Homeಮುಖಪುಟಲೈಂಗಿಕ ಕಾರ್ಯಕರ್ತೆಯರಿಗೂ ಪಡಿತರ ನೀಡಿ: ರಾಜ್ಯಗಳಿಗೆ ಸುಪ್ರೀಂ ಆದೇಶ

ಲೈಂಗಿಕ ಕಾರ್ಯಕರ್ತೆಯರಿಗೂ ಪಡಿತರ ನೀಡಿ: ರಾಜ್ಯಗಳಿಗೆ ಸುಪ್ರೀಂ ಆದೇಶ

ದೇಶದಾದ್ಯಂತ 9 ಲಕ್ಷಕ್ಕೂ ಹೆಚ್ಚಿರುವ ಮಹಿಳಾ ಮತ್ತು ಟ್ರಾನ್ಸ್‌ಜೆಂಡರ್ ಲೈಂಗಿಕ ಕಾರ್ಯಕರ್ತರಿಗೆ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವಂತೆ 'ದರ್ಬಾರ್ ಮಹಿಳಾ ಸಮನ್ವಯ ಸಮಿತಿ' ಎಂಬ ಎನ್‌ಜಿಒ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು

- Advertisement -
- Advertisement -

ಯಾವುದೇ ಗುರುತನ್ನು ಕೇಳದೇ, ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ (ನ್ಯಾಕೋ) ಮತ್ತು ಅಧಿಕಾರಿಗಳು ಗುರುತಿಸಿರುವ ಲೈಂಗಿಕ ಕಾರ್ಯಕರ್ತೆಯರಿಗೂ ಪಡಿತರ ವಿತರಣೆ ಮಾಡುವಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳಿಗೆ ಆದೇಶ ನೀಡಿದೆ. ಜೊತೆಗೆ, ಈ ಅವಧಿಯಲ್ಲಿ ಪಡಿತರವನ್ನು ಪಡೆದ ಲೈಂಗಿಕ ಕಾರ್ಯಕರ್ತೆಯರ ಸಂಖ್ಯೆಯ ವಿವರಗಳನ್ನು ನೀಡಿ, ನಾಲ್ಕು ವಾರಗಳಲ್ಲಿ ಅನುಸರಣೆ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳಿಗೂ ಆಗ್ರಹಿಸಿದೆ.

ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಅಜಯ್ ರಾಸ್ತೋಗಿ ಅವರನ್ನೊಳಗೊಂಡ ನ್ಯಾಯಪೀಠವು “ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಲೈಂಗಿಕ ಕಾರ್ಯಕರ್ತೆಯರಿಗೆ ಹಣಕಾಸಿನ ನೆರವು ನೀಡಬಹುದೇ ಎಂಬ ಅಂಶದ ಬಗ್ಗೆ ನಂತರ ವ್ಯವಹರಿಸುವುದಾಗಿ” ಹೇಳಿದೆ.

ಕೊರೊನಾ ಸಾಂಕ್ರಾಮಿಕ ರೋಗದ ಕಾರಣ ಲೈಂಗಿಕ ಕಾರ್ಯಕರ್ತೆಯರು ಎದುರಿಸುತ್ತಿರುವ ಸಮಸ್ಯೆಯನ್ನು ಧ್ವನಿಸುವ ಮನವಿಯನ್ನು ನ್ಯಾಯಪೀಠ ವಿಚಾರಣೆ ನಡೆಸಿ, ಲೈಂಗಿಕ ಕಾರ್ಯಕರ್ತೆಯರಿಗೂ ಪಡಿತರ ಚೀಟಿ ಮತ್ತು ಇತರ ಸೌಲಭ್ಯಗಳನ್ನು ಅವರು ಹೇಗೆ ಒದಗಿಸುತ್ತಾರೆ ಎಂಬ ಬಗ್ಗೆ ವಿವರವಾದ ವರದಿಯನ್ನು ಸಲ್ಲಿಸುವಂತೆ ರಾಜ್ಯಗಳನ್ನು ಕೇಳಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಮಹಿಳೆಯರು ವೇಶ್ಯೆರಾಗಬೇಕೆಂದು ಕಾರ್ಲ್ ಮಾರ್ಕ್ಸ್ ಎಲ್ಲಿಯೂ ಹೇಳಿಲ್ಲ : ಹಾಗಾದರೆ ಗುರುಮೂರ್ತಿಯವರು ಸುಳ್ಳು ಹೇಳಿದ್ದೇಕೆ?? – ಹರ್ಷ ಕುಮಾರ್‌…

“ನೆರವು ನೀಡಲು ರಾಜ್ಯಗಳು ಮುಂದೆ ಬರುತ್ತಿವೆ ಎಂಬ ಅಂಶಗಳ ಬಗ್ಗೆ ನಮಗೆ ತಿಳಿದಿದೆ. ಆದರೆ ಸಮಸ್ಯೆಯೆಂದರೆ ಈ ಲೈಂಗಿಕ ಕಾರ್ಯಕರ್ತೆಯರಿಗೆ ಯಾವುದೇ ಗುರುತಿನ ಪುರಾವೆಗಳಿಲ್ಲ. ಆದ್ದರಿಂದ, ಎಲ್ಲರಿಗೂ ಪಡಿತರವನ್ನು ನೀಡಬೇಕು. ಇದನ್ನು ಹೇಗೆ ಕಾರ್ಯಗತಗೊಳಿಸಬೇಕು ಎಂದು ರಾಜ್ಯಗಳು ನಮಗೆ ತಿಳಿಸಬೇಕು” ಎಂದು ನ್ಯಾಯಪೀಠ ಹೇಳಿದೆ.

ಲೈಂಗಿಕ ಕಾರ್ಯಕರ್ತರಿಗೆ ರಾಜ್ಯಗಳು ಪಡಿತರವನ್ನು ನೀಡುತ್ತಿದ್ದರೆ ಆಕ್ಷೇಪವಿಲ್ಲ ಎಂದು ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ವಕೀಲರು ಹೇಳಿದ್ದಾರೆ.

ಈ ವಿಷಯದಲ್ಲಿ ಅಮಿಕಸ್ ಕ್ಯೂರಿಯಂತೆ (ನ್ಯಾಯಾಲಯಗಳ ಸ್ನೇಹಿತ) ಸುಪ್ರೀಂ ಕೋರ್ಟ್‌ಗೆ ಸಹಾಯ ಮಾಡುತ್ತಿರುವ ವಕೀಲ ಪಿಜುಶ್ ಕುಮಾರ್ ರಾಯ್, “ಲೈಂಗಿಕ ಕಾರ್ಯಕರ್ತೆಯರಿಗೆ ಹಣಕಾಸಿನ ನೆರವು ನೀಡುವ ಸಲುವಾಗಿ, ಗುರುತಿನ ಪುರಾವೆಗಳನ್ನು ಒತ್ತಾಯಿಸದೆ ಬ್ಯಾಂಕ್ ಖಾತೆಗಳನ್ನು ಸಹ ತೆರೆಯಬೇಕು” ಎಂದು ಹೇಳಿದರು.

ಇದನ್ನೂ ಓದಿ: ಪ್ಲೇಗ್ ವೇಳೆ ವೇಶ್ಯೆಯರು & ಯಹೂದಿಗಳನ್ನು ಬಲಿಪಶು ಮಾಡಲಾಗಿತ್ತು! ಕೊರೋನ ವೇಳೆಯಲ್ಲಿ?

ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಲೈಂಗಿಕ ಕಾರ್ಯಕರ್ತೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಸುಪ್ರೀಂ ಕೋರ್ಟ್ ಕಳೆದ ವಾರ ಗಮನಕ್ಕೆ ತೆಗೆದುಕೊಂಡಿತ್ತು. ಗುರುತಿನ ಪುರಾವೆಗಳನ್ನು ಒತ್ತಾಯಿಸದೆ ಮಾಸಿಕ ಪಡಿತರ ವಿತರಣೆ ಮತ್ತು ಹಣ ವರ್ಗಾವಣೆಯ ವಿಧಾನಗಳ ಬಗ್ಗೆ ತಿಳಿಸುವಂತೆ ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನ ನೀಡಿತು.

ಎನ್‌ಜಿಒ ಒಂದರ ಪರವಾಗಿ ಹಾಜರಾದ ಹಿರಿಯ ವಕೀಲ ಆನಂದ್ ಗ್ರೋವರ್, “ಆಂಧ್ರಪ್ರದೇಶ, ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಮತ್ತು ತೆಲಂಗಾಣದ 1.2 ಲಕ್ಷ ಲೈಂಗಿಕ ಕಾರ್ಯಕರ್ತರನ್ನೊಳಗೊಂಡು ನಡೆಸಿದ ಸಮೀಕ್ಷೆಯಲ್ಲಿ, ಶೇ. 96 ಪ್ರತಿಶತದಷ್ಟು ಜನರು ಸಾಂಕ್ರಾಮಿಕ ರೋಗದಲ್ಲಿ ತಮ್ಮ ಗಳಿಕೆಯ ಮೂಲವನ್ನು ಕಳೆದುಕೊಂಡಿದ್ದಾರೆ” ಎಂದು ವಾದಿಸಿದ್ದರು.

ಇದನ್ನೂ ಓದಿ: “ಬರುತ್ತೀಯಾ?.. ಕೂರುತ್ತೀಯಾ?: ಭಾರತೀಯ ಸೂಳೆಲೋಕದ ಕಥೆಗಳು” ಪುಸ್ತಕದ ಮುನ್ನುಡಿ

ಈ ವಿಷಯದಲ್ಲಿ ನ್ಯಾಯಾಲಯಕ್ಕೆ ಸಹಾಯ ಮಾಡಲು ನೇಮಕಗೊಂಡಿರುವ ಹಿರಿಯ ವಕೀಲ ಜಯಂತ್ ಭೂಷಣ್, “ಗುರುತಿನ ಪುರಾವೆಗೆ ಒತ್ತಾಯಿಸದೆ ಪಡಿತರ ಚೀಟಿಗಳನ್ನು ನೀಡಿದರೆ ಲೈಂಗಿಕ ಕಾರ್ಯಕರ್ತೆಯರ ದುಃಸ್ಥಿತಿಯನ್ನು ಪರಿಹರಿಸಬಹುದು” ಎಂದು ಹೇಳಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಲೈಂಗಿಕ ಕಾರ್ಯಕರ್ತೆಯರ ಹಕ್ಕುಗಳನ್ನು ಎತ್ತಿಹಿಡಿಯಲು ಉನ್ನತ ನ್ಯಾಯಾಲಯವನ್ನು ಕೋರಿ, ದೇಶದಾದ್ಯಂತ 9 ಲಕ್ಷಕ್ಕೂ ಹೆಚ್ಚಿರುವ ಮಹಿಳಾ ಮತ್ತು ಟ್ರಾನ್ಸ್‌ಜೆಂಡರ್ ಲೈಂಗಿಕ ಕಾರ್ಯಕರ್ತರಿಗೆ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವಂತೆ ‘ದರ್ಬಾರ್ ಮಹಿಳಾ ಸಮನ್ವಯ ಸಮಿತಿ’ ಎಂಬ ಎನ್‌ಜಿಒ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು.


ಇದನ್ನೂ ಓದಿ: ಮಹಿಳೆ ಮತ್ತು ಬಿಕ್ಕಟ್ಟಿನ ಕಾಲದ ಸಂದಿಗ್ಧಗಳು! – ಮಲ್ಲಿಗೆ ಸಿರಿಮನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...