ಎರಡು ತಿಂಗಳಿಗೊಮ್ಮೆ, ತಿಂಗಳಾಂತ್ಯದಲ್ಲಿ ಭರಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿತ್ತು. ಆದರೆ 2019-20ನೇ ಸಾಲಿನಿಂದ ಏಪ್ರಿಲ್ 2020ರವರೆಗೆ ಜಿಎಸ್‌ಟಿ ಪರಿಹಾರ ಮೊತ್ತವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಿರುವುದಿಲ್ಲ. ಕೇರಳಕ್ಕೆ ನೀಡಬೇಕಾದ ಬಾಕಿ, 2020-21ನೇ ಹಣಕಾಸು ವರ್ಷದಲ್ಲಿ ಆಗಸ್ಟ್ ವರೆಗೆ 7000 ಕೋಟಿ ಇದೆ” ಎಂದು ಪತ್ರದಲ್ಲಿ ಹೇಳಿದ್ದಾರೆ.

“41ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ, ಕೊರೊನಾ‌ ಸಾಂಕ್ರಾಮಿಕದಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತವಾಗಿದೆ ಎಂದು ಹೇಳಲಾಗಿತ್ತು. ಹಾಗಾಗಿ ಪರಿಹಾರವನ್ನು ರಾಜ್ಯಗಳಿಗೆ ನೀಡಲು ಸಾಧ್ಯವಿಲ್ಲ ಎಂದು ಹೇಳಲಾಗಿತ್ತು. ಆದರೆ ಇದರಿಂದ ರಾಜ್ಯಗಳ ಪರಿಸ್ಥಿತಿ ಇನ್ನೂ ಅಧೋಗತಿಗೆ ಹೋಗಬಹುದು” ಎಂದು ಹೇಳಿದ್ದಾರೆ.

ಒಟ್ಟು 3 ಲಕ್ಷ ಕೋಟಿ ರೂಗಳ ಕುಸಿತವನ್ನು ಕೇಂದ್ರ ಎದುರಿಸುತ್ತಿದೆ. ಕೇವಲ 65000 ಕೋಟಿ ಸೆಸ್ ಸಂಗ್ರಹವಾಗುವ ನಿರೀಕ್ಷೆಯಿದ್ದು ಉಳಿದ 2.35 ಲಕ್ಷ ಕೋಟಿ ಕೊರತೆ ಬೀಳುತ್ತದೆ. ಹಾಗಾಗಿ ಮೊದಲ ಆಯ್ಕೆಯಾಗಿ ಆರ್‌ಬಿಐನಿಂದ 97,000 ಕೋಟಿ ರೂ. ಸಾಲ ಪಡೆಯಬಹುದು. ಎರಡನೇ ಆಯ್ಕೆಯಾಗಿ ಹೊರಗಿನಿಂದ 2.35 ಲಕ್ಷ ಕೋಟಿ ಸಾಲ ಪಡೆಯಬಹುದೆಂಬ ಮತ್ತು ಅದನ್ನು 2022ರ ನಂತರ ಕೇಂದ್ರ ಭಾಗಶಃ ತೀರಿಸುತ್ತದೆ ಎಂಬ ಎರಡು ಆಯ್ಕೆಗಳನ್ನು ಕೇಂದ್ರವು ರಾಜ್ಯಗಳ ಮುಂದಿಟ್ಟಿದೆ.

ಆರ್‌ಬಿಐ ನಿಂದ ಸಾಲ ಪಡೆದರೆ ಅಸಲು ಬಡ್ಡಿ ಎರಡನ್ನು ಕೇಂದ್ರ ತೀರಿಸಲಿದೆ. ಒಂದು ವೇಳೆ ಹೊರಗಿನಿಂದ 2.35 ಲಕ್ಷ ಸಾಲ ಪಡೆದರೆ ಕೇಂದ್ರ ಅಸಲನ್ನು ಮಾತ್ರ ತೀರಿಸುವುದಾಗಿಯೂ, ರಾಜ್ಯಗಳು ಬಡ್ಡಿ ಭರಿಸಬೇಕೆಂದು ಕೇಂದ್ರ ಹೇಳಿದೆ.

“ಈ ಎರಡೂ ಆಯ್ಕೆಗಳನ್ನು ಹಿಂತೆಗೆದುಕೊಂಡು, ರಾಜ್ಯಗಳಿಗೆ ನೀಡಬೇಕಾಗಿರುವ ಪರಿಹಾರವನ್ನು ನೀಡುವಂತೆ ಹಣಕಾಸು ಸಚಿವಾಲಯಕ್ಕೆ ಸೂಚನೆ ನೀಡಬೇಕೆಂದು ಪ್ರಧಾನಿಯವರನ್ನು ಕೇಳಿಕೊಳ್ಳುತ್ತೇನೆ” ಎಂದು ವಿನಂತಿಸಿದ್ದಾರೆ.

“ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹದ ಕೊರತೆ ಸರಿದೂಗಿಸಲು ಪರಿಹಾರಕ್ಕಾಗಿ ಕೇಂದ್ರ ನೀಡಿರುವ ಆಯ್ಕೆಗಳು ಸ್ವೀಕಾರಾರ್ಹವಲ್ಲ. ಜಿಎಸ್‌ಟಿ ಆದಾಯದ ಕೊರತೆಯನ್ನು ನೀಗಿಸಲು ರಾಜ್ಯಗಳು ಸಾಲ ಪಡೆಯುವ ಪ್ರಸ್ತಾಪವನ್ನು ಕೇರಳ ರಾಜ್ಯವು ತಿರಸ್ಕರಿಸುತ್ತದೆ” ಎಂದು ಕೇರಳ ಹಣಕಾಸು ಸಚಿವ ಥಾಮಸ್ ಐಸಾಕ್ ನಿನ್ನೆ ಹೇಳಿದ್ದರು.

ಜಿಎಸ್‌ಟಿ ನಿಯಂತ್ರಣ ಕಾನೂನಿನಡಿಯಲ್ಲಿ, ಜಿಎಸ್‌ಟಿ ಜಾರಿಗೆ ಬಂದ ಜುಲೈ 1, 2017 ರಿಂದ ಮೊದಲ ಐದು ವರ್ಷಗಳಲ್ಲಿ ರಾಜ್ಯಗಳಿಗೆ ಆದಾಯ ನಷ್ಟಕ್ಕೆ ಕೇಂದ್ರದಿಂದ ಪಾವತಿ ಖಾತರಿ ನೀಡಲಾಗಿದೆ. 2022ರವರೆಗೂ ರಾಜ್ಯಗಳು ನಷ್ಟ ಹೊಂದಿದ್ದಲ್ಲಿ ಕೇಂದ್ರ ಅದನ್ನು ತುಂಬಿಕೊಡುವ ಭರವಸೆ ನೀಡಿತ್ತು.


ಇದನ್ನೂ ಓದಿ: ಜಿಎಸ್‌ಟಿ ಸಂಗ್ರಹ ಕೊರತೆ: ಸಾಲ ಪಡೆಯಿರಿ ಎಂಬ ಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ಕೇರಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...