Homeಕರ್ನಾಟಕಹಸಿದ ಅಲೆಮಾರಿಗಳಿಗೂ ವಿಶೇಷ ಪ್ಯಾಕೇಜ್ ನೀಡಿ: ಮುಖ್ಯಮಂತ್ರಿಗೆ ಸಿ.ಎಸ್.ದ್ವಾರಕಾನಾಥ್ ಆಗ್ರಹ

ಹಸಿದ ಅಲೆಮಾರಿಗಳಿಗೂ ವಿಶೇಷ ಪ್ಯಾಕೇಜ್ ನೀಡಿ: ಮುಖ್ಯಮಂತ್ರಿಗೆ ಸಿ.ಎಸ್.ದ್ವಾರಕಾನಾಥ್ ಆಗ್ರಹ

'ರೇಷನ್ ಕಾರ್ಡ್, ಆಧಾರ್ ಕಾರ್ಡ್, ಗುರುತಿನ ಚೀಟಿಯಂತಹ ಯಾವುದೇ ದಾಖಲೆಗಳಿಲ್ಲದೆ ಇರುವುದರಿಂದ ಸರ್ಕಾರ  ನೀಡುವ ಎಲ್ಲಾ  ನೆರವಿನಿಂದ ಈ ಸಮುದಾಯ ವಂಚಿತವಾಗುತ್ತಿದೆ.’

- Advertisement -
- Advertisement -

ಊರಾಚೆಯ ಸ್ಮಶಾನಗಳಲ್ಲಿ, ಪಾಳುಮಂಟಪಗಳಲ್ಲಿ, ರೈಲ್ವೆ ಹಳಿಗಳ ಪಕ್ಕಗಳಲ್ಲಿ, ಹಳೆಯ ಬಟ್ಟೆಗಳಿಂದ ಜೋಪಡಿಗಳನ್ನು ಹಾಕಿಕೊಂಡು ಜೀವನ ನಡೆಸುವ ಅಲೆಮಾರಿ ಸಮುದಾಯಗಳು ಲಾಕ್‌ಡೌನ್‌ನಲ್ಲಿ ಕೆಲಸವಿಲ್ಲದೆ ಹಸಿವಿನಿಂದ ಕಂಗಾಲುತ್ತಿವೆ. ಕೊರೊನಾ ಲಾಕ್‌ಡೌನ್‌ನಲ್ಲಿ ಆರ್ಥಿಕ ಪ್ಯಾಕೇಜ್ ಘೋಷಿಸಿ ಎಂದು ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾದ ಗೌರವಾದ್ಯಕ್ಷ, ಡಾ.ಸಿ.ಎಸ್.ದ್ವಾರಕಾನಾಥ್ ಮುಖ್ಯಮಂತ್ರಿಗೆಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಸರ್ಕಾರದಿಂದ ಸಂಕಷ್ಟದಲ್ಲಿ ಸಿಲುಕಿರುವ, ಆಟೋ ಚಾಲಕರಿಗೆ, ವಾಹನ ಚಾಲಕರಿಗೆ, ಕಟ್ಟಡ ಕಾರ್ಮಿಕರಿಗೆ, ಕ್ಷೌರಿಕರು, ಮಡಿವಾಳರು, ನೇಕಾರರೇ ಮುಂತಾದ ಹಿಂದುಳಿದ ಸಮುದಾಯಗಳಿಗೆ ಹಾಗೂ ಹಲವಾರು ಕಾರ್ಮಿಕ  ವರ್ಗದ ಪ್ರತಿ ಕುಟುಂಬಕ್ಕೂ ನೆರವನ್ನು ಘೋಷಣೆ ಮಾಡಲಾಗಿದೆ.

ಆದರೆ, ಊರಾಚೆಯ ಸ್ಮಶಾನದಲ್ಲಿ, ಪಾಳುಮಂಟಪಗಳಲ್ಲಿ, ರೈಲ್ವೆ ಹಳಿಗಳ ಪಕ್ಕದಲ್ಲಿ, ಹಳೆಯ ಬಟ್ಟೆಗಳಿಂದ ಜೋಪಡಿಗಳನ್ನು ಹಾಕಿಕೊಂಡು ಊರಾಚೆ ಬದುಕುವ ಅಲೆಮಾರಿಗಳ ಆಕ್ರಂದನವನ್ನು ಒಮ್ಮೆ ಗಮನಿಸಿ ಎಂದು ಪತ್ರದಲ್ಲಿ ಬರೆಯಲಾಗಿದೆ. ಈ ಕುರಿತು 14 ಏಪ್ರಿಲ್ ಮತ್ತು ಮೇ 8 ರಂದು ಎರಡು ಬಾರಿ ಪತ್ರ ಬರೆದು ಗಮನಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾಗೆ ಔಷಧಿ ನೀಡಲು ನಾಟಿ ವೈದ್ಯ ನೆಲ್ಲೂರು ಆನಂದಯ್ಯಗೆ ಆಂಧ್ರ ಸರ್ಕಾರದ ಒಪ್ಪಿಗೆ

’ಈ ಸಮುದಾಯಗಳು ಯಾವ ಸರ್ಕಾರಿ  ಅಧಿಕಾರಿಗಳಿಗಾಗಲಿ ಅಥವಾ ಜನ ಪ್ರತಿನಿಧಿಗಳಿಗಾಗಲಿ ಸಾಮಾನ್ಯವಾಗಿ ಕಾಣಸಿಗುವುದಿಲ್ಲ. ನಮ್ಮ ಅಲೆಮಾರಿಗಳು ಊರೂರು ಅಲೆಯುತ್ತಾ ತಮ್ಮ ಕುಲ ಕಸುಬುಗಳಾದ ತೊಗಲು ಗೊಂಬೆಯಾಟ, ಬೀಗ ರಿಪೇರಿ, ಛತ್ರಿ ರಿಪೇರಿ, ಗಾರುಡಿ, ಕಸರತ್ತಿನ ಕಲೆ, ದೊಂಬರಾಟ, ನಾಟಿಮದ್ದು ಮಾರುವುದು, ಸೂಜಿದಾರ, ಪಿನ್ನು ಮಾರುವುದು, ಕೂದಲು ಆರಿಸುವುದು, ಹಚ್ಚೆ ಹಾಕುವುದು, ಪ್ಲಾಸ್ಟಿಕ್ ವಸ್ತುಗಳ ಮಾರಾಟ, ದೇವರ ಪೋಟೋ ಮಾರುವುದು, ಶಾಸ್ತ್ರ ಹೇಳುವುದು, ಮೋಡಿ ಆಟ ಇತ್ಯಾದಿ ಪ್ರದರ್ಶನ ಕಲೆಗಳ ಸೇವೆ ಮಾಡುತ್ತಾ ಗ್ರಾಮಾಂತರ ಪ್ರದೇಶಗಳಲ್ಲಿ ಅಲೆಮಾರಿ ಜೀವನ ನಡೆಸುತ್ತಿರುತ್ತಾರೆ’.

’ಹೀಗೆ ಅಲೆಮಾರಿಗಳಾಗಿರುವುದರಿಂದ ಇವರಿಗಾಗಲಿ, ಇವರ ಮಕ್ಕಳಿಗಾಗಲಿ ಶಿಕ್ಷಣವೆಂಬುದು ಮರೀಚಿಕೆಯಾಗಿದೆ‌. ಇವರಿಗೆ ರೇಷನ್ ಕಾರ್ಡ್ ಆಗಲಿ, ಆಧಾರ್ ಕಾರ್ಡ್ ಆಗಲಿ, ಗುರುತಿನ ಚೀಟಿಯಾಗಲಿ, ಯಾವುದೇ ದಾಖಲೆಗಳಿಲ್ಲದೆ ಇರುವುದರಿಂದ ಸರ್ಕಾರ  ನೀಡುವ ಎಲ್ಲಾ  ನೆರವಿನಿಂದ ಅಪಾರವಾಗಿ ವಂಚಿತರಾಗುತ್ತಿದ್ದಾರೆ.
ಈ ಎಲ್ಲಾ ಕಾರಣಗಳಿಂದಾಗಿ ನಮ್ಮ ಅಲೆಮಾರಿಗಳಿಗೆ ಸರ್ಕಾರದಿಂದ ನೀಡುವ ಯಾವುದೇ ಹಣಕಾಸಿನ ನೆರವಾವಾಗಲಿ ಹಾಗೂ ಸರ್ಕಾರದಿಂದ ವಿತರಿಸಿದ ಪಡಿತರವಾಗಲಿ ಸಿಗದೆ ಏಲ್ಲಾ ಸೌಲಭ್ಯಗಳಿಂದ  ವಂಚಿತರಾಗಿದ್ದಾರೆ’ ಎಂದು ದ್ವಾರಕಾನಾಥ್ ತಿಳಿಸಿದ್ದಾರೆ.

’ಇಂತಹ ಸೌಲಭ್ಯ ವಂಚಿತ ಅಲೆಮಾರಿಗಳು ಹಸಿವಿನಿಂದ ನರಳುತ್ತಾ  ಅನ್ನಕ್ಕಾಗಿ  ಪರಿತಪಿಸುತ್ತಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ  ಅಲೆಮಾರಿಗಳ ಜೀವನ ತುಂಬಾ ದುಸ್ಥಿತಿಯಲ್ಲಿದೆ ಹಾಗೂ ತುಂಬಾ ಶೋಚನೀಯ ಸ್ಥಿತಿಯಲ್ಲಿದ್ದು, ಅನೇಕ ಅಲೆಮಾರಿಗಳಿಗೆ ಒಪ್ಪತ್ತಿನ ಊಟಕ್ಕೂ ಗತಿಯಿಲ್ಲದೆ ಕೊರೊನಾದಿಂದ ಸಾಯುವುದು ಒಂದು ಕಡೆಯಾದರೆ ಹಸಿವಿನಿಂದ ಕೆಲವೇ ದಿನಗಳಲ್ಲಿ ಅನೇಕರು ಸಾಯುವುದರಲ್ಲಿ ಯಾವುದೇ ಸಂಶಯವಿಲ್ಲ.
ರಾಜ್ಯದ ಕೆಲವು ಕಡೆ ಈ ಅಲೆಮಾರಿಗಳಿಗೆ ಸಂಘ ಸಂಸ್ಥೆಗಳು ಅಲ್ಪ ಸ್ವಲ್ಪ ಸಹಾಯ ಮಾಡಿರುವುದನ್ನು ಬಿಟ್ಟರೆ ಬೇರೆ  ಯಾವುದೇ ಜಿಲ್ಲಾಡಳಿತಗಳಾಗಲಿ, ತಾಲ್ಲೂಕು ಆಡಳಿತಗಳಾಗಲಿ ನೆರವು ನೀಡದೇ ಮೌನವಹಿಸಿವೆ’ ಎಂದು ಆರೋಪಿಸಲಾಗಿದೆ.

‌ಅಲೆಮಾರಿಗಳ ಅಭಿವೃದ್ಧಿಗಾಗಿಯೇ ಸ್ಥಾಪನೆಯಾದ ರಾಜ್ಯ ಪ.ಜಾತಿ, ಪ.ವರ್ಗದ ಅಲೆಮಾರಿ ಅಭಿವೃದ್ಧಿ ಕೋಶದಿಂದಾಗಲಿ, ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ರಾಜ್ಯ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದಾಗಲಿ  ಯಾವುದೇ ನೆರವನ್ನೂ ಸಹ ಈವರೆಗೂ ನೀಡಿಲ್ಲ ಎಂದು ಪತ್ರದಲ್ಲಿ ತಿಳಿಸಲಾಗಿದೆ.

1) ನಮ್ಮ ರಾಜ್ಯದಲ್ಲಿ ಇರುವ ಅಲೆಮಾರಿಗಳ ಪ್ರತಿ ಕುಟುಂಬಕ್ಕೂ ಸಹ 5,000 ರೂಪಾಯಿಗಳ ನೆರವಿನ ಹಣವನ್ನು ಅತ್ಯಂತ ತುರ್ತಾಗಿ ಬಿಡುಗಡೆ ಮಾಡಬೇಕು.
2) ಸಂಪೂರ್ಣ ಅಡುಗೆ ಪದಾರ್ಥಗಳಿರುವ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ಕೂಡಲೆ ವಿತರಿಸಬೇಕು ಎಂದು ರಾಜ್ಯ ಅಲೆಮಾರಿ ಬುಡಕಟ್ಟು ಮಹಾ ಸಭಾ ಆಗ್ರಹಿಸಿದೆ.


ಇದನ್ನೂ ಓದಿ: ಏಕಾಏಕಿ ಎತ್ತಂಗಡಿ: ಬೆಂಗಳೂರಿನಲ್ಲಿ ನೆಲೆಯಿಲ್ಲದೆ ಅಲೆಯುತ್ತಿರುವ 15 ಬಡ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...