Homeಮುಖಪುಟಲೈಂಗಿಕ ಕಾರ್ಯಕರ್ತೆಯರಿಗೂ ಪಡಿತರ ನೀಡಿ: ರಾಜ್ಯಗಳಿಗೆ ಸುಪ್ರೀಂ ಆದೇಶ

ಲೈಂಗಿಕ ಕಾರ್ಯಕರ್ತೆಯರಿಗೂ ಪಡಿತರ ನೀಡಿ: ರಾಜ್ಯಗಳಿಗೆ ಸುಪ್ರೀಂ ಆದೇಶ

ದೇಶದಾದ್ಯಂತ 9 ಲಕ್ಷಕ್ಕೂ ಹೆಚ್ಚಿರುವ ಮಹಿಳಾ ಮತ್ತು ಟ್ರಾನ್ಸ್‌ಜೆಂಡರ್ ಲೈಂಗಿಕ ಕಾರ್ಯಕರ್ತರಿಗೆ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವಂತೆ 'ದರ್ಬಾರ್ ಮಹಿಳಾ ಸಮನ್ವಯ ಸಮಿತಿ' ಎಂಬ ಎನ್‌ಜಿಒ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು

- Advertisement -
- Advertisement -

ಯಾವುದೇ ಗುರುತನ್ನು ಕೇಳದೇ, ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ (ನ್ಯಾಕೋ) ಮತ್ತು ಅಧಿಕಾರಿಗಳು ಗುರುತಿಸಿರುವ ಲೈಂಗಿಕ ಕಾರ್ಯಕರ್ತೆಯರಿಗೂ ಪಡಿತರ ವಿತರಣೆ ಮಾಡುವಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳಿಗೆ ಆದೇಶ ನೀಡಿದೆ. ಜೊತೆಗೆ, ಈ ಅವಧಿಯಲ್ಲಿ ಪಡಿತರವನ್ನು ಪಡೆದ ಲೈಂಗಿಕ ಕಾರ್ಯಕರ್ತೆಯರ ಸಂಖ್ಯೆಯ ವಿವರಗಳನ್ನು ನೀಡಿ, ನಾಲ್ಕು ವಾರಗಳಲ್ಲಿ ಅನುಸರಣೆ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳಿಗೂ ಆಗ್ರಹಿಸಿದೆ.

ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಅಜಯ್ ರಾಸ್ತೋಗಿ ಅವರನ್ನೊಳಗೊಂಡ ನ್ಯಾಯಪೀಠವು “ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಲೈಂಗಿಕ ಕಾರ್ಯಕರ್ತೆಯರಿಗೆ ಹಣಕಾಸಿನ ನೆರವು ನೀಡಬಹುದೇ ಎಂಬ ಅಂಶದ ಬಗ್ಗೆ ನಂತರ ವ್ಯವಹರಿಸುವುದಾಗಿ” ಹೇಳಿದೆ.

ಕೊರೊನಾ ಸಾಂಕ್ರಾಮಿಕ ರೋಗದ ಕಾರಣ ಲೈಂಗಿಕ ಕಾರ್ಯಕರ್ತೆಯರು ಎದುರಿಸುತ್ತಿರುವ ಸಮಸ್ಯೆಯನ್ನು ಧ್ವನಿಸುವ ಮನವಿಯನ್ನು ನ್ಯಾಯಪೀಠ ವಿಚಾರಣೆ ನಡೆಸಿ, ಲೈಂಗಿಕ ಕಾರ್ಯಕರ್ತೆಯರಿಗೂ ಪಡಿತರ ಚೀಟಿ ಮತ್ತು ಇತರ ಸೌಲಭ್ಯಗಳನ್ನು ಅವರು ಹೇಗೆ ಒದಗಿಸುತ್ತಾರೆ ಎಂಬ ಬಗ್ಗೆ ವಿವರವಾದ ವರದಿಯನ್ನು ಸಲ್ಲಿಸುವಂತೆ ರಾಜ್ಯಗಳನ್ನು ಕೇಳಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಮಹಿಳೆಯರು ವೇಶ್ಯೆರಾಗಬೇಕೆಂದು ಕಾರ್ಲ್ ಮಾರ್ಕ್ಸ್ ಎಲ್ಲಿಯೂ ಹೇಳಿಲ್ಲ : ಹಾಗಾದರೆ ಗುರುಮೂರ್ತಿಯವರು ಸುಳ್ಳು ಹೇಳಿದ್ದೇಕೆ?? – ಹರ್ಷ ಕುಮಾರ್‌…

“ನೆರವು ನೀಡಲು ರಾಜ್ಯಗಳು ಮುಂದೆ ಬರುತ್ತಿವೆ ಎಂಬ ಅಂಶಗಳ ಬಗ್ಗೆ ನಮಗೆ ತಿಳಿದಿದೆ. ಆದರೆ ಸಮಸ್ಯೆಯೆಂದರೆ ಈ ಲೈಂಗಿಕ ಕಾರ್ಯಕರ್ತೆಯರಿಗೆ ಯಾವುದೇ ಗುರುತಿನ ಪುರಾವೆಗಳಿಲ್ಲ. ಆದ್ದರಿಂದ, ಎಲ್ಲರಿಗೂ ಪಡಿತರವನ್ನು ನೀಡಬೇಕು. ಇದನ್ನು ಹೇಗೆ ಕಾರ್ಯಗತಗೊಳಿಸಬೇಕು ಎಂದು ರಾಜ್ಯಗಳು ನಮಗೆ ತಿಳಿಸಬೇಕು” ಎಂದು ನ್ಯಾಯಪೀಠ ಹೇಳಿದೆ.

ಲೈಂಗಿಕ ಕಾರ್ಯಕರ್ತರಿಗೆ ರಾಜ್ಯಗಳು ಪಡಿತರವನ್ನು ನೀಡುತ್ತಿದ್ದರೆ ಆಕ್ಷೇಪವಿಲ್ಲ ಎಂದು ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ವಕೀಲರು ಹೇಳಿದ್ದಾರೆ.

ಈ ವಿಷಯದಲ್ಲಿ ಅಮಿಕಸ್ ಕ್ಯೂರಿಯಂತೆ (ನ್ಯಾಯಾಲಯಗಳ ಸ್ನೇಹಿತ) ಸುಪ್ರೀಂ ಕೋರ್ಟ್‌ಗೆ ಸಹಾಯ ಮಾಡುತ್ತಿರುವ ವಕೀಲ ಪಿಜುಶ್ ಕುಮಾರ್ ರಾಯ್, “ಲೈಂಗಿಕ ಕಾರ್ಯಕರ್ತೆಯರಿಗೆ ಹಣಕಾಸಿನ ನೆರವು ನೀಡುವ ಸಲುವಾಗಿ, ಗುರುತಿನ ಪುರಾವೆಗಳನ್ನು ಒತ್ತಾಯಿಸದೆ ಬ್ಯಾಂಕ್ ಖಾತೆಗಳನ್ನು ಸಹ ತೆರೆಯಬೇಕು” ಎಂದು ಹೇಳಿದರು.

ಇದನ್ನೂ ಓದಿ: ಪ್ಲೇಗ್ ವೇಳೆ ವೇಶ್ಯೆಯರು & ಯಹೂದಿಗಳನ್ನು ಬಲಿಪಶು ಮಾಡಲಾಗಿತ್ತು! ಕೊರೋನ ವೇಳೆಯಲ್ಲಿ?

ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಲೈಂಗಿಕ ಕಾರ್ಯಕರ್ತೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಸುಪ್ರೀಂ ಕೋರ್ಟ್ ಕಳೆದ ವಾರ ಗಮನಕ್ಕೆ ತೆಗೆದುಕೊಂಡಿತ್ತು. ಗುರುತಿನ ಪುರಾವೆಗಳನ್ನು ಒತ್ತಾಯಿಸದೆ ಮಾಸಿಕ ಪಡಿತರ ವಿತರಣೆ ಮತ್ತು ಹಣ ವರ್ಗಾವಣೆಯ ವಿಧಾನಗಳ ಬಗ್ಗೆ ತಿಳಿಸುವಂತೆ ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನ ನೀಡಿತು.

ಎನ್‌ಜಿಒ ಒಂದರ ಪರವಾಗಿ ಹಾಜರಾದ ಹಿರಿಯ ವಕೀಲ ಆನಂದ್ ಗ್ರೋವರ್, “ಆಂಧ್ರಪ್ರದೇಶ, ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಮತ್ತು ತೆಲಂಗಾಣದ 1.2 ಲಕ್ಷ ಲೈಂಗಿಕ ಕಾರ್ಯಕರ್ತರನ್ನೊಳಗೊಂಡು ನಡೆಸಿದ ಸಮೀಕ್ಷೆಯಲ್ಲಿ, ಶೇ. 96 ಪ್ರತಿಶತದಷ್ಟು ಜನರು ಸಾಂಕ್ರಾಮಿಕ ರೋಗದಲ್ಲಿ ತಮ್ಮ ಗಳಿಕೆಯ ಮೂಲವನ್ನು ಕಳೆದುಕೊಂಡಿದ್ದಾರೆ” ಎಂದು ವಾದಿಸಿದ್ದರು.

ಇದನ್ನೂ ಓದಿ: “ಬರುತ್ತೀಯಾ?.. ಕೂರುತ್ತೀಯಾ?: ಭಾರತೀಯ ಸೂಳೆಲೋಕದ ಕಥೆಗಳು” ಪುಸ್ತಕದ ಮುನ್ನುಡಿ

ಈ ವಿಷಯದಲ್ಲಿ ನ್ಯಾಯಾಲಯಕ್ಕೆ ಸಹಾಯ ಮಾಡಲು ನೇಮಕಗೊಂಡಿರುವ ಹಿರಿಯ ವಕೀಲ ಜಯಂತ್ ಭೂಷಣ್, “ಗುರುತಿನ ಪುರಾವೆಗೆ ಒತ್ತಾಯಿಸದೆ ಪಡಿತರ ಚೀಟಿಗಳನ್ನು ನೀಡಿದರೆ ಲೈಂಗಿಕ ಕಾರ್ಯಕರ್ತೆಯರ ದುಃಸ್ಥಿತಿಯನ್ನು ಪರಿಹರಿಸಬಹುದು” ಎಂದು ಹೇಳಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಲೈಂಗಿಕ ಕಾರ್ಯಕರ್ತೆಯರ ಹಕ್ಕುಗಳನ್ನು ಎತ್ತಿಹಿಡಿಯಲು ಉನ್ನತ ನ್ಯಾಯಾಲಯವನ್ನು ಕೋರಿ, ದೇಶದಾದ್ಯಂತ 9 ಲಕ್ಷಕ್ಕೂ ಹೆಚ್ಚಿರುವ ಮಹಿಳಾ ಮತ್ತು ಟ್ರಾನ್ಸ್‌ಜೆಂಡರ್ ಲೈಂಗಿಕ ಕಾರ್ಯಕರ್ತರಿಗೆ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವಂತೆ ‘ದರ್ಬಾರ್ ಮಹಿಳಾ ಸಮನ್ವಯ ಸಮಿತಿ’ ಎಂಬ ಎನ್‌ಜಿಒ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು.


ಇದನ್ನೂ ಓದಿ: ಮಹಿಳೆ ಮತ್ತು ಬಿಕ್ಕಟ್ಟಿನ ಕಾಲದ ಸಂದಿಗ್ಧಗಳು! – ಮಲ್ಲಿಗೆ ಸಿರಿಮನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...