Homeಮುಖಪುಟಲೈಂಗಿಕ ಕಾರ್ಯಕರ್ತೆಯರಿಗೂ ಪಡಿತರ ನೀಡಿ: ರಾಜ್ಯಗಳಿಗೆ ಸುಪ್ರೀಂ ಆದೇಶ

ಲೈಂಗಿಕ ಕಾರ್ಯಕರ್ತೆಯರಿಗೂ ಪಡಿತರ ನೀಡಿ: ರಾಜ್ಯಗಳಿಗೆ ಸುಪ್ರೀಂ ಆದೇಶ

ದೇಶದಾದ್ಯಂತ 9 ಲಕ್ಷಕ್ಕೂ ಹೆಚ್ಚಿರುವ ಮಹಿಳಾ ಮತ್ತು ಟ್ರಾನ್ಸ್‌ಜೆಂಡರ್ ಲೈಂಗಿಕ ಕಾರ್ಯಕರ್ತರಿಗೆ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವಂತೆ 'ದರ್ಬಾರ್ ಮಹಿಳಾ ಸಮನ್ವಯ ಸಮಿತಿ' ಎಂಬ ಎನ್‌ಜಿಒ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು

- Advertisement -
- Advertisement -

ಯಾವುದೇ ಗುರುತನ್ನು ಕೇಳದೇ, ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ (ನ್ಯಾಕೋ) ಮತ್ತು ಅಧಿಕಾರಿಗಳು ಗುರುತಿಸಿರುವ ಲೈಂಗಿಕ ಕಾರ್ಯಕರ್ತೆಯರಿಗೂ ಪಡಿತರ ವಿತರಣೆ ಮಾಡುವಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳಿಗೆ ಆದೇಶ ನೀಡಿದೆ. ಜೊತೆಗೆ, ಈ ಅವಧಿಯಲ್ಲಿ ಪಡಿತರವನ್ನು ಪಡೆದ ಲೈಂಗಿಕ ಕಾರ್ಯಕರ್ತೆಯರ ಸಂಖ್ಯೆಯ ವಿವರಗಳನ್ನು ನೀಡಿ, ನಾಲ್ಕು ವಾರಗಳಲ್ಲಿ ಅನುಸರಣೆ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳಿಗೂ ಆಗ್ರಹಿಸಿದೆ.

ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಅಜಯ್ ರಾಸ್ತೋಗಿ ಅವರನ್ನೊಳಗೊಂಡ ನ್ಯಾಯಪೀಠವು “ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಲೈಂಗಿಕ ಕಾರ್ಯಕರ್ತೆಯರಿಗೆ ಹಣಕಾಸಿನ ನೆರವು ನೀಡಬಹುದೇ ಎಂಬ ಅಂಶದ ಬಗ್ಗೆ ನಂತರ ವ್ಯವಹರಿಸುವುದಾಗಿ” ಹೇಳಿದೆ.

ಕೊರೊನಾ ಸಾಂಕ್ರಾಮಿಕ ರೋಗದ ಕಾರಣ ಲೈಂಗಿಕ ಕಾರ್ಯಕರ್ತೆಯರು ಎದುರಿಸುತ್ತಿರುವ ಸಮಸ್ಯೆಯನ್ನು ಧ್ವನಿಸುವ ಮನವಿಯನ್ನು ನ್ಯಾಯಪೀಠ ವಿಚಾರಣೆ ನಡೆಸಿ, ಲೈಂಗಿಕ ಕಾರ್ಯಕರ್ತೆಯರಿಗೂ ಪಡಿತರ ಚೀಟಿ ಮತ್ತು ಇತರ ಸೌಲಭ್ಯಗಳನ್ನು ಅವರು ಹೇಗೆ ಒದಗಿಸುತ್ತಾರೆ ಎಂಬ ಬಗ್ಗೆ ವಿವರವಾದ ವರದಿಯನ್ನು ಸಲ್ಲಿಸುವಂತೆ ರಾಜ್ಯಗಳನ್ನು ಕೇಳಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಮಹಿಳೆಯರು ವೇಶ್ಯೆರಾಗಬೇಕೆಂದು ಕಾರ್ಲ್ ಮಾರ್ಕ್ಸ್ ಎಲ್ಲಿಯೂ ಹೇಳಿಲ್ಲ : ಹಾಗಾದರೆ ಗುರುಮೂರ್ತಿಯವರು ಸುಳ್ಳು ಹೇಳಿದ್ದೇಕೆ?? – ಹರ್ಷ ಕುಮಾರ್‌…

“ನೆರವು ನೀಡಲು ರಾಜ್ಯಗಳು ಮುಂದೆ ಬರುತ್ತಿವೆ ಎಂಬ ಅಂಶಗಳ ಬಗ್ಗೆ ನಮಗೆ ತಿಳಿದಿದೆ. ಆದರೆ ಸಮಸ್ಯೆಯೆಂದರೆ ಈ ಲೈಂಗಿಕ ಕಾರ್ಯಕರ್ತೆಯರಿಗೆ ಯಾವುದೇ ಗುರುತಿನ ಪುರಾವೆಗಳಿಲ್ಲ. ಆದ್ದರಿಂದ, ಎಲ್ಲರಿಗೂ ಪಡಿತರವನ್ನು ನೀಡಬೇಕು. ಇದನ್ನು ಹೇಗೆ ಕಾರ್ಯಗತಗೊಳಿಸಬೇಕು ಎಂದು ರಾಜ್ಯಗಳು ನಮಗೆ ತಿಳಿಸಬೇಕು” ಎಂದು ನ್ಯಾಯಪೀಠ ಹೇಳಿದೆ.

ಲೈಂಗಿಕ ಕಾರ್ಯಕರ್ತರಿಗೆ ರಾಜ್ಯಗಳು ಪಡಿತರವನ್ನು ನೀಡುತ್ತಿದ್ದರೆ ಆಕ್ಷೇಪವಿಲ್ಲ ಎಂದು ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ವಕೀಲರು ಹೇಳಿದ್ದಾರೆ.

ಈ ವಿಷಯದಲ್ಲಿ ಅಮಿಕಸ್ ಕ್ಯೂರಿಯಂತೆ (ನ್ಯಾಯಾಲಯಗಳ ಸ್ನೇಹಿತ) ಸುಪ್ರೀಂ ಕೋರ್ಟ್‌ಗೆ ಸಹಾಯ ಮಾಡುತ್ತಿರುವ ವಕೀಲ ಪಿಜುಶ್ ಕುಮಾರ್ ರಾಯ್, “ಲೈಂಗಿಕ ಕಾರ್ಯಕರ್ತೆಯರಿಗೆ ಹಣಕಾಸಿನ ನೆರವು ನೀಡುವ ಸಲುವಾಗಿ, ಗುರುತಿನ ಪುರಾವೆಗಳನ್ನು ಒತ್ತಾಯಿಸದೆ ಬ್ಯಾಂಕ್ ಖಾತೆಗಳನ್ನು ಸಹ ತೆರೆಯಬೇಕು” ಎಂದು ಹೇಳಿದರು.

ಇದನ್ನೂ ಓದಿ: ಪ್ಲೇಗ್ ವೇಳೆ ವೇಶ್ಯೆಯರು & ಯಹೂದಿಗಳನ್ನು ಬಲಿಪಶು ಮಾಡಲಾಗಿತ್ತು! ಕೊರೋನ ವೇಳೆಯಲ್ಲಿ?

ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಲೈಂಗಿಕ ಕಾರ್ಯಕರ್ತೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಸುಪ್ರೀಂ ಕೋರ್ಟ್ ಕಳೆದ ವಾರ ಗಮನಕ್ಕೆ ತೆಗೆದುಕೊಂಡಿತ್ತು. ಗುರುತಿನ ಪುರಾವೆಗಳನ್ನು ಒತ್ತಾಯಿಸದೆ ಮಾಸಿಕ ಪಡಿತರ ವಿತರಣೆ ಮತ್ತು ಹಣ ವರ್ಗಾವಣೆಯ ವಿಧಾನಗಳ ಬಗ್ಗೆ ತಿಳಿಸುವಂತೆ ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನ ನೀಡಿತು.

ಎನ್‌ಜಿಒ ಒಂದರ ಪರವಾಗಿ ಹಾಜರಾದ ಹಿರಿಯ ವಕೀಲ ಆನಂದ್ ಗ್ರೋವರ್, “ಆಂಧ್ರಪ್ರದೇಶ, ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಮತ್ತು ತೆಲಂಗಾಣದ 1.2 ಲಕ್ಷ ಲೈಂಗಿಕ ಕಾರ್ಯಕರ್ತರನ್ನೊಳಗೊಂಡು ನಡೆಸಿದ ಸಮೀಕ್ಷೆಯಲ್ಲಿ, ಶೇ. 96 ಪ್ರತಿಶತದಷ್ಟು ಜನರು ಸಾಂಕ್ರಾಮಿಕ ರೋಗದಲ್ಲಿ ತಮ್ಮ ಗಳಿಕೆಯ ಮೂಲವನ್ನು ಕಳೆದುಕೊಂಡಿದ್ದಾರೆ” ಎಂದು ವಾದಿಸಿದ್ದರು.

ಇದನ್ನೂ ಓದಿ: “ಬರುತ್ತೀಯಾ?.. ಕೂರುತ್ತೀಯಾ?: ಭಾರತೀಯ ಸೂಳೆಲೋಕದ ಕಥೆಗಳು” ಪುಸ್ತಕದ ಮುನ್ನುಡಿ

ಈ ವಿಷಯದಲ್ಲಿ ನ್ಯಾಯಾಲಯಕ್ಕೆ ಸಹಾಯ ಮಾಡಲು ನೇಮಕಗೊಂಡಿರುವ ಹಿರಿಯ ವಕೀಲ ಜಯಂತ್ ಭೂಷಣ್, “ಗುರುತಿನ ಪುರಾವೆಗೆ ಒತ್ತಾಯಿಸದೆ ಪಡಿತರ ಚೀಟಿಗಳನ್ನು ನೀಡಿದರೆ ಲೈಂಗಿಕ ಕಾರ್ಯಕರ್ತೆಯರ ದುಃಸ್ಥಿತಿಯನ್ನು ಪರಿಹರಿಸಬಹುದು” ಎಂದು ಹೇಳಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಲೈಂಗಿಕ ಕಾರ್ಯಕರ್ತೆಯರ ಹಕ್ಕುಗಳನ್ನು ಎತ್ತಿಹಿಡಿಯಲು ಉನ್ನತ ನ್ಯಾಯಾಲಯವನ್ನು ಕೋರಿ, ದೇಶದಾದ್ಯಂತ 9 ಲಕ್ಷಕ್ಕೂ ಹೆಚ್ಚಿರುವ ಮಹಿಳಾ ಮತ್ತು ಟ್ರಾನ್ಸ್‌ಜೆಂಡರ್ ಲೈಂಗಿಕ ಕಾರ್ಯಕರ್ತರಿಗೆ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವಂತೆ ‘ದರ್ಬಾರ್ ಮಹಿಳಾ ಸಮನ್ವಯ ಸಮಿತಿ’ ಎಂಬ ಎನ್‌ಜಿಒ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು.


ಇದನ್ನೂ ಓದಿ: ಮಹಿಳೆ ಮತ್ತು ಬಿಕ್ಕಟ್ಟಿನ ಕಾಲದ ಸಂದಿಗ್ಧಗಳು! – ಮಲ್ಲಿಗೆ ಸಿರಿಮನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...