Homeಮುಖಪುಟಲೈಂಗಿಕ ಕಾರ್ಯಕರ್ತೆಯರಿಗೂ ಪಡಿತರ ನೀಡಿ: ರಾಜ್ಯಗಳಿಗೆ ಸುಪ್ರೀಂ ಆದೇಶ

ಲೈಂಗಿಕ ಕಾರ್ಯಕರ್ತೆಯರಿಗೂ ಪಡಿತರ ನೀಡಿ: ರಾಜ್ಯಗಳಿಗೆ ಸುಪ್ರೀಂ ಆದೇಶ

ದೇಶದಾದ್ಯಂತ 9 ಲಕ್ಷಕ್ಕೂ ಹೆಚ್ಚಿರುವ ಮಹಿಳಾ ಮತ್ತು ಟ್ರಾನ್ಸ್‌ಜೆಂಡರ್ ಲೈಂಗಿಕ ಕಾರ್ಯಕರ್ತರಿಗೆ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವಂತೆ 'ದರ್ಬಾರ್ ಮಹಿಳಾ ಸಮನ್ವಯ ಸಮಿತಿ' ಎಂಬ ಎನ್‌ಜಿಒ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು

- Advertisement -
- Advertisement -

ಯಾವುದೇ ಗುರುತನ್ನು ಕೇಳದೇ, ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ (ನ್ಯಾಕೋ) ಮತ್ತು ಅಧಿಕಾರಿಗಳು ಗುರುತಿಸಿರುವ ಲೈಂಗಿಕ ಕಾರ್ಯಕರ್ತೆಯರಿಗೂ ಪಡಿತರ ವಿತರಣೆ ಮಾಡುವಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳಿಗೆ ಆದೇಶ ನೀಡಿದೆ. ಜೊತೆಗೆ, ಈ ಅವಧಿಯಲ್ಲಿ ಪಡಿತರವನ್ನು ಪಡೆದ ಲೈಂಗಿಕ ಕಾರ್ಯಕರ್ತೆಯರ ಸಂಖ್ಯೆಯ ವಿವರಗಳನ್ನು ನೀಡಿ, ನಾಲ್ಕು ವಾರಗಳಲ್ಲಿ ಅನುಸರಣೆ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳಿಗೂ ಆಗ್ರಹಿಸಿದೆ.

ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಅಜಯ್ ರಾಸ್ತೋಗಿ ಅವರನ್ನೊಳಗೊಂಡ ನ್ಯಾಯಪೀಠವು “ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಲೈಂಗಿಕ ಕಾರ್ಯಕರ್ತೆಯರಿಗೆ ಹಣಕಾಸಿನ ನೆರವು ನೀಡಬಹುದೇ ಎಂಬ ಅಂಶದ ಬಗ್ಗೆ ನಂತರ ವ್ಯವಹರಿಸುವುದಾಗಿ” ಹೇಳಿದೆ.

ಕೊರೊನಾ ಸಾಂಕ್ರಾಮಿಕ ರೋಗದ ಕಾರಣ ಲೈಂಗಿಕ ಕಾರ್ಯಕರ್ತೆಯರು ಎದುರಿಸುತ್ತಿರುವ ಸಮಸ್ಯೆಯನ್ನು ಧ್ವನಿಸುವ ಮನವಿಯನ್ನು ನ್ಯಾಯಪೀಠ ವಿಚಾರಣೆ ನಡೆಸಿ, ಲೈಂಗಿಕ ಕಾರ್ಯಕರ್ತೆಯರಿಗೂ ಪಡಿತರ ಚೀಟಿ ಮತ್ತು ಇತರ ಸೌಲಭ್ಯಗಳನ್ನು ಅವರು ಹೇಗೆ ಒದಗಿಸುತ್ತಾರೆ ಎಂಬ ಬಗ್ಗೆ ವಿವರವಾದ ವರದಿಯನ್ನು ಸಲ್ಲಿಸುವಂತೆ ರಾಜ್ಯಗಳನ್ನು ಕೇಳಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಮಹಿಳೆಯರು ವೇಶ್ಯೆರಾಗಬೇಕೆಂದು ಕಾರ್ಲ್ ಮಾರ್ಕ್ಸ್ ಎಲ್ಲಿಯೂ ಹೇಳಿಲ್ಲ : ಹಾಗಾದರೆ ಗುರುಮೂರ್ತಿಯವರು ಸುಳ್ಳು ಹೇಳಿದ್ದೇಕೆ?? – ಹರ್ಷ ಕುಮಾರ್‌…

“ನೆರವು ನೀಡಲು ರಾಜ್ಯಗಳು ಮುಂದೆ ಬರುತ್ತಿವೆ ಎಂಬ ಅಂಶಗಳ ಬಗ್ಗೆ ನಮಗೆ ತಿಳಿದಿದೆ. ಆದರೆ ಸಮಸ್ಯೆಯೆಂದರೆ ಈ ಲೈಂಗಿಕ ಕಾರ್ಯಕರ್ತೆಯರಿಗೆ ಯಾವುದೇ ಗುರುತಿನ ಪುರಾವೆಗಳಿಲ್ಲ. ಆದ್ದರಿಂದ, ಎಲ್ಲರಿಗೂ ಪಡಿತರವನ್ನು ನೀಡಬೇಕು. ಇದನ್ನು ಹೇಗೆ ಕಾರ್ಯಗತಗೊಳಿಸಬೇಕು ಎಂದು ರಾಜ್ಯಗಳು ನಮಗೆ ತಿಳಿಸಬೇಕು” ಎಂದು ನ್ಯಾಯಪೀಠ ಹೇಳಿದೆ.

ಲೈಂಗಿಕ ಕಾರ್ಯಕರ್ತರಿಗೆ ರಾಜ್ಯಗಳು ಪಡಿತರವನ್ನು ನೀಡುತ್ತಿದ್ದರೆ ಆಕ್ಷೇಪವಿಲ್ಲ ಎಂದು ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ವಕೀಲರು ಹೇಳಿದ್ದಾರೆ.

ಈ ವಿಷಯದಲ್ಲಿ ಅಮಿಕಸ್ ಕ್ಯೂರಿಯಂತೆ (ನ್ಯಾಯಾಲಯಗಳ ಸ್ನೇಹಿತ) ಸುಪ್ರೀಂ ಕೋರ್ಟ್‌ಗೆ ಸಹಾಯ ಮಾಡುತ್ತಿರುವ ವಕೀಲ ಪಿಜುಶ್ ಕುಮಾರ್ ರಾಯ್, “ಲೈಂಗಿಕ ಕಾರ್ಯಕರ್ತೆಯರಿಗೆ ಹಣಕಾಸಿನ ನೆರವು ನೀಡುವ ಸಲುವಾಗಿ, ಗುರುತಿನ ಪುರಾವೆಗಳನ್ನು ಒತ್ತಾಯಿಸದೆ ಬ್ಯಾಂಕ್ ಖಾತೆಗಳನ್ನು ಸಹ ತೆರೆಯಬೇಕು” ಎಂದು ಹೇಳಿದರು.

ಇದನ್ನೂ ಓದಿ: ಪ್ಲೇಗ್ ವೇಳೆ ವೇಶ್ಯೆಯರು & ಯಹೂದಿಗಳನ್ನು ಬಲಿಪಶು ಮಾಡಲಾಗಿತ್ತು! ಕೊರೋನ ವೇಳೆಯಲ್ಲಿ?

ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಲೈಂಗಿಕ ಕಾರ್ಯಕರ್ತೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಸುಪ್ರೀಂ ಕೋರ್ಟ್ ಕಳೆದ ವಾರ ಗಮನಕ್ಕೆ ತೆಗೆದುಕೊಂಡಿತ್ತು. ಗುರುತಿನ ಪುರಾವೆಗಳನ್ನು ಒತ್ತಾಯಿಸದೆ ಮಾಸಿಕ ಪಡಿತರ ವಿತರಣೆ ಮತ್ತು ಹಣ ವರ್ಗಾವಣೆಯ ವಿಧಾನಗಳ ಬಗ್ಗೆ ತಿಳಿಸುವಂತೆ ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನ ನೀಡಿತು.

ಎನ್‌ಜಿಒ ಒಂದರ ಪರವಾಗಿ ಹಾಜರಾದ ಹಿರಿಯ ವಕೀಲ ಆನಂದ್ ಗ್ರೋವರ್, “ಆಂಧ್ರಪ್ರದೇಶ, ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಮತ್ತು ತೆಲಂಗಾಣದ 1.2 ಲಕ್ಷ ಲೈಂಗಿಕ ಕಾರ್ಯಕರ್ತರನ್ನೊಳಗೊಂಡು ನಡೆಸಿದ ಸಮೀಕ್ಷೆಯಲ್ಲಿ, ಶೇ. 96 ಪ್ರತಿಶತದಷ್ಟು ಜನರು ಸಾಂಕ್ರಾಮಿಕ ರೋಗದಲ್ಲಿ ತಮ್ಮ ಗಳಿಕೆಯ ಮೂಲವನ್ನು ಕಳೆದುಕೊಂಡಿದ್ದಾರೆ” ಎಂದು ವಾದಿಸಿದ್ದರು.

ಇದನ್ನೂ ಓದಿ: “ಬರುತ್ತೀಯಾ?.. ಕೂರುತ್ತೀಯಾ?: ಭಾರತೀಯ ಸೂಳೆಲೋಕದ ಕಥೆಗಳು” ಪುಸ್ತಕದ ಮುನ್ನುಡಿ

ಈ ವಿಷಯದಲ್ಲಿ ನ್ಯಾಯಾಲಯಕ್ಕೆ ಸಹಾಯ ಮಾಡಲು ನೇಮಕಗೊಂಡಿರುವ ಹಿರಿಯ ವಕೀಲ ಜಯಂತ್ ಭೂಷಣ್, “ಗುರುತಿನ ಪುರಾವೆಗೆ ಒತ್ತಾಯಿಸದೆ ಪಡಿತರ ಚೀಟಿಗಳನ್ನು ನೀಡಿದರೆ ಲೈಂಗಿಕ ಕಾರ್ಯಕರ್ತೆಯರ ದುಃಸ್ಥಿತಿಯನ್ನು ಪರಿಹರಿಸಬಹುದು” ಎಂದು ಹೇಳಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಲೈಂಗಿಕ ಕಾರ್ಯಕರ್ತೆಯರ ಹಕ್ಕುಗಳನ್ನು ಎತ್ತಿಹಿಡಿಯಲು ಉನ್ನತ ನ್ಯಾಯಾಲಯವನ್ನು ಕೋರಿ, ದೇಶದಾದ್ಯಂತ 9 ಲಕ್ಷಕ್ಕೂ ಹೆಚ್ಚಿರುವ ಮಹಿಳಾ ಮತ್ತು ಟ್ರಾನ್ಸ್‌ಜೆಂಡರ್ ಲೈಂಗಿಕ ಕಾರ್ಯಕರ್ತರಿಗೆ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವಂತೆ ‘ದರ್ಬಾರ್ ಮಹಿಳಾ ಸಮನ್ವಯ ಸಮಿತಿ’ ಎಂಬ ಎನ್‌ಜಿಒ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು.


ಇದನ್ನೂ ಓದಿ: ಮಹಿಳೆ ಮತ್ತು ಬಿಕ್ಕಟ್ಟಿನ ಕಾಲದ ಸಂದಿಗ್ಧಗಳು! – ಮಲ್ಲಿಗೆ ಸಿರಿಮನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...